ಉಡುಪಿ ಪ್ರಥಮ, ಉ.ಕ. ದ್ವಿತೀಯ, ದ.ಕ. 13ನೇ ಸ್ಥಾನ !

ನಗರ ಸ್ಥಳೀಯಾಡಳಿತ ಸಂಸ್ಥೆ ಇ-ಆಸ್ತಿ ವರ್ಗಾವಣೆ

Team Udayavani, Nov 11, 2021, 2:26 AM IST

ಉಡುಪಿ ಪ್ರಥಮ, ಉ.ಕ. ದ್ವಿತೀಯ, ದ.ಕ. 13ನೇ ಸ್ಥಾನ !

ಉಡುಪಿ: ರಾಜ್ಯದ ನಗರ ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ ಅತ್ಯಧಿಕ ಇ- ಆಸ್ತಿ ವರ್ಗಾವಣೆ ಮಾಡಿರುವ ರಾಜ್ಯದ ಜಿಲ್ಲಾವಾರು ಪಟ್ಟಿಯಲ್ಲಿ ಉಡುಪಿ ಜಿಲ್ಲೆ ಪ್ರಥಮ, ಉ.ಕ. ಜಿಲ್ಲೆ ದ್ವಿತೀಯ ಹಾಗೂ ದ.ಕ. ಜಿಲ್ಲೆ 13ನೇ ಸ್ಥಾನ ಪಡೆದುಕೊಂಡಿದೆ.

ಉಡುಪಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆ ಗಳಲ್ಲಿ ಅ. 31ರ ವರೆಗೆ ಒಟ್ಟು 12,309 ಅರ್ಜಿ ಗಳು ಸಲ್ಲಿಕೆಯಾಗಿದ್ದು, ಅದರಲ್ಲಿ 11,843 ಅರ್ಜಿ ಗಳನ್ನು ಕಾಲಮಿತಿಗಿಂತ ವೇಗವಾಗಿ ವಿಲೇ ವಾರಿ ಮಾಡಲಾಗಿದೆ. ದ.ಕ. ಜಿಲ್ಲೆಯ ನಗರ ಸ್ಥಳೀಯಾ ಡಳಿತ ಸಂಸ್ಥೆಗಳಲ್ಲಿ ಒಟ್ಟು 13,499 ಅರ್ಜಿಗಳು ಸಲ್ಲಿಕೆಯಾಗಿದ್ದು ಕಾಲಮಿತಿಯೊಳಗೆ 13,301 ಅರ್ಜಿಗಳನ್ನುವಿಲೇವಾರಿ ಮಾಡಲಾಗಿದೆ.

ರಾಜ್ಯಮಟ್ಟದ ಪಟ್ಟಿಯಲ್ಲಿ ಕರಾವಳಿಯ ಎರಡು ಜಿಲ್ಲೆಗಳು ಮೊದಲ ಎರಡು ಆಗ್ರಸ್ಥಾನ ಪಡೆದುಕೊಂಡಿದೆ. ಉಡುಪಿ, ಉತ್ತರ ಕನ್ನಡ, ಕಲಬುರಗಿ, ಕೊಡಗು, ಕೊಪ್ಪಳ, ಕೋಲಾರ, ಗದಗ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ದ.ಕ. ಜಿಲ್ಲೆಯ ನಗರ ಸ್ಥಳೀಯಾಡಳಿತ ಸಂಸ್ಥೆ ಗಳು ಕ್ರಮವಾಗಿ 1ರಿಂದ 13 ಸ್ಥಾನ ಹಂಚಿ ಕೊಂಡಿವೆ. ಕೊನೆಯ ಹತ್ತು ಸ್ಥಾನಗಳನ್ನು ಬೆಂಗಳೂರು, ಬೆಂಗಳೂರು ನಗರ, ಬೆಳಗಾವಿ, ಮಂಡ್ಯ, ಮೈಸೂರು, ಯಾದಗಿರಿ, ರಾಮನಗರ, ರಾಯ ಚೂರು, ಶಿವಮೊಗ್ಗ, ಹಾವೇರಿ ಜಿಲ್ಲೆಯ ನಗರ ಸ್ಥಳೀಯಾಡಳಿತ ಸಂಸ್ಥೆಗಳು ಹಂಚಿಕೊಂಡಿವೆ.

ಇ-ಖಾತೆ ನೋಂದಣಿ:
ಗದಗ, ಉಡುಪಿಗೆ ಸ್ಥಾನ ಆಸ್ತಿ ರಕ್ಷಣೆ ಹಾಗೂ ಪಾರದರ್ಶಕತೆ ಕಾಪಾಡುವ ಉದ್ದೇಶದಿಂದ ನಗರ ಸ್ಥಳೀಯಾಡಳಿತ ಸಂಸ್ಥೆಗಳ ವ್ಯಾಪ್ತಿಯಲ್ಲಿ ಆರಂಭವಾದ ಇ- ಆಸ್ತಿ ನೋಂದಣಿ ಪ್ರಕ್ರಿಯೆಯಲ್ಲಿ ಗದಗ 33,418 ಹಾಗೂ ಉಡುಪಿ ಜಿಲ್ಲೆಯ ಒಟ್ಟು 28,394 ಆಸ್ತಿಗಳನ್ನು ಇ- ಆಸ್ತಿಯಾಗಿ ನೋಂದಣಿ ಮಾಡಿದ್ದು ಪ್ರಥಮ, ದ್ವಿತೀಯ ಸ್ಥಾನ ಪಡೆದುಕೊಂಡಿವೆ.

ಇದನ್ನೂ ಓದಿ:ಗ್ರಾಮೀಣ ಪ್ರದೇಶದಲ್ಲಿ 5ಜಿ ಸೌಲಭ್ಯ : ವಿಐ-ನೋಕಿಯಾ ಯಶಸ್ವಿ ಪ್ರಯೋಗ

ಸರ್ವರ್‌ ಸಮಸ್ಯೆ!
ಸಾರ್ವಜನಿಕರು ದಾಖಲೆ ಪೂರೈಕೆ ಮಾಡಿದರೂ ಸರ್ವರ್‌ ಸಮಸ್ಯೆಯಿಂದಾಗಿ ಪರ ದಾಡುತ್ತಿದ್ದಾರೆ. ಇನ್ನೊಂದೆಡೆ ಇ -ಖಾತೆಗೆ ಸಂಬಂಧಿಸಿದಂತೆ ಪ್ರತ್ಯೇಕ ಸಿಬಂದಿ ನೀಡದ ಹಿನ್ನೆಲೆಯಲ್ಲಿ ಕೆಲಸಗಳು ಆಮೆ ನಡಿಗೆಯಂತಾಗಿವೆ. ಉಡುಪಿ ನಗರಸಭೆಯ ಕಂದಾಯ ವಿಭಾಗದಲ್ಲಿ ಕೆಲಸ ನಿರ್ವಹಿಸಲು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಂಡು, ಅರ್ಜಿಗಳನ್ನು ವಿಲೇವಾರಿ ಮಾಡಲಾಗುತ್ತಿದೆ. ನಿತ್ಯ ಸುಮಾರು 60ಕ್ಕೂ ಅಧಿಕ ಅರ್ಜಿಗಳು ಸಲ್ಲಿಕೆಯಾಗುತ್ತಿವೆ.

ಇ- ಆಸ್ತಿ ವರ್ಗಾವಣೆಯಲ್ಲಿ ಉಡುಪಿ ಜಿಲ್ಲೆಯ ನಗರ ಸ್ಥಳೀಯಾಡಳಿತ ಸಂಸ್ಥೆಗಳು ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿವೆ. ನಗರಸಭೆಗೆ ಬಂದಿರುವ ಅರ್ಜಿಗಳನ್ನು ಶೀಘ್ರದಲ್ಲಿ ವಿಲೇವಾರಿ ಮಾಡಲಾಗುತ್ತಿದೆ. ಕೆಲವೊಮ್ಮ ತಾಂತ್ರಿಕ ಸಮಸ್ಯೆಯಿಂದ ತಡವಾಗುತ್ತಿದೆ.
– ಧನಂಜಯ, ಉಡುಪಿ ನಗರಸಭೆ

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Online Bitcoin Gambling Enterprises: An Overview to Betting with Cryptocurrency

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.