ಕಾಫಿ, ಅಡಿಕೆ ಜತೆ ತೊಗರಿಗೂ ಸಿಗಲಿ ಮಾನ್ಯತೆ


Team Udayavani, Mar 25, 2021, 6:00 AM IST

ಕಾಫಿ, ಅಡಿಕೆ ಜತೆ ತೊಗರಿಗೂ ಸಿಗಲಿ ಮಾನ್ಯತೆ

ತೊಗರಿ ಬೆಲೆ ಕುಸಿತ ಹಾಗೂ ಏರಿಕೆಗೆ ಸಂಬಂಧಿಸಿದ ಸಮಸ್ಯೆಗೆ ಶಾಶ್ವತ ಪರಿಹಾರ ಇಲ್ಲವೇ? ಇದು ತೊಗರಿ ಕಣಜ ಕಲಬುರ ಗಿಯಲ್ಲಿ ದಶಕಗಳಿಂದ ಕೇಳಿ ಬರುತ್ತಿರುವ ಪ್ರಶ್ನೆ. ಉತ್ತಮ ಬೆಳೆ ಬಂದಾಗ ಬೆಲೆ ಸಿಗಲ್ಲ. ಇಳುವರಿ ಬಾರದಿದ್ದಾಗ ಬೆಲೆ ಇರುತ್ತದೆ. ಹೀಗಾಗಿ ತೊಗರಿ ಬೆಳೆಯುವ ರೈತ ಕಷ್ಟಕ್ಕೊಳಗಾಗುತ್ತಿದ್ದು, ಕೃಷಿ ಕಾಯಕದಿಂದಲೇ ವಿಮುಖರಾಗುವ ಭಯಾ ನಕ ಪರಿಸ್ಥಿತಿ ನಿರ್ಮಾಣವಾಗುತ್ತಿದೆ.

ಕಳೆದೊಂದು ದಶಕದ ಅವಧಿಯಲ್ಲಿ ಇದೇ ಮೊದಲ ಬಾರಿ ಮಾರುಕಟ್ಟೆಯಲ್ಲಿ ಬೆಂಬಲ ಬೆಲೆಗಿಂತ ತೊಗರಿ ಬೆಲೆ ಹೆಚ್ಚಳವಿದೆ. ವರ್ಷವೂ ರಾಜ್ಯ ಸರಕಾರ ತೊಗರಿ ಕ್ವಿಂಟಾಲ್‌ಗೆ 300 ಇಲ್ಲವೇ 400 ರೂ. ಪ್ರೋತ್ಸಾಹಧನ ನೀಡುತ್ತ ಬಂದಿದೆ. ಆದರೆ ಇತಿಹಾಸದಲ್ಲಿ ಪ್ರಸಕ್ತ ಬಾರಿ ಮಾತ್ರ ನಯಾಪೈಸೆ ಪ್ರೋತ್ಸಾಹಧನ ನೀಡುತ್ತಿಲ್ಲ. ತೊಗರಿ ಬೆಂಬಲ ಬೆಲೆ ಕ್ವಿಂಟಾಲ್‌ಗೆ 6,000 ರೂ. ಇದೆ. ಮಾರುಕಟ್ಟೆಯಲ್ಲಿ 6,500 ರೂ. ದಿಂದ 6,700 ರೂ. ಇದೆ. ಒಂದು ವೇಳೆ ರಾಜ್ಯ ಸರಕಾರ ಕೇವಲ 400 ರೂ. ಪ್ರೋತ್ಸಾಹಧನ ನಿಗದಿ ಮಾಡಿದಲ್ಲಿ ಮಾರುಕಟ್ಟೆಯಲ್ಲಿ ಕನಿಷ್ಟ 7,000 ರೂ. ಕ್ವಿಂಟಾಲ್‌ಗೆ ಬೆಲೆ ಇರುತ್ತದೆ. ಇತ್ತ ಮಾರುಕಟ್ಟೆಯಲ್ಲಿ ದರ ಹೆಚ್ಚಳವಾಗುತ್ತಿಲ್ಲ. ಒಟ್ಟಾರೆ ಸರಕಾರದ ಧೋರಣೆ ಹಾಗೂ ವ್ಯಾಪಾ ರಸ್ಥರ ಒಳ ಒಪ್ಪಂದದಿಂದ ತೊಗರಿಗೆ ಸೂಕ್ತ ಬೆಲೆ ಸಿಗುತ್ತಿಲ್ಲ. ಒಂದು ವೇಳೆ ಸರಕಾರ ಕ್ವಿಂಟಾಲ್‌ಗೆ 400 ರೂ. ಪ್ರೋತ್ಸಾಹಧನ ಘೋಷಣೆ ಮಾಡಿದ್ದರೂ ರೈತ ಖರೀದಿ ಕೇಂದ್ರಗಳಿಗೆ ತೊಗರಿ ತರುವುದಿಲ್ಲ. ಮಾರು ಕಟ್ಟೆಯಲ್ಲಿ ಬೆಲೆ ಮತ್ತಷ್ಟು ಹೆಚ್ಚಳವಾ ಗುವುದರಿಂದ ರೈತರಿಗೆ ಹೆಚ್ಚು ಉಪಯೋಗ ವಾಗುತ್ತದೆ. ಆದರೆ ಈ ಕಾರ್ಯ ಮಾತ್ರ ರಾಜ್ಯ ಸರಕಾರ ಮಾಡುತ್ತಿಲ್ಲ. ಕಲ್ಯಾಣ ಕರ್ನಾಟಕದ ಭಾಗದ ಜನಪ್ರತಿನಿಧಿಗಳು ಸಹ ತೊಗರಿಗೆ ಪ್ರೋತ್ಸಾಹಧನ ಘೋಷಣೆ ಮಾಡಿ ಸುವುದರಲ್ಲಿ ತಮಗೇನು ಲಾಭ ಎಂಬ ಮನೋಧೋರಣೆ ತಳೆದ ಪರಿಣಾಮವೇ ರೇಷ್ಮೆ, ಕಾಫಿ, ಅಡಿಕೆ ಬೆಳೆಗೆ ಸಿಗುವ ಪ್ರಾಮುಖ್ಯ ತೊಗರಿಗೆ ದೊರೆಯುತ್ತಿಲ್ಲ.

ಕಲಬುರಗಿ ಜಿಲ್ಲೆಯೊಂದರಲ್ಲೇ ರಾಜ್ಯದ ಶೇ.55 ತೊಗರಿ ಬೆಳೆಯಲಾಗುತ್ತದೆ. ಮಾರು ಕಟ್ಟೆಯಲ್ಲಿ ಬೆಂಬಲ ಬೆಲೆಗಿಂತ ಬೆಲೆ ಕುಸಿತವಾದಾಗ ಖರೀದಿ ಕೇಂದ್ರಗಳನ್ನು ಸ್ಥಾಪಿಸಿ ಅವುಗಳ ಮೂಲಕ ಖರೀದಿ ಮಾಡಲಾಗುತ್ತಿದೆ. ಖರೀದಿ ಕೇಂದ್ರಗಳು 8ರಿಂದ 10 ಲಕ್ಷ ಕ್ವಿಂಟಾಲ್‌ ಖರೀದಿ ಮಾಡುತ್ತವೆ. ಆದರೆ ಇದೇ ಮೊದಲ ಬಾರಿ ಖರೀದಿ ಕೇಂದ್ರಗಳತ್ತ ರೈತರ್ಯಾರು ಸುಳಿಯುತ್ತಿಲ್ಲ. ಮಾರುಕಟ್ಟೆಯಲ್ಲಿ ಬೆಂಬಲ ಬೆಲೆಗಿಂತ ಹೆಚ್ಚಳವಾಗಿರುವುದೇ ಇದಕ್ಕೆ ಕಾರಣ. ಖರೀದಿ ಕೇಂದ್ರಗಳಲ್ಲೇ ತೊಗರಿ ಮಾರಾಟ ಮಾಡಬೇಕೆಂದು ಈ ವರ್ಷ 45 ಸಾವಿರ ರೈತರು ಹೆಸರು ನೋಂದಾಯಿಸಿದ್ದಾರೆ. ಹಿಂದಿನ ವರ್ಷಗಳಲ್ಲಿ ಒಂದೂವರೆ ಲಕ್ಷದಷ್ಟು ರೈತರು ನೋಂದಾಯಿಸಿದ್ದರು.

ಸಚಿವ ಉಮೇಶ ಕತ್ತಿ, ತೊಗರಿ ಬೆಲೆ ಮಾರುಕಟ್ಟೆಯಲ್ಲಿಯೇ ಕ್ವಿಂಟಾಲ್‌ಗೆ 8,000 ರೂ. ಆಗುತ್ತದೆ. ಹೀಗಾಗಿ ತಾಳ್ಮೆಯಿಂದ ಇರಬೇಕೆಂದಿದ್ದರು. ಆದರೆ ರಾಜ್ಯ ಸರಕಾರ ಎಷ್ಟಾದರೂ ಪ್ರೋತ್ಸಾಹ ನೀಡಲಿದೆ ಎಂಬು ದಾಗಿ ಒಂದು ಸಣ್ಣ ಮಾತು ಸಹ ಹೇಳಲಿಲ್ಲ. ಇನ್ನು ತೊಗರಿ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ತೊಗರಿ ಅಭಿವೃದ್ಧಿ ಮಂಡಳಿಯೂ ಹೆಸರಿಗೆ ಮಾತ್ರ ಎನ್ನುವಂತಾಗಿದೆ.

– ಹಣಮಂತರಾವ ಭೈರಾಮಡಗಿ

ಟಾಪ್ ನ್ಯೂಸ್

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

7-Panaji

Panaji: ಬಿಚೋಲಿಯಲ್ಲಿ ಮತಯಂತ್ರದಲ್ಲಿ ತಾಂತ್ರಿಕ ತೊಂದರೆ…

Gadag; Vinay came from England and voted

Gadag; ಇಂಗ್ಲೆಂಡ್‌ನಿಂದ ಆಗಮಿಸಿ ಮತದಾನ ಮಾಡಿದ ಗದಗದ ವಿನಯ್

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.