ನಾಪತ್ತೆಯಾಗಿದ್ದ ವ್ಯಕ್ತಿಯ ಶವ ನದಿಯಲ್ಲಿ ; ಕರ್ನಾಟಕ ಅರಣ್ಯ ಸಿಬಂದಿ ಮೇಲೆ ಆರೋಪ

ತಮಿಳುನಾಡಿನ ವ್ಯಕ್ತಿ ಕರ್ನಾಟಕ ಅರಣ್ಯ ಸಿಬಂದಿಯ ಗುಂಡಿಗೆ ಬಲಿ ?

Team Udayavani, Feb 17, 2023, 9:24 PM IST

police crime

ಈರೋಡ್: ತಮಿಳುನಾಡು ಮತ್ತು ಕರ್ನಾಟಕದ ಅಂತಾರಾಜ್ಯ ಗಡಿಯಲ್ಲಿ ದಿನಗಳ ಹಿಂದೆ ನಾಪತ್ತೆಯಾಗಿದ್ದ 40 ವರ್ಷದ ವ್ಯಕ್ತಿಯ ಶವ ಶುಕ್ರವಾರ ಈರೋಡ್ ಜಿಲ್ಲೆಯ ಪಾಲಾರ್ ನದಿಯಲ್ಲಿ ತೇಲುತ್ತಿರುವುದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕರ್ನಾಟಕ ಅರಣ್ಯ ಸಿಬಂದಿ ಗುಂಡಿಗೆ ಬಲಿಯಾಗಿದ್ದಾನೆ ಎಂದು ಗ್ರಾಮಸ್ಥರು ಆರೋಪಿಸಿದಂತೆ, ನೆರೆಯ ರಾಜ್ಯದ ಕೊಳತ್ತೂರು ಸೇರಿದಂತೆ ಗಡಿಯಲ್ಲಿ ಉದ್ವಿಗ್ನತೆ ಉಂಟಾಗಿದ್ದು, ತಮಿಳುನಾಡು ಮತ್ತು ಕರ್ನಾಟಕ ಅಧಿಕಾರಿಗಳು ಕಾನೂನು ಸುವ್ಯವಸ್ಥೆ ಕಾಪಾಡಲು ಸಾಕಷ್ಟು ಪೊಲೀಸರನ್ನು ನಿಯೋಜಿಸಿದ್ದಾರೆ. ವಾಹನ ಸಂಚಾರಕ್ಕೂ ಕೆಲಕಾಲ ತೊಂದರೆಯಾಗಿದೆ.

ಮೃತ ವ್ಯಕ್ತಿಯನ್ನು ಎಂ. ಕರವಡಿಯಾನ್ ಅಲಿಯಾಸ್ ರಾಜಾ ಎಂದು ಗುರುತಿಸಲಾಗಿದ್ದು, ಆತ ಸೇಲಂ ಜಿಲ್ಲೆಯ ಕೊಳತ್ತೂರಿನ ಗೋವಿಂದಪಾಡಿ ಗ್ರಾಮದವನಾಗಿದ್ದು, ಆತನನ್ನು ಕರ್ನಾಟಕ ಅರಣ್ಯ ಸಿಬಂದಿ ಗುಂಡಿಕ್ಕಿ ಕೊಂದಿರುವುದಾಗಿ ಆತನ ಸಂಬಂಧಿಕರು ಆರೋಪಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಫೆಬ್ರವರಿ 14 ರಂದು ತಮಿಳುನಾಡು-ಕರ್ನಾಟಕ ಅಂತಾರಾಜ್ಯ ಗಡಿಯಲ್ಲಿರುವ ಅರಣ್ಯ ಪ್ರದೇಶಕ್ಕೆ ತೆರಳಿದ್ದ 4 ಜನರ ಗುಂಪಿನಲ್ಲಿ ರಾಜಾ ಇದ್ದ ಮತ್ತು ಅವರು ನದಿಯಲ್ಲಿ ಮೀನುಗಾರಿಕೆ ನಡೆಸುತ್ತಿದ್ದರು.

ಸ್ಥಳೀಯ ಜನರ ಪ್ರಕಾರ, ಕರ್ನಾಟಕದ ಸಿಬಂದಿಗಳು ಮಾಡಿರುವ ಆರೋಪವೆಂದರೆ ಈ ಗುಂಪು ಕಾಡಿನಲ್ಲಿ ಬೇಟೆಯಾಡಲು ಪ್ರಯತ್ನಿಸಿದೆ. ಗುಂಡು ತಗುಲಿ ಆತ ಮೃತಪಟ್ಟರೆ, ಇತರರು ಗಾಯಗೊಂಡು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ. ರಾಜಾ ಅವರ ಅನುಮಾನಾಸ್ಪದ ಸಾವಿನ ಕುರಿತು ಸಿಆರ್‌ಪಿಸಿ ಅಡಿಯಲ್ಲಿ ತನಿಖೆ ನಡೆಯುತ್ತಿದೆ ಎಂದು ಈರೋಡ್ ಜಿಲ್ಲಾ ಪೊಲೀಸರು ತಿಳಿಸಿದ್ದಾರೆ.

ಟ್ರಕ್ ಡ್ರೈವರ್ ಆಗಿರುವ ರಾಜಾ ತಮಿಳುನಾಡಿನ ಬರ್ಗೂರು ಮತ್ತು ಮೆಟ್ಟೂರು ಮತ್ತು ನೆರೆಯ ಕರ್ನಾಟಕದ ಗಡಿಯಲ್ಲಿ ಕಾಡು ಪ್ರಾಣಿಗಳನ್ನು ಬೇಟೆಯಾಡಿದ ಆರೋಪವನ್ನು ಎದುರಿಸಿದ್ದು, ಕರ್ನಾಟಕದ ಚಾಮರಾಜನಗರ ಜಿಲ್ಲೆಯಲ್ಲಿ ಕಳ್ಳಬೇಟೆಗೆ ಸಂಬಂಧಿಸಿದಂತೆ ಪ್ರಕರಣವನ್ನು ಎದುರಿಸಿದ್ದರು. ಆತನ ವಿರುದ್ಧ ಕೊಳತ್ತೂರಿನಲ್ಲಿ (ಸೇಲಂ ಜಿಲ್ಲೆ) ಜೂಜಾಟದ ಪ್ರಕರಣವೊಂದು ಬಾಕಿ ಉಳಿದಿತ್ತು.

ಫೆಬ್ರವರಿ 14 ರಂದು ರಾಜಾ ಬೇಟೆಗೆಂದು ತಮಿಳುನಾಡಿನ ಗಡಿಭಾಗದ ಚಾಮರಾಜನಗರಕ್ಕೆ ಬಂದಿದ್ದರು. ಆತ ‘ಆಕಸ್ಮಿಕವಾಗಿ ಮುಳುಗಿ’ ಅಥವಾ ‘ಬೇರೆ ಕಾರಣಕ್ಕಾಗಿ’ ನದಿಗೆ ಹಾರಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಫೆಬ್ರವರಿ 14 ಮತ್ತು 17 ರ ನಡುವೆ ಪಾಲಾರು ನದಿಯ ಸೇತುವೆಯ ಬಳಿ ಮೆಟ್ಟೂರಿನ ಮಲೆ ಮಹದೇಶ್ವರ ಬೆಟ್ಟದ ರಸ್ತೆಯ ಹತ್ತಿರ ಇದು ಸಂಭವಿಸಿರಬಹುದು ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.