ಇಂದು ಮೂರನೇ ಏಕದಿನ : ವೈಟ್‌ವಾಶ್‌ ಯೋಜನೆಗೆ ಶಿಖರ್‌ ಧವನ್‌ ಪವರ್‌

ಭಾರತದಿಂದ ಮೀಸಲು ಸಾಮರ್ಥ್ಯ ಪರೀಕ್ಷೆ?

Team Udayavani, Feb 11, 2022, 6:40 AM IST

ಇಂದು ಮೂರನೇ ಏಕದಿನ : ವೈಟ್‌ವಾಶ್‌ ಯೋಜನೆಗೆ ಶಿಖರ್‌ ಧವನ್‌ ಪವರ್‌

ಅಹ್ಮದಾಬಾದ್‌: ವೆಸ್ಟ್‌ ಇಂಡೀಸ್‌ ವಿರುದ್ಧ ಸತತ 11 ಏಕದಿನ ಸರಣಿ ಗೆದ್ದ ಖುಷಿಯಲ್ಲಿರುವ ಭಾರತದ ಮುಂದಿನ ಯೋಜನೆ ವೈಟ್‌ವಾಶ್‌. ಶುಕ್ರವಾರ ನಡೆಯುವ ಅಂತಿಮ ಪಂದ್ಯವನ್ನು ಗೆದ್ದು ಸರಣಿಯನ್ನು 3-0 ಅಂತರದಿಂದ ವಶಪಡಿಸಿ ಕೊಳ್ಳುವುದು ರೋಹಿತ್‌ ಪಡೆಯ ಏಕೈಕ ಗುರಿ.

ಇದೇ ವೇಳೆ, ತಂಡದ ಮೀಸಲು ಸಾಮರ್ಥ್ಯವನ್ನು ಪರೀಕ್ಷಿಸಲಿಕ್ಕೂ ಭಾರತ ಹೊರಡುವ ಸಾಧ್ಯತೆ ಇದೆ. ಇಲ್ಲಿ ಎಡಗೈ ಆರಂಭಕಾರ ಶಿಖರ್‌ ಧವನ್‌ ಆಗಮನದ ಕುರಿತಷ್ಟೇ ನಾಯಕ ರೋಹಿತ್‌ ಶರ್ಮ ಸುಳಿವು ನೀಡಿದ್ದಾರೆ. ಉಳಿದಂತೆ ಈ ಸರಣಿಯಲ್ಲಿ ಅವಕಾಶ ಪಡೆಯದ ಆಟಗಾರರ ದೊಡ್ಡ ದಂಡೇ ಇದೆ. ಮಾಯಾಂಕ್‌ ಅಗರ್ವಾಲ್‌, ಋತುರಾಜ್‌ ಗಾಯಕ್ವಾಡ್‌, ಶ್ರೇಯಸ್‌ ಅಯ್ಯರ್‌, ಕುಲದೀಪ್‌ ಯಾದವ್‌, ದೀಪಕ್‌ ಚಹರ್‌, ಆವೇಶ್‌ ಖಾನ್‌, ರವಿ ಬಿಷ್ಣೋಯಿ, ಶಾರೂಖ್‌ ಖಾನ್‌… ರೇಸ್‌ನಲ್ಲಿದ್ದಾರೆ. ಇವರಲ್ಲಿ ಒಂದಿಬ್ಬರಾದರೂ ಹನ್ನೊಂದರ ಬಳಗದಲ್ಲಿ ಕಾಣಿಸಿಕೊಳ್ಳಬಹುದು.

3ನೇ ಓಪನಿಂಗ್‌ ಜೋಡಿ
ಕೊರೊನಾದಿಂದ ಚೇತರಿಸಿಕೊಂಡು ಬಂದ ಶಿಖರ್‌ ಧವನ್‌ ಇಲ್ಲಿ ನಾಯಕ ರೋಹಿತ್‌ ಶರ್ಮ ಜತೆ ಇನ್ನಿಂಗ್ಸ್‌ ಆರಂಭಿಸಲಿದ್ದಾರೆ. ಆಗ 3 ಪಂದ್ಯಗಳಿಗೆ 3 ಆರಂಭಿಕ ಜೋಡಿಗಳನ್ನು ಭಾರತ ಪ್ರಯೋಗಿಸಿದಂತಾಗುತ್ತದೆ. ಮೊದಲ ಪಂದ್ಯದಲ್ಲಿ ಇಶಾನ್‌ ಕಿಶನ್‌, ಬಳಿಕ ರಿಷಭ್‌ ಪಂತ್‌ ಕಪ್ತಾನನೊಂದಿಗೆ ಓಪನರ್‌ ಆಗಿ ಬಂದಿದ್ದರು. ಇದೀಗ ಧವನ್‌ ಆಗಮಿಸುವುದರಿಂದ ಪಂತ್‌ ಮತ್ತೆ ಮಿಡ್ಲ್ ಆರ್ಡರ್‌ಗೆ ತೆರಳಬೇಕಾಗುತ್ತದೆ. ಉಪನಾಯಕ ಕೆ.ಎಲ್‌. ರಾಹುಲ್‌ ಕೂಡ ಇಲ್ಲಿಯೇ ಉಳಿಯ ಬೇಕಾಗುತ್ತದೆ. ಧವನ್‌ಗಾಗಿ ಆಲ್‌ರೌಂಡರ್‌ ದೀಪಕ್‌ ಹೂಡಾ ಅವರನ್ನು ಕೈಬಿಡುವ ಸಾಧ್ಯತೆ ಇದೆ.

ವಿಶ್ವಕಪ್‌ ಪಂದ್ಯಾವಳಿಗೂ ಮುನ್ನ ಮಿಡ್ಲ್ ಆರ್ಡರ್‌ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕಾದುದು ಭಾರತದ ಮುಂದಿರುವ ದೊಡ್ಡ ಸವಾಲು. ಇಲ್ಲಿ ಕೊಹ್ಲಿ, ರಾಹುಲ್‌, ಸೂರ್ಯಕುಮಾರ್‌, ಅಯ್ಯರ್‌, ಪಂತ್‌ ಅವರನ್ನೆಲ್ಲ ಗಟ್ಟಿಗೊಳಿಸುವ ಯೋಜನೆ ಇದೆ. ಇವರಲ್ಲಿ ಅಯ್ಯರ್‌ ಇನ್ನೂ ಈ ಸರಣಿಯಲ್ಲಿ ಆಡಿಲ್ಲ. ಸೂರ್ಯ ಕುಮಾರ್‌ ಓಕೆ. ರಾಹುಲ್‌ ಯಾವ ಕ್ರಮಾಂಕಕ್ಕೂ ಸೈ ಎನಿಸುವ ಮಟ್ಟದಲ್ಲಿದ್ದಾರೆ. ಆದರೆ ಕೊಹ್ಲಿ, ಪಂತ್‌ ದೊಡ್ಡ ಇನ್ನಿಂಗ್ಸ್‌ ಕಟ್ಟಬೇಕಾದ ತುರ್ತು ಅಗತ್ಯವಿದೆ.

ಇದನ್ನೂ ಓದಿ:ಪ್ರೊ ಕಬಡ್ಡಿ: ಬೆಂಗಾಲ್‌ ವಾರಿಯರ್ -ದಬಾಂಗ್‌ ದಿಲ್ಲಿ ಪಂದ್ಯ ಟೈ

ಬೌಲರ್‌ಗಳೇ ಹೀರೋಸ್‌
ಮೊದಲೆರಡೂ ಪಂದ್ಯಗಳಲ್ಲಿ ಬೌಲರ್‌ಗಳೇ ಹೀರೋಗಳಾಗಿದ್ದರು. ಅದರಲ್ಲೂ ಆತಿಥೇಯ ಭಾರತ ಅಮೋಘ ಬೌಲಿಂಗ್‌ ಪ್ರದರ್ಶಿಸಿತ್ತು. ವೆಸ್ಟ್‌ ಇಂಡೀಸನ್ನು ಕ್ರಮವಾಗಿ 176 ಹಾಗೂ 193ಕ್ಕೆ ಆಲೌಟ್‌ ಮಾಡಿತ್ತು. ಕಳೆದ 17 ಪಂದ್ಯಗಳಲ್ಲಿ ಕೆರಿಬಿಯನ್ನರು ಪೂರ್ತಿ 50 ಓವರ್‌ ಪೂರೈಸದ 11ನೇ ನಿದರ್ಶನ ಇದಾಗಿದೆ.

ಎರಡೂ ಪಂದ್ಯಗಳಲ್ಲಿ ಭಾರತ ಸುಧಾರಿತ ಹಾಗೂ ಪರಿಣಾಮಕಾರಿ ಬೌಲಿಂಗ್‌ ಮೂಲಕ ಗಮನ ಸೆಳೆದಿತ್ತು. ಮೊದಲ ಪಂದ್ಯದಲ್ಲಿ ಸ್ಪಿನ್ನರ್‌ ಚಹಲ್‌, ದ್ವಿತೀಯ ಮುಖಾಮುಖಿಯಲ್ಲಿ ಪೇಸರ್‌ ಪ್ರಸಿದ್ಧ್ ಕೃಷ್ಣ ಮಿಂಚಿನ ದಾಳಿ ಸಂಘಟಿಸಿದ್ದರು. ಈ ಬೌಲರ್‌ಗಳೇ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾಗಿದ್ದರು.

ಅಹ್ಮದಾಬಾದ್‌ ಟ್ರ್ಯಾಕ್‌ ಬ್ಯಾಟ್ಸ್‌ಮನ್‌ಗಳಿಗೆ ಅಷ್ಟೇನೂ ಸಹಕರಿಸುತ್ತಿಲ್ಲ. ಹೀಗಾಗಿ ಶುಕ್ರವಾರವೂ ಬೌಲರ್‌ಗಳೇ ಮೇಲುಗೈ ಸಾಧಿಸುವ ಸಾಧ್ಯತೆ ಇದೆ. ಕಳೆದೆರಡು ಪಂದ್ಯಗಳಲ್ಲಿ ಕೇವಲ 3 ಅರ್ಧ ಶತಕವಷ್ಟೇ ದಾಖಲಾಗಿದೆ. 64 ರನ್‌ ಮಾಡಿದ ಸೂರ್ಯಕುಮಾರ್‌ ಯಾದವ್‌ ಅವರದೇ ಗರಿಷ್ಠ ಗಳಿಕೆ. ರೋಹಿತ್‌ ಶರ್ಮ 60, ಜೇಸನ್‌ ಹೋಲ್ಡರ್‌ 57 ರನ್‌ ಹೊಡೆದಿದ್ದಾರೆ.

ಸಿಡಿಯದ ವಿಂಡೀಸ್‌
ವೆಸ್ಟ್‌ ಇಂಡೀಸ್‌ ಘಟಾನುಘಟಿ ಬ್ಯಾಟ್ಸ್‌ ಮನ್‌ಗಳನ್ನು ಹೊಂದಿದ್ದರೂ ಸಿಡಿದು ನಿಂತಿಲ್ಲ. ಆತಿಥೇಯರ ಬೌಲಿಂಗ್‌ ಆಕ್ರಮಣಕ್ಕೆ ಸಂಪೂರ್ಣವಾಗಿ ಶರಣಾಗಿದೆ. ಆದರೆ ಮೈಚಳಿ ಬಿಟ್ಟು ಆಡಿದರೆ ಈ ಬೌಲಿಂಗ್‌ ಟ್ರ್ಯಾಕ್‌ನಲ್ಲೂ ದೊಡ್ಡ ಮೊತ್ತ ರಾಶಿ ಹಾಕುವ ಸಾಮರ್ಥ್ಯ ಕೆರಿಬಿಯನ್ನರಿಗಿದೆ. ಪೊಲಾರ್ಡ್‌, ಹೋಲ್ಡರ್‌, ಹೋಪ್‌, ಕಿಂಗ್‌, ಪೂರಣ್‌ ಅವರನ್ನೊಳಗೊಂಡ ದೈತ್ಯ ಬ್ಯಾಟಿಂಗ್‌ ಪಡೆಯೇ ಇಲ್ಲಿದೆ.

ಬೌಲಿಂಗ್‌ ಟ್ರ್ಯಾಕ್‌ನಲ್ಲೂ ವಿಂಡೀಸ್‌ ಗಮನಾರ್ಹ ಪ್ರದರ್ಶನವನ್ನೇನೂ ನೀಡಿಲ್ಲ. ಹೀಗಾಗಿ ಇಲ್ಲಿಯೂ ದೊಡ್ಡ ಮಟ್ಟದ ಸುಧಾರಣೆ ಆಗಬೇಕಿದೆ.

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.