ಬಿ.ಸಿ.ರೋಡ್‌-ಜಕ್ರಿಬೆಟ್ಟು ಹೆದ್ದಾರಿಯಲ್ಲಿ ಸಂಚಾರ ದುಸ್ತರ

ಲಾಕ್‌ಡೌನ್‌ನಿಂದ ಕಾಮಗಾರಿ ವಿಳಂಬ

Team Udayavani, Jun 14, 2020, 5:41 AM IST

ಬಿ.ಸಿ.ರೋಡ್‌-ಜಕ್ರಿಬೆಟ್ಟು ಹೆದ್ದಾರಿಯಲ್ಲಿ ಸಂಚಾರ ದುಸ್ತರ

ವಿಶೇಷ ವರದಿ -ಬಂಟ್ವಾಳ: ಜೂನ್‌ ಮೊದಲ ವಾರದಲ್ಲೇ ಮುಂಗಾರು ಚುರುಕುಗೊಂಡ ಪರಿಣಾಮ ಬಿ.ಸಿ.ರೋಡ್‌-ಜಕ್ರಿಬೆಟ್ಟು ಹೆದ್ದಾರಿ ಕಾಮಗಾರಿಗೆ ತೊಂದರೆಯಾಗಿದ್ದು, ಕೆಸರಿನಿಂದ ಆವೃತವಾದ ರಸ್ತೆಯಲ್ಲಿ ವಾಹನಗಳು ಎದ್ದು ಬಿದ್ದು ಸಾಗಬೇಕಾದ ಸ್ಥಿತಿ ನಿರ್ಮಾಣಗೊಂಡಿದೆ.

ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಹೆದ್ದಾರಿಯ ಕಾಮಗಾರಿ ಒಂದೂವರೆ ತಿಂಗಳು ವಿಳಂಬ ಗೊಂಡಿತ್ತು. ಪರಿಣಾಮ ಇದೀಗ ಮಳೆಯಲ್ಲೇ ಕಾಮಗಾರಿ ಸಾಗುವ ಜತೆಗೆ ಕೆಸರಿನಲ್ಲಿ ವಾಹನಗಳು ಸಾಗಬೇಕಾದ ಸ್ಥಿತಿ ಇದೆ. ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಂದಾಜಿನ ಪ್ರಕಾರ ಮೇ ಅಂತ್ಯಕ್ಕೆ ಒಂದು ಹಂತದ ಕಾಮಗಾರಿ ಮುಗಿಯಬೇಕಿತ್ತು. ಆದರೆ ಲಾಕ್‌ಡೌನ್‌ನಿಂದ ಜೂನ್‌ ಅಂತ್ಯಕ್ಕೆ ಮುಗಿಸುವ ಆಲೋಚನೆಯಲ್ಲಿದೆ.

ಬಿ.ಸಿ.ರೋಡ್‌ನಿಂದ ಜಕ್ರಿಬೆಟ್ಟುವರೆಗೆ ಕಾಂಕ್ರೀಟ್‌ ಕಾಮಗಾರಿಯ ಹಿನ್ನೆಲೆಯಲ್ಲಿ ರಸ್ತೆಯನ್ನು ಸಂಪೂರ್ಣ ಅಗೆದು ಮಣ್ಣು ತುಂಬಿಸುವ ಹಾಗೂ ತೆರವುಗೊಳಿಸುವ ಕಾಮಗಾರಿ ನಡೆಸಲಾಗಿದೆ. ಹೆದ್ದಾರಿಯ ಬಹುತೇಕ ಕಡೆ ಕಾಂಕ್ರೀಟ್‌ ಬೆಡ್‌ ಹಾಕಿ, ಕೆಲವೆಡೆ ಕಾಂಕ್ರೀಟ್‌ ಕಾಮಗಾರಿಯೂ ನಡೆಸಲಾಗಿದೆ. ಬಿ.ಸಿ.ರೋಡ್‌ನಿಂದ ಭಂಡಾರಿ ಬೆಟ್ಟುವರೆಗೆ ಪ್ರಸ್ತುತ ಹೆದ್ದಾರಿ ಒಂದು ಬದಿ ಸಂಪೂರ್ಣ ಕೆಸರಿನಿಂದ ಕೂಡಿದೆ. ಹೀಗಾಗಿ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗಿದೆ. ಕಾಂಕ್ರೀಟ್‌ ಕಾಮಗಾರಿ ಅಂತ್ಯಗೊಳ್ಳುವ ಜಕ್ರಿ ಬೆಟ್ಟುನಲ್ಲೂ ಪ್ರಸ್ತುತ ಮಣ್ಣು ಹಾಕಿರುವ ಪ್ರದೇಶಗಳಲ್ಲಿ ಹೊಂಡಗಳು ಸೃಷ್ಟಿಯಾಗಿ ವಾಹನ ಸಂಚಾರಕ್ಕೆ ಅಡ್ಡಿಯಾಗುತ್ತಿವೆ.

ನೀರು ಹರಿಯುವುದಕ್ಕೂ ಅಡ್ಡಿ
ಹೆದ್ದಾರಿಯ ಹಿಂದಿನ ಚಿತ್ರಣ ವನ್ನೇ ಬದಲಿಸಿ ಕಾಮಗಾರಿ ಸಾಗುತ್ತಿರುವುದರಿಂದ ಹಿಂದಿನ ಚರಂಡಿ ಗಳು ಮುಚ್ಚಿ ನೀರು ಹರಿಯುವುದಕ್ಕೂ ತೊಂದರೆ ಯುಂಟಾಗುತ್ತಿದೆ.

ಬಂಟ್ವಾಳ ವೆಂದರೆ ಮೊದಲೇ ನೆರೆಬಾಧಿತ ಪ್ರದೇಶವಾಗಿದ್ದು, ಸ್ಥಳೀಯರು ಕೃತಕ ನೆರೆಯ ಆತಂಕ ದಲ್ಲಿದ್ದಾರೆ. ಹೆದ್ದಾರಿಯ ಕೆಸರು ಕೆಲವೊಂದೆಡೆ ಮನೆಗೆ ತೆರಳುವುದಕ್ಕೂ ಅಡ್ಡಿಯಾಗಿದೆ. ವಾಹನಗಳನ್ನು ಮನೆಗೆ ಕೊಂಡು ಹೋಗಲಾಗದೆ ಬೇರೆಡೆ ನಿಲ್ಲಿಸುವ ಪರಿಸ್ಥಿತಿ ಇದೆ. ಹೀಗಾಗಿ ಒಂದು ಹಂತದ ಕಾಮಗಾರಿ ಮುಗಿಸಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡುವ ಜತೆಗೆ ಸಮಸ್ಯೆಗಳಿಗೂ ಮುಕ್ತಿ ನೀಡುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

7 ಮೀ. ಮುಗಿಯಬೇಕಿತ್ತು
ಬಿ.ಸಿ.ರೋಡ್‌ನಿಂದ ಜಕ್ರಿಬೆಟ್ಟುವರೆಗಿನ 3.85 ಕಿ.ಮೀ.ಅಂತರದಲ್ಲಿ ಚತುಷ್ಪಥ ಕಾಂಕ್ರೀಟ್‌ ಹೆದ್ದಾರಿ ನಿರ್ಮಾಣಗೊಳ್ಳಲಿದ್ದು, ಅದರ ಅಗಲ 14 ಮೀ. ಹೆದ್ದಾರಿ ಇಲಾಖೆಯು ಮಳೆಗಾಲಕ್ಕೆ ಮುಂಚಿತವಾಗಿ 7 ಮೀ. ಹೆದ್ದಾರಿಯ ಕಾಮಗಾರಿಯನ್ನು ಮುಗಿಸಿ ವಾಹನ ಸಂಚಾರಕ್ಕೆ ಮುಕ್ತಗೊಳಿಸುವ ಕುರಿತು ಗುತ್ತಿಗೆದಾರರಿಗೆ ಸೂಚನೆಯನ್ನೂ ನೀಡಿತ್ತು. ಆದರೆ ಲಾಕ್‌ಡೌನ್‌ ಪರಿಣಾಮದಿಂದ ನಿರೀಕ್ಷಿತ ಮಟ್ಟದಲ್ಲಿ ಕಾಮಗಾರಿ ಸಾಗಲಿಲ್ಲ. ಮತ್ತೂಂದೆಡೆ ಜೂನ್‌ ಪ್ರಾರಂಭದಲ್ಲೇ ಮುಂಗಾರು ಆಗಮಿಸಿದೆ. ಹೀಗಾಗಿ ಜೂನ್‌ ಅಂತ್ಯದೊಳಗೆ 7 ಮೀ. ಅಗಲದ ಕಾಂಕ್ರೀಟ್‌ ಕಾಮಗಾರಿಯನ್ನು ಮುಗಿಸುವ ನಿಟ್ಟಿನಲ್ಲಿ ಕಾಮಗಾರಿ ಸಾಗುತ್ತಿದೆ ಎಂದು ರಾ.ಹೆ.ಅಧಿಕಾರಿಗಳು ಹೇಳುತ್ತಾರೆ.

ವಾಹನ ಸಂಚಾರಕ್ಕೆ ಅವಕಾಶ
ಲಾಕ್‌ಡೌನ್‌ನಿಂದ ಒಂದಷ್ಟು ಸಮಯ ಕಾಮಗಾರಿ ನಿಂತು ಹೋದ ಪರಿಣಾಮ ತೊಂದರೆಯುಂಟಾಗಿದೆ. ಜಕ್ರಿಬೆಟ್ಟುವರೆಗಿನ ಚತುಷ್ಪಥ ಹೆದ್ದಾರಿಯ ಒಂದು ಬದಿಯ 7 ಮೀ. ರಸ್ತೆಯನ್ನು ಮಾಸಾಂತ್ಯ ದೊಳಗೆ ಮುಗಿಸಿ, ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದ್ದೇವೆ. ಬಳಿಕ ಮತ್ತೊಂದು ಬದಿಯ ಕಾಮಗಾರಿ ಮುಂದುವರಿಸುತ್ತೇವೆ.
– ರಮೇಶ್‌, ಎಇಇ, ರಾಷ್ಟ್ರೀಯ ಹೆದ್ದಾರಿ ಇಲಾಖೆ, ಮಂಗಳೂರು

ಟಾಪ್ ನ್ಯೂಸ್

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.