ಶವ ಸಾಗಿಸಲು ನಕಾರ; ಗಡಿಯಲ್ಲೇ ಮಂಡ್ಯ ಟೆಕ್ಕಿ ಅಂತ್ಯಸಂಸ್ಕಾರ!
Team Udayavani, May 12, 2020, 11:29 AM IST
-ಸಾಂದರ್ಭಿಕ ಚಿತ್ರ
ಚಿಕ್ಕೋಡಿ: ಪುಣೆಯಲ್ಲಿ ಹೃದಯಾಘಾತದಿಂದ ಮೃತಪಟ್ಟ ಮಂಡ್ಯ ಮೂಲದ ಟೆಕ್ಕಿಯೊಬ್ಬರ ಶವ ತವರು ಜಿಲ್ಲೆಗೆ ಸಾಗಿಸಲಾಗದೆ ಕರ್ನಾಟಕ-ಮಹಾರಾಷ್ಟ್ರ ಗಡಿಯ ನಿಪ್ಪಾಣಿ ತಾಲೂಕಿನ ಕೊಗನ್ನೊಳ್ಳಿ ಚೆಕ್ಪೋಸ್ಟ್ ಬಳಿಯ ದೂಧಗಂಗಾ ನದಿ ದಡದಲ್ಲಿ ಅಂತ್ಯಸಂಸ್ಕಾರ ನಡೆಸಲಾಗಿದೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನವರಾದ ಸೌಮ್ಯ (35) ಅವರು ಮಹಾರಾಷ್ಟ್ರದ ಪುಣೆಯಲ್ಲಿ ಕೆಲಸ ಮಾಡುತ್ತಿದ್ದರು.
ಎರಡು ದಿನಗಳ ಹಿಂದೆ ಹೃದಯಾಘಾತದಿಂದ ಮೃತಪಟ್ಟಿದ್ದರು. ಇವರ ಕುಟುಂಬದವರು ಮೃತದೇಹವನ್ನು ಹುಟ್ಟೂರಿಗೆ ತೆಗೆದುಕೊಂಡು ಹೊರಟಿದ್ದರು. ಆದರೆ ಮಂಡ್ಯದ ಜಿಲ್ಲಾಡಳಿತ ಶವ ತರಲು ಅವಕಾಶ ನೀಡಲಿಲ್ಲ. ಮೃತ ಸೌಮ್ಯರ ಕೊರೊನಾ ಟೆಸ್ಟ್ ಮಾಡಿಸಿಲ್ಲ. ಹೀಗಾಗಿ ಶವವನ್ನು ರಾಜ್ಯದ ಒಳಗೆ ಬಿಟ್ಟುಕೊಳ್ಳಲೂ ಮಂಡ್ಯ ಜಿಲ್ಲಾಡಳಿತ ತಿರಸ್ಕರಿಸಿತ್ತು.
ಪರದಾಡಿದ ಕುಟುಂಬಸ್ಥರು: ಸೌಮ್ಯಳ ಪತಿ ಶರತ್, ತಂದೆ ನಿವೃತ್ತ ಪಿಎಸ್ಐ ಅಪ್ಪಯ್ಯ ಹಾಗೂ ಐದು ವರ್ಷದ ಮಗಳು ಶ್ವೇತಾ ಮೃತದೇಹದೊಂದಿಗೆ ರಾಜ್ಯದ ಗಡಿ ಭಾಗಕ್ಕೆ ಬಂದು ಪರದಾಡಿದರು. ಶವ ತರಲು ಅನುಮತಿ ಕೊಡಿ ಎಂದು ಎಷ್ಟೇ ವಿನಂತಿಸಿದರೂ ಮಂಡ್ಯ ಜಿಲ್ಲಾಡಳಿತ ಅವಕಾಶವನ್ನೇ ನೀಡಲಿಲ್ಲ. ಇದರಿಂದ ಕುಟುಂಬದವರು ಶವದೊಂದಿಗೆ ಗಡಿಭಾಗದಲ್ಲಿ ದಿಕ್ಕು ತೋಚದೆ ನಿಂತಿದ್ದರು. ಈ ಬಗ್ಗೆ ಮಾಹಿತಿ ಪಡೆದ ಬೆಳಗಾವಿ ಜಿಲ್ಲಾಡಳಿತದ ಅಧಿ ಕಾರಿಗಳು ತಕ್ಷಣ ಅವರ ನೆರವಿಗೆ ಧಾವಿಸಿದರು.
ಭಾನುವಾರ ರಾತ್ರಿ 12ರ ಸುಮಾರಿಗೆ ಬೆಳಗಾವಿ ಪೊಲೀಸ್ ವರಿಷ್ಠಾ ಧಿಕಾರಿ ಲಕ್ಷ್ಮಣ ನಿಂಬರಗಿ ಹಾಗೂ ಚಿಕ್ಕೋಡಿ ಉಪವಿಭಾಗಾಧಿ ಕಾರಿ ರವೀಂದ್ರ ಕರಲಿಂಗನ್ನವರ ಸೌಮ್ಯಳ ಕುಟುಂಬಸ್ಥರನ್ನು ಭೇಟಿ ಮಾಡಿ ಚರ್ಚಿಸಿದರು. ಬಳಿಕ ಗಡಿಭಾಗದ ಚೆಕ್ ಪೋಸ್ಟ್ ಹತ್ತಿರದ ಸರ್ಕಾರಿ ಗೋಮಾಳದಿಂದ ಕಟ್ಟಿಗೆ ವ್ಯವಸ್ಥೆ ಮಾಡಿ, ದೂಧಗಂಗಾ ನದಿ ದಂಡೆಯಲ್ಲಿ ಸೌಮ್ಯಳ ಅಂತ್ಯಸಂಸ್ಕಾರ ನೆರವೇರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ