ಶಿಕ್ಷಣ ಗುಣಮಟ್ಟ ಸುಧಾರಣೆಗೆ ಕ್ರಮ ; ನ್ಯಾಕ್ ಮಾನದಂಡ ಅನುಷ್ಠಾನಕ್ಕೆ ಶಿಕ್ಷಣ ಇಲಾಖೆ ಸೂಚನೆ
Team Udayavani, Feb 14, 2020, 10:01 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಂಗಳೂರು: ಗುಣಮಟ್ಟ ಸುಧಾರಿಸುವ ಮೂಲಕ ನ್ಯಾಕ್ ಶ್ರೇಯಾಂಕದಲ್ಲಿ ಹೆಚ್ಚಿನ ಅಂಕ ಗಳಿಸುವಂತೆ ರಾಜ್ಯದ ಎಲ್ಲ ಸರಕಾರಿ ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜುಗಳಿಗೆ ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶನ ನೀಡಿದೆ. ಇದಕ್ಕಾಗಿ ನಿರ್ದಿಷ್ಟ ಮಾನದಂಡಗಳನ್ನು ರೂಪಿಸಿ, ಅನುಷ್ಠಾನಕ್ಕೆ ತರುವಂತೆ ಸೂಚಿಸಿದೆ.
ನ್ಯಾಕ್ ಶ್ರೇಯಾಂಕದ ಆಧಾರದಲ್ಲಿ ರಾಷ್ಟ್ರೀಯ ಉಚ್ಚತರ ಶಿಕ್ಷಾ ಅಭಿಯಾನ (ರುಸಾ) ಅನುದಾನ ಸೇರಿದಂತೆ ವಿವಿಧ ಸೌಲಭ್ಯಗಳು ಸರಕಾರಿ ಕಾಲೇಜುಗಳಿಗೆ ಲಭ್ಯವಾಗುತ್ತವೆ. ಆದರೆ ರಾಜ್ಯದ ಸರಕಾರಿ ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜುಗಳು ನ್ಯಾಕ್ ಮೌಲ್ಯಮಾಪನದಲ್ಲಿ ಉತ್ತಮ ಅಂಕ ಗಳಿಸಲು ವಿಫಲವಾಗುವುದು ಕಾಲೇಜು ಶಿಕ್ಷಣ ಇಲಾಖೆಯ ಗಮನಕ್ಕೆ ಬಂದಿದ್ದು, ಹೀಗಾಗಿ ಈ ಕ್ರಮಕ್ಕೆ ಮುಂದಾಗಿದೆ.
ನ್ಯಾಕ್ ಮೌಲ್ಯಮಾಪನ ಮತ್ತು ಮರು ಮೌಲ್ಯಮಾಪನದ ಸಂದರ್ಭದಲ್ಲಿ ಹೆಚ್ಚಿನ ಅಂಕ ಗಳಿಸುವುದಕ್ಕಾಗಿ ನ್ಯಾಕ್ ಮಾರ್ಗ ದರ್ಶನದೊಂದಿಗೆ ಕೆಲವು ಮಾನದಂಡಗಳನ್ನು ರೂಪಿಸಲಾಗಿದೆ. ರಾಜ್ಯದ 411 ಕಾಲೇಜುಗಳ ಪ್ರಾಂಶುಪಾಲರಿಗೂ ಇದನ್ನು ಅಳವಡಿಸಿಕೊಳ್ಳುವಂತೆ ಇಲಾಖೆ ನಿರ್ದೇಶಿಸಿದೆ.
ಸಂಶೋಧನೆ, ಅನ್ವೇಷಣೆ ಮತ್ತು ವಿಸ್ತರಣೆ
ಪ್ರತಿ ಕಾಲೇಜಿನಲ್ಲೂ ಸಂಶೋಧನೆ, ಅನ್ವೇಷಣೆ ಮತ್ತು ಕಾರ್ಯ ವ್ಯಾಪ್ತಿ ವಿಸ್ತರಣೆಗೆ ಆದ್ಯತೆ ನೀಡಬೇಕು.
ಸುಧಾರಣೆಯ ಕ್ರಮಗಳು
– ನ್ಯಾಕ್ ನಿರೀಕ್ಷೆಯಂತೆ ಪದವಿ ಕಾಲೇಜಿನ ಪಠ್ಯಕ್ರಮದಲ್ಲಿ ಶೈಕ್ಷಣಿಕವಾರು ಆದ್ಯತೆ ಹೆಚ್ಚಾಗಬೇಕು.
– ವಿದ್ಯಾರ್ಥಿ, ಉಪನ್ಯಾಸಕರ ಫೀಡ್ಬ್ಯಾಕ್ ವ್ಯವಸ್ಥೆ ಸುಧಾರಿಸಬೇಕು.
– ಪಠ್ಯಕ್ರಮ ವಿದ್ಯಾರ್ಥಿಗಳಿಗೆ ತಲುಪುವಂತಿರಬೇಕು.
– ಬೋಧನೆ, ಕಲಿಕೆ ಮತ್ತು ಮೌಲ್ಯಮಾಪನದಲ್ಲಿ ಸುಧಾರಣೆ ತರಬೇಕು.
– ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿಸಬೇಕು ಮತ್ತು ಅವರ ವ್ಯಕ್ತಿತ್ವವನ್ನು ಚೆನ್ನಾಗಿ ರೂಪಿಸಬೇಕು.
– ಪಠ್ಯ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಹೆಚ್ಚೆಚ್ಚು ಒಳಗೊಳ್ಳುವಂತೆ ಪ್ರೋತ್ಸಾಹಿಸಬೇಕು ಮತ್ತು ಕಲಿಕಾ ಗುಣಮಟ್ಟವನ್ನು ಉನ್ನತೀಕರಿಸಬೇಕು.
ಸರಕಾರಿ ಕಾಲೇಜುಗಳ ಶೈಕ್ಷಣಿಕ ಮತ್ತು ಸೌಲಭ್ಯದ ಗುಣಮಟ್ಟ ಸುಧಾರಣೆಗಾಗಿ ನ್ಯಾಕ್ನ ನಿರ್ದೇಶಕರು ಕೆಲವು ಮಾರ್ಗಸೂಚಿ ನೀಡಿದ್ದಾರೆ. ಅದನ್ನು ಕಾಲೇಜುಗಳಲ್ಲಿ ಅನುಷ್ಠಾನ ಮಾಡಿಕೊಳ್ಳಲು ನಿರ್ದೇಶನ ನೀಡಿದ್ದೇವೆ.
– ಪ್ರೊ| ಎಸ್. ಮಲ್ಲೇಶ್ವರಪ್ಪ, ನಿರ್ದೇಶಕ, ಕಾಲೇಜು ಶಿಕ್ಷಣ ಇಲಾಖೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
MUST WATCH
ಹೊಸ ಸೇರ್ಪಡೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ