ಶಿಕ್ಷಕರ ವರ್ಗಾವಣೆ: ಮೂರು ವರ್ಷ ಸೇವೆ ಸಲ್ಲಿಸಿದವರ ಪರಿಗಣನೆಗೆ ನಿರ್ಧಾರ
Team Udayavani, Feb 9, 2023, 7:15 AM IST
ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ವರ್ಗಾವಣೆಯಲ್ಲಿ ಘಟಕ/ವಿಭಾಗದ ಹೊರಗೆ ಪರಸ್ಪರ ವರ್ಗಾವಣೆಗೆ ಸೇವಾ ವಧಿ ವೃಂದದಲ್ಲಿ ಕನಿಷ್ಠ 5 ವರ್ಷಗಳ ಸೇವೆ ಪೂರ್ಣ ಗೊಂಡಿರಬೇಕು. ಜತೆಗೆ ಕರ್ತವ್ಯನಿರತ ಸ್ಥಳ ದಲ್ಲಿ ಕನಿಷ್ಠ 3 ವರ್ಷ ಸೇವೆ ಸಲ್ಲಿಸಿರುವ ಪ್ರಕರಣ ಗಳನ್ನು ಮಾತ್ರ ಪರಿಗಣಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯಕ್ತರು ನಿರ್ದೇಶನ ನೀಡಿದ್ದಾರೆ.
2022-23ನೇ ಸಾಲಿನ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಸಂಬಂಧ ವರ್ಗಾವಣ ಪ್ರಾಧಿಕಾರಗಳು ಕೆಲವು ಅಂಶಗಳ ಬಗ್ಗೆ ಮಾರ್ಗದರ್ಶನ ಕೋರಿದ ಹಿನ್ನೆಲೆಯಲ್ಲಿ ಆಯುಕ್ತರು ಈ ಮಾಹಿತಿ ನೀಡಿದ್ದಾರೆ. ಸೇವಾವಧಿಯಲ್ಲಿ ಒಮ್ಮೆ ಆದ್ಯತೆಯ ಮೇಲೆ ವರ್ಗಾವಣೆ ಪಡೆಯಬಹುದು. ಇದು ಹೆಚ್ಚುವರಿ ವರ್ಗಾವಣೆಗೆ ಅನ್ವಯವಾಗದು.
ಪತಿ-ಪತ್ನಿ ಪ್ರಕರಣದಲ್ಲಿ ಒಬ್ಬರು ಒಂದು ಜಿಲ್ಲೆ ಯಿಂದ ಹೊರಗೆ ಕರ್ತವ್ಯ ನಿರ್ವಹಿಸುತ್ತಿದ್ದಲ್ಲಿ ಅಂಥವರಿಗೆ ಹೆಚ್ಚುವರಿಯಲ್ಲಿ ಆದ್ಯತೆ ಕೊಡಬ ಹುದು. ಜಿಪಿಟಿ ಹಾಗೂ ಪಿಎಸ್ಟಿ ಶಿಕ್ಷಕರಿಗೆ ಅವರ ನೇಮಕ ಆದೇಶದಲ್ಲಿ 5 ವರ್ಷ ಅಥವಾ 10 ವರ್ಷ ಅದೇ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುವ ಷರತ್ತು ವಿಧಿಸಿದ್ದಲ್ಲಿ ನೇಮಕ ಆದೇಶದಲ್ಲಿರುವ ಷರತ್ತಿನ ಅನ್ವಯ ಪರಿಗಣಿಸಬೇಕು.
ಸೇವಾ ಹಿರಿತನದ ಮೇಲೆ ಪರಿಗಣಿಸುವು ದಾದರೆ, ಶಿಕ್ಷಕರು ಒಂದೇ ದಿನ ಕರ್ತವ್ಯಕ್ಕೆ ಹಾಜರಾ ಗಿದ್ದಲ್ಲಿ ಜನ್ಮ ದಿನಾಂಕವನ್ನು ಪರಿಗಣಿಸಿ ಹೆಚ್ಚುವರಿ ಶಿಕ್ಷಕರನ್ನು ಗುರುತಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು