ಗೆಲುವಿಗಾಗಿ ಮುಂಬೈ ಇಂಡಿಯನ್ಸ್‌-ಕೋಲ್ಕತಾ ನೈಟ್‌ರೈಡರ್ ಪ್ರಯತ್ನ


Team Udayavani, May 9, 2022, 6:25 AM IST

ಗೆಲುವಿಗಾಗಿ ಮುಂಬೈ ಇಂಡಿಯನ್ಸ್‌-ಕೋಲ್ಕತಾ ನೈಟ್‌ರೈಡರ್ ಪ್ರಯತ್ನ

ನವಿ ಮುಂಬೈ: ಕೋಲ್ಕತಾ ನೈಟ್‌ರೈಡರ್ ತಂಡವು ಸೋಮವಾರದ ಐಪಿಎಲ್‌ ಪಂದ್ಯದಲ್ಲಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್‌ ತಂಡವನ್ನು ಎದುರಿಸಲಿದೆ.

ಗೆಲುವು ಸಾಧಿಸುವ ಉದ್ದೇಶದಿಂದ ಎರಡೂ ತಂಡಗಳು ಹೋರಾಡಲಿದೆ. ವೈಯಕ್ತಿಕ ಸಾಧನೆಗಾಗಿ ಆಟಗಾರರು ಪೈಪೋಟಿ ನಡೆಸುವ ಸಾಧ್ಯತೆಯಿದೆ.

ಅಗ್ರ ಕ್ರಮಾಂಕದಲ್ಲಿ ಬಹಳಷ್ಟು ಪ್ರಯೋಗ ನಡೆಸಿದರೂ ಯಾವುದೇ ಜೋಡಿ ಉತ್ತಮ ಜತೆಯಾಟ ನೀಡಲು ವಿಫ‌ಲವಾಗಿದೆ. ಇದರಿಂದಾಗಿ ಕೆಕೆಆರ್‌ ತಂಡವು ಈ ಋತುವಿನಲ್ಲಿ ನೀರಸ ಪ್ರದರ್ಶನ ನೀಡುತ್ತಿದೆ. ಶನಿವಾರ ನಡೆದ ಪಂದ್ಯದಲ್ಲಿ ಕೆಕೆಆರ್‌ ಕೇವಲ 101 ರನ್ನಿಗೆ ಆಲೌಟಾಗಿರುವುದು ತಂಡದ ಬ್ಯಾಟಿಂಗ್‌ ವೈಫ‌ಲ್ಯಕ್ಕೆ ಸಾಕ್ಷಿಯಾಗಿದೆ. ಈ ಪಂದ್ಯದಲ್ಲಿ 75 ರನ್ನುಗಳ ಜಯ ಸಾಧಿಸಿದ ಲಕ್ನೋ ತಂಡವು ಸದ್ಯ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

ಮುಂಬೈ ತಂಡ ಈ ಹಿಂದಿನ ಪಂದ್ಯದಲ್ಲಿ ಗುಜರಾತ್‌ ಟೈಟಾನ್ಸ್‌ ವಿರುದ್ಧ 5 ರನ್ನುಗಳ ಗೆಲುವು ಸಾಧಿಸಿತ್ತು. ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವ ಗುಜರಾತ್‌ ತಂಡವನ್ನು ಸೋಲಿಸಿದ್ದರಿಂದ ಮುಂಬೈ ಭಾರೀ ಉತ್ಸಾಹದಲ್ಲಿದೆ. ರೋಹಿತ್‌ ಶಮರ ನೇತೃತ್ವದ ಮುಂಬೈ ತಂಡವು ಆಡಿದ 10 ಪಂದ್ಯಗಳಿಂದ ಕೇವಲ ನಾಲ್ಕಂಕ ಗಳಿಸಿದ್ದರಿಂದ ಈಗಾಗಲೇ ಪ್ಲೇ ಆಫ್ ನಿಂದ ಹೊರಬಿದ್ದಿದೆ. ಒಂದು ವೇಳೆ ಇನ್ನುಳಿದ ಪಂದ್ಯಗಳಲ್ಲಿ ಗೆದ್ದರೂ ಅದು ಪ್ಲೇ ಆಫ್ ಗೆ ತೇರ್ಗಡೆಯಾಗಲು ಸಾಧ್ಯವಾಗುವುದಿಲ್ಲ. ಐದು ಬಾರಿಯ ಚಾಂಪಿಯನ್‌ ಆಗಿರುವ ಮುಂಬೈ ಇನ್ನುಳಿದ ಪಂದ್ಯಗಳಲ್ಲಿ ಗೆಲ್ಲುವ ಉದ್ದೇಶದಿಂದ ಆಡಬಹುದು.

ಎರಡು ಬಾರಿಯ ಚಾಂಪಿಯನ್‌ ಕೆಕೆಆರ್‌ ತಂಡವು ಹೊಸ ನಾಯಕ ಶ್ರೇಯಸ್‌ ಅಯ್ಯರ್‌ನಡಿ ಆಡುತ್ತಿದ್ದರೂ ಬ್ಯಾಟಿಂಗ್‌ ವೈಫ‌ಲ್ಯ ಕಾಣುತ್ತಿದೆ. ಲಕ್ನೋ ವಿರುದ್ಧ 75 ರನ್ನುಗಳ ಸೋಲಿನಿಂದಾಗಿ ಕೆಕೆಆರ್‌ ಇದೀಗ ಆಡಿದ 11 ಪಂದ್ಯಗಳಿಂದ ಕೇವಲ ಎಂಟಂಕ ಹೊಂದಿದೆ. ಇನ್ನು ತಂಡಕ್ಕೆ ಆಡಲು ಮೂರು ಪಂದ್ಯಗಳು ಬಾಕಿ ಉಳಿದಿದ್ದು ಗರಿಷ್ಠ 14 ಅಂಕ ಗಳಿಸಬಹುದು. ಹೀಗಾಗಿ ತಂಡ ನಾಲ್ಕನೇ ಸ್ಥಾನ ಕೂಡ ಪಡೆಯುವುದು ಅನುಮಾನವೆಂದು ಹೇಳಬಹುದು.

ಈ ಐಪಿಎಲ್‌ ಮುಕ್ತಾಯದ ಹಂತದಲ್ಲಿರುವ ಕಾರಣ ಎರಡೂ ತಂಡಗಳು ಮುಂದಿನ ಐಪಿಎಲ್‌ ಬಗ್ಗೆ ತನ್ನ ಯೋಜನೆ ರೂಪಿಸುವ ಸಾಧ್ಯತೆಯಿದೆ. ಇದರ ಜತೆ ತಮ್ಮ ನಿರಾಶಾದಾಯಕ ನಿರ್ವಹಣೆಯನ್ನು ಗೆಲುವಿನ ಮೂಲಕ ಅಂತ್ಯಗೊಳಿಸುವ ಇರಾದೆಯೂ ತಂಡದ ಮೇಲೆ ಇರಲಿದೆ. ಕೆಕೆಆರ್‌ ವಿರುದ್ಧ ಇಷ್ಟರವರೆಗಿನ 30 ಮುಖಾಮುಖಿ ಯಲ್ಲಿ ಮುಂಬೈ 22 ಪಂದ್ಯಗಳಲ್ಲಿ ಗೆದ್ದಿರುವುದು ತಂಡದ ಉತ್ಸಾಹವನ್ನು ಹೆಚ್ಚಿಸಿದೆ. 8ರಲ್ಲಿ ಮಾತ್ರ ಸೋತಿದೆ.

ರೋಹಿತ್‌ 5 ಸಾವಿರ ರನ್‌ ?
ನಾಯಕ ರೋಹಿತ್‌ ಮತ್ತು ಇಶಾನ್‌ ಕಿಶನ್‌ ಉತ್ತಮ ಫಾರ್ಮ್ ನಲ್ಲಿರುವುದು ಮುಂಬೈಯ ಪ್ಲಸ್‌ ಪಾಯಿಂಟ್‌ ಆಗಿದೆ. ಗುಜರಾತ್‌ ವಿರುದ್ಧ ಭರ್ಜರಿ ಆಟದ ಪ್ರದರ್ಶನ ನೀಡಿದ್ದ ಅವರಿಬ್ಬರು ಕೆಕೆಆರ್‌ ವಿರುದ್ಧವೂ ಅದೇ ಆಟ ಮುಂದುವರಿಸುವ ನಿರೀಕ್ಷೆಯಿದೆ. ರೋಹಿತ್‌ ಐಪಿಎಲ್‌ನಲ್ಲಿ ಮುಂಬೈ ಪರ 5 ಸಾವಿರ ರನ್‌ ಪೂರ್ತಿಗೊಳಿಸಲು ಇನ್ನು 88 ರನ್ನುಗಳ ಆವಶ್ಯಕತೆಯಿದೆ. ಇದನ್ನು ಅವರು ಕೆಕೆಆರ್‌ ವಿರುದ್ಧದ ಪಂದ್ಯದಲ್ಲಿ ಪೂರ್ತಿಗೊಳಿಸುವ ಸಾಧ್ಯತೆಯಿದೆ.

ರೋಹಿತ್‌, ಕಿಶನ್‌ ಮತ್ತು ಸೂರ್ಯಕುಮಾರ್‌ ಯಾದವ್‌ ಅವರು ಪವರ್‌ಪ್ಲೇಯಲ್ಲಿ ಅಮೋಘ ಆಟ ಆಡುತ್ತಿದ್ದರೆ ಕೆಕೆಆರ್‌ ತಂಡವು ಆರಂಭದ ಆರು ಓವರ್‌ಗಳಲ್ಲಿ ನಿರಂತರವಾಗಿ ಬ್ಯಾಟಿಂಗ್‌ ವೈಫ‌ಲ್ಯ ಅನುಭವಿಸುತ್ತಿದೆ. ಲಕ್ನೋ ವಿರುದ್ಧ ಸೋಲಿಗೆ ಬ್ಯಾಟಿಂಗ್‌ ವೈಫ‌ಲ್ಯವೇ ಕಾರಣವೆಂದು ಮುಖ್ಯ ಕೋಚ್‌ ಬ್ರೆಂಡನ್‌ ಮೆಕಲಮ್‌ ಹೇಳಿದ್ದಾರೆ. ಕೆಕೆಆರ್‌ನ ನಿರ್ವಹಣೆ ಉತ್ತಮವಾಗಬೇಕಾದರೆ ಪವರ್‌ಪ್ಲೇಯಲ್ಲಿ ಆಟಗಾರರು ಆಕ್ರಮಣಕಾರಿಯಾಗಿ ಆಡುವ ಅಗತ್ಯವಿದೆ.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.