ಇಂದು Librarian’s Day: ಭಾರತದ ಗ್ರಂಥಾಲಯ ಪಿತಾಮಹ ಎಸ್‌.ಆರ್‌. ರಂಗನಾಥನ್‌


Team Udayavani, Aug 11, 2023, 11:34 PM IST

lib

ಪ್ರತಿವರ್ಷ ಆ.12ರಂದು ರಾಷ್ಟ್ರೀಯ ಗ್ರಂಥಪಾಲಕರ ದಿನವನ್ನು ಆಚರಿಸುತ್ತಾ ಬಂದಿದ್ದೇವೆ. ಇಂದಿನ ಡಿಜಿಟಲ್‌ ಯುಗದಲ್ಲಿಯೂ ಗ್ರಂಥಾಲಯ ವಿಜ್ಞಾನದ ಪಿತಾ ಮಹರಾದ ಡಾ| ಎಸ್‌.ಆರ್‌. ರಂಗನಾಥನ್‌ ಅವರನ್ನು ನಾವು ಸ್ಮರಿಸಲೇಬೇಕು. ಗ್ರಂಥಾಲಯಗಳು ಎಂದರೆ ಜ್ಞಾನದ ಸಾಗರ, ಪುರಾಣ, ಇತಿಹಾಸ ಕಾಲದಿಂದಲೂ ಇಂದಿನ ಡಿಜಿಟಲ್‌ ಯುಗದ ವರೆಗೂ ಅನೇಕ ಪಂಡಿತರು, ಸಂಶೋಧಕರು, ಅನುಭಾವಿಗಳು ತಮ್ಮ ಶ್ರಮ, ಸಮಯ, ಜ್ಞಾನ ಉಪಯೋಗಿಸಿ ಮುಂದಿನ ಪೀಳಿಗೆಗೆ ಗ್ರಂಥಸ್ಥವಾಗಿ ಬರೆದಿಟ್ಟಿ¨ªಾರೆ. ಇಂತಹ ಜ್ಞಾನ ದೇಗುಲವೇ ಗ್ರಂಥಾಲಯ. ಗ್ರಂಥಾಲಯಕ್ಕೆ ಜ್ಞಾನದ ಕಣಜ ಎಂದು ಕರೆಯಲಾಗುತ್ತದೆ.

ಭಾರತದ ಗ್ರಂಥಾಲಯ ವಿಜ್ಞಾನದ ಪಿತಾಮಹರಾದ ಡಾ| ಎಸ್‌.ಆರ್‌.ರಂಗನಾಥನ್‌ರವರು ಮದ್ರಾಸ್‌ ಪ್ರಾಂತದ ಒಂದು ಪುಟ್ಟ ಹಳ್ಳಿ ಶಿಯಾಳಿ ಎಂಬಲ್ಲಿ ಆಗಸ್ಟ್‌ 12, 1892ರಲ್ಲಿ ಜನಿಸಿದರು. ಬಾಲ್ಯದಿಂದಲೂ ಶಿಸ್ತಿನ ಸಿಪಾಯಿಯಂತೆ ಬೆಳೆದವರಾಗಿದ್ದರಿಂದ ಚುರುಕು ಬುದ್ಧಿಯವರಾಗಿದ್ದರು. ಸೇವಾ ಅವಧಿಯಲ್ಲಿ ಮೊದಲಿಗೆ ಗಣಿತದ ಪ್ರಾಧ್ಯಾಪಕರಾಗಿ ಬಳಿಕ, ಮದ್ರಾಸ್‌ ವಿಶ್ವವಿದ್ಯಾನಿಲಯದ ಗ್ರಂಥಾಲಯಕ್ಕೆ ಪ್ರಥಮ ಗ್ರಂಥಪಾಲಕ ಆಗಿ ನೇಮಕವಾದರು. 1924ರಲ್ಲಿ ಇವರ ಅನುಭವ, ಶಿಸ್ತು, ಕ್ರಿಯಾಶೀಲ ವ್ಯಕ್ತಿತ್ವದಿಂದಾಗಿ ಲಂಡನ್ನಿನ ಬ್ರಿಟಿಷ್‌ ವಸ್ತು ಸಂಗ್ರಹಾಲಯದ ಗ್ರಂಥ ಭಂಡಾರದಲ್ಲಿ ನಡೆಯುವ ಗ್ರಂಥ ಪರಿಚಲನೆ, ಆಡಳಿತ ಪರಿಶೀಲನೆಗಾಗಿ ಅವರನ್ನು ಇಂಗ್ಲೆಂಡ್‌ಗೆ ಕಳುಹಿಸಲಾಗಿತ್ತು. ಆಸಕ್ತಿ ಇರುವುದರಿಂದ ಅಲ್ಲಿಯೇ ಮುಂದಿನ ಉನ್ನತ ಶಿಕ್ಷಣ ಪಡೆಯಲು ಉಳಿದುಕೊಂಡರು. ಅಲ್ಲಿ ಗ್ರಂಥಾಲಯ ಮಹತ್ವದ ಬಗ್ಗೆ ಮಾಹಿತಿ ಕಲೆಹಾಕಿ ತಮ್ಮ ಗುರುಗಳಾದ ಬರ್ವಿಕ್‌ ಸೇಯರ್ಸ್‌ ಅವರ ಮಾರ್ಗದರ್ಶನದಲ್ಲಿ ಗ್ರಂಥಾಲಯ ವಿಜ್ಞಾನದಲ್ಲಿ ಪರಿಣತಿ ಹೊಂದಿದರು.

ಶಿಯಾಳಿ ರಾಮಾಮೃತ ರಂಗನಾಥನ್‌ ಸಾಮಾನ್ಯ ಬಡ ಕುಟುಂಬಕ್ಕೆ ಸೇರಿದವರಾಗಿದ್ದರು. ಎನ್‌.ರಾಮಾಮೃತ ರಂಗನಾಥನ್‌, ಸೀತಾಲಕ್ಷ್ಮೀ ದಂಪತಿಗಳ ಪುತ್ರನಾಗಿ ಜನಿಸಿದ ಶ್ರೀಯುತರು ಅತೀ ಬಡತನದಲ್ಲೇ ಬೆಳೆದು ಉನ್ನತ ಸ್ಥಾನಕ್ಕೆ ಬಂದವರು.

ಡಾ| ಎಸ್‌. ಆರ್‌. ರಂಗನಾಥನ್‌ ಗ್ರಂಥಾಲಯ ವಿಜ್ಞಾನವನ್ನು ಕುರಿತು 60ಕ್ಕೂ ಹೆಚ್ಚು ಮಹತ್ವದ ಗ್ರಂಥಗಳನ್ನು ಹಾಗೂ ಸುಮಾರು 2500 ಲೇಖನಗಳನ್ನು ಪ್ರಕಟಿಸಿದ್ದಾರೆ. ಅವುಗಳಲ್ಲಿ ಗ್ರಂಥಾಲಯದ ಪಂಚ ಸೂತ್ರಗಳು, ರಾಮಾನುಜನ್‌-ದ ಮ್ಯಾನ್‌ ಆ್ಯಂಡ್‌ ಮೆಥಮೆಟೀ ಶಿಯನ್‌, ಕ್ಲಾಸಿಫೈಡ್‌ ಕೆಟ್ಲಾಗ್‌, ಡಿಕ್ಷನರಿ ಕೆಟ್ಲಾಗ್‌, ಲೈಬ್ರರಿ ಅಡ್ಮಿನಿಸ್ಟ್ರೇಶ‌ನ್‌, ಇಂಡಿಯನ್‌ ಲೈಬ್ರರಿ ಮ್ಯಾನಿ ಫೆಸ್ಟೋ, ಲೈಬ್ರರಿ ಮ್ಯಾನುವಲ್‌ ಫಾರ್‌ ಲೈಬ್ರರಿ ಅಥಾರಿಟೀಸ್‌, ಲೈಬ್ರರಿಯ®Õ… ಆ್ಯಂಡ್‌ ಲೈಬ್ರರಿ ವರ್ಕರ್ಸ್‌, ಕ್ಲಾಸಿಫಿಕೇಶನ್‌-ಕಮ್ಯುನಿಕೇಶನ್‌, ಕಂಪ್ಯಾರಿ ಟಿವ್‌ ಸ್ಟಡಿ ಆಫ್ ಫೈವ್‌ ಕ್ಯಾಟ ಲಾಗ್ಸ್‌ ಹೀಗೆ ಹತ್ತು ಹಲವಾರು ಗ್ರಂಥಗಳು ಅವರಿಗಿದ್ದ ಆಳವಾದ ವಿದ್ವತ್ತನ್ನು ಮತ್ತು ಅನುಭವನ್ನು ಎತ್ತಿ ತೋರಿಸುತ್ತವೆ.

ದಿಲ್ಲಿ ವಿಶ್ವವಿದ್ಯಾನಿಲಯ 1948ರಲ್ಲಿ ಪಿಎಚ್‌.ಡಿ ಮತ್ತು ಪಿಟ್ಸ್‌ಬರ್ಗ್‌ ವಿಶ್ವವಿದ್ಯಾನಿಲಯ 1964ರಲ್ಲಿ ಡಿ.ಲಿಟ್‌ ಪದವಿಯನ್ನು ಹಾಗೂ 1935ರಲ್ಲಿ ಬ್ರಿಟಿಷ್‌ ಸರಕಾರ ರಾವ್‌ ಸಾಹೇಬ್‌ ಬಿರುದು, ಭಾರತ ಸರಕಾರವು ಪದ್ಮಶ್ರೀ ಪ್ರಶಸ್ತಿಯನ್ನು ನೀಡಿದೆ. 1970ರಲ್ಲಿ ಅಮೆರಿಕದ ಮಾರ್ಗರೇಟ್‌ ಮಾನ್‌ ಪಾರಿತೋ ಷಕವನ್ನು ಪಡೆದ ಪ್ರಥಮ ಭಾರತೀಯರಿವರು. ಅಷ್ಟೇ ಅಲ್ಲ, ಭಾರತದಲ್ಲಿ 2007ರಿಂದ ಅವರ ಹುಟ್ಟು ಹಬ್ಬದ ದಿನವಾದ ಆ.12 ಅನ್ನು ಗ್ರಂಥಪಾಲಕರ ದಿನವನ್ನಾಗಿ ಆಚರಣೆ ಮಾಡಲಾಗುತ್ತಿದೆ.

ಗ್ರಂಥಾಲಯ ಸೇವೆಯಲ್ಲಿರುವವರಿಗೆ ಡಾ| ಎಸ್‌. ಆರ್‌. ರಂಗನಾಥನ್‌ ಸಂದೇಶಗಳು ಮಾರ್ಗದರ್ಶಕವಾಗಿ ನೆಲೆನಿಂತಿವೆ. ಅವರು ನೀಡಿದ ಗ್ರಂಥಾಲಯ ಪಂಚಸೂತ್ರ ಗಳು 1. ಗ್ರಂಥ ಓದಲು 2.  ಗ್ರಂಥಕ್ಕೊಬ್ಬರು 3.  ಎಲ್ಲರಿಗೂ ಗ್ರಂಥಗಳು 4.  ಓದುಗರ ಸಮಯವನ್ನು ಉಳಿಸಿರಿ 5.  ಗ್ರಂಥಾಲಯ ಬೆಳೆಯುವ ಶಿಶು ಗ್ರಂಥಪಾಲಕರಿಗೆ ದಾರಿದೀಪವಾಗಿವೆ.

ಲಂಡನ್‌ನಲ್ಲಿ ಇದ್ಧಾಗ ಸೇಯರ್ಸ್‌ ಸಹಾಯದಿಂದ ಶಿಷ್ಯತ್ವ ವಹಿಸಿ ವರ್ಗೀಕರಣ ಪದ್ಧತಿಗಳನ್ನು ವಿಮರ್ಶಾತ್ಮಕ ದೃಷ್ಟಿಯಿಂದ ಆಳವಾಗಿ ಅಭ್ಯಾಸ ಮಾಡಿದರು. ಅಲ್ಲಿಯ ಹಲವಾರು ಪದ್ಧತಿಗಳು ನಮ್ಮ ದೇಶದಲ್ಲಿ ಅನ್ವಯವಾಗುವುದಿಲ್ಲ ಎಂದು ಅರಿತ ಮೇಲೆ ತಾವೇ ಯೋಚನೆ ಮಾಡತ್ತಾ ಹಡಗಿನಲ್ಲಿ ಭಾರತಕ್ಕೆ ಬರುವಾಗಲೇ ದ್ವಿಬಿಂದು ವರ್ಗೀಕರಣ ಪದ್ಧತಿಯ ರೂಪುರೇಷೆ ಹಾಕಿ ದರು. ಬಳಿಕ ಮದ್ರಾಸ್‌ ವಿಶ್ವವಿದ್ಯಾನಿಲಯದ ಗ್ರಂಥಾಲ ಯದ ಗ್ರಂಥಗಳನ್ನು ವರ್ಗಿಕರಿಸಲಾರಂಭಿ ಸಿದರು. ಮದ್ರಾಸ್‌ ಗ್ರಂಥಾಲಯ ಸಂಘದಿಂದ ದ್ವಿಬಿಂದು ಪ್ರಥಮ ಮುದ್ರಣ ಕಂಡಿತು. ಮುಂದೆ ಅದು ಜಗದ್ವಿಖ್ಯಾತ ಪ್ರಸಿದ್ಧಿ ಪಡೆಯಿತು. ಈಗ ಏಳನೇ ಆವೃತ್ತಿ ಪರಿಷ್ಕೃ ತಗೊಂಡು ಡಾ| ಎಂ.ಎ. ಗೋಪಿನಾಥರ ವರು 1987 ರಲ್ಲಿ ಸಂಪಾದಿಸಿ ಕೊಟ್ಟಿದ್ಧಾರೆ. ಇದರ ಕನ್ನಡ ಅನುವಾದವನ್ನು ಮೈಸೂರಿನ ಭಾರತೀಯ ಭಾಷಾ ಸಂಸ್ಥೆ ಯಿಂದ ಡಾ| ಬಿ.ಎ.ಶಾರದಾ ಅವರು 2010ರಲ್ಲಿ ಅನುವಾದ ಮಾಡಿದ್ದಾರೆ.

ಈ ಗ್ರಂಥ ಜಗತ್ತಿನ ಅನೇಕ ವಿವಿಗಳಲ್ಲಿ ಗ್ರಂಥಾಲಯ ವಿಜ್ಞಾನ ವಿಭಾಗದಲ್ಲಿ ಪಠ್ಯಪುಸ್ತಕವೆಂದು ಅಂಗೀಕರಿಸಲ್ಪಟ್ಟಿದೆ. ಆಗ ಭಾರತೀಯ ಗ್ರಂಥಾಲಯ ಸಂಘ 1933ರಲ್ಲಿ ಪ್ರಾರಂಭವಾಯಿತು. ಈ ಸಂಘವು ರಂಗನಾ ಥನ್‌ ಅವರ ನೇತೃತ್ವದಲ್ಲಿ ಸ್ಥಾಪನೆಯಾಯಿತು. ಈ ಸಂಘ ದಿಂದ ಅನೇಕ ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ಸ್ವತಂತ್ರ ಗ್ರಂಥ ಗಳನ್ನು ಪ್ರಕಟಿಸಿದರು. ಅಬ್ಗಿಲಾ ಎಂಬ ಪತ್ರಿಕೆ ನಡೆಸಿದರು. ಈ ಪತ್ರಿಕೆಯಲ್ಲಿ ಗ್ರಂಥಾಲಯ ವಿಜ್ಞಾನದ ಮೇಲೆ ಬರೆಯ ಲಾದ ಸಂಶೋಧನ ಲೇಖನಗಳು ಪ್ರಕಟವಾಗಿವೆ.ವಿಶೇ ಷವಾಗಿ ಈ ಪತ್ರಿಕೆಯಲ್ಲಿ ವರ್ಗೀಕರಣಕ್ಕೆ ಸಂಬಂಧಿಸಿದಂತೆ ಲೇಖನಗಳು ಪ್ರಕಟವಾಗಿವೆ. ಈ ಪತ್ರಿಕೆ ನಿಂತರೂ ಛಲ ದಿಂದ ಮತ್ತೇ Annals of Library Science ಎಂಬ ಮತ್ತೂಂದು ಪತ್ರಿಕೆ ಆರಂಭಿಸಿದರು. ಇಂದಿಗೂ ದಿಲ್ಲಿಯಿಂದ ಪ್ರಕಟವಾಗುತ್ತಿದೆ.

ಗ್ರಂಥಾಲಯದ ಮಹತ್ವ, ಉಪಯೋಗ ತಿಳಿಸಬೇ ಕೆಂದರೆ ಗ್ರಂಥಪಾಲಕರಿಗೆ ತರಬೇತಿ ಮುಖ್ಯ ಎಂದು ತರಬೇತಿ ಕೇಂದ್ರ ಪ್ರಾರಂಭಿಸಿದರು. ಭಾರತದಲ್ಲಿ ಇಬ್ಬರು ವಿದೇಶಿ ಗ್ರಂಥಪಾಲಕರು ಬಂದರೂ ಸಹ ಕೆಲವೇ ತಿಂಗಳು ಗಳಲ್ಲಿ ಪುನಃ ತಮ್ಮ ದೇಶಕ್ಕೆ ಮರಳುತ್ತಿದ್ದರು. ಆದರೆ ನಮ್ಮ ದೇಶದ ಪ್ರತಿಭೆ ಎಸ್‌.ಆರ್‌.ರಂಗನಾಥನ್‌ ಅವರು ಭಾರತಕ್ಕೆ ಮೂರನೇ ಗ್ರಂಥಪಾಲಕ ಆಗಿ ನೇಮಕವಾದರು. ದಕ್ಷಿಣ ಭಾರತದ ಶಿಕ್ಷಕರ ಸಂಘದ ವಾರ್ಷಿಕ ಸಮ್ಮೇಳನದಲ್ಲಿ ಗ್ರಂಥಾಲಯ ವಿಜ್ಞಾನದ ಬಗ್ಗೆ ಭಾಷಣ ಮಾಡಿದರು. ಸಾವಿ ರಕ್ಕೂ ಹೆಚ್ಚು ಶಿಕ್ಷಕರು ಹಾಜರಿದ್ದರು. ಮುಂದೆ ಇವರು ಶ್ರಮದ ಫ‌ಲವಾಗಿ ಡಿಪ್ಲೊಮಾ ಕೋರ್ಸ್‌ ಆರಂಭ ಆಯಿತು. 1945ರಲ್ಲಿ ನಿವೃತ್ತಿ ಆದರೂ ಅವರ ಕ್ರಿಯಾಶೀಲತೆ ಮೆಚ್ಚಿ ಬನಾರಸ್‌ ವಿಶ್ವವಿದ್ಯಾನಿಲಯದಲ್ಲಿ ಕುಲಪತಿಗಳಾದ ಡಾ| ರಾಧಾಕೃಷ್ಣನ್‌ ಅವರು ತಮ್ಮ ವಿಶ್ವವಿದ್ಯಾನಿಲಯದ ಗ್ರಂಥಾಲಯವನ್ನು ನವೀಕರಿಸಬೇಕು ಎಂದು ವಿನಂತಿಸಿ ಕೊಂಡರು. ಮುಂದೆ ಕಾಶಿಯಲ್ಲಿ ಒಂದು ಲಕ್ಷ ಗ್ರಂಥಗಳನ್ನು ವರ್ಗೀಕರಿಸಿದ್ದು ಮಹತ್ವದ ಸಾಧನೆ. ದಿಲ್ಲಿಯ ವಿಶ್ವ ವಿದ್ಯಾ ನಿಲಯದ ಕುಲಪತಿಗಳಾದ ಪ್ರೊ| ಮಾರಿಸ್‌ ಗ್ವಾರ್ಯ ರಿಂದ ತಮ್ಮ ವಿದ್ಯಾಪೀಠದ ಗ್ರಂಥಾಲಯವನ್ನು ನವೀಕರಿ ಸಬೇಕು ಎಂದು ಕೇಳಿಕೊಂಡರು. ಅಲ್ಲಿಯೂ ಸಹ ಗ್ರಂಥಾ ಲಯ ಶಾಸ್ತ್ರದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ಅನಂತರ ಎರಡು ವರ್ಷದ ಲೈಬ್ರರಿ ಸೈನ್ಸ್‌ ಪ್ರಾರಂಭ ಮಾಡಿದರು.

1961ರಿಂದ ಬೆಂಗಳೂರಿನ ಭಾರತೀಯ ಸಂಖ್ಯಾಶಾಸ್ತ್ರ ಸಂಸ್ಥೆಯ ಆಶ್ರಯದಲ್ಲಿ ನಡೆಯುತ್ತಿರುವ ಪ್ರಲೇಖನ ಸಂಶೋಧನ ಮತ್ತು ತರಬೇತಿ ಕೇಂದ್ರದಲ್ಲಿ ಗೌರವ ಪ್ರಾಧ್ಯಾ ಪಕರಾಗಿ ಕೆಲಸ ಮಾಡುತ್ತಿದ್ದರು. ಅಲ್ಲದೇ ಇಂಗ್ಲೆಂಡ್‌, ಫ್ರಾನ್ಸ್‌, ಅಮೆರಿಕ, ಜಪಾನ್‌ ಇತ್ಯಾದಿ ದೇಶಗಳಲ್ಲಿ ಎಸ್‌.ಆರ್‌.ರಂಗನಾಥನ್‌ ಅವರು ಅತಿಥಿ ಗೌರವ ಉಪ ನ್ಯಾಸಕರಾಗಿ ಸೇವೆ ಸಲ್ಲಿಸಿ ಇಡೀ ಜಗತ್ತಿಗೆ ಮಾದರಿ ಹಿರಿಯ ಮುತ್ಸದ್ದಿ ಭಾರತದ ಗ್ರಂಥಾಲಯ ಪಿತಾಮಹ ಎಂದು ಅನಿಸಿಕೊಂಡರು. ಅನಂತರ  ಸಾರ್ವಜನಿಕ ಗ್ರಂಥಾಲ ಯಗಳು, ಮಕ್ಕಳ ಗ್ರಂಥಾಲಯ, ಸಂಚಾರಿ ಗ್ರಂಥಾಲಯ, ಪಂಚಾಯತ್‌ ಗ್ರಂಥಾಲಯಗಳು ಹೀಗೆ ಹಲವಾರು ಕ್ಷೇತ್ರಗಳಲ್ಲಿ ಗ್ರಂಥಾಲಯದ ಕೊಡುಗೆ ಅಪಾರವಾಗಿದೆ. ಅವರು ಮಾಡಿದ ಸಾಧನೆಯನ್ನು ಗುರುತಿಸಿ ಅವರಿಗೆ ಗೌರವ ಸಮರ್ಪಣೆ ಮಾಡೋಣ. ಅಂದರೆ ಈ ದಿನ ಸಾರ್ಥಕ್ಯ ಪಡೆಯಬೇಕಾದರೆ ಗ್ರಂಥಾಲಯವನ್ನು ಪ್ರೀತಿಸೋಣ, ಬೆಳೆಸೋಣ ಜ್ಞಾನ ದೀವಿಗೆ ಹಚ್ಚೋಣ.

ಡಾ| ಸತೀಶಕುಮಾರ ಎಸ್‌. ಹೊಸಮನಿ

(ಲೇಖಕರು: ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿರ್ದೇಶಕರು, ಬೆಂಗಳೂರು)

ಟಾಪ್ ನ್ಯೂಸ್

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.