ಜವಾಹರಲಾಲ್ ನೆಹರು ಸ್ಮರಣೆ; ನ.14 ಮಕ್ಕಳ ದಿನಾಚರಣೆ,  ಬಾಲ್ಯದ ದಿನವದು ಚಿರಂತನವಾಗಿರಲಿ


Team Udayavani, Nov 14, 2020, 11:52 AM IST

14-november-2.gif

ಬಾಲ್ಯವೆಂದರೆ ಹಾಗೆ ಏನೂ ತಿಳಿಯದ ಮುಗ್ಧ ಸ್ಥಿತಿ. ಮಣ್ಣಿನಲ್ಲಿ ಮನೆ ಮಾಡಿ, ಎಲೆಗಳನ್ನು ಕತ್ತರಿಸಿ ಪದಾರ್ಥ ತಯಾರಿಸಿ ಅಮ್ಮನ ಸೀರೆ ಉಟ್ಟು ಟೀಚರ್‌ ನಂತೆ ವರ್ತಿಸುವ ಆ ದಿನ ಬಹುಶಃ ಮತ್ತೆ ಮತ್ತೆ ನೆನೆದರೆ ಎಲ್ಲರಿಗೂ ಮನದಲ್ಲಿ ಮಂದಹಾಸ ಮೂಡುತ್ತದೆ. ನೆನಪುಗಳು ಅತಿ ಸುಂದರ, ಬೆಳೆದಂತೆ ನಮ್ಮ ಬುದ್ಧಿ ವಿಕಸನ ಹೊಂದಿ ನೆನಪುಗಳ ವ್ಯೂಹದಲ್ಲಿ ಅದು ಅವಿಸ್ಮರಣೀಯ ಇತಿಹಾಸವಾಗಿ ಉಳಿದುಬಿಡುತ್ತದೆ. ಹೋದ ಹೋದಂತೆ ಅದು ಮಸುಕಾದರೂ ನಮ್ಮ ಅರಿವಿನ ಸಂಕೋಲೆಗಳಿಂದ ದೂರ ನಡೆಯುವುದಿಲ್ಲ.

ಇದೆಲ್ಲ ಮಕ್ಕಳ ದಿನಾಚರಣೆ ಹತ್ತಿರ ಬರುತ್ತಿದ್ದಂತೆ ಒಕ್ಕರಿಸಿ ಬಂದು ಬೀಡುತ್ತವೆ. ಶಾಲೆ ಕಾಲೇಜುಗಳಲ್ಲಿ ಹುಟ್ಟು ಹಬ್ಬದಂತೆ ಆಚರಿಸುವ   ಹಬ್ಬ ಇಂದಿನ ಮಕ್ಕಳನ್ನು ನೋಡುವಾಗ ಹಂಬಲಿಸಿ ಮರೆಯಾಗುತ್ತದೆ. ತಪ್ಪೋ ಸರಿಯೋ, ಇಂದಿನ ಮಕ್ಕಳು ಇಂತಹ ಬಾಲ್ಯದ ನೆನಪುಗಳನ್ನು ಅನುಭವಿಸುತ್ತಿಲ್ಲ ಎಂಬ ಅಪವಾದ ಆಗಾಗ ಕೇಳಿಬರುತ್ತದೆ. ಬದಲಾಗಿ ವೀಡಿಯೋ ಗೇಮ್‌, ಟಿ.ವಿ., ಮೊಬೈಲ್‌ನಲ್ಲಿಯೇ ಸಮಯ ಕಳೆಯುತ್ತಾರೆ. ಅವರಿಗೆ ಮನೆಯ ಮುಂದೆ ಅರಳುವ ಹೂವಿನ ಗಿಡ, ಪಕ್ಕದ ಮನೆಯ ಬದಿಯಲ್ಲಿರುವ ಮರ ಯಾವುದು ಎಂಬ ಸಾಮಾನ್ಯ ಜ್ಞಾನವೂ ಇರುವುದಿಲ್ಲ. ಅದಕ್ಕಾಗಿ ಮಕ್ಕಳ ಬಾಲ್ಯವನ್ನು ನೆನಪಿಸಲು ಹಾಗೂ ಜಾಗೃತಿ ಮೂಡಿಸಲು ಮಕ್ಕಳ ದಿನಾಚರಣೆಯ ನೆಪದಲ್ಲಿ ಅನಿವಾರ್ಯ ಕಾರ್ಯವಾಗಬೇಕಿದೆ.

ಮಕ್ಕಳ ಪಾಲನೆಯಲ್ಲಿ ಹೆತ್ತವರಿಗೆ ಕಿವಿಮಾತು
ಮಕ್ಕಳನ್ನು ಅತಿ ಮುದ್ದು ಮಾಡುವುದು ಹಾಗೂ ಮಕ್ಕಳನ್ನು ಪ್ರೀತಿಸದೆ  ಬೆಳೆಸುವುದರಿಂದ ಅವರು ಬಾಲ್ಯದಲ್ಲಿ ಅಪರಾಧಗೈಯಲು ಹಾಗೂ ಮನೋರೋಗಗಳಿಗೆ ಒಳಗಾಗಿ ಯಾವುದರಲ್ಲೂ ಆಸಕ್ತಿ ಇಲ್ಲದಂತಾಗಿ ಮಾಡಿಬಿಡುತ್ತಾರೆ ಎಂಬುದು ಸುಪ್ರಸಿದ್ಧ ಮನೋವಿಜ್ಞಾನಿ ಆಡ್ಲರ್‌ ಅವರ ಅಭಿಪ್ರಾಯ.

ಹಾಗೆಯೇ ಒಂದು ಮಗುವಿನೆದುರು ಇನ್ನೊಂದು ಮಗುವನ್ನು ಹೀಯಾಳಿಸಿ ಮಾತನಾಡಿದಾಗ ಆ ಮಗುವಿಗೆ ತಾನು ಇನ್ನೊಂದು ಮಗುವಿಗಿಂತ ಕೀಳು ಎಂಬ ಮನೋಭಾವ ಬೆಳೆಯುತ್ತದೆ. ಇದರಿಂದಾಗಿ ಆತ್ಮವಿಶ್ವಾಸ ಕುಗ್ಗಿ ಆ ಮಗು ಸ್ವತಂತ್ರವಾಗಿ ಏನನ್ನೂ ಮಾಡಲಾರದ ಪರಿಸ್ಥಿತಿ ಎದುರಿಸುತ್ತದೆ. ಯಾವಾಗಲೂ ಮಕ್ಕಳ ಭವಿಷ್ಯ ಅವರ ಮನಸ್ಸಿನ ಬೆಳವಣಿಗೆಯನ್ನು ಅವಲಂಬಿಸಿರುವುದರಿಂದ ಅವರ ಆರೋಗ್ಯದ ಜತೆಗೆ ಮಕ್ಕಳ ಮನೋವಿಜ್ಞಾನಕ್ಕೂ ಮಹತ್ವ ನೀಡಬೇಕು.

ಮಕ್ಕಳಿಗಾಗಿ ಆಸ್ತಿ ಮಾಡಬೇಡಿ, ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿ ಎಂಬ ಮಾತಿದೆ.  ಇದು ಅಕ್ಷರಶಃ ನಿಜ. ಆದರೆ ಬರಬರುತ್ತಾ ಇದು ಬದಲಾಗುತ್ತಿದೆ. ಆದ್ದರಿಂದ ಸಾಧ್ಯವಾದಷ್ಟು ಮಕ್ಕಳಿಗೆ ವಾಸ್ತವದ ಅರಿವನ್ನು ಮಾಡಿ ಸುತ್ತಾ, ಸ್ವಾವಲಂಬನೆಯ ಬದುಕನ್ನು ಕಲಿಸುವುದು ಒಳಿತು, ಅಂದಾಗ ಮಾತ್ರ ಒಂದು ಮಗು ಮುಂದಿನ ಸಮಾಜದ ಒಳ್ಳೆಯ ಪ್ರಜೆಯಾಗಲು ಸಾಧ್ಯ.

ಮಕ್ಕಳ ಕಲ್ಯಾಣಕ್ಕಾಗಿ ಶ್ರಮ
ಮಕ್ಕಳ ಹಕ್ಕು, ಹಿತರಕ್ಷಣೆ, ಯೋಗ ಕ್ಷೇಮ, ಮಕ್ಕಳ ಆರೋಗ್ಯ, ಶಿಕ್ಷಣ  ಮತ್ತು ಅಭಿವೃದ್ಧಿಗೆ ಶ್ರಮಿಸುವ ಉದ್ದೇಶದಿಂದ ಜಗತ್ತಿನಾದ್ಯಂತ ಮಕ್ಕಳ ದಿನವನ್ನು ಆಚರಿಸಲಾಗುತ್ತದೆ.

ದಿನಾಚರಣೆ ಆರಂಭಗೊಂಡಿದ್ದು ಹೇಗೆ?
ವಿ.ಎನ್‌. ಕುಲಕರ್ಣಿ ಎನ್ನುವವರು 1951ರಲ್ಲಿ ವಿಶ್ವ ಸಂಸ್ಥೆಯ ಒಂದು ಯೋಜನೆಯಡಿಯಲ್ಲಿ ಇಂಗ್ಲೆಂಡ್‌ನ‌ ಮಕ್ಕಳ ಅಭಿವೃದ್ಧಿಗಾಗಿ ದುಡಿಯುತ್ತಿದ್ದರು. ಆ ದಿನಗಳಲ್ಲಿ ಬಡ ಮಕ್ಕಳ ಅಭಿವೃದ್ಧಿಗಾಗಿ ನಿಧಿ ಸಂಗ್ರಹಕ್ಕೆ ರಾಣಿ ಎಲಿಜಬೆತ್‌-2 ಅವರ ಜನ್ಮದಿನವನ್ನು ಧ್ವಜ ದಿನಾಚರಣೆಯನ್ನಾಗಿ ಆಚರಿಸಿ, ಧನ ಸಂಗ್ರಹಿಸಲಾಗುತ್ತಿತ್ತು. ಈ ಸಂದರ್ಭ ಕುಲಕರ್ಣಿಯವರು ಭಾರತದಲ್ಲೂ ಇಂತಹ ಯೋಜನೆ ಜಾರಿಗೆ ಬರಬೇಕು ಎನ್ನುವ ಉದ್ದೇಶವನ್ನಿಟ್ಟುಕೊಂಡು ವಿಶ್ವ ಸಂಸ್ಥೆಯಲ್ಲಿ ಮಕ್ಕಳ ದಿನಾಚರಣೆಯ ಪ್ರಸ್ತಾವವನ್ನು ಮುಂದಿಟ್ಟರು. ಎಲ್ಲರೂ ಈ ಬಗ್ಗೆ ಚರ್ಚಿಸಿ ದೇಶದ ಮೊದಲ ಪ್ರಧಾನಿ ಪಂ| ಜವಾಹರಲಾಲ್‌ ನೆಹರೂ ಅವರ ಜನ್ಮ ದಿನವಾದ ನ. 14ರಂದು ಮಕ್ಕಳ ದಿನ ಎಂದು ಆಚರಿಸಲು ಘೋಷಿಸಲಾಯಿತು. ಜಗತ್ತಿನಾದ್ಯಂತ ನವೆಂಬರ್‌ 20, 1954ರಂದು ವಿಶ್ವಸಂಸ್ಥೆ ಮಕ್ಕಳ ದಿನವನ್ನು ಆಚರಿಸಲು ಕರೆ ನೀಡಲಾಯಿತು.

ಪ್ರೀತಿ ಭಟ್‌ ಗುಣವಂತೆ

ಟಾಪ್ ನ್ಯೂಸ್

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aasasas

ಸೌರ ಯುಗಾದಿ; ಜೀವನೋತ್ಸಾಹ, ನವಚೈತನ್ಯ ತುಂಬುವ ಹಬ್ಬ ವಿಷು

PAK: ವಾಣಿಜ್ಯ ಕಟ್ಟಡ ನಿರ್ಮಾಣಕ್ಕಾಗಿ ಐತಿಹಾಸಿಕ ಹಿಂದೂ ದೇವಸ್ಥಾನ ಧ್ವಂಸಗೊಳಿಸಿದ ಪಾಕ್!

PAK: ವಾಣಿಜ್ಯ ಕಟ್ಟಡ ನಿರ್ಮಾಣಕ್ಕಾಗಿ ಐತಿಹಾಸಿಕ ಹಿಂದೂ ದೇವಸ್ಥಾನ ಧ್ವಂಸಗೊಳಿಸಿದ ಪಾಕ್!

Union Territory: 6 ಕೇಂದ್ರಾಡಳಿತ ಪ್ರದೇಶದಲ್ಲಿ 6 ಸೀಟು ಯಾರಿಗೆ?

Union Territory: 6 ಕೇಂದ್ರಾಡಳಿತ ಪ್ರದೇಶದಲ್ಲಿ 6 ಸೀಟು ಯಾರಿಗೆ?

Lok Sabha Election: ಜೆಡಿಎಸ್‌ ಭದ್ರಕೋಟೆ ಹಾಸನದಲ್ಲಿ ಜಿದ್ದಾಜಿದ್ದಿನ ಸ್ಪರ್ಧೆ

Lok Sabha Election: ಜೆಡಿಎಸ್‌ ಭದ್ರಕೋಟೆ ಹಾಸನದಲ್ಲಿ ಜಿದ್ದಾಜಿದ್ದಿನ ಸ್ಪರ್ಧೆ

1-qwewqew

ಮರಳಿ ಬಂದಿದೆ ಯುಗಾದಿ: ಹೊಸ ಸಂವತ್ಸರದ ಹುರುಪು, ನವ ಬೆಳಕಿನ ಆಶಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.