
ಮೀನು ತಿಂದು ದೇವಸ್ಥಾನಕ್ಕೆ ಹೋದವರಿಂದ ಪ್ರಧಾನಿ ಮೋದಿಗೆ ಸಂಸ್ಕೃತಿಯ ಪಾಠ ಅಗತ್ಯವಿಲ್ಲ!
ಮಾಜೀ ಮುಖ್ಯಮಂತ್ರಿ ಸಿದ್ದರಾಮಯ್ಯ - ಬಿಜೆಪಿ ನಡುವೆ ಟ್ವೀಟ್ ವಾರ್
Team Udayavani, Jan 3, 2020, 6:24 PM IST

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ತುಮಕೂರು ಸಿದ್ದಗಂಗಾ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜಕೀಯ ವಿಚಾರ ಮಾತನಾಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ ಟೀಕಿಸಿರುವುದಕ್ಕೆ ಬಿಜೆಪಿ ಕರ್ನಾಟಕ ಟ್ವೀಟ್ ಮೂಲಕವೇ ತಿರುಗೇಟು ನೀಡಿದೆ.
ಮೀನು ತಿಂದು ದೇವಸ್ಥಾನಕ್ಕೆ ಪ್ರವೇಶ ಮಾಡಿದ ಸಿದ್ದರಾಮಯ್ಯ ಈ ನೆಲದ ಸಂಸ್ಕೃತಿ ಪಾವಿತ್ರ್ಯತೆಯ ಬಗ್ಗೆ ಪ್ರಧಾನಿ ನರೇಂದ್ರಮೋದಿ ಅವರಿಗೆ ಪಾಠ ಮಾಡುತ್ತಿರುವುದು ವಿಪರ್ಯಾಸ. ಪವಿತ್ರವಾದ ಕುಂಕುಮ ಕಂಡರೆ ಭಯಪಡುವ ಹಾಗೂ ಮಕ್ಕಳ ನಡುವೆ ವಿಷ ಬೀಜ ಬಿತ್ತುವ ಸಿದ್ದರಾಮಯ್ಯನವರ ಮನಸ್ಸಿನ ಕೊಳೆಯಲ್ಲಿ ತಾಯಿ ಗಂಗೆಯಿಂದಲೂ ತೊಳೆಯಲು ಸಾಧ್ಯವಿಲ್ಲ’ ಎಂದು ಟ್ವೀಟ್ ಮಾಡಿದೆ.
ಮೀನು ತಿಂದು ದೇವಸ್ಥಾನಕ್ಕೆ ಪ್ರವೇಶ ಮಾಡಿದ @siddaramaiah ಈ ನೆಲದ ಸಂಸ್ಕೃತಿ, ಪಾವಿತ್ರ್ಯತೆಯ ಬಗ್ಗೆ ಪ್ರಧಾನಿ @narendramodi ಅವರಿಗೆ ಪಾಠ ಮಾಡುತ್ತಿರುವುದು ವಿಪರ್ಯಾಸ.
ಪವಿತ್ರವಾದ ಕುಂಕುಮ ಕಂಡರೆ ಭಯಪಡುವ ಹಾಗೂ ಮಕ್ಕಳ ನಡುವೆ ವಿಷ ಬೀಜ ಬಿತ್ತುವ ಸಿದ್ದರಾಮಯ್ಯನವರ ಮನಸ್ಸಿನ ಕೊಳೆಯನ್ನು ತಾಯಿ ಗಂಗೆಯಿಂದಲೂ ತೊಳೆಯಲು ಸಾಧ್ಯವಿಲ್ಲ. https://t.co/wkYgCzxdRJ
— BJP Karnataka (@BJP4Karnataka) January 2, 2020
ಮತ್ತೊಂದೆಡೆ ಸಚಿವ ಸುರೇಶ್ಕುಮಾರ್ ಅವರು ಸಹ ಟ್ವೀಟ್ ಮಾಡಿ, ಸಿದ್ದರಾಮಯ್ಯ ಅವರ ಕಾಳೆಲೆದಿದ್ದು, ಕೊಳಕು ರಾಜಕೀಯದಲ್ಲಿಯೇ ಸದಾ ಮುಳುಗಿರುವವರಿಗೆ ಶುದ್ಧ ಸರೋವರದಲ್ಲಿಯೂ ಕೊಳಕೇ ಕಾಣುವುದು ಸಹಜ ಎಂದು ಹೇಳಿದ್ದಾರೆ.
ಕೊಳಕು ರಾಜಕೀಯದಲ್ಲಿಯೇ ಸದಾ ಮುಳುಗಿರುವವರಿಗೆ ಶುದ್ಧ ಸರೋವರದಲ್ಲಿಯೂ ಕೊಳಕೇ ಕಾಣುವುದು ಅತ್ಯಂತ ಸಹಜ. https://t.co/mXY5tVouJw
— S.Suresh Kumar, Minister – Govt of Karnataka (@nimmasuresh) January 2, 2020
ತುಮಕೂರಿನ ಸಿದ್ದಗಂಗಾ ಮಠಕ್ಕೆ ಜಾತ್ಯತೀತ ಮತ್ತು ಪಕ್ಷಾತೀತವಾದ ಗೌರವದ ಸ್ಥಾನವಿದೆ. ಈ ಕಾರಣಕ್ಕಾಗಿಯೇ ಅದು ಸರ್ವರೂ ಭಕ್ತಿಯಿಂದ ನಮಿಸುವ ಕ್ಷೇತ್ರ. ಅಂತಹ ಕ್ಷೇತ್ರದಲ್ಲಿ ಎಳೆಯ ಮಕ್ಕಳನ್ನು ಕುಳ್ಳರಿಸಿಕೊಂಡು ಕೊಳಕು ರಾಜಕೀಯ ಭಾಷಣ ಮಾಡಿದ ನರೇಂದ್ರಮೋದಿಯವರೇ ನಿಮ್ಮನ್ನು ಆ ಪವಿತ್ರ ನೆಲ ಕ್ಷಮಿಸದು ‘ಅಲ್ಲಿ ಮೋದಿಯವರು ರಾಜಕೀಯ ವಿಚಾರ ಮಾತನಾಡಿರುವುದು ಸರಿಯಲ್ಲ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.
ತುಮಕೂರಿನ ಸಿದ್ದಗಂಗಾ ಮಠಕ್ಕೆ ಜಾತ್ಯತೀತ ಮತ್ತು ಪಕ್ಷಾತೀತವಾದ ಗೌರವದ ಸ್ಥಾನ ಇದೆ.
ಈ ಕಾರಣಕ್ಕಾಗಿಯೇ ಅದು ಸರ್ವರೂ ಭಕ್ತಿಯಿಂದ ನಮಿಸುವ ಕ್ಷೇತ್ರ.ಇಂತಹ ಕ್ಷೇತ್ರದಲ್ಲಿ ಎಳೆಯ ಮಕ್ಕಳನ್ನು ಕೂರಿಸಿಕೊಂಡು ಕೊಳಕು ರಾಜಕೀಯದ ಭಾಷಣ ಮಾಡಿದ @narendramodi ಅವರೇ, ನಿಮ್ಮನ್ನು ಆ ಪವಿತ್ರ ನೆಲ ಕ್ಷಮಿಸದು.
— Siddaramaiah (@siddaramaiah) January 2, 2020
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೆಡಿಎಸ್ ಅಧಿಕಾರಕ್ಕೆ ಬಂದರೆ ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ : ಕುಮಾರಸ್ವಾಮಿ

ಡಿಕೆಶಿ, ಯುವತಿ ಸೇರಿ ಸಿಡಿ ಗ್ಯಾಂಗ್ ಬಂಧಿಸಲು ರಮೇಶ ಜಾರಕಿಹೊಳಿ ಒತ್ತಾಯ

ಗಾಂಧಿ ಮಾರ್ಗದಲ್ಲಿ ನಡೆಯುವ ಸಂಕಲ್ಪವನ್ನು ಮಾಡಬೇಕು: ಸಿಎಂ ಬಸವರಾಜ ಬೊಮ್ಮಾಯಿ

ಹವಾಮಾನ ವೈಪರೀತ್ಯದಿಂದ ವಿಮಾನ ಹಾರಾಟ ರದ್ದು: ಸಿದ್ದರಾಮಯ್ಯ ಶ್ರೀನಗರ ಪ್ರವಾಸ ರದ್ದು

ಹೈದರಾಬಾದ್: ಖ್ಯಾತ ಕವಿ, ವಿಮರ್ಶಕ, ಕತೆಗಾರ ಕೆ.ವಿ.ತಿರುಮಲೇಶ್ ವಿಧಿವಶ
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
