6 ತಿಂಗಳಿಂದ ಪ್ರವಾಸಿಗರಿಲ್ಲದೆ ಬಣಗುಡುತ್ತಿದ್ದ ಹಳೇಬೀಡಿಗೆ ಪ್ರವಾಸಿಗರ ಆಗಮನ


Team Udayavani, Sep 17, 2020, 12:09 PM IST

6 ತಿಂಗಳಿಂದ ಪ್ರವಾಸಿಗರಿಲ್ಲದೆ ಬಣಗುಡುತ್ತಿದ್ದ ಹಳೇಬೀಡಿಗೆ ಪ್ರವಾಸಿಗರ ಆಗಮನ

ಹಳೇಬೀಡು: ಗ್ರಾಮದಲ್ಲಿನ ವಿಶ್ವ ವಿಖ್ಯಾತ ಹೊಯ್ಸಳೇಶ್ವರ ದೇವಾಲಯ ವೀಕಣೆಗೆ ಆರು ತಿಂಗಳ ನಂತರ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಕೋವಿಡ್ ಸೋಂಕಿನ ಭಯದಿಂದ ಪ್ರವಾಸಿಗರಿಗೆ ಸರ್ಕಾರ ನಿರ್ಬಂಧ ವಿಧಿಸಿತ್ತು.

ಹೊಯ್ಸಳರ ಕಾಲದ, ಸೂಕ್ಷ್ಮ ಕೆತ್ತನೆ ಹೊಂದಿರುವ ಹೊಯ್ಸಳೇಶ್ವರ, ಜೈನಬಸದಿ, ಕೇದಾರೇಶ್ವರ ದೇವಾಲಯಗಳ ಶಿಲ್ಪ ಕಲಾ ಸೌಂದರ್ಯವನ್ನು ಕಣ್ತುಂಬಿಕೊಳ್ಳಲು ದೇಶ ವಿದೇಶಗಳಿಂದ ಸಾವಿರಾರು ಪ್ರವಾಸಿಗರು ಆಗಮಿಸುತ್ತಿದ್ದರು. ಆದರೆ, ದೇಶದಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸರ್ಕಾರ ಪ್ರವಾಸಿ ಸ್ಥಳಗಳನ್ನು ಮುಚ್ಚಿತ್ತು. ಲಾಕ್‌ಡೌನ್‌ನಿಂದ ಮನೆಯಲ್ಲೇ ಕಾಲಕಳೆಯುತ್ತಿದ್ದ ಜನರು, ಈಗ ಪ್ರವಾಸಿ ಸ್ಥಳಗಳ ವೀಕ್ಷಣೆಗೆ ಹೆಚ್ಚು ಒಲವು ತೋರುತ್ತಿದ್ದು, ದಿನದಿಂದ ದಿನಕ್ಕೆ ದ್ವಿಗುಣಗೊಳ್ಳುತ್ತಿದ್ದಾರೆ.

ರಾಜ್ಯದ ಪ್ರವಾಸಿಗರೇ ಹೆಚ್ಚು: ಸದ್ಯ ಅಂತಾರಾಜ್ಯ, ವಿದೇಶಿ ಪ್ರವಾಸಿಗರು ಕಡಿಮೆ ಸಂಖ್ಯೆಯಲ್ಲಿ ಆಗಮಿಸಿದರೆ, ಹಾಸನ ಜಿಲ್ಲೆ ಒಳಗೊಂಡಂತೆ ಬೆಂಗಳೂರು, ಮಂಗಳೂರು, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ಉಡುಪಿ ಸೇರಿ ದಕ್ಷಿಣ ಕರ್ನಾಟಕದ ಜಿಲ್ಲೆಗಳಿಂದ ನೂರಾರು ಪ್ರವಾಸಿಗರು ದೇವಾಲಯದ ವೀಕ್ಷಣೆಗೆ ಆಗಮಿಸುತ್ತಿದ್ದಾರೆ. ಇದರಿಂದ ಪ್ರವಾಸೋದ್ಯಮ ಇಲಾಖೆ ಆರ್ಥಿಕವಾಗಿ ಚೇತರಿಕೆ ಕಾಣುವ ಎಲ್ಲಾ ಲಕ್ಷಣಗಳುಕಾಣುತ್ತಿವೆ.

ಹಚ್ಚ ಹಸಿರಿನಿಂದ ಕೂಡಿದ ಹೊರಾಂಗಣ:
ಹಳೇಬೀಡಿನ ಹೊಯ್ಸಳೇಶ್ವರ ದೇವಾಲಯದ ಒಟ್ಟು 15 ಹೆಕ್ಟೇರ್‌ ವಿಶಾಲ ಉದ್ಯಾನ ಹೊಂದಿದ್ದು, ಆರು ತಿಂಗಳಿಂದ ಜನರ ಓಡಾಟವಿಲ್ಲದೆ, ಮುಂಗಾರು ಮಳೆ ಸಮರ್ಪಕವಾಗಿ ಸುರಿಯುತ್ತಿರುವ ಕಾರಣ, ಇಡೀ ಉದ್ಯಾನ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ.

ಈ ಉದ್ಯಾನದಲ್ಲಿರುವ ವಿವಿಧ ಜಾತಿಯ ಗಿಡಗಳು ಪ್ರತಿದಿನ ಹೂ ಬಿಡುತ್ತಿದ್ದು, ದೇವಾಲಯಕ್ಕೆ ಮೆರಗು ನೀಡುತ್ತಿವೆ. ಇದು ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಮುಂಜಾನೆ ಮತ್ತು ಮುಸ್ಸಂಜೆ ದೇವಾಲಯಕ್ಕೆ ವಾಯವಿಹಾರಕ್ಕೆ ಆಗಮಿಸುವ ನೂರಾರು ಮಂದಿಯ ಮನಸ್ಸಿಗೆ ಮುದ ನೀಡುತ್ತಿದೆ.

ಶನಿವಾರ, ಭಾನುವಾರ ಹೆಚ್ಚು:
ದೇವಾಲಯದ ವೀಕಣೆಗೆ ಪ್ರವಾಸಿಗರು ಬೇರೆ ದಿನಗಳಲ್ಲಿ 100 ರಿಂದ 500 ಮಂದಿ ಆಗಮಿಸಿದರೆ, ಶನಿವಾರ ಮತ್ತು ಭಾನುವಾರ 2000ವರೆಗೂ ಆಗಮಿಸುತ್ತಾರೆ. ದೇವಾಲಯವನ್ನೇ ನಂಬಿ ಜೀವನ ನಡೆಸುತ್ತಿರುವ ಮಾರ್ಗದರ್ಶಕರಿಗೂ ಈಗ ಅಷ್ಟಿಷ್ಟು ಹಣ ಕೈಸೇರುತಿದ್ದು, ಜೀವನ ಸುಧಾ‌ ರಿಸುತ್ತಿದೆ.

ವ್ಯಾಪಾರ ಚುರುಕು: ಹೊಯ್ಸಳೇಶ್ವರ ದೇವಾಲಯವನ್ನೇನಂಬಿಬದುಕುಸಾಗಿಸುತ್ತಿದ್ದ ಛಾಯಾಚಿತ್ರ ಮಾರಾಟಗಾರರು, ಬೀದಿಬದಿ ವ್ಯಾಪಾರಿಗಳು, ಹೋಟೆಲ್‌ ಉದ್ಯಮ ಕೊರೊನಾದಿಂದ ಮುಚ್ಚಲ್ಪಟ್ಟಿದ್ದವು. ಪ್ರವಾಸಿಗರ ಆಗಮನದಿಂದ ನಿಧಾನವಾಗಿ ಎಲ್ಲವೂ ಚೇತರಿಕೆಕಾಣುತ್ತಿವೆ.

ಟಾಪ್ ನ್ಯೂಸ್

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.