ಬೆಂಗಳೂರು ಫ‌ುಟ್ಬಾಲ್ ‌ಕ್ರೀಡಾಂಗಣಕ್ಕೆ ಹೊಸ ಟರ್ಫ್


Team Udayavani, Jun 13, 2020, 10:02 AM IST

ಬೆಂಗಳೂರು ಫ‌ುಟ್ಬಾಲ್‌ಗೆ ಹೊಸ ಟರ್ಫ್

ಬೆಂಗಳೂರು ಫ‌ುಟ್‌ಬಾಲ್‌ ಕ್ರೀಡಾಂಗಣಕ್ಕೆ ಬೃಹತ್‌ ಯಂತ್ರಗಳ ಸಹಾಯದಿಂದ ಹೊಸ ಟರ್ಫ್ ಅಳವಡಿಕೆ ಮಾಡುತ್ತಿರುವ ಸಿಬ್ಬಂದಿ.

ಬೆಂಗಳೂರು: ಉದ್ಯಾನನಗರಿಯಲ್ಲಿರುವ ಬೆಂಗಳೂರು ಫ‌ುಟ್‌ಬಾಲ್‌ ಕ್ರೀಡಾಂಗಣಕ್ಕೆ ಹೊಸ ಟರ್ಫ್ ಅಳವಡಿಕೆ ಕಾರ್ಯ ವೇಗವಾಗಿ ಸಾಗುತ್ತಿದೆ. ಇನ್ನೊಂದು ವಾರದಲ್ಲಿ ಕಾಮಗಾರಿ ಪೂರ್ಣಗೊಳ್ಳುವ ವಿಶ್ವಾಸವಿದೆ ಎಂದು ಕರ್ನಾಟಕ ರಾಜ್ಯ ಫ‌ುಟ್‌ಬಾಲ್‌ ಸಂಸ್ಥೆ ಪ್ರಧಾನ ಕಾರ್ಯದರ್ಶಿ ಎಂ. ಸತ್ಯನಾರಾಯಣ್‌ ತಿಳಿಸಿದ್ದಾರೆ.

ಉದಯವಾಣಿಗೆ ಜತೆಗೆ ದೂರವಾಣಿ ಮೂಲಕ ಮಾತನಾಡಿದ ಸತ್ಯನಾರಾಯಣ್‌ ಅವರು, “ಈ ಹಿಂದೆ 2011ರಲ್ಲಿ ಬೆಂಗಳೂರು ಫ‌ುಟ್‌ಬಾಲ್‌ ಕ್ರೀಡಾಂಗಣಕ್ಕೆ ಟರ್ಫ್ ಅಳವಡಿಕೆ ಮಾಡಲಾಗಿತ್ತು, ಅಂದು ಫಿಫಾ ವತಿಯಿಂದಲೇ ಟರ್ಫ್ ಅಳವಡಿಕೆಯಾಗಿತ್ತು, ಆದರೆ ಈ ಸಲ ಕರ್ನಾಟಕ ಫ‌ುಟ್‌ಬಾಲ್‌ ಸಂಸ್ಥೆ ತನ್ನದೇ ಹಣದಲ್ಲಿ ಕ್ರೀಡಾಂಗಣಕ್ಕೆ ಟರ್ಫ್ ಖರೀದಿ ಮಾಡಿದೆ. ಒಟ್ಟಾರೆ 1.75 ಕೋಟಿ ರೂ. ಟರ್ಫ್ ಖರೀದಿಗೆ ವೆಚ್ಚವಾಗಿದೆ, ಕೊರೊನಾದಿಂದಾಗಿ ಲಾಕ್‌ಡೌನ್‌ ಆಗುವ ಎರಡು ದಿನಕ್ಕೆ ಮೊದಲು ಇಟಲಿಯಿಂದ ಬೆಂಗಳೂರಿಗೆ ಟರ್ಫ್ ಬಂದಿತ್ತು, ಅದು ನಮ್ಮ ಅದೃಷ್ಟ, ಸ್ವಲ್ಪ ತಡವಾಗಿದ್ದರೂ ಇಂದು ಕಾಮಗಾರಿ ಕೆಲಸವನ್ನು ಇಷ್ಟು ವೇಗವಾಗಿ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಮುಂದಿನ ನಾಲ್ಕೈದು ದಿನಗಳಲ್ಲಿ ಕಾಮಗಾರಿ ಪೂರ್ಣಗೊಳ್ಳುವ ವಿಶ್ವಾಸವಿದೆ’ ಎಂದು ತಿಳಿಸಿದರು.

ಮುಂಜಾಗ್ರತೆ ಕ್ರಮ: ಇಟಲಿಯಲ್ಲಿ ಕೊರೊನಾ ಹೆಚ್ಚಿದ್ದರ ಹಿನ್ನೆಲೆಯಲ್ಲಿ ಅಲ್ಲಿಂದ ಬಂದಿರುವ ಟರ್ಫ್ ಅನ್ನು ಅಗತ್ಯ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡು ಬಳಸಿಕೊಳ್ಳಲಾಗುತ್ತಿದೆ. ಹಳೆ ಟರ್ಫ್ ಅನ್ನು ತೆಗೆಯುವ ಕೆಲಸ ಸಾಗುತ್ತಿದೆ, ಬಹುತೇಕ  ಈ ಕೆಲಸ ಪೂರ್ಣಗೊಳ್ಳುತ್ತಿದೆ, ಅಳವಡಿಕೆ ಮಾಡುವುದಕ್ಕೆಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ, ಒಟ್ಟಾರೆ ಎಂದರೂ 20 ದಿನದ ಕೆಲಸವಷ್ಟೇ ಸಾಕು, ಈಗಾಗಲೇ ಕ್ರೀಡಾಂಗಣದ ಒಟ್ಟಾರೆ ವಿಸ್ತೀರ್ಣದಷ್ಟು ಹೊಸ ಟರ್ಫ್ ಇದೆ, ಅದನ್ನು ಅಳವಡಿಕೆ ಮಾಡುವುದಷ್ಟೇ ಕೆಲಸ’ ಎಂದು ಸತ್ಯ ತಿಳಿಸಿದರು.

ಏನಿದು ಟರ್ಫ್?
ನೈಸರ್ಗಿಕವಾಗಿರುವ ಹುಲ್ಲಿನಿಂದ ಮಾಡಲ್ಪಟ್ಟ ಹೊದಿಕೆಯನ್ನು ಕ್ರೀಡಾಂಗಣಕ್ಕೆ ಅಳವಡಿಸಿದರೆ ಅದರಲ್ಲಿ ದಿನವೊಂದಕ್ಕೆ ಹೆಚ್ಚು ಪಂದ್ಯಗಳನ್ನು ಆಡಿಸಲು ಸಾಧ್ಯವಿಲ್ಲ, ದಿನಕ್ಕೆ 1 ಪಂದ್ಯ ಮಾತ್ರ ಆಡಿಸಬಹುದು, ಬಳಿಕ ನೀರು ಹಾಕಿ ಹುಲ್ಲಿನ ಹೊದಿಕೆಯನ್ನು ನಿರ್ವಹಣೆ ಮಾಡಬೇಕಾಗುತ್ತದೆ, ಇದಕ್ಕೆಲ್ಲ ಹೆಚ್ಚು ಸಮಯ ಹಿಡಿಯುತ್ತದೆ, ಆದರೆ ಕೃತಕ ಹುಲ್ಲಿನ ಹಾಸಿನಲ್ಲಿ ಹಾಗಲ್ಲ, ದಿನವೊಂದಕ್ಕೆ 10 ಪಂದ್ಯಗಳನ್ನು ಬೇಕಾದರೂ ಆಡಿಸಬಹುದು, ಇದರಿಂದ ಕೃತಕ ಹುಲ್ಲು ಹಾಸಿಗೆ ಹಾನಿಯಾಗುವುದಿಲ್ಲ, ಕರ್ನಾ ಟಕ ಫ‌ುಟ್‌ಬಾಲ್‌ ಸಂಸ್ಥೆ ಅಡಿಯಲ್ಲಿ 150ಕ್ಕೂ ಹೆಚ್ಚು ಕ್ಲಬ್‌ ತಂಡಗಳಿವೆ, ಪ್ರತಿ ತಂಡಗಳಿಗೂ ಆಡುವ ಅವಕಾಶ ಕಲ್ಪಿಸಬೇಕಾಗು ತ್ತದೆ, ಹೀಗಾಗಿ ಕೃತಕ ಹುಲ್ಲಿನಿಂದ ಮಾಡಲ್ಪಟ್ಟ ಹೊದಿಕೆಯನ್ನು ಕ್ರೀಡಾಂಗಣಕ್ಕೆ ಹಾಕುವುದರಿಂದ ನಿರ್ವಹಣೆಯೂ ಕಡಿಮೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.