TMC: ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ತನಿಖೆ
ಅದಾನಿ ಪ್ರಶ್ನೆಗಾಗಿ ಲಂಚ ಆರೋಪ
Team Udayavani, Oct 17, 2023, 9:16 PM IST
ನವದೆಹಲಿ: ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಕೇಳಿಬಂದಿರುವ “ಪ್ರಶ್ನೆಗಾಗಿ ಲಂಚ’ ಆರೋಪ ಕುರಿತ ಪ್ರಕರಣದ ತನಿಖೆಯನ್ನು ಲೋಕಸಭೆಯ ಎಥಿಕ್ಸ್ ಕಮಿಟಿ ನಡೆಸಲಿದೆ. ಈ ಬಗ್ಗೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಹಿಸಿದ್ದಾರೆ. “ಇದು ಸ್ವಾಗತಾರ್ಹ ಕ್ರಮ. ಆದರೆ ಮೊದಲು ನಿಶಿಕಾಂತ್ ದುಬೆ ವಿರುದ್ಧದ ಆರೋಪಗಳ ತನಿಖೆಯನ್ನು ಲೋಕಸಭೆ ಸ್ಪೀಕರ್ ಪೂರ್ಣಗೊಳಿಸಿದ ನಂತರ, ಈ ಪ್ರಕರಣವನ್ನು ಅವರು ಕೈಗೆತ್ತಿಕೊಳ್ಳಬೇಕು’ ಎಂದು ಮಹುವಾ ಮೊಯಿತ್ರಾ ಹೇಳಿದ್ದಾರೆ.
ಇನ್ನೊಂದೆಡೆ, ಸಂಸದ ನಿಶಿಕಾಂತ್ ದುಬೆ ವಿರುದ್ಧ ಮಹುವಾ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.