ಹಳೆಯ ಪ್ರಕರಣಗಳ ಬಾಕಿ ವಸೂಲಿ ಮಾಡಿದ ಪೊಲೀಸರು!
ಸಂಚಾರ ನಿಯಮ ಉಲ್ಲಂಘನೆ: ವಿಶೇಷ ಕಾರ್ಯಾಚರಣೆ ಇಂದು ಕೊನೆ
Team Udayavani, Oct 2, 2021, 6:08 AM IST
ಮಹಾನಗರ: ಸಂಚಾರ ನಿಯಮ ಉಲ್ಲಂಘಿಸುವ ವಾಹನಗಳ ಸವಾರರು/ಚಾಲಕರ ಮೇಲೆ ಮಂಗಳೂರು ಪೊಲೀಸರು ಹಮ್ಮಿಕೊಂಡಿರುವ ಆರು ದಿನಗಳ ವಿಶೇಷ ಕಾರ್ಯಾಚರಣೆ ಅ. 2ರಂದು ಕೊನೆಗೊಳ್ಳಲಿದೆ.
ಸೆ. 27ರಂದು ಕಾರ್ಯಾಚರಣೆ ಆರಂಭಗೊಂಡಿದ್ದು, ಒಂದೊಂದು ದಿನ ಒಂದೊಂದು ರೀತಿಯ ಉಲ್ಲಂಘನೆ ಪ್ರಕರಣಗಳನ್ನು ಕೇಂದ್ರೀಕರಿಸಿ ತಪಾಸಣೆ ನಡೆಸಲಾಗಿದೆ. ಮೊದಲ ನಾಲ್ಕು ದಿನಗಳಲ್ಲಿ ಟಿಂಟೆಡ್ ಗ್ಲಾಸ್, ನಂಬರ್ಪ್ಲೇಟ್ ದೋಷ, ಹೆಲ್ಮೆಟ್, ವಿಮೆ ತಪಾಸಣೆ ನಡೆದಿದ್ದು, 5ನೇ ದಿನವಾದ ಶುಕ್ರವಾರ ಹಳೆಯ ಪ್ರಕರಣಗಳ ಬಗ್ಗೆ ತಪಾಸಣೆ ನಡೆಸಿದರು.
ಈ ಹಿಂದೆ ಸಂಚಾರ ನಿಯಮ ಉಲ್ಲಂಘನೆ ಸಂದರ್ಭ ಸಿಸಿ ಕೆಮರಾಗಳಲ್ಲಿ ದಾಖ ಲಾಗಿದ್ದು, ಪೊಲೀಸರ ಮೊಬೈಲ್ನಲ್ಲಿ ದಾಖಲಾಗಿದ್ದು, ಸಾರ್ವಜನಿಕರೇ ದಾಖಲೆ ಸಮೇತ ದೂರು ನೀಡಿದ್ದು, ಸಹಿತ ಸಂಚಾರಿ ಪೊಲೀಸ್ ವಿಭಾಗದ ಆಟೋಮೇಶನ್ ಸೆಂಟರ್ನಲ್ಲಿ ದಾಖಲಾಗಿದ್ದ ಪ್ರಕರಣಗಳಲ್ಲಿ ಪೊಲೀಸರು ನೋಟಿಸ್ ಕಳುಹಿಸಿದರೂ ದಂಡ ಪಾವತಿಸದೆ ನಿರ್ಲಕ್ಷಿಸಿದ ಸವಾ ರರು/ಚಾಲಕರಿಂದ ದಂಡ ವಸೂಲಿ ಮಾಡಲಾಯಿತು. ಶನಿವಾರ ಸಂಚಾರ ಪೊಲೀಸರು ವಾಹನಗಳ ಹೊಗೆ ತಪಾ ಸಣೆಯ (ಎಮಿಶನ್ ಟೆಸ್ಟ್) ದಾಖಲೆಗಳನ್ನು ಪರಿಶೀಲಿಸಿ ಪ್ರಕರಣ ದಾಖಲಿಸಿ ಕೊಳ್ಳಲಿದ್ದಾರೆ.
ಇದನ್ನೂ ಓದಿ:ದಲಿತ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಬಿಸಿಯೂಟ | ಮುಖ್ಯ ಶಿಕ್ಷಕ ಅಮಾನತು
5.71 ಲ.ರೂ.ಗಳಿಗೂ
ಅಧಿಕ ದಂಡ ವಸೂಲಿ
ಶುಕ್ರವಾರದಂದು ಹಳೆಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ಸಾವಿರಕ್ಕೂ ಅಧಿಕ ವಾಹನ ಸವಾರರು/ ಚಾಲಕರಿಂದ 5 .71 ಲ.ರೂ.ಗಳಿಗೂ ಅಧಿಕ ದಂಡ ವಸೂಲಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ