ಅಡ್ಡಾದಿಡ್ಡಿ ವಾಹನ ಪಾರ್ಕಿಂಗ್‌: ನಿತ್ಯ ಟ್ರಾಫಿಕ್‌ ಜಾಮ್‌

ಕಲ್ಯಾಣಪುರ ಸಂತೆಕಟ್ಟೆ: ಸರ್ವಿಸ್‌ ರಸ್ತೆ

Team Udayavani, Sep 29, 2021, 5:40 AM IST

ಅಡ್ಡಾದಿಡ್ಡಿ ವಾಹನ ಪಾರ್ಕಿಂಗ್‌: ನಿತ್ಯ ಟ್ರಾಫಿಕ್‌ ಜಾಮ್‌

ಟ್ರಾಫಿಕ್‌ ಪೊಲೀಸರು ಸಂತೆಕಟ್ಟೆ ಜಂಕ್ಷನ್‌ನಲ್ಲಿ ಸಂಚಾರ ನಿಯಂತ್ರಿಸುವಲ್ಲಿ ಹರಸಾಹಸ ಪಡುತ್ತಿರುತ್ತಾರೆ. ಅವರ ಕಣ್ಣು ತಪ್ಪಿಸಿ ಆಶೀರ್ವಾದ ಬಸ್‌ ನಿಲ್ದಾಣದಿಂದ ಕಲ್ಯಾ ಣ ಪುರ ಸಂತೆಕಟ್ಟೆ ಬಸ್‌ ನಿಲ್ದಾಣದವರೆಗೆ ಸರ್ವಿಸ್‌ ರಸ್ತೆಯಲ್ಲಿ ಅಲ್ಲಲ್ಲಿ ಕಾರು, ಇತ್ಯಾದಿ ವಾಹನಗಳನ್ನು ಗಂಟೆಗಟ್ಟಲೆ ಪಾರ್ಕ್‌ ಮಾಡುವ ಪ್ರವೃ ತ್ತಿ ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅಂಗಡಿ ಮುಂಗಟ್ಟುಗಳಿಗೆ ಸಾಮಗ್ರಿ ಖರೀದಿಸಲು ಬರುವ ಗ್ರಾಹಕರು ಅಂಗಡಿ ಮುಂದೆ ತಮ್ಮ ವಾಹನವನ್ನು ನಿಲ್ಲಿಸಲು ಸಾಕಷ್ಟು ಜಾಗವಿದ್ದರೂ ರಸ್ತೆ ಬದಿಯಲ್ಲಿಯೇ ನಿಲ್ಲಿಸಿ ಹೋಗುವುದು ನಿತ್ಯ ರೂಢಿಯಾಗಿದೆ.

ಮಲ್ಪೆ: ರಾಷ್ಟ್ರೀಯ ಹೆದ್ದಾರಿ 66 ಬಳಿಯ ಆಶೀರ್ವಾದ ಬಸ್‌ ನಿಲ್ದಾಣದಿಂದ ಕಲ್ಯಾಣಪುರ ಸಂತೆಕಟ್ಟೆ ಜಂಕ್ಷನ್‌ವರೆಗಿನ ಸರ್ವಿಸ್‌ ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ವಾಹನಗಳನ್ನು ಪಾರ್ಕಿಂಗ್‌ ಮಾಡುವುದರಿಂದ ಟ್ರಾಫಿಕ್‌ ಜಾಮ್‌ ಸಮಸ್ಯೆ ಉಂಟಾಗುತ್ತಿದ್ದು, ಇತರ ವಾಹನಗಳ ಓಡಾಟವೇ ಸಾಧ್ಯವಿಲ್ಲದಂತಾಗಿದೆ.

ಉಡುಪಿಯಿಂದ ಆಗಮಿಸುವ ಸಿಟಿ ಮತ್ತು ಎಕ್ಸ್‌ ಪ್ರಸ್‌ ಬಸ್‌ಗಳು ರಾ.ಹೆ. 66ರಿಂದ (ಆಶೀರ್ವಾದ ಚಿತ್ರ ಮಂದಿರದ ಎದುರು) ಮಾರ್ಗ ಬದಲಿಸಿ ಸಂಚರಿಸುವುದರಿಂದ ಸಂಚಾರ ಅಡಚಣೆಯ ಜತೆಗೆ ಅಪಘಾತಕ್ಕೂ ಕಾರಣವಾಗುತ್ತಿವೆ.

ಸರ್ವಿಸ್‌ ರಸ್ತೆಯಲ್ಲಿ ಪಾರ್ಕಿಂಗ್‌ ಮಾಡಿದ ವಾಹನಗಳನ್ನು ತಪ್ಪಿಸಲು ಎಕ್ಸ್‌ಪ್ರೆಸ್‌ ಬಸ್‌ಗಳು ಎಡದಿಂದ ಬಲಕ್ಕೆ, ಮತ್ತೂಮ್ಮೆ ಎಡಭಾಗದಿಂದ ಬಲಕ್ಕೆ ಹೋಗುವುದರಿಂದ ಮುಂದಿನಿಂದ ಬರುವ ವಾಹನಗಳ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಅಲ್ಲದೆ ರಸ್ತೆ ಯಲ್ಲಿ ವಾಹನ ನಿಲುಗಡೆ ಯಿಂದ ಟ್ರಾಫಿಕ್‌ ಜಾಮ್‌ ಉಂಟಾಗುತ್ತಿದೆ. ಎಕ್ಸ್‌ಪ್ರೆಸ್‌ ಬಸ್‌ಗಳು ಕಲ್ಯಾಣಪುರ ಸಂತೆಕಟ್ಟೆಯ ವರೆಗೆ ರಾಷ್ಟ್ರೀಯ ಹೆದ್ದಾರಿ ಯಲ್ಲಿಯೇ ಸಂಚರಿಸಿದರೆ ಸರ್ವಿಸ್‌ ರಸ್ತೆಯಲ್ಲಿ ವಾಹನ ದಟ್ಟಣೆ ಕಡಿಮೆಯಾಗಲು ಸಾಧ್ಯವಿದೆ ಎಂಬ ಅಭಿಪ್ರಾಯ ಸಾರ್ವಜನಿಕರದು.

ಇದನ್ನೂ ಓದಿ:ಸಿಆರ್‌ಝಡ್‌ ಅಧಿಸೂಚನೆ 2019ರಲ್ಲಿ ಹೆಚ್ಚಿನ ಚಟುವಟಿಕೆಗೆ ಅವಕಾಶ: ಡಿಸಿ

ವಾಹನ ಸಂಚಾರ ಕಷ್ಟ
ರಸ್ತೆ ಬದಿಯಲ್ಲಿಯೇ ಅಡ್ಡಾದಿಡ್ಡಿಯಾಗಿ ವಾಹನ ಪಾಕಿಂಗ್‌ ಮಾಡುವುದರಿಂದ ವಾಹನದಲ್ಲಿ ಸಂಚರಿಸುವುದು ಕಷ್ಟಕರ. ಪೊಲೀಸರು ಮತ್ತು ಹೈವೇ ಪೆಟ್ರೋಲ್‌ ಪೊಲೀಸರು ಸರ್ವಿಸ್‌ ರಸ್ತೆಯಲ್ಲಿಯೇ ಪಾರ್ಕಿಂಗ್‌ ಮಾಡಿರುವ ವಾಹನಗಳ ಮೇಲೆ ಉಡುಪಿ ನಗರದಲ್ಲಿ ನಡೆಸುವ ಕಾರ್ಯಾಚರಣೆಯ ಮಾದರಿಯಲ್ಲಿ ಇಲ್ಲಿಯೂ ನಡೆಸಿದರೆ ಉತ್ತಮ.
– ಗಣೇಶ್‌ ಪ್ರಸಾದ್‌, ಸ್ಥಳೀಯರು

ಶಾಶ್ವತ ಪರಿಹಾರಕ್ಕೆ ಕ್ರಮ
ಇಲ್ಲಿನ ಸಮಸ್ಯೆಯ ಬಗ್ಗೆ ಈ ಹಿಂದೆಯೇ ಸಂಚಾರಿ ಪೊಲೀಸರ ಗಮನಕ್ಕೆ ತರಲಾಗಿತ್ತು. ಸ್ವಲ್ಪ ಸಮಯ ಸಮಸ್ಯೆ ಬಗೆಹರಿದಿದ್ದರೂ ಮತ್ತೆ ಯಥಾಸ್ಥಿತಿ ತಲುಪಿದೆ. ಮುಂದೆ ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಮೂಲಕ ಶಾಶ್ವತ ಪರಿಹಾರವನ್ನು ಕಂಡುಕೊಳ್ಳುವಲ್ಲಿ ಸಂಬಂಧಪಟ್ಟ ಇಲಾಖೆಗೆ ತಿಳಿಸಲಾಗುವುದು.
 -ಮಂಜುಳಾ ನಾಯಕ್‌, ನಗರಸಭೆ ಸದಸ್ಯರು, ಗೋಪಾಲಪುರ ವಾರ್ಡ್‌

ಟಾಪ್ ನ್ಯೂಸ್

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.