ಪ್ರವಾಸೋದ್ಯಮ ವಲಯದಲ್ಲಿ ಆಶಾಭಾವ


Team Udayavani, Sep 29, 2020, 11:03 AM IST

ಪ್ರವಾಸೋದ್ಯಮ ವಲಯದಲ್ಲಿ ಆಶಾಭಾವ

ಕೋವಿಡ್ ಲಾಕ್‌ಡೌನ್‌ ಸಡಿಲಿಕೆ ಅನಂತರ ರಾಜ್ಯದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ನಿಟ್ಟಿನಲ್ಲಿ ಹತ್ತು ಹಲವು ಕಾರ್ಯಕ್ರಮಗಳೊಂದಿಗೆ ರಾಜ್ಯ  ಸರಕಾರ ಮುಂದಾಗಿರುವುದು ಸ್ವಾಗತಾರ್ಹ. ಈ ನಿಟ್ಟಿನಲ್ಲಿ ಹತ್ತು ಲಕ್ಷ ಉದ್ಯೋಗ ಸೃಷ್ಟಿಯ ಗುರಿಯೊಂದಿಗೆ ನೂತನ ಪ್ರವಾಸೋದ್ಯಮ ನೀತಿ -2020-25 ಸಹ ಬಿಡುಗಡೆ ಮಾಡಲಾಗಿದ್ದು ಪ್ರವಾಸೋದ್ಯಮ ವಲಯದಲ್ಲಿ ಒಂದಷ್ಟು ನಿರೀಕ್ಷೆ ಮೂಡಿಸಿದೆ.

ಲಾಕ್‌ಡೌನ್‌ ಸಂದರ್ಭದಲ್ಲಿ ಅತಿ ಹೆಚ್ಚು ಬಾಧಿತವಾದ ವಲಯದಲ್ಲಿ ಪ್ರವಾಸೋದ್ಯಮವೂ ಒಂದು. ಹೊಟೇಲ್‌, ರೆಸಾರ್ಟ್‌, ಪ್ರವಾಸಿ ತಾಣಗಳು ಬಂದ್‌ ಆಗಿದ್ದರಿಂದ ಅದರಲ್ಲಿ ತೊಡಗಿಸಿಕೊಂಡಿದ್ದವರು ನಿರುದ್ಯೋಗ ಎದುರಿಸುವಂತಾಗಿತ್ತು. ಜತೆಗೆ ಆದಾಯ ಇಲ್ಲದೆ ಮುಂದಿನ ಭವಿಷ್ಯದ ಬಗ್ಗೆ ಕಳವಳಗೊಂಡಿದ್ದರು. ಆದರೆ ರಾಜ್ಯ ಸರಕಾರ ಅದರಲ್ಲೂ ಪ್ರವಾಸೋದ್ಯಮ ಇಲಾಖೆ ಸಚಿವ ಸಿ.ಟಿ.ರವಿ ಅವರು ಕಾಳಜಿ ವಹಿಸಿ ನೂತನ ಪ್ರವಾಸೋದ್ಯಮ ನೀತಿ ಸಿದ್ಧಪಡಿಸಿ ಪ್ರವಾಸೋದ್ಯಮ ಅಭಿವೃದ್ಧಿ ಹಾಗೂ ಪುನಶ್ಚೇತನಕ್ಕೆ ನೀಲ ನಕ್ಷೆ ರೂಪಿಸಿದ್ದಾರೆ. ಪ್ರವಾಸೋದ್ಯಮ ಅಭಿವೃದ್ಧಿ ಎಂದರೆ ಅದರ ಜತೆಗೆ ಮೂಲಸೌಕರ್ಯಗಳ ಅಭಿವೃದ್ಧಿಯೂ ಆಗಲಿದೆ. ರಾಜ್ಯದ ಪ್ರವಾಸಿ ತಾಣ ಗಳಲ್ಲಿ ವಿಶ್ವದರ್ಜೆಯ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ನೀತಿಯಲ್ಲಿ ಸೇರಿರುವುದನ್ನು ಗಮನಿಸಬಹುದು.

ಪ್ರವಾಸೋದ್ಯಮ ನೀತಿಯಲ್ಲಿ 18 ಬಗೆಯ ಪ್ರವಾಸೋದ್ಯಮಕ್ಕೆ ಉತ್ತೇಜನ, 270 ಆದ್ಯತಾ ಪ್ರವಾಸಿ ತಾಣಗಳನ್ನು ಗುರುತಿಸಿ ಅಭಿವೃದ್ಧಿಪಡಿಸುವುದು, ಎಂಟು ಜಿಲ್ಲೆಗಳನ್ನು ಆದ್ಯತಾ ಪ್ರವಾಸಿ ತಾಣಗಳೆಂದು ಪರಿಗಣಿಸಿ ಅಭಿವೃದ್ಧಿಗೆ ಪ್ರೋತ್ಸಾಹ ಧನ ನೀಡುವ ಅಂಶಗಳಿವೆ. ಪ್ರಸ್ತುತ ಪ್ರವಾಸೋದ್ಯಮದಲ್ಲಿ ದೇಶದಲ್ಲಿ 3ನೇ ಸ್ಥಾನದಲ್ಲಿರುವ ಕರ್ನಾಟಕ ವಿಶ್ವದಲ್ಲಿ 11ನೇ ಸ್ಥಾನದಲ್ಲಿದೆ. ಇದೀಗ ವಿಶ್ವದಲ್ಲಿ ಮೊದಲ 5 ಸ್ಥಾನಗಳಲ್ಲಿ ಇರಬೇಕು ಎಂಬ ಗುರಿ ಇಟ್ಟುಕೊಂಡು ಹೊಸ ನೀತಿ ರೂಪಿಸಲಾಗಿದೆ.

ಪರಂಪರೆ, ವನ್ಯಜೀವಿ, ಆಧ್ಯಾತ್ಮಿಕತೆ, ಸಂಸ್ಕೃತಿ, ಸಾಹಸ ಕಾರ್ಯ, ಕರಾವಳಿ, ಪ್ರಕೃತಿ, ಆರೋಗ್ಯ, ಕೃಷಿ ಹೀಗೆ ವಲಯವಾರು ಪ್ರವಾಸಿ ತಾಣಗಳ ಅಭಿವೃದ್ಧಿಗೆ ನಿರ್ಧರಿಸಲಾಗಿದೆ. ಐದು ವರ್ಷಗಳ ಅವಧಿಯಲ್ಲಿ 500 ಕೋಟಿ ರೂ.ಗಳ ಸಹಾಯಧನ ಪ್ರೋತ್ಸಾಹ ಹಾಗೂ ರಿಯಾಯಿತಿ ನೀಡಿ ಐದು ಸಾವಿರ ರೂ.ಗಳ ನೇರ ಬಂಡವಾಳ ಆಕರ್ಷಿಸಲು ಉದ್ದೇಶಿಸಲಾಗಿದೆ.

ಕೋವಿಡ್ ಹಿನ್ನೆಲೆಯಲ್ಲಿ ಉದ್ಯೋಗ ಭೀತಿ ಎದುರಿಸುತ್ತಿರುವವರಿಗೆ ಪ್ರವಾಸೋದ್ಯಮ ಅಭಿವೃದ್ಧಿಗೆ ರಾಜ್ಯ ಸರಕಾರ ರೂಪಿಸಿರುವ ಕಾರ್ಯಕ್ರಮಗಳು ಆಶಾಭಾವ ಮೂಡಿಸಿವೆ. ಮತ್ತೂಂದು ಪ್ರಮುಖ ವಿಚಾರ ಎಂದರೆ ಪ್ರವಾಸೋದ್ಯಮಕ್ಕಾಗಿ ಭೂ ಭ್ಯಾಂಕ್‌ ರಚನೆ ಹಾಗೂ ನಿರ್ವಹಣೆಗೆ ಜಿಲ್ಲಾ ಮಟ್ಟದ ಸಮಿತಿ ರಚಿಸುವ ತೀರ್ಮಾನವು ಭವಿಷ್ಯದ ದೃಷ್ಟಿಯಿಂದ ಒಳ್ಳೆಯದು.

ನೂತನ ಪ್ರವಾಸೋದ್ಯಮ ನೀತಿಯು ಸಮುದಾಯದ ಪಾಲ್ಗೊಳ್ಳುವಿಕೆಗೆ ಒತ್ತು ನೀಡಿದೆ. ಸ್ಥಳೀಯರಿಗೆ ಕೌಶಲ ತರಬೇತಿ ನೀಡುವ ಕೌಶಲ ಕೋಶವನ್ನು ಸಹ ಪ್ರವಾಸೋದ್ಯಮ ಇಲಾಖೆ ಸ್ಥಾಪಿಸಿದೆ. ಆಧುನಿಕ ತಂತ್ರಜ್ಞಾನ ಗಳನ್ನು ವ್ಯಾಪಕವಾಗಿ ಬಳಸಿಕೊಂಡು ದೇಶ- ವಿದೇಶಗಳ ಪ್ರವಾಸಿಗರನ್ನು ಸೆಳೆಯಲು ಕಾರ್ಯಯೋಜನೆ ರೂಪಿಸಲಾಗಿದೆ. ರಾಜ್ಯದ ಶ್ರೀಮಂತಿಕೆ ಹಾಗೂ ಸಾಂಸ್ಕೃತಿಕ ವೈಭವ, ಪರಂಪರೆ ಪರಿಚಯಿಸಿ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೂಡಿಕೆಗೆ ಅವಕಾಶ ಕಲ್ಪಿಸಲಾಗಿದೆ. ಇವೆಲ್ಲವೂ ಕಾಲಮಿತಿಯಲ್ಲಿ ಅನುಷ್ಠಾನಕ್ಕೆ ಬಂದರೆ ಪ್ರವಾಸೋದ್ಯಮದ ಸಮಗ್ರ ಅಭಿವೃದ್ಧಿಗೆ ಸಹಕಾರಿಯಾಗುವುದಲ್ಲಿ ಸಂದೇಹವಿಲ್ಲ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.