ಗೂಗಲ್ ಮ್ಯಾಪ್ದಿಂದ ಮನೆಗಳಿಗೆ ಟಾರ್ಗೆಟ್: ಅಂತಾರಾಜ್ಯ ಮನೆಗಳ್ಳರ ಸೆರೆ
Team Udayavani, Oct 27, 2020, 2:54 PM IST
ಬೆಳಗಾವಿ: ಗೂಗಲ್ ಮ್ಯಾಪ್ ಮೂಲಕ ಮನೆಗಳನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದ ಇಬ್ಬರು ಅಂತಾರಾಜ್ಯ ಕಳ್ಳರನ್ನು ಬಂಧಿಸಿರುವ ಪೊಲೀಸರು, 28 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ಕಾರು ವಶಪಡಿಸಿಕೊಂಡಿದ್ದಾರೆ.
ಕೊಲ್ಲಾಪುರ ಜಿಲ್ಲೆಯ ಕರವೀರ ತಾಲೂಕಿನ ಇಸ್ಪುರಲಿ ಗ್ರಾಮದ ಪ್ರಶಾಂತ ಕಾಶೀನಾಥ ಕರೋಶಿ ಹಾಗೂ ಆಜರಾ ತಾಲೂಕಿನ
ಧಾಮಣೆ ಗ್ರಾಮದ ಅವಿನಾಶ ಶಿವಾಜಿ ಅಡಾವಕರ ಎಂಬಾತರನ್ನು ಬಂಧಿಸಲಾಗಿದೆ.
28 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ಒಂದು ಮಾರುತಿ ಸುಜುಕಿ ಬಲೆನೋ ಕಾರು ವಶಪಡಿಸಿಕೊಳ್ಳುವಲ್ಲಿ ಬೆಳಗಾವಿಯ ಕ್ಯಾಂಪ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಅಪರಾಧ ವಿಭಾಗ ಡಿಸಿಪಿ ಸಿ.ಆರ್. ನೀಲಗಾರ, ಗೂಗಲ್ ಮ್ಯಾಪ್ ಮೂಲಕ ನಗರದ ಹೊರ ವಲಯದ ಮನೆಗಳಿಗೆ ಮಹಾರಾಷ್ಟ್ರ ಮೂಲದ ಈ ಖದೀಮರು ಸ್ಕೆಚ್ ಹಾಕುತ್ತಿದ್ದರು. ನಂತರ ಖುದ್ದಾಗಿ ಆ ಮನೆಯ ಪ್ರದೇಶಕ್ಕೆ ಬಂದು ಕೀಲಿ ಹಾಕಿದ್ದ ಮನೆಗಳನ್ನೇ ಟಾರ್ಗೆಟ್ ಮಾಡುತ್ತಿದ್ದರು. ಮನೆಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿ ಚಿನ್ನಾಭರಣ, ಹಣ ದೋಚುತ್ತಿದ್ದರು ಎಂದು ತಿಳಿಸಿದರು. ನಗರದ ಲಕ್ಷ್ಮೀಟೇಕ್ ನಕ್ಷತ್ರ ಕಾಲೋನಿಯ ಆಸ್ಟನ್ ಡಿಅಲ್ಮೇಡಾ ಮನೆ ಸೇರಿದಂತೆ ಅನೇಕರ ಮನೆಗಳ ಕಳವು ಮಾಡಿ ಚಿನ್ನಾಭರಣ ದೋಚಿದ್ದರು. ಮೂರು ಮನೆಗಳಲ್ಲಿ ಕಳ್ಳತನ ಮಾಡಿದ್ದ ಈ ಇಬ್ಬರನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ:ಮುನಿರತ್ನ ನನ್ನ ಗಾಡ್ಫಾದರ್ ಅಲ್ಲ, ಚಿತ್ರದ ನಿರ್ಮಾಪಕರಷ್ಟೇ: ನಿಖಿಲ್ ಕುಮಾರಸ್ವಾಮಿ
ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ. ದಾಳಿಯಲ್ಲಿ ಕ್ಯಾಂಪ್ ಠಾಣೆ ಇನ್ಸಪೆಕ್ಟರ್ ಡಿ. ಸಂತೋಷಕುಮಾರ, ಎಎಸ್ಐ ಬಿ.ಆರ್. ಡೂಗ್, ಸಿಬ್ಬಂದಿಗಳಾದ ಬಿ.ಬಿ. ಗೌಡರ, ಎ.ಕೆ. ಶಿಂತ್ರೆ, ಎಂ.ಎ. ಪಾಟೀಲ, ಬಿ.ಎಂ. ನರಗುಂದ, ಎಸ್. ಎಚ್. ತಳವಾರ, ಯು.ಎಂ. ಥೈ ಕಾರ, ಎ.ಎಂ. ಪಾಟೀಲ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು