ತುಮಕೂರಲ್ಲಿ ಎಂ.ಎಸ್. ನಿರಂಜನ್ ಬಾಬು ಮನೆ ಮೇಲೆ ಎಸಿಬಿ ಅಧಿಕಾರಿಗಳ ದಾಳಿ
Team Udayavani, Aug 27, 2020, 10:26 AM IST
ತುಮಕೂರು: ಬೆಂಗಳೂರಿನಲ್ಲಿ ಎಂ.ಎಸ್. ನಿರಂಜನ್ ಬಾಬು ಮನೆ ಮೇಲೆ ಎಸಿಬಿ ಅಧಿಕಾರಿಗಳ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಅವರ ತುಮಕೂರಿನ ಮನೆಯ ಮೇಲೆಯೂ ಎಸಿಬಿ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ. ಮಾರುತಿ ನಗರ ದಲ್ಲಿರುವ ಅಮೃತ ವರ್ಷಿಣಿ ಮನೆಯ ಮೇಲೆ ದಿಢೀರನೆ ದಾಳಿ ನಡೆಸಿದ್ದಾರೆ. ಈ ವೇಳೆ ಮನೆಯಲ್ಲಿದ್ದ ಕಂಪ್ಯೂಟರ್, ಪ್ರಿಂಟರ್, ದಾಖಲೆ ಪತ್ರಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಐವರು ಎಸಿಬಿ ಅಧಿಕಾರಿಗಳ ತಂಡದಿಂದ ದಾಖಲಾತಿಗಳ ಪರಿಶೀಲನೆ ನಡೆಸಲಾಗಿದೆ ವೇಳೆ ಕೆಲವು ಮಹತ್ವದ ದಾಖಲೆಗಳು ದೊರೆತ್ತಿವೆ ಎನ್ನಲಾಗಿದೆ.