ಶೃಂಗೇರಿ ಶಾರದಾ ಪೀಠಕ್ಕೆ ಪ್ರವಾಸಿಗರ ದಂಡು
Team Udayavani, Dec 26, 2021, 3:23 PM IST
ಶೃಂಗೇರಿ: ಒಮಿಕ್ರಾನ್ ಆತಂಕದ ನಡುವೆಯೂ ಕ್ರಿಸ್ಮಸ್ ರಜೆ ಹಾಗೂ ವರ್ಷಾಂತ್ಯದ ಹಿನ್ನೆಲೆಯಲ್ಲಿ ಶ್ರೀ ಶಾರದಾ ಪೀಠಕ್ಕೆ ಪ್ರವಾಸಿಗರ ದಂಡು ಹರಿದು ಬಂದಿದೆ. ಪಟ್ಟಣದ ವಾಹನ ನಿಲುಗಡೆ ಸ್ಥಳವಾದ ಗಾಂಧಿ ಮೈದಾನದಲ್ಲಿ ಪ್ರವಾಸಿ ವಾಹನದ ಸಾಲು ಹಾಗೂ ಶ್ರೀಮಠದ ಎದುರು ಭಕ್ತಾದಿಗಳ ಸಾಲು ಕಂಡು ಬಂದಿದೆ. ಕೊರೊನಾ ನಂತರ ಪ್ರವಾಸೋದ್ಯಮ ಸಂಪೂರ್ಣ
ನೆಲಕಚ್ಚಿದ್ದು, ಇದೀಗ ಪ್ರವಾಸಿಗರು ಭಾರೀ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು, ಪ್ರವಾಸೋದ್ಯಮದಲ್ಲಿ ಚೇತರಿಕೆ ಕಂಡು ಬಂದಿದೆ. ಗಾಂಧಿ ಮೈದಾನದಲ್ಲಿ ವಾಹನ ನಿಲುಗಡೆ ಅಲ್ಲದೇ ಪಟ್ಟಣದ ಎಲ್ಲಾ ರಸ್ತೆಯಲ್ಲೂ ಪ್ರವಾಸಿಗರ ವಾಹನ ನಿಲುಗಡೆಯಾಗಿದೆ.
ಪಟ್ಟಣದ ವಸತಿ ಗೃಹಗಳು, ಹೋಂ ಸ್ಟೇಗಳಿಗೆ ಹೆಚ್ಚಿನ ಬೇಡಿಕೆ ಬಂದಿದ್ದು, ಹೋಂ ಸ್ಟೇಗಳನ್ನು ಮುಂಗಡವಾಗಿ ಕಾಯ್ದಿರಿಸಲಾಗಿದೆ. ಶ್ರೀಮಠದಲ್ಲಿ ಮಧ್ಯಾಹ್ನ ಮತ್ತು ರಾತ್ರಿ ಊಟದ ವ್ಯವಸ್ಥೆ
ಇದ್ದು, ಸಾವಿರಾರು ಜನರು ಊಟಕ್ಕೆ ಆಗಮಿಸುತ್ತಿದ್ದಾರೆ. ಭಕ್ತರಿಗೆ ಎರಡು ಲಸಿಕೆ ಪ್ರಮಾಣ ಪತ್ರ ಕಡ್ಡಾಯಗೊಳಿಸಲಾಗಿದೆ. ಜಗದ್ಗುರುಗಳು ವಾಸ್ತವ್ಯ ಇರುವ ಗುರುಭವನಕ್ಕೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ.
ಗುರುದರ್ಶನ ಬೆಳಗ್ಗೆ 11 ರಿಂದ ಮಧ್ಯಾಹ್ನದವರೆಗೆ ಮಾತ್ರ ಇದೆ. ಶ್ರೀಮಠದ ಎದುರಿನ ಶ್ರೀ ಚಂದ್ರಶೇಖರ ಭಾರತೀ ಸಭಾಂಗಣದಲ್ಲಿ ಮಕ್ಕಳ ಅಕ್ಷರಭ್ಯಾಸವೂ ನಡೆಯುತ್ತಿದ್ದು,ನೂರಾರು ಮಕ್ಕಳಿಗೆ ಅಕ್ಷರಾಭ್ಯಾಸ ನಡೆಯುತ್ತಿದೆ.
ಇದನ್ನೂ ಓದಿ : ನೈಟ್ ಕರ್ಪ್ಯೂ ಆದೇಶ ಪುನರ್ ಪರಿಶೀಲನೆ ಇಲ್ಲ: ಸಿಎಂ ಬೊಮ್ಮಾಯಿ ಸ್ಪಷ್ಟನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ