ಕನಿಷ್ಠ 2,700 ಮಂದಿ ಸಾವು; 24 ತಾಸುಗಳ ಅವಧಿಯಲ್ಲಿ ಹಲವು ಬಾರಿ ಪಶ್ಚಾತ್ ಕಂಪನ
ಟರ್ಕಿ, ಸಿರಿಯಾದಲ್ಲಿ 7.8, 7.6 ತೀವ್ರತೆಯ ಅವಳಿ ಭೂಕಂಪ
Team Udayavani, Feb 7, 2023, 6:55 AM IST
ಇಸ್ತಾಂಬುಲ್/ಅಜ್ಮರಿನ್: ನೈಋತ್ಯ ಟರ್ಕಿ ಮತ್ತು ಉತ್ತರ ಸಿರಿಯಾದಲ್ಲಿ ಸೋಮವಾರ ಸಂಭವಿಸಿದ ಪ್ರಬಲ ಭೂಕಂಪಗಳಿಂದ ಕನಿಷ್ಠ 2,700 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
ಸೋಮವಾರ ಬೆಳಗಿನ ಜಾವ 4.17ಕ್ಕೆ ಬಹುತೇಕರು ಮುಂಜಾನೆಯ ಸವಿನಿದ್ರೆಯಲ್ಲಿದ್ದಾಗಲೇ ಭೂಮಿತಾಯಿ ರುದ್ರನರ್ತನಗೈದಿದ್ದು, ಕಣ್ಣುಬಿಡುವ ಮೊದಲೇ ಸಾವಿರಾರು ಮಂದಿ ಮಣ್ಣಾಗಿದ್ದಾರೆ. ಇನ್ನೂ ನೂರಾರು ಮಂದಿ ಅವಶೇಷಗಳಡಿ ಸಿಲುಕಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಎಲ್ಲ ಸಾಧ್ಯತೆಗಳು ಇವೆ.
ಸ್ಥಳೀಯ ಕಾಲಮಾನ ಮುಂಜಾನೆ 4.17ಕ್ಕೆ ಮೊದಲ ಭೂಕಂಪ ಸಂಭವಿಸಿದರೆ, ಕೆಲವೇ ತಾಸುಗಳ ಬಳಿಕ 7.5ರ ತೀವ್ರತೆಯಲ್ಲಿ ಮತ್ತೂಂದು ಭೂಕಂಪ ಉಂಟಾಗಿದೆ. ಸೂರ್ಯ ಮುಳುಗುವ ಹೊತ್ತಿಗೆ ಮತ್ತೊಂದು ಬಾರಿ ಭೂಮಿ ಕಂಪಿಸಿದೆ. ಇದಲ್ಲದೆ 50ಕ್ಕೂ ಅಧಿಕ ಪಶ್ಚಾತ್ ಕಂಪನಗಳು ಸಂಭವಿಸಿವೆ. ಭೂಕಂಪದ ತೀವ್ರತೆ ಎಷ್ಟಿತ್ತೆಂದರೆ ಟರ್ಕಿಯಿಂದ ಸುಮಾರು 5,500 ಕಿ.ಮೀ. ದೂರದಲ್ಲಿರುವ ಗ್ರೀನ್ಲ್ಯಾಂಡ್ ನಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ.
ಭೂಮಿಯು ಅಲುಗಾಡುತ್ತಿರುವ ಅನುಭವವಾಗುತ್ತಿದ್ದಂತೆ ಕೆಲವರು ಮನೆ, ಕಟ್ಟಡಗಳಿಂದ ಹೊರಗೆ ಓಡಿ ಬಂದಿದ್ದಾರೆ. ಅವರ ಕಣ್ಣೆದುರೇ ಮನೆಗಳು, ಕಟ್ಟಡಗಳು, ಮರ ಗಳು ಧರೆಗುರುಳಿವೆ. ತೀವ್ರ ಚಳಿ ಹಾಗೂ ಮಂಜಿನ ಮಳೆಯ ನಡುವೆ ಅನೇಕರು ತಮ್ಮವರನ್ನು ರಕ್ಷಿಸಲು ಹೆಣಗಾಡುತ್ತಿದ್ದ, ಅವಶೇಷಗಳಡಿಯಿಂದ ಹೊರಗೆಳೆ ಯಲು ಯತ್ನಿಸುತ್ತಿದ್ದ ದೃಶ್ಯಗಳು ಮನಕಲಕುವಂತಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಭಾರತದಿಂದ ರಕ್ಷಣ ತಂಡ ರವಾನೆ
ಭೂಕಂಪ ಪೀಡಿತ ರಾಷ್ಟ್ರಗಳಿಗೆ ಎಲ್ಲ ರೀತಿಯಲ್ಲೂ ಸಹಾಯ ಮಾಡುವುದಾಗಿ ಪ್ರಧಾನಿ ಮೋದಿ ಘೋಷಿಸಿದ ಬೆನ್ನಲ್ಲೇ ಸರಕಾರವು ಟರ್ಕಿಗೆ ರಾಷ್ಟ್ರೀಯ ವಿಪತ್ತು ನಿರ್ವಹಣ ಪಡೆಯ ಶೋಧ ಮತ್ತು ರಕ್ಷಣ ತಂಡಗಳು, ವೈದ್ಯಕೀಯ ತಂಡಗಳು ಮತ್ತು ಪರಿಹಾರ ಸಾಮಗ್ರಿಗಳನ್ನು ತತ್ಕ್ಷಣವೇ ಕಳುಹಿಸಿಕೊಟ್ಟಿದೆ.
ಭೂಕಂಪದಿಂದ ಉಂಟಾದ ಅಪಾರ ಸಾವು ನೋವಿನ ಸುದ್ದಿ ಕೇಳಿ ದುಃಖವಾಯಿತು. ಸಂತ್ರಸ್ತರ ಕುಟುಂಬಗಳಿಗೆ ಸಾಂತ್ವನ ಹೇಳುತ್ತೇನೆ. ಟರ್ಕಿ ಮತ್ತು ಸಿರಿಯಾದ ಜನರಿಗೆ ಬೆಂಬಲವಾಗಿ ಭಾರತ ನಿಲ್ಲುತ್ತದೆ.
– ನರೇಂದ್ರ ಮೋದಿ, ಪ್ರಧಾನಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ