ಮೋದಿ ಮತ್ತೆ ಪ್ರಧಾನಿ ಆಗಲು ರೈತನ ಕಠಿಣ ಮೌನಾನುಷ್ಠಾನ
Team Udayavani, May 22, 2019, 6:00 AM IST
ನರೇಂದ್ರ ಮೋದಿ ಪ್ರಧಾನಿಯಾಗಲೆಂದು ರೈತ ಮಲ್ಲಪ್ಪ ಭಾವಿ ಮೌನಾನುಷ್ಠಾನ ಕೈಗೊಂಡಿದ್ದಾರೆ.
ಬೀಳಗಿ (ಬಾಗಲಕೋಟೆ): ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿ ಆಗಬೇಕೆಂದು ಸಂಕಲ್ಪಿಸಿ ತಾಲೂಕಿನ ತೋಳಮಟ್ಟಿ ರೈತ ಮೂರು ದಿನಗಳಿಂದ ಅನ್ನ, ನೀರು ತ್ಯಜಿಸಿ ಕಠೊರ ಮೌನಾನುಷ್ಠಾನ ಕೈಗೊಂಡಿದ್ದಾರೆ. ತೋಳಮಟ್ಟಿ ಗ್ರಾಮದ ಮಲ್ಲಪ್ಪ ಅಪ್ಪಣ್ಣ ಭಾವಿ (75) ಗ್ರಾಮದ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಮೌನಾನುಷ್ಠಾನ ಕೈಗೊಂಡಿದ್ದಾರೆ. ಹಿಂದೆ ಘಟಪ್ರಭಾ ಎಡದಂಡೆ ಕಾಲುವೆಗೆ ಟೆಲೆಂಡ್ವರೆಗೆ ನೀರು ಹರಿಸುವಂತೆ ಒತ್ತಾಯಿಸಿ ಮೂರು ದಿನ ಒಂಟಿ ಕಾಲಿನ ಮೇಲೆ ನಿಂತು ಕಠಿಣ ಹೋರಾಟ ಮಾಡಿದ್ದರು. ಕಬ್ಬಿಗೆ ದರ ನಿಗದಿಗೊಳಿಸಬೇಕೆಂದು ಒತ್ತಾಯಿಸಿ 23 ದಿನ ಉಪವಾಸ ಸತ್ಯಾಗ್ರಹ ಮಾಡಿದ್ದರು. ಇವರನ್ನು ರೈತಪರ ಧ್ವನಿಯಾಗಿ ಜನ ಗುರುತಿಸುತ್ತಾರೆ. ರೈತಸಂಘದಲ್ಲಿನ ಸೇವೆ ಇವರಲ್ಲಿ ಹೋರಾಟದ ಕಿಚ್ಚು ತುಂಬಿದೆ. ಮಲ್ಲಪ್ಪ ಭಾವಿ, ಮಲ್ಲಿಕಾರ್ಜುನ ಸ್ವಾಮಿಯ ಪರಮಭಕ್ತ. ನರೇಂದ್ರ ಮೋದಿ ಮತ್ತೂಮ್ಮೆ ಪ್ರಧಾನಿಯಾಗಬೇಕು. ದೇಶದಲ್ಲಿ ಸಮೃದ್ಧವಾದ ಮಳೆ, ಬೆಳೆ ಬರಬೇಕು, ವಿಶ್ವ ಶಾಂತಿ ನೆಲೆಸಬೇಕೆಂದು ಕಠಿಣ ಮೌನಾನುಷ್ಠಾನ ಆರಂಭಿಸಿದ್ದಾರೆ. ಅವರ ಆರೋಗ್ಯದ ಮೇಲೆ ಸ್ಥಳೀಯರು ನಿಗಾ ಇಟ್ಟಿದ್ದಾರೆ.
● ರವೀಂದ್ರ ಕಣವಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್