ಜಿಲ್ಲೆಯಲ್ಲಿ ಮತ್ತೆ ಹೆಲಿಟೂರಿಸಂ ಆರಂಭ ನಿರೀಕ್ಷೆ

 ಇಂದು ವಿಶ್ವ ಪ್ರವಾಸೋದ್ಯಮ ದಿನಾಚರಣೆ

Team Udayavani, Sep 27, 2021, 6:10 AM IST

ಜಿಲ್ಲೆಯಲ್ಲಿ ಮತ್ತೆ ಹೆಲಿಟೂರಿಸಂ ಆರಂಭ ನಿರೀಕ್ಷೆ

ಉಡುಪಿ: ಜಿಲ್ಲೆಯ ಪ್ರವಾಸೋದ್ಯಮದ ಅಭಿವೃದ್ಧಿಗೆ ಹೊಸ ಆಯಾಮ ನೀಡಿದ್ದ ಹೆಲಿಟೂರಿಸಂ ಕೋವಿಡ್‌ದಿಂದ ಸ್ಥಗಿತಗೊಂಡಿದ್ದು, ಮತ್ತೆ ಆರಂಭವಾಗಿ ಜನರಿಗೆ ವೈಮಾನಿಕ ನೋಟ ಕಣ್ತುಂಬುವ ಅವಕಾಶ ಸಿಗುವ ನಿರೀಕ್ಷೆ ಹೊಂದಲಾಗಿದೆ.

ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಹಾಗೂ ಮಲ್ಪೆ ಬೀಚ್‌ ಅಭಿವೃದ್ಧಿ ಸಮಿತಿಯಿಂದ 2016ರಲ್ಲಿ ಉಡುಪಿಯಲ್ಲಿ ಆರಂಭಗೊಂಡಿದ್ದ ಹೆಲಿಟೂರಿಸಂ ಕೊರೊನಾ ಕಾರಣದಿಂದಾಗಿ 2019ರಲ್ಲಿ ಸ್ಥಗಿತಗೊಂಡಿತ್ತು. ಈಗ ಕೊರೊನಾ ಸೋಂಕು ಇಳಿಮುಖವಾಗಿದ್ದು, ಸರಕಾರವೂ ಬಹುತೇಕ ಎಲ್ಲ ಚಟುವಟಿಕೆಗಳಿಗೆ ಅನುಮತಿ ಕಲ್ಪಿಸಿದ ಹಿನ್ನೆಲೆಯಲ್ಲಿ ಈ ಹೆಲಿಟೂರಿಸಂ ಮತ್ತೆ ಆರಂಭವಾಗುವ ಸಾಧ್ಯತೆಯಿದೆ.

ಹೊಸಬಗೆಯ ಅನುಭವ
ಆದಿಉಡುಪಿ ಹೆಲಿಪ್ಯಾಡ್‌ ಹಾಗೂ ಕೋಟದ ಯುವ ಮೆರಿಡಿಯನ್‌ನಲ್ಲಿ ಹೆಲಿಕಾಪ್ಟರ್‌ ಮೂಲಕ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲಾಗಿತ್ತು. ಇದರಿಂದಾಗಿ ಪ್ರವಾಸಿಗರ ಸಂಖ್ಯೆಯೂ ಹೆಚ್ಚಳವಾಗಿತ್ತು. ಈ ಬಗ್ಗೆ ದಿನಕ್ಕೆ ನೂರಾರು ಕರೆಗಳೂ ಬುಕ್ಕಿಂಗ್‌ಗಾಗಿ ಬರುತ್ತಿದ್ದವು.
ದುಬಾರಿಯಾದರೂ ಅಚ್ಚುಮೆಚ್ಚು

ಹೆಲಿಟೂರಿಸಂಗೆ ಒಂದು ದಿನಕ್ಕೆ 1.5ಲ.ರೂ. ವೆಚ್ಚದ ಇಂಧನ ಬೇಕಾಗುತ್ತದೆ. ಪೈಲಟ್‌ ಖರ್ಚು-ವೆಚ್ಚ ಸೇರಿಸಿ ದಿನಕ್ಕೆ 2 ಲ.ರೂ. ವೆಚ್ಚ ಅಗತ್ಯ. ದುಬಾರಿಯಾದರೂ ಪ್ರವಾಸಿಗರನ್ನು ಸೆಳೆಯುವ ದೃಷ್ಟಿಯಿಂದ ಆರಂಭಗೊಂಡ ಹೆಲಿಟೂರಿಸಂಗೆ ಉತ್ತಮ ಸ್ಪಂದನೆ ದೊರಕಿದೆ.

ಈ ಮೂಲಕ ಸ್ಥಳೀಯ ಮಲ್ಪೆ ಬೀಚ್‌ಗಳಿಗೂ ಪ್ರವಾಸಿಗರು ತೆರಳಿ ಆನಂದಿಸು ತ್ತಾರೆ. ಇದು ಜಿಲ್ಲೆಯ ಒಟ್ಟು ಆರ್ಥಿಕ ಪ್ರಗತಿಗೂ ಕಾರಣವಾಗಿದೆ.

ಇದನ್ನೂ ಓದಿ:ಲಡಾಖ್‌ನ ಪೂರ್ವ ಭಾಗದಲ್ಲಿ ಚೀನಾ ಸೇನೆಯ ಡ್ರೋನ್‌ ಹಾರಾಟ

ಈ ಬಾರಿ ಪಶ್ಚಿಮಘಟ್ಟ ಕಣ್ತುಂಬುವ ಭಾಗ್ಯ
ಹೆಲಿಕಾಪ್ಟರ್‌ ಮೂಲಕ ಉಡುಪಿ, ಮಣಿಪಾಲ, ಮಲ್ಪೆ , ಸೈಂಟ್‌ಮೇರಿಸ್‌ಗಳನ್ನಷ್ಟೇ ನೋಡುವ ಅವಕಾಶ ಇತ್ತು. ಮುಂದಿನ ದಿನಗಳಲ್ಲಿ ಇದರ ಜತೆಗೆ ಕೊಡಚಾದ್ರಿ ಸಹಿತ ಪಶ್ಚಿಮಘಟ್ಟಗಳನ್ನೂ ನೋಡುವ ಸೌಭಾಗ್ಯ ಪ್ರವಾಸಿಗರಿಗೆ ಸಿಗಲಿದೆ. ಕಾಪು ದ್ವೀಪಸ್ತಂಭ ತೋರಿಸುವ ಆಲೋಚನೆಯೂ ಇದೆ. ಹಿಂದೆ 6ರಿಂದ 8 ನಿಮಿಷಗಳ ಹಾರಾಟವಿದ್ದರೆ ಮುಂದಿನ ದಿನಗಳಲ್ಲಿ ಪಶ್ಚಿಮಘಟ್ಟ ಹಾರಾಟಕ್ಕೆ 14 ನಿಮಿಷಗಳ ಅವಧಿ ತೆಗೆದುಕೊಳ್ಳಲಾಗುತ್ತದೆ. ಇದಕ್ಕೆ ಹೆಚ್ಚುವರಿ ಹಣ ಪಾವತಿಸಬೇಕಾಗುತ್ತದೆ ಎನ್ನುತ್ತಾರೆ ಆಯೋಜಕರು.

ಸಭೆಯಲ್ಲಿ ಪ್ರಸ್ತಾವ
ಜಿಲ್ಲೆಯಲ್ಲಿ ಹೆಲಿಟೂರಿಸಂ ಅನ್ನು ಮತ್ತೆ ಆರಂಭಿಸುವ ಬಗ್ಗೆ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯಲ್ಲಿ ಪ್ರಸ್ತಾವ ಮಾಡಲಾಗುವುದು. ಅನುಮತಿ ಸಿಕ್ಕರೆ ಈ ವರ್ಷಾಂತ್ಯಕ್ಕೆ ಆರಂಭವಾಗುವ ಸಾಧ್ಯತೆ ಇದೆ.
-ಕ್ಲಿಫ‌ರ್ಡ್‌ ಲೋಬೋ ಜೆ., ಸಹಾಯಕ ನಿರ್ದೇಶಕರು (ಪ್ರಭಾರ)
ಪ್ರವಾಸೋದ್ಯಮ ಇಲಾಖೆ, ಉಡುಪಿ

ಉತ್ತಮ ಸ್ಪಂದನೆ
ಹೆಲಿಟೂರಿಸಂ ಆರಂಭ ಆದಾಗಿನಿಂದ ಉತ್ತಮ ಸ್ಪಂದನೆ ದೊರೆತಿದೆ. ಜಿಲ್ಲೆ , ಹೊರಜಿಲ್ಲೆ, ಹೊರರಾಜ್ಯಗಳಿಂದಲೂ ಹಲವು ಮಂದಿ ಪ್ರವಾಸಿಗರು ಆಗಮಿಸಿ ಮಲ್ಪೆ , ಸೈಂಟ್‌ಮೇರಿಸ್‌, ಉಡುಪಿ-ಮಣಿಪಾಲದ ವೈಮಾನಿಕ ನೋಟವನ್ನು ಆಸ್ವಾದಿಸಿದ್ದಾರೆ.
-ಸುದೇಶ್‌ ಶೆಟ್ಟಿ,, ಎಂ.ಡಿ., ಮಂತ್ರ ಟೂರಿಸಂ ಡೆವಲಪ್‌ಮೆಂಟ್‌ ಕಂಪೆನಿ

-ಪುನೀತ್‌ ಸಾಲ್ಯಾನ್‌

ಟಾಪ್ ನ್ಯೂಸ್

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.