ಸಹಾಯದ ನಿರೀಕ್ಷೆಯಲ್ಲಿ ಜಿಲ್ಲೆಯ ದೈವಾರಾಧಕರು

 ದೈವಾರಾಧನೆಗೂ ಕೋವಿಡ್‌-19 ಪೆಟ್ಟು

Team Udayavani, May 15, 2020, 6:05 AM IST

ಸಹಾಯದ ನಿರೀಕ್ಷೆಯಲ್ಲಿ ಜಿಲ್ಲೆಯ ದೈವಾರಾಧಕರು

ಸಾಂದರ್ಭಿಕ ಚಿತ್ರ.

ಉಡುಪಿ/ಕಾಪು/ಹೆಬ್ರಿ: ಕೋವಿಡ್‌-19ನಿಂದ ಹಲವು ಕ್ಷೇತ್ರಗಳು ತೊಂದರೆ ಎದುರಿಸಿದೆ. ಇವುಗಳಲ್ಲಿ ದೈವಾರಾಧನೆಗೂ ಕೋವಿಡ್‌-19 ಮಾಹಾಮಾರಿ ಬಲವಾದ ಏಟು ನೀಡಿದೆ. ಇದರಲ್ಲಿ ತೊಡಗಿರುವ ಕುಟುಂಬಗಳು ಸದ್ಯ ಕಷ್ಟದ ದಿನಗಳನ್ನು ಎಣಿಸುತ್ತಿದೆ.

ಜನವರಿಯಿಂದ ಮೇ ತಿಂಗಳವರೆಗೆ ದೈವಾರಾಧನೆಯ ಪರ್ವಕಾಲವಾಗಿದ್ದು, ಈ ಸಮಯದಲ್ಲಿ ಕರಾವಳಿಯಾದ್ಯಂತ ನೇಮ, ಕೋಲ, ಅಗೆಲು ಸೇವೆಗಳು ನಡೆಯುತ್ತವೆ. ದಿನಬಿಟ್ಟು ದಿನದಂತೆ ದೈವಾರಾಧನೆಯಲ್ಲಿ ತೊಡಗಿದವರು ಈ ಕೆಲಸಗಳಲ್ಲಿ ನಿರತರಾಗಿರುತ್ತಿದ್ದರು. ಆದರೆ ಕೋವಿಡ್‌-19ನಿಂದಾಗಿ ಮುಂಜಾಗ್ರತಾ ಕ್ರಮವಾಗಿ ದೇಶಾದ್ಯಂತ ಧಾರ್ಮಿಕ ಚಟುವಟಿಕೆಯನ್ನು ನಡೆಸದಂತೆ ಸರಕಾರ ಆದೇಶ ನೀಡಿದೆ. ಇದರ ಪರಿಣಾಮ ಉಡುಪಿ ಮಂಗಳೂರು ಕರಾವಳಿ ಭಾಗದಾದ್ಯಂತ ನಡೆಯ ಬೇಕಿದ್ದ ದೈವಾರಾಧನೆಗಳು ಸಂಪೂರ್ಣ ಸ್ತಬ್ಧವಾಗಿವೆ.

ಸಾವಿರಕ್ಕೂ ಹೆಚ್ಚು ಮಂದಿ
ದೈವಾರಾಧನೆಯಲ್ಲಿ ದೈವ ನರ್ತಕರು, ದರ್ಶನ ಪಾತ್ರಿಗಳು, ಬ್ಯಾಂಡ್‌ನ‌ವರು, ವಾಲಗ, ದೀವಟಿಗೆ ಸೇರಿದಂತೆ ಇದರಲ್ಲಿ ತೊಡಗಿರುವ 16 ರೀತಿಯ ವರ್ಗ ತೊಂದರೆಗೀಡಾಗಿದೆ. ಉಡುಪಿಯಲ್ಲಿ 2ಸಾವಿರ ಮಂದಿ ಇದ್ದು, ದ.ಕನ್ನಡ ಜಿಲ್ಲೆಯಲ್ಲಿ ಇದರ ದುಪ್ಪಟ್ಟು ಮಂದಿ ಇದ್ದಾರೆ. ಈ ವೃತ್ತಿಯಲ್ಲಿ ತೊಡಗಿಕೊಂಡವರು ತಮ್ಮದೆ ಸಾಂಪ್ರದಾಯಿಕ ಚೌಕಟ್ಟು ಇರುವುದರಿಂದ ಇವರಿಗೆ ಇತರ ವೃತ್ತಿಯಲ್ಲಿ ತೊಡುಗುವುದು ಕಷ್ಟ ಸಾಧ್ಯ.

ಇವರಲ್ಲಿ ಹೆಚ್ಚಿನವರು ತಮ್ಮ ತೊಂದರೆಗಳನ್ನು ಇತರರಲ್ಲಿ ತೋಡಿ ಕೊಳ್ಳುವುದು ಅಪರೂಪ. ಈ ಎಲ್ಲ ಕಾರಣದಿಂದ ಈ ವೃತ್ತಿಯಲ್ಲಿ ತೊಡಗಿರುವವರು ತೆರೆಮರೆಯಂತಾಗಿದ್ದು, ಭರವಸೆಯ ದಿನವನ್ನು ಮಾತ್ರ ಎದುರು ನೋಡುವಂತಾಗಿದೆ.

ಮಳೆಗಾಲದಲ್ಲಿ ಜೀವನ ಕಷ್ಟ
ಲಾಕ್‌ಡೌನ್‌ ಸಡಿಲಿಕೆಗೊಂಡರೂ ದೈವಾರಾಧನೆಯ ಸೀಜನ್‌ ಈಗಾಗಲೇ ಮುಗಿದಿರುವುದರಿಂದ ಮುಂದಿನ ಒಂದು ವರ್ಷ ಸಂಕಷ್ಟ ಅನುಭವಿಸುವ ಅನಿವಾರ್ಯ ಸ್ಥಿತಿ ಉಂಟಾಗಿದೆ. ಲಾಕ್‌ಡೌನ್‌ ಅವಧಿಯಾದ ಮಾರ್ಚ್‌ ನಿಂದ ಮೇ ವರೆಗೆ ಯಾವುದೇ ಕಾರ್ಯಕ್ರಮಗಳನ್ನು ನಡೆಯದೆ ಆರ್ಥಿಕವಾಗಿ ತೊಂದರೆ ಅನುಭವಿಸಿರುವ ಇವರು ಈ ಮಳೆಗಾಲದಲ್ಲಿ ಹೇಗೆ ಜೀವನಸಾಗಿಸುವುದೆಂಬ ಆತಂಕದಲ್ಲಿದ್ದಾರೆ.

ಇದರ ಜತೆಗೆ ಪರವೂರುಗಳಲ್ಲಿ ಇರುವ ಮಂದಿ ಎಲ್ಲ ಊರು ಸೇರುತ್ತಿರುವುದರಿಂದ ಬೇರೆ ಉದ್ಯೋಗ ಮಾಡುವ ಸಾಧ್ಯತೆಯೂ ಕಡಿಮೆ ಎಂದು ದೈವಾರಾಧನೆಯಲ್ಲಿ ತೊಡಗಿರುವವರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ಪ್ರಯತ್ನ
ದೈವಾರಾಧಕರು ಎದುರಿಸುತ್ತಿರುವ ಸಂಕಷ್ಟದ ಬಗ್ಗೆ ಸರಕಾರದ ಗಮನ ಸೆಳೆಯುವ ಬಗ್ಗೆ ನಮ್ಮಲ್ಲಿ ಮನವಿಯನ್ನು ನೀಡಿದ್ದಾರೆ. ದೈವಾರಾಧಕರಿಗೂ ಆರ್ಥಿಕ ಸಹಕಾರ ನೀಡುವಂತೆ ಮೊರೆಯಿತ್ತಿದ್ದಾರೆ. ಈ ಬಗ್ಗೆ ಸರಕಾರದ ಗಮನ ಸೆಳೆಯುವ ಪ್ರಯತ್ನ ನಡೆಸಿದ್ದೇನೆ. ಮುಜರಾಯಿ ಇಲಾಖೆ ಹೊರತಾಗಿಯೂ ಸರಕಾರದ ಮಟ್ಟದಲ್ಲಿ ಯಾವ ರೀತಿಯಲ್ಲಿ ಸಹಕಾರ ನೀಡಬಹುದು ಎನ್ನುವುದರ ಬಗ್ಗೆ ಚರ್ಚೆ ನಡೆಸುತ್ತಿದೆ. ದೈವಾರಾಧಕರ ಬಗ್ಗೆ ಸಹಾನುಭೂತಿ ಇಟ್ಟುಕೊಂಡು ಸರಕಾರ ಮನವಿ ಪರಿಶೀಲನೆಗೆ ಮುಂದಾಗುತ್ತದೆ ಎಂಬ ವಿಶ್ವಾಸವಿದೆ.
-ಕೋಟ ಶ್ರೀನಿವಾಸ ಪೂಜಾರಿ,
ಮುಜರಾಯಿ ಸಚಿವರು, ಕರ್ನಾಟಕ ಸರಕಾರ

ಪರಿಹಾರ ಸಿಕ್ಕಿಲ್ಲ
ಜನವರಿಯಿಂದ ಮೇ ವರೆಗೆ ಅತೀ ಹೆಚ್ಚು ದೈವಾರಧನೆಗಳು ನಡೆಯುತ್ತದೆ. ಆದರೆ ಲಾಕ್‌ಡೌನ್‌ನಿಂದ ಎಲ್ಲ ಧಾರ್ಮಿಕ ಚಟುವಟಿಕೆ ನಿಂತಿದೆ. ದೈವಾರಾಧನೆ ಮೂಲಕವೇ ಜೀವನ ಸಾಗಿಸುತ್ತಿರುವ ಮಂದಿಗೆ ತೊಂದರೆ ಉಂಟು ಮಾಡಿದೆ. ಮತ್ತು ಇವರಲ್ಲಿ ಕೃಷಿ ಭೂಮಿ ಇಲ್ಲ. ಕೇವಲ 5 ಸೆಂಟ್ಸ್‌ ಜಾಗದಲ್ಲಿ ವಾಸಿಸುತ್ತಿದ್ದಾರೆ. ಜೂನ್‌ ಬಳಿಕ ಸೀಜನ್‌ ಮುಗಿಯುವುದರಿಂದ ಉದ್ಯೋಗ ಇಲ್ಲದಂತಾಗಿ ಮುಂದಿನ ಜನವರಿವರೆಗೆ ಪರಿತಪಿಸುವಂತಾಗಿದೆ. ಈ ಬಗ್ಗೆ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್‌ ಪೂಜಾರಿ, ಶಾಸಕರ ಮೂಲಕ ಸರಕಾರದ ಗಮನಕ್ಕೆ ತರಲಾಗಿದೆ. ಆದರೆ ಯಾವುದೇ ಪರಿಹಾರ ಇಲ್ಲಿಯವರೆಗೆ ಘೋಷಣೆಯಾಗಿಲ್ಲ.
-ಎಂ.ಡಿ. ವೆಂಕಪ್ಪ,
ಗೌರವಾಧ್ಯಕ್ಷ ಪಾಣ ಯಾನೆ ನಲಿಕೆ ಸಮಾಜ ಸೇವಾ ಸಂಘ, ಮಂಗಳೂರು.

ಟಾಪ್ ನ್ಯೂಸ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.