ಪುರಾಣ ಹೇಳೋಕೆ, ಬದನೆಕಾಯಿ ತಿನ್ನೋಕೆ ಸಿದ್ಧಾಂತ


Team Udayavani, Mar 17, 2020, 3:08 AM IST

purana-

ವಿಧಾನಸಭೆ: ಸಂವಿಧಾನ ಶ್ರೇಷ್ಠ ಗ್ರಂಥ ಎಂದು ಒಪ್ಪಿಕೊಳ್ಳುವ ನಾವು ಪಾಲನೆ ವಿಚಾರದಲ್ಲಿ “ಪುರಾಣ ಹೇಳ್ಳೋಕೆ, ಬದನೇಕಾಯಿ ತಿನ್ನೋಕೆ’ ಎಂಬಂತೆ ವರ್ತಿಸುತ್ತಿದ್ದೇವೆ. ಆಡಳಿತ ನಡೆಸುವ ನಾವು ಎಡವಿರುವುದು ಸ್ಪಷ್ಟ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಸಂವಿಧಾನ ಕುರಿತ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿ, ಪೊಲೀಸ್‌ ಠಾಣೆಗಳಲ್ಲಿ ಅಥವಾ ನ್ಯಾಯಾಲಯದಲ್ಲಿ ಇತ್ಯರ್ಥವಾಗಬೇಕಾದ ಪ್ರಕರಣ ರೌಡಿಗಳ ಸಮ್ಮುಖದಲ್ಲಿ ಇತ್ಯರ್ಥವಾಗುತ್ತದೆ ಎಂದಾದರೆ ಸಂವಿಧಾನದ ಪಾಲನೆ ಎಷ್ಟರ ಮಟ್ಟಿಗೆ ಆಗುತ್ತಿದೆ. ಇದು ವ್ಯವಸ್ಥೆಯ ದುರಂತವಲ್ಲವೇ ಎಂದು ಪ್ರಶ್ನಿಸಿದರು.

ಪ್ರಸಕ್ತ ದೇಶದಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನು ನೋಡಿದರೆ ನಾವು ಸಂವಿಧಾನವನ್ನು ಶೋ ಕೇಸ್‌ನಲ್ಲಿಟ್ಟು ನಮಗೆ ಬೇಕಾದಂತೆ ನಾವು ನಡೆದುಕೊಳ್ಳುತ್ತಿದ್ದೇವೆ. ಹೆಸರಿಗೆ ಮಾತ್ರ ಸಂವಿಧಾನದ ಆಶಯ ಜಾರಿ ಎಂದು ಹೇಳುತ್ತಿದ್ದೇವೆ. ಇದರ ಬಗ್ಗೆ ನಾವೆಲ್ಲರೂ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದರು.

ಡಾ.ಬಿ.ಆರ್‌.ಅಂಬೇಡ್ಕರ್‌ ಸೇರಿ ಸಂವಿಧಾನ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದವರ ಶ್ರಮ, ಅಂಬೇಡ್ಕರ್‌ ಅವರು ಅನುಭವಿಸಿದ ನೋವು, ಸಂವಿಧಾನದ ಮಹತ್ವ ಎಲ್ಲದರ ಬಗ್ಗೆ ನಾವು ಮಾತನಾಡುತ್ತೇವೆ. ಆದರೆ, ಪಾಲನೆ ವಿಚಾರ ಬಂದಾಗ “ಪುರಾಣ ಹೇಳ್ಳೋಕೆ, ಬದನೇಕಾಯಿ ತಿನ್ನೋಕೆ’ ಎಂಬಂತಾಗಿದೆ ಎಂದು ತಿಳಿಸಿದರು.

ದೇಶ ವಿಭಜನೆ ಸಂದರ್ಭದಲ್ಲಿನ ಘಟನಾವಳಿಗಳು ಒಂದು ಕಡೆ, ಆ ನಂತರದ ವಿದ್ಯಮಾನಗಳು ಮತ್ತೂಂದು ಕಡೆ. ಆದರೆ, ಇತ್ತೀಚೆಗೆ ನಡೆಯುತ್ತಿರುವ ಸಂಗತಿಗಳು ಯಾವ ಸಂದೇಶ ರವಾನಿಸುತ್ತಿವೆ? ನಾವು ಹೇಳಿದಂತೆ ನಡೆದುಕೊಂಡಿದ್ದೇವಾ, ಎಡವಿದ್ದೇವಾ ಎಂಬುದರ ಬಗ್ಗೆ ಆತ್ಮವಿಮರ್ಶೆ ಮಾಡಿಕೊಳ್ಳಬೇಕಲ್ಲವೇ ಎಂದರು.

ಸಂವಿಧಾನ ಕುರಿತ ಚರ್ಚೆ ಸಂದರ್ಭದಲ್ಲಿ ಕುಟುಂಬ ರಾಜಕಾರಣ ಕುರಿತು ಪ್ರಸ್ತಾಪವಾಗಿದ್ದನ್ನು ಉಲ್ಲೇಖೀಸಿದ ಅವರು, ಪ್ರಾದೇಶಿಕ ಪಕ್ಷಗಳು ಉಳಿದಿರುವುದೇ ಕುಟುಂಬ ರಾಜಕಾರಣದಿಂದ. ವೈದ್ಯನ ಮಗ ವೈದ್ಯನಾಗಬೇಕೆಂದು ಬಯಸಿದಂತೆ ರಾಜಕಾರಣಿಯ ಮಗ ರಾಜಕಾರಣಿ ಆಗಬೇಕೆಂದು ಬಯಸುವುದರಲ್ಲಿ ತಪ್ಪಿಲ್ಲ. ಅಂದ ಮಾತ್ರಕ್ಕೆ ನೇರವಾಗಿ ಇಲ್ಲಿ ಬರಲು ಸಾಧ್ಯವಿಲ್ಲ, ಜನರ ತೀರ್ಪು ಸಿಕ್ಕರೆ ಮಾತ್ರ ಸಾಧ್ಯ.

ನಾನೂ ರಾಜಕೀಯಕ್ಕೆ ಬರಬೇಕು ಎಂದು ಬರಲಿಲ್ಲ, ಅನಿವಾರ್ಯವಾಗಿ ಬರಬೆಕಾಯಿತು ಎಂದು ಹೇಳಿದರು. ದೇವೇಗೌಡರು ಕೋಟಿ ಕೋಟಿ ರೂ. ಮಾಡಿಕೊಂಡಿದ್ದಾರೆಂಬ ಮಾತುಗಳು ಬಂದಿವೆ. 1983ರಿಂದ ನಾನೂ ಚುನಾವಣೆ ವ್ಯವಸ್ಥೆ ನೋಡುತ್ತಿದ್ದೇನೆ.

ಮೊದಲು ಚುನಾವಣಾ ವೆಚ್ಚಕ್ಕೆ ಐದು ಲಕ್ಷ ರೂ. ನೀಡಿದರೆ ಕಣ್ಣಿಗೆ ಒತ್ತಿಕೊಂಡು ಕೃತಜ್ಞತೆ ಹೇಳಿ ಹೋಗುತ್ತಿದ್ದರು. ಆದರೆ, ಈಗ ಏನಾಗಿದೆ? ಇತ್ತೀಚೆಗೆ ಉಪ ಚುನಾವಣೆ ಎದುರಿಸಿದ ನಿಮಗೂ ಗೊತ್ತಿರಬೇಕು ಎಂದು ಆಡಳಿತ ಪಕ್ಷದತ್ತ ಕೈ ಮಾಡಿ ತೋರಿಸಿದರು. ಇಂತವರಿಗೆ ಮತ ಹಾಕಿ ಎಂದು ಸಮುದಾಯಗಳಿಗೆ ಸಂದೇಶ ರವಾನಿಸುವುದು ನೋಡಿಲ್ಲವೇ ಎಂದರು.

2004ರ ಚುನಾವಣೆಯಲ್ಲಿ ಮಾಜಿ ಪ್ರಧಾನಿಯಾಗಿದ್ದ ದೇವೇಗೌಡರು ರಾಜಾಜಿನಗರದ ನಂಜಪ್ಪ ಎಂಬುವರ ಬಳಿ ಚೆಕ್‌ ಕೊಟ್ಟು ಸಾಲ ತಂದು ಅಭ್ಯರ್ಥಿಗಳಿಗೆ ಕೊಟ್ಟಿದ್ದರು. ಅದು ದೇವೇಗೌಡರು, ನಾನು ಪಡೆದಿದ್ದೇನೆ, ಕೊಟ್ಟಿದ್ದೇನೆ, ಆದರೆ ಆಸ್ತಿ ಮಾಡಿಕೊಂಡಿಲ್ಲ. ಲಕ್ಷಾಂತರ ಜನರ ವಿಶ್ವಾಸ ಪಡೆದುಕೊಂಡಿದ್ದೇನೆಂದು ಹೇಳಿದರು.

ರೇವಣ್ಣ ಜಾತಕ ಬೇರೆ….: ನಾನು ಶಾಸಕನಾದ ಮೊದಲ ಬಾರಿಯೇ ಯಡಿಯೂರಪ್ಪ ಅವರ ಜತೆ ಸೇರಿ ಸರ್ಕಾರ ರಚಿಸಿ ಮುಖ್ಯಮಂತ್ರಿ ಆಗುವ ಯೋಗ ಒದಗಿ ಬಂದಿತು ಎಂದು ಒಂದು ಸಂದರ್ಭದಲ್ಲಿ ಕುಮಾರಸ್ವಾಮಿ ಹೇಳಿದರು. ಆಗ, ರೇವಣ್ಣ ಎದ್ದು ನಿಂತಾಗ ಬಸವರಾಜ ಬೊಮ್ಮಾಯಿ, “ನೀವು ಕುಳಿತುಕೊಳ್ಳಿ ರೇವಣ್ಣ ನಿಮ್ಮ ಜಾತಕ ಬೇರೆ, ನಿಮ್ಮ ಜಾತಕ ದೊಡ್ಡೋರ ಜತೆ ಕೂಡಿಕೊಳ್ಳುತ್ತದೆ.

ನನಗೆ ಒಮ್ಮೆ ಗೌಡರು ಹೇಳಿದ್ದರು, ರೇವಣ್ಣನ ಜಾತಕ ದೆಸೆಯಿಂದ ನನಗೆ ಇನ್ನೊಂದು ಚಾನ್ಸ್‌ ದೊರೆಯುತ್ತದೆ ಅಂತ’ ಎಂದು ತಮಾಷೆ ಮಾಡಿದರು. ಆಗ ರೇವಣ್ಣ, “ನಾವು ನೇರವಾಗಿ ಬಂದಿಲ್ಲ ಸ್ವಾಮಿ, ಕಷ್ಟ ಪಟ್ಟು ಬಂದಿದ್ದೀವಿ’ ಎಂದು ಹೇಳಿದರು.

ಬಿಎಸ್‌ವೈಗೆ ಎಚ್ಡಿಕೆ ಕೃತಜ್ಞತೆ: ಅಲ್ಲಿದ್ದ (ಮುಖ್ಯಮಂತ್ರಿ ಸ್ಥಾನ) ನನ್ನನ್ನು ಈ ಕಡೆ (ಪ್ರತಿಪಕ್ಷದ ಕಡೆ) ಕಳುಹಿಸಿ ಯಡಿಯೂರಪ್ಪ ಅವರು ಒಳ್ಳೆಯದು ಮಾಡಿದ್ದಾರೆ. ಇದೀಗ ದೇಶದ ಚರಿತ್ರೆ, ಸಂವಿಧಾನ ರಚನೆಯ ಹಿಂದಿನ ಪರಿಶ್ರಮ, ಸ್ವಾತಂತ್ರ್ಯ ಹೋರಾಟ, ತ್ಯಾಗ, ಬಲಿದಾನ ಜಗತ್ತಿನ ಇತಿಹಾಸ ಎಲ್ಲದರ ಬಗ್ಗೆ ಓದುತ್ತಿದ್ದೇನೆ. ಇದಕ್ಕಾಗಿ ನಾನು ಯಡಿಯೂರಪ್ಪ ಅವರಿಗೆ ಕೃತಜ್ಞತೆ ಸಲ್ಲಿಸಬೇಕೆಂದು ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.