“ಎನ್ ಮಣ್, ಎನ್ ಮಕ್ಕಳ್” ಪಾದಯಾತ್ರೆಗೆ ಇಂದು ಅಮಿತ್ ಶಾ ಚಾಲನೆ
- 6 ತಿಂಗಳ ಕಾಲ 234 ಕ್ಷೇತ್ರಗಳಲ್ಲಿ ಅಣ್ಣಾಮಲೈ ಸಂಚಾರ
Team Udayavani, Jul 28, 2023, 7:20 AM IST
ಮಧುರೈ: 2024ರ ಲೋಕಸಭೆ ಚುನಾವಣೆಯನ್ನು ಗುರಿಯಾಗಿಸಿಕೊಂಡು ತಮಿಳುನಾಡು ಬಿಜೆಪಿ ವತಿಯಿಂದ ಆಯೋಜಿಸಿರುವ “ಎನ್ ಮಣ್, ಎನ್ ಮಕ್ಕಳ್'(ನನ್ನ ನೆಲ, ನನ್ನ ಜನ) ಪಾದಯಾತ್ರಗೆ ರಾಮೇಶ್ವರದಲ್ಲಿ ಶುಕ್ರವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಾಲನೆ ನೀಡಲಿದ್ದಾರೆ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನನ್ನ ನೇತೃತ್ವದಲ್ಲಿ ಆರು ತಿಂಗಳ ಸುದೀರ್ಘ ಅವಧಿಗೆ ನಡೆಯುವ ಈ ಪಾದಯಾತ್ರೆಯು ರಾಜ್ಯದ 234 ವಿಧಾನಸಭಾ ಕ್ಷೇತ್ರಗಳು ಹಾಗೂ 39 ಲೋಕಸಭಾ ಕ್ಷೇತ್ರಗಳನ್ನು ಒಳಗೊಳ್ಳಲಿದೆ. ರಾಮೇಶ್ವರದಿಂದ ಜು.29ರಂದು ಪಾದಯಾತ್ರೆ ಆರಂಭವಾಗಲಿದೆ” ಎಂದರು.
“ಈ ಪಾದಯಾತ್ರೆಯನ್ನು 1,770 ಕಿ.ಮೀ. ನಡಿಗೆ ಮೂಲಕ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಉಳಿದ ಮಾರ್ಗವನ್ನು ವಾಹನದ ಮೂಲಕ ಕ್ರಮಿಸಲಾಗುವುದು. ಯಾತ್ರೆಯ ವೇಳೆ ನಡೆಯುವ 10 ಪ್ರಮುಖ ರ್ಯಾಲಿಗಳಲ್ಲಿ ಕೇಂದ್ರ ಸಚಿವರು ಭಾಗವಹಿಸಲಿದ್ದಾರೆ. ಪಾದಯಾತ್ರೆಯ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳನ್ನು ಜನರಿಗೆ ಮನವರಿಕೆ ಮಾಡಿಕೊಡಲಾಗುವುದು. ಈ ವೇಳೆ, “ಮೋದಿ ಏನು ಮಾಡಿದರು’ ಪುಸ್ತಕದ ಒಂದು ಲಕ್ಷ ಪ್ರತಿಗಳನ್ನು ಹಂಚಲಾಗುವುದು,’ ಎಂದು ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್
Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ
ಕಳ್ಳರು & ದರೋಡೆಕೋರರ ಗ್ಯಾಂಗ್ ಚುಚ್ಚಿದ್ದ ವಿಷಕ್ಕೆ ಪೊಲೀಸ್ ಕಾನ್ಸ್ ಟೇಬಲ್ ಮೃತ್ಯು
Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ
Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್ ಉತ್ಸುಕವಾಗಿದೆ: ಪ್ರಧಾನಿ ಮೋದಿ