World Biofuel Day: ಜೈವಿಕ ಇಂಧನದತ್ತ ಹೊರಳುತ್ತಿವೆ ವಿಶ್ವ ರಾಷ್ಟ್ರಗಳು


Team Udayavani, Aug 9, 2023, 11:37 PM IST

WORLD BIO FUEL DAY

ಇಂಧನ ಶಕ್ತಿಯು ಪ್ರತೀ ದೇಶದ ಅಭಿವೃದ್ಧಿಯಲ್ಲಿ ದೊಡ್ಡ ಪಾತ್ರವನ್ನು ನಿರ್ವ ಹಿಸುತ್ತಿದೆ. ವಿಶ್ವದ ಹಲವಾರು ದೇಶಗಳು ತಮ್ಮ ತಮ್ಮ ಇಂಧನ ಕ್ಷೇತ್ರವನ್ನು ಬಲಪಡಿಸುವಲ್ಲಿ ನಿರತವಾಗಿವೆ. ಅದರಲ್ಲೂ ಜೈವಿಕ ಇಂಧನಕ್ಕೆ ಹೆಚ್ಚು ಪ್ರಾಮುಖ್ಯ ನೀಡುತ್ತಿರುವ ದೇಶಗಳು ಹೊಸ ತಂತ್ರಜ್ಞಾನದ ಮೂಲಕ ಜೈವಿಕ ಇಂಧನವನ್ನು ವೃದ್ಧಿಸಲು ಯೋಜನೆಗಳನ್ನು ರೂಪಿಸಿವೆ. ಪ್ರಪಂಚದಾದ್ಯಂತ ಜೈವಿಕ ಇಂಧನದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಪ್ರತೀ ವರ್ಷ ಆಗಸ್ಟ್‌ 10ರಂದು ವಿಶ್ವ ಜೈವಿಕ ಇಂಧನ ದಿನವನ್ನು ಆಚರಿಸ ಲಾಗುತ್ತದೆ. ಏನಿದು ಜೈವಿಕ ಇಂಧನ? ಏನಿದರ ಪ್ರಯೋಜನ? ಈ ನಿಟ್ಟಿನಲ್ಲಿ ಭಾರತದ ಯೋಜನೆಗಳೇನು? ಎನ್ನುವುದರ ಮಾಹಿತಿ ಇಲ್ಲಿದೆ.

ಜೈವಿಕ ಇಂಧನ ಎಂದರೆ?
ಸಸ್ಯ, ಕೃಷಿ ತ್ಯಾಜ್ಯ, ಪ್ರಾಣಿ ತ್ಯಾಜ್ಯ ಹಾಗೂ ಇತರ ಸಾವಯವ ಪರಿಕರಗಳಿಂದ ದೊರೆಯುವ ಇಂಧನವೇ ಜೈವಿಕ ಇಂಧನ. ಈ ಇಂಧನಗಳನ್ನು ಪಳೆಯುಳಿಕೆ ಇಂಧನಗಳ ಪರ್ಯಾಯವಾಗಿ ಬಳಸಬಹುದಾಗಿದೆ.

ಯಾಕೆ ಮಹತ್ವ?
ಆರೋಗ್ಯ ಯುತ ಪರಿಸರ ನಿರ್ಮಾಣದಲ್ಲಿ ಜೈವಿಕ ಇಂಧನ ಸಹಕಾರಿಯಾಗಿದೆ. ಇವು ನವೀಕರಿಸಬಹುದಾದ ಇಂಧನ ಮೂಲಗಳಾಗಿವೆ. ಇವುಗಳಿಂದ ಇಂಗಾಲದ ಹೊರಸೂಸುವಿಕೆ ಯನ್ನು ಶೇ.90 ರಷ್ಟು ತಡೆಯಬಹುದಾಗಿದ್ದು ವಾಯುಮಾಲಿನ್ಯವನ್ನು ನಿಯಂತ್ರಿಸಿ, ಪರಿಸರವನ್ನು ಸಂರಕ್ಷಿಸಬಹುದಾಗಿದೆ. ಇದರಿಂದ ನಮ್ಮ ಸುತ್ತಮುತ್ತಲಿನ ಪ್ರಕೃತಿಯನ್ನು ಹಸುರಾಗಿ ಉಳಿಸಲು ಸಾಧ್ಯ. ಜೈವಿಕ ಇಂಧನಗಳ ಬಳಕೆ ಹೆಚ್ಚಿದಂತೆ ಕಚ್ಚಾ ತೈಲಗಳ ಮೇಲಿನ ಅವಲಂಬನೆ ಕಡಿಮೆಯಾಗುವುದರ ಜತೆಯಲ್ಲಿ ಇದಕ್ಕಾಗಿ ವ್ಯಯಿಸಲಾಗುತ್ತಿರುವ ಭಾರೀ ಪ್ರಮಾಣದ ಹಣವನ್ನೂ ಉಳಿಸಬಹುದಾಗಿದೆ.

ಭಾರತ ಮತ್ತು ಜೈವಿಕ ಇಂಧನ
ಭಾರತ ಸರಕಾರದ ಪೆಟ್ರೋ ಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು 2015ರಿಂದ ಜೈವಿಕ ಇಂಧನ ದಿನವನ್ನು ಆಚರಿಸುತ್ತಿದೆ. ಭಾರತವು ಜೈವಿಕ ಇಂಧನಗಳ ಉತ್ಪಾ
ದನೆಯಲ್ಲಿ ಮುಂಚೂಣಿಯಲ್ಲಿರುವ ದೇಶಗಳಲ್ಲಿ ಒಂದಾಗಿದೆ. ಭಾರತ ಸರಕಾರ ಇಂಧನ ಆಮದು ಅವಲಂಬನೆಯನ್ನು ಕಡಿಮೆ ಮಾಡುವ, ಪರಿಸರದ ಸುರಕ್ಷೆಯ ಸಲುವಾಗಿ ಜೈವಿಕ ಇಂಧನದ ಅಭಿವೃದ್ಧಿಗೆ ಹೆಚ್ಚಿನ ಒತ್ತನ್ನುನೀಡಿದೆ.

ಪ್ರಾಕೃತಿಕವಾಗಿ ಹಾಗೂ ಆರ್ಥಿಕವಾಗಿಯೂ ಬಲವಾಗಿ ರುವ ಭಾರತ ಕೃಷಿ ತ್ಯಾಜ್ಯ, ಪಟ್ಟಣ ಮತ್ತು ನಗರ ಪ್ರದೇಶಗಳಲ್ಲಿ ಉತ್ಪಾದನೆಯಾಗುವ ಘನತ್ಯಾಜ್ಯ, ಹಸುವಿನ ಸೆಗಣಿ ಹಾಗೂ ಇನ್ನಿತರ ನೈಸರ್ಗಿಕ ಇಂಧನಗಳಿಂದ ಜೈವಿಕ ಇಂಧನವನ್ನು ಉತ್ಪಾದಿಸುತ್ತಿದೆ. ಕೇವಲ ಸಾರಿಗೆ ಇಂಧನವಾಗಿ ಮಾತ್ರವಲ್ಲದೇ ವಿದ್ಯುತ್‌ ಉತ್ಪಾದನೆಯಲ್ಲಿಯೂ ಇದನ್ನು ಬಳಸಲಾಗುತ್ತಿದೆ.

ಭಾರತ ಸರಕಾರವು 2018ರಲ್ಲಿ ರಾಷ್ಟ್ರೀಯ ಜೈವಿಕ ಇಂಧನ ನೀತಿಯನ್ನು ಜಾರಿಗೆ ತಂದಿತು. 2030ರ ವೇಳೆಗೆ ಶೇ.20ರಷ್ಟು ಎಥೆನಾಲ್‌ ಮಿಶ್ರಣ ಹಾಗೂ ಶೇ.5ರಷ್ಟು ಜೈವಿಕ ಇಂಧನ ಮಿಶ್ರಣವನ್ನು ಸಾಧ್ಯಗೊಳಿಸುವುದು ಇದರ ಉದ್ದೇಶ. ಇದರೊಂದಿಗೆ ಜೈವಿಕ ಇಂಧನಗಳ ಫೀಡ್‌ಸ್ಟಾಕ್‌ಗಳನ್ನು ಹೆಚ್ಚಿಸುವುದು. ಪೆಟ್ರೋಲ್‌ನಲ್ಲಿ ಶೇ.20ರಷ್ಟು ಎಥೆನಾಲ್‌ ಮಿಶ್ರಣವನ್ನು ಹೆಚ್ಚಿಸುವ ಗುರಿಯನ್ನು ಹೊಂದುವುದು. ಅಲ್ಲದೇ ಪೆಟ್ರೋಲ್‌ ಉತ್ಪನ್ನಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಮೇಕ್‌ ಇನ್‌ ಇಂಡಿಯಾ ಯೋಜನೆಯಡಿ ವಿಶೇಷ ಆರ್ಥಿಕ ವಲಯಗಳಲ್ಲಿ ಹಾಗೂ ರಫ್ತು ಕೇಂದ್ರಗಳಲ್ಲಿ ಜೈವಿಕ ಇಂಧನಗಳ ಉತ್ಪಾದನೆಗೆ ಹೆಚ್ಚಿನ ಪ್ರೋತ್ಸಾಹವನ್ನು ನೀಡುವ ಮೂಲಕ 2047ರ ವೇಳೆಗೆ ಭಾರತ ಇಂಧನ ಕ್ಷೇತ್ರದಲ್ಲಿ ಸ್ವಾವಲಂಬನೆ ಸಾಧಿಸುವ ಗುರಿಯನ್ನು ಈ ನೀತಿ ಹೊಂದಿದೆ.

ಭಾರತ ಸರಕಾರವು 2ಜಿ ಎಥೆನಾಲ್‌ ಉತ್ಪಾದನೆಯನ್ನು ಉತ್ತೇಜಿಸಲು “ಪ್ರಧಾನ್‌ಮಂತ್ರಿ ಜೀ-ವನ್‌’ ಯೋಜನೆ ಯನ್ನು ಜಾರಿಗೆ ತಂದಿದೆ. ಇದೀಗ ಜಿ-20 ರಾಷ್ಟ್ರಗಳ ಶೃಂಗ ಸಭೆಯ ಚುಕ್ಕಾಣಿ ಹಿಡಿದಿರುವ ಭಾರತ ಜೈವಿಕ ಇಂಧನಗಳ ಉತ್ಪಾದನೆಗೆ ಅಂತಾರಾಷ್ಟ್ರೀಯ ಸಹಕಾರದ ನಿರೀಕ್ಷೆಯಲ್ಲಿದೆ.

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.