ಆಲಮಟ್ಟಿಗೆ ಪ್ರವಾಸಿಗರ ದಂಡು

ಬಿಸಿಲ ಬೇಗೆಯಲ್ಲೂ ನಿಸರ್ಗದ ಸೊಬಗ ಸವಿದ ಪ್ರವಾಸಿಗರು

Team Udayavani, May 5, 2022, 4:37 PM IST

20

ಆಲಮಟ್ಟಿ: 2019ರಿಂದ ಕೋವಿಡ್‌ ಹಾವಳಿಯಿಂದ ಕಳೆಗುಂದಿದ ರಂಜಾನ್‌ ಹಬ್ಬವನ್ನು ಈ ಬಾರಿ ಸಡಗರ ಸಂಭ್ರಮದಿಂದ ಆಚರಿಸಿದ ಮುಸ್ಲಿಮರು ಸೇರಿದಂತೆ ವಿವಿಧೆಡೆಯಿಂದ ಆಗಮಿಸಿದ್ದ ಪ್ರವಾಸಿಗರು ಬುಧವಾರ ಆಲಮಟ್ಟಿಯ ವಿವಿಧ ಉದ್ಯಾನಗಳಿಗೆ ಭೇಟಿ ನೀಡಿ ನಿಸರ್ಗದ ಸೊಬಗನ್ನು ಸವಿದರು.

ಮಂಗಳವಾರದಂದು ಜಗಜ್ಯೋತಿ ಬಸವೇಶ್ವರ ಜನ್ಮದಿನ ಹಾಗೂ ರಂಜಾನ್‌ ಹಬ್ಬಗಳು ಒಂದೇ ದಿನ ಬಂದಿದ್ದರಿಂದ ಹಿಂದೂ-ಮುಸ್ಲಿಮರು ಸಹೋದರತೆ ಭಾವದಿಂದ ಆಚರಿಸಿ ಬುಧವಾರ ಪ್ರವಾಸಿ ತಾಣ ಆಲಮಟ್ಟಿಗೆ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ್ದರು. ಪಟ್ಟಣವು ರೈಲು ನಿಲ್ದಾಣ, ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿಗಳನ್ನು ಹೊಂದಿದ್ದರಿಂದ ದೈನಂದಿನ ಜಂಜಡದಲ್ಲಿ ಬೇಸತ್ತಿದ್ದ ಜನತೆ ಸಂಭ್ರಮದಿಂದ ಹಬ್ಬ ಆಚರಿಸಿ ಹಬ್ಬದ ಮರುದಿನ ಸಂತಸದ ಕ್ಷಣಗಳನ್ನು ಕಳೆಯಲು ತಮ್ಮ ಖಾಸಗಿ ವಾಹನ, ಬಸ್‌, ರೈಲು ಸೇರಿದಂತೆ ವಿವಿಧ ವಾಹನಗಳ ಮೂಲಕ ಬೆಳಗ್ಗೆಯಿಂದ ಸಂಜೆವರೆಗೂ ಆಲಮಟ್ಟಿಗೆ ಬರುವವರ ಸಂಖ್ಯೆ ಏರಿಕೆಯಾಗುತ್ತಲೇ ಇತ್ತು.

ಉದ್ಯಾನಕ್ಕೆ ಭೇಟಿ: ರಾಷ್ಟ್ರೀಯ ಹೆದ್ದಾರಿ ಹಾಗೂ ಶಾಸ್ತ್ರಿ ಜಲಾಶಯದ ಮಧ್ಯ ಭಾಗದಲ್ಲಿರುವ ರಾಕ್‌ ಉದ್ಯಾನದಲ್ಲಿರುವ ನೈಜ ಕಾಡು ಪ್ರಾಣಿ, ಪಕ್ಷಿ, ಕಾಡು ಜನರ ಬದುಕು, ಗ್ರಾಮೀಣ ಜಾತ್ರೆಯ ಸೊಗಡು, ಸೂರ್ಯನ ಕಿರಣಗಳಲ್ಲಿ ಅರಳಿದ ಭಾರತ ನಕ್ಷೆ, ಸರ್ವ ಜನಾಂಗದ ಶಾಂತಿಯ ತೋಟದ ಸಂಕೇತವಾಗಿರುವ ದೇಶದ ಭದ್ರತೆಯ ರಕ್ಷಣೆಗೆ ಪಣ ತೊಟ್ಟಿರುವ ದೇಶಾಭಿಮಾನಿಗಳು, ವಿವಿಧ ಬಗೆಯ ಸಸ್ಯ ಸಂಪತ್ತು, ಜಲಚರಗಳು, ಕೀಟಗಳ ವಂಶಾಭಿವೃದ್ಧಿ, ಸರಿ ಸೃಪಗಳು ಹೀಗೆ ಹಲವಾರು ಬಗೆಯ ನೈಜತೆಯನ್ನು ಹೋಲುವ ಸಿಮೆಂಟ್‌ ಕಾಂಕ್ರೀಟ್‌ ಹಾಗೂ ಸ್ಟೀಲ್‌ ಹೀಗೆ ವಿವಿಧ ವಸ್ತುಗಳಿಂದ ತಯಾರಿಸಿ ಪ್ರತಿಮೆಗಳು ಒಂದಕ್ಕಿಂದ ಒಂದು ಸುಂದರವಾಗಿ ಕಾಣುತ್ತಿರುವುದನ್ನು ಕಣ್ತುಂಬಿಕೊಂಡರು.

ಮಕ್ಕಳು ಆಟವಾಡಲು ಚಿಲ್ಡ್ರನ್‌ ಪಾರ್ಕ್‌, ಪುಟಾಣಿ ರೈಲು, ಸಿಲ್ವರ್‌ ಲೇಕ್‌, ಜೋಕಾಲಿ, 7ಡಿ ವರ್ಚುವಲ್‌ ಪ್ರದರ್ಶನ ಕಂಡು ಕಣ್ತುಂಬಿಕೊಂಡರು. ಮೊಘಲ್‌ ಉದ್ಯಾನ, ಇಟಾಲಿಯನ್‌ ಉದ್ಯಾನ, ಫ್ರೆಂಚ್‌ ಉದ್ಯಾನ, ಸಂಗೀತ ನೃತ್ಯ ಕಾರಂಜಿ, ಲೇಸರ್‌ ಶೋ, ಗೋಪಾಲಕೃಷ್ಣ ಉದ್ಯಾನ, ಲವಕುಶ ಉದ್ಯಾನ, ಎಂಟ್ರನ್ಸ್‌ ಪ್ಲಾಜಾದ ಹಿಂಬದಿಯಲ್ಲಿರುವ ತ್ರೀಡಿ ಪ್ರದರ್ಶನ, ಬೃಹತ್‌ ಜಲರಾಶಿ ತುಂಬಿರುವ ಲಾಲ್‌ ಬಹಾದ್ದೂರ್‌ ಶಾಸ್ತ್ರಿ ಜಲಾಶಯ ಹೀಗೆ ಬುಧವಾರ ಬೆಳಗ್ಗೆಯಿಂದ ರಾತ್ರಿಯವರೆಗೂ ನೋಡಿದರೂ ಕೂಡ ಇನ್ನೂ ಕೆಲವು ಸ್ಥಳಗಳನ್ನು ನೋಡಲು ಸಮಯ ಸಾಕಾಗಲಿಲ್ಲ ಎನ್ನುವ ಮಾತು ಪ್ರವಾಸಿಗರಿಂದ ಕೇಳಿ ಬಂತು.

ಭೋಜನ ಸವಿ: ಬಿಸಿಲಿನ ಬೇಗೆಯ ಮಧ್ಯದಲ್ಲಿ ಹಸಿರಿನಿಂದ ಕಂಗೊಳಿಸುವ ವಿವಿಧ ಮರಗಳ ನೆರಳಿನಲ್ಲಿ ಸುತ್ತಾಡಿ ಉತ್ಸಾಹದಿಂದ ಉದ್ಯಾನಗಳನ್ನು ವೀಕ್ಷಿಸಿದ ಪ್ರವಾಸಿಗರು ಗಿಡ ಮರಗಳ ನೆರಳಿನಲ್ಲಿ ಕುಳಿತು ತಾವು ತಂದಿದ್ದ ಹಲವು ಬಗೆಯ ಖಾದ್ಯಗಳನ್ನು ಸವಿದರು. ರಂಜಾನ್‌ ಆಚರಿಸಿದ ಮುಸ್ಲಿಮರು ಹಾಗೂ ನಿತ್ಯ ಆಗಮಿಸುವ ವಿವಿಧ ಧರ್ಮಗಳ ಪ್ರವಾಸಿಗರಿಂದ ಆಲಮಟ್ಟಿಯ ರಾಷ್ಟ್ರೀಯ ಹೆದ್ದಾರಿಯಿಂದ ಎಲ್ಲ ಉದ್ಯಾನಗಳ ರಸ್ತೆಗಳು ಸೇರಿದಂತೆ ಎಲ್ಲಿ ನೋಡಿದರೂ ಜನ ಸಮೂಹವೇ ಕಾಣುತ್ತಿತ್ತು.

ಹೆಚ್ಚಿದ ವ್ಯಾಪಾರ: ಬುಧವಾರ ನಾಡಿನ ವಿವಿಧ ಭಾಗಗಳಿಂದ ಆಗಮಿಸಿದ್ದ ಪ್ರವಾಸಿಗರು ಬಿಸಿಲಿನ ಬೇಗೆಯನ್ನು ತಾಳದೇ ಕೆಲವರು ಐಸ್‌ಕ್ರೀಂ, ಮಜ್ಜಿಗೆ, ಶರಬತ್ತು ಸೇರಿದಂತೆ ಹಲವಾರು ಬಗೆಯ ತಂಪು ಪಾನೀಯ ಮೊರೆ ಹೋಗಿದ್ದರಿಂದ ವ್ಯಾಪಾರಸ್ಥರು ಖುಷಿಯಿಂದ ವ್ಯವಹಾರ ಮಾಡಿದರು.

ರಾಕ್‌ ಉದ್ಯಾನ, ಗೋಪಾಲ ಕೃಷ್ಣ ಉದ್ಯಾನ ಹಾಗೂ ಲವಕುಶ ಉದ್ಯಾನಗಳಿಗೆ ಭೇಟಿ ನೀಡಿದ ಪ್ರವಾಸಿಗರಿಂದ ಒಟ್ಟು 1,34,880 ರೂ. ಕೃಷ್ಣಾ ಭಾಗ್ಯ ಜಲ ನಿಗಮದ ಅರಣ್ಯ ವಿಭಾಗಕ್ಕೆ ಪ್ರವೇಶ μà ಜಮಾ ಆಗಿದೆ. ನಿಡಗುಂದಿ ಸಿಪಿಐ ಸೋಮಶೇಖರ ಜುಟ್ಟಲ್‌ ನೇತೃತ್ವದಲ್ಲಿ ಇಬ್ಬರು ಪಿಎಸೈ, 35 ಪೊಲೀಸ್‌ ಸಿಬ್ಬಂದಿ, ಒಂದು ಡಿಎಆರ್‌ ತುಕಡಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಪಿ.ಕೆ. ಪೈ, ಎಸಿಎಫ್‌ ಪ್ಯಾಟಿಗೌಡರ, ವಲಯ ಅರಣ್ಯಾ ಧಿಕಾರಿ ಮಹೇಶ ಪಾಟೀಲ ಸೇರಿ 20 ಜನ ಅಧಿಕಾರಿಗಳು 300ಕ್ಕೂ ಅಧಿಕ ದಿನಗೂಲಿ ಕಾರ್ಮಿಕರು, ಕೆಎಸ್‌ಐಎಸ್‌ಎಫನ 10 ಜನ ಅಧಿಕಾರಿಗಳು 50 ಜನ ಪೊಲೀಸ್‌ ಸಿಬ್ಬಂದಿ ಬಂದೋಬಸ್ತ್ ಏರ್ಪಡಿಸಿದ್ದರು.              -ಶಂಕರ ಜಲ್ಲಿ

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.