ಹನ್ನೆರಡು ದಿನ ನಿರಂತರ ಪಾರಾಯಣ, ಭಜನೆ, ಗೋಷ್ಠಿ


Team Udayavani, Dec 31, 2019, 3:07 AM IST

hanneradu

ಬೆಂಗಳೂರು: ಪೇಜಾವರ ಶ್ರೀಗಳು ವೃಂದಾವನಸ್ಥರಾದ ಹಿನ್ನೆಲೆಯಲ್ಲಿ ಕತ್ರಿ ಗುಪ್ಪೆಯ ಪೂರ್ಣಪ್ರಜ್ಞಾ ವಿದ್ಯಾಪೀಠದಲ್ಲಿ ಮುಂದಿನ 12 ದಿನಗಳು ಭಜನೆ, ಪಾರಾ ಯಣ ಹಾಗೂ ವಿದ್ವಾಂಸರ ಗೋಷ್ಠಿಗಳು ಅಖಂಡವಾಗಿ ನಡೆ ಯಲಿದೆ ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥರು ಹೇಳಿದರು.

ಪೂರ್ಣಪ್ರಜ್ಞಾ ವಿದ್ಯಾಪೀಠ ದಲ್ಲಿ ಸೋಮವಾರ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿ, ಗುರುಗಳು ಹರಿಪಾದ ಸೇರಿ ದಿನಗಳು ಕಳೆದಿದೆ. ಗುರು ಗಳ ಮೇಲಿನ ಗೌರವದಿಂದ ಸರ್ಕಾರ, ಅಧಿಕಾರಿಗಳು, ನಾಡಿನ ಸಮಸ್ತ ಜನತೆ ಪಾರ್ಥಿವ ಶರೀರಕ್ಕೆ ಸಂಸ್ಕಾರ ಅರ್ಪಿಸಿದ್ದಾರೆ. ಮುಂದಿನ 12 ದಿನಗಳ ಕಾಲ ಭಜನೆ, ಪಾರಾಯಣ, ವಿದ್ವಾಂಸರ ಗೋಷ್ಠಿ ನಿರಂತರವಾಗಿ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಸರ್ಕಾರವು ಗುರುಗಳ ಸಾಧನೆ ಗಮನಿಸಿ, ಸಕಲ ಸರ್ಕಾರಿ ಗೌರವ ನೀಡಿದೆ. ಇದಕ್ಕಾಗಿ ಸರ್ಕಾರ, ಅಧಿಕಾರಿ ವರ್ಗವನ್ನು ಅಭಿನಂದಿಸುತ್ತೇವೆ. ಎಲ್ಲ ವ್ಯವಸ್ಥೆಯೂ ಸುಸೂತ್ರವಾಗಿ ನಡೆದಿದೆ. ನಾಡಿನಾದ್ಯಂತ ಇರುವ ಸಹಸ್ರಾರು ಭಕ್ತರು ಅಂತಿಮ ದರ್ಶನ ಪಡೆದು, ಗೌರವ ನಮನ ಅರ್ಪಿಸಿ ದ್ದಾರೆ. ಎಲ್ಲರಿಗೂ ಕೃಷ್ಣನ ಅನು ಗ್ರಹವನ್ನು ಪ್ರಾರ್ಥಿಸುವುದಾಗಿ ಹೇಳಿದರು.

ವಿದ್ಯಾಪೀಠದ ವಿದ್ವಾಂಸರಾದ ಹರಿ ದಾಸ ಭಟ್‌ ಮಾತನಾಡಿ, 12ನೇ ದಿನ ದ್ವಾದಶ ಮೂರ್ತಿ ಆರಾಧನೆ, 12 ಮಂದಿ ಯತಿ ಅರ್ಹ ವಿದ್ವಾಂಸರಿಂದ ವಿಶೇಷವಾಗಿ ಆರಾಧನೆ ಮಾಡಲಾಗುತ್ತದೆ. ಜಯನಗರ ದಲ್ಲಿರುವ ಆಸ್ಪತ್ರೆಯಲ್ಲಿ ಜನ ಸಾಮಾನ್ಯರಿಗೆ ಉಚಿತ ವೈದ್ಯಕೀಯ ತಪಾಸಣೆ ಮತ್ತು ಚಿಕಿತ್ಸೆ ನೀಡಲಾಗುತ್ತದೆ. 13ನೇ ದಿನ ಶ್ರೀಗಳ ಸಂಕಲ್ಪ ನಡೆಯಲಿದೆ.

ಬೆಂಗಳೂರಿನ ಆಸು ಪಾಸಿನಲ್ಲಿರುವ ಹಿಂದುಳಿದ ವರ್ಗದ ಪ್ರದೇಶದಲ್ಲಿ ಅನ್ನ ಸಂತರ್ಪಣೆ ಹಾಗೂ ವಿದ್ಯಾಪೀಠದಲ್ಲಿ ಭಕ್ತಾದಿಗಳಿಗೆ ಸಾರ್ವಜನಿಕವಾಗಿ ಮಹಾ ಅನ್ನ ಸಂತರ್ಪಣೆ ನಡೆಸಲಾಗುತ್ತದೆ ಎಂದರು. ಶ್ರೀಗಳ ಕಾರ್ಯ ಸಾಧನೆಯನ್ನು ವರ್ಷ ಪೂರ್ತಿ ನಾಡಿನಾದ್ಯಂತ ಅವರ ಸ್ಮರಣೆಯ ಕಾರ್ಯ ನಡೆಸಲು ವಿಶ್ವಪ್ರಸನ್ನ ತೀರ್ಥರು ಯೋಜನೆ ರೂಪಿಸಿಕೊಂಡಿದ್ದಾರೆ ಎಂದು ಹೇಳಿದರು.

ದೇವರ ಅನುಗ್ರಹವಿತ್ತು: ಶ್ರೀಗಳು ತಮ್ಮ ದೇಹತ್ಯಾಗ ಮಾಡುವ ಕೆಲವೇ ದಿನಗಳ ಮೊದಲು ತಿರುಪತಿಗೆ ಹೋಗಿ ದೇವರ ದರ್ಶನ ಪಡೆದಿದ್ದರು. ನಂತರ ಬೆಂಗಳೂರಿನ ಪೂರ್ಣಪ್ರಜ್ಞಾ ವಿದ್ಯಾಪೀಠಕ್ಕೆ ಭೇಟಿ, ಇಲ್ಲಿಂದ ತಮ್ಮ ಹುಟ್ಟೂರಾದ ರಾಮಕುಂಜಾಗೆ ಭೇಟಿ ನೀಡಿದ್ದಾರೆ. ಆಚಾರ್ಯರ ಅವತಾರವಾದ ಉಡುಪಿಯ ಪಾಜಕಕ್ಕೆ ಭೇಟಿ ನೀಡಿ, ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿದ್ದರು. ನಂತರ ತಾವು ಆರಾಧಿಸಿಕೊಂಡು ಬಂದ ಉಡುಪಿ ಶ್ರೀಕೃಷ್ಣನನ್ನು ದರ್ಶನ ಮಾಡಿದ ಬಳಿಕ ಅಸ್ವಸ್ಥರಾಗಿದ್ದಾರೆ. ಹೀಗಾಗಿ ಶ್ರೀಗಳ ಮೇಲೆ ಸಂಪೂರ್ಣವಾಗಿ ದೇವರ ಅನುಗ್ರಹ ಇತ್ತು ಎಂದು ಸ್ಮರಿಸಿದರು.

ರಥಬೀದಿ, ಪೇಜಾವರ ಮಠದಲ್ಲಿ ನೀರವ ಮೌನ
ಉಡುಪಿ: ಪಾಮರರಿಂದ ಹಿಡಿದು ಪಂಡಿತರವರೆಗೆ, ಸಾಮಾನ್ಯರಿಂದ ಹಿಡಿದು ಪ್ರಧಾನಿಯವರೆಗೆ ಸಂಪರ್ಕ ಹೊಂದಿದ್ದರೂ ಪೇಜಾವರ ಮಠದ ಒಂದು ಸಣ್ಣ ಕೋಣೆಯಲ್ಲಿ ಸಾಮಾನ್ಯ ಮಂಚದ ಮೇಲೆ ಮಲಗುತ್ತಿದ್ದ ಪೇಜಾವರ ಶ್ರೀಗಳು ಭಾನುವಾರ ಹರಿಪಾದ ಸೇರಿದ ಪರಿಣಾಮ ಸೋಮವಾರ ಮಠದೊಳಗೂ ಹೊರಗೂ ದಿವ್ಯಮೌನ ಆವರಿಸಿತ್ತು.

ಸ್ವಾಮೀಜಿಯವರು ಮಠದಲ್ಲಿದ್ದರೆ ಅಥವಾ ಮಠಕ್ಕೆ ಬರುತ್ತಾರೆಂದು ಗೊತ್ತಾಗುತ್ತಿದ್ದರೆ ಗಿಜಿಗುಡುತ್ತಿದ್ದ ಜನಸಂದಣಿ ಸೋಮವಾರವಿರಲಿಲ್ಲ. ಉಡುಪಿಯಲ್ಲಿದ್ದಾಗ ಮಠದ ಗರ್ಭಗುಡಿ ಎದುರು ಅವರು ಜಪ, ಪಾರಾಯಣ ಮಾಡುತ್ತಿದ್ದ ಸ್ಥಳ ಅವರಿಲ್ಲದ ಶೂನ್ಯಭಾವ ಹೊಂದಿತ್ತು. ಸ್ವಾಮಿಗಳಿದ್ದಾರೆಂದರೆ ಅವರ ಸುತ್ತಮುತ್ತ ಓಡಾಡುತ್ತಿದ್ದ ವಿದ್ಯಾರ್ಥಿಗಳೊಬ್ಬರೂ ಇಲ್ಲದ ನೀರವ ವಾತಾವರಣವಿತ್ತು.

ಸಮಾಜದ ಸಹಕಾರ ಬೇಕು: ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥರು ಮಾತನಾಡಿ, ಶ್ರೀಗಳ ಆದರ್ಶಗಳನ್ನು ಪರಿಪಾಲಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆಸಲಿದ್ದೇವೆ. ಸಾಹಿತ್ಯ, ಶಿಕ್ಷಣ, ಆರೋಗ್ಯ, ದಾನ-ಧರ್ಮಗಳು, ಪ್ರಕೃತಿ ವಿಕೋಪ ಸಂದರ್ಭದಲ್ಲಿ ಸಮಾಜದ ಜತೆಗೆ ಗುರುಗಳು ನೇರವಾಗಿ ಸಹಾಯಕ್ಕೆ ಧುಮುಕುತ್ತಿದ್ದರು. ಶ್ರೀಗಳ ಮಾರ್ಗದರ್ಶನದಂತೆ ನಾವೂ ಮುಂದುವರಿಸುತ್ತೇವೆ. ನಮ್ಮೆಲ್ಲ ಪ್ರಯತ್ನಗಳು ಸಾಂಗವಾಗಿ ಕೈಗೂಡಬೇಕಾದರೆ ಸಮಾಜದ ಸಹಕಾರ ಬೇಕು ಎಂದು ಕೋರಿದರು.

ಶಿಲೆಯಲ್ಲಿ ವೃಂದಾವನ: ಶ್ರೀಗಳ ಇಚ್ಛೆಯಂತೆ ಪೂರ್ಣಪ್ರಜ್ಞಾ ವಿದ್ಯಾಪೀಠದ ಆವರಣದಲ್ಲಿ ವೃಂದಾವನ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ನೆಲ ಸಮತಟ್ಟಾದ ನಂತರ, ಶಾಸ್ತ್ರೀಯ ಪರಿಕಲ್ಪನೆಯಲ್ಲಿ ಶಿಲಾಮಯವಾದ ಕೂರ್ಮಾಸನದಿಂದ ಆರಂಭವಾಗಿ ಐದು ಸ್ತರಗಳನ್ನು ಹೊಂದಿರುವ ಭವ್ಯವಾದ ವೃಂದಾವನ ನಿರ್ಮಿಸುವ ಯೋಜನೆಯಿದೆ. ಸಾರ್ವಜನಿಕರು ಭೇಟಿ ನೀಡಿದ ವೇಳೆ ದೀಪ ಬೆಳಗಲು ಅನುಕೂಲವಾಗುವಂತೆ ವೃಂದಾವನ ನಿರ್ಮಾಣವಾಗಲಿದೆ.

ಶ್ರೀಗಳ ವ್ಯಕ್ತಿತ್ವಕ್ಕೆ ಅನುಗುಣವಾಗಿ ಭವ್ಯ ಹಾಗೂ ಆಕರ್ಷಕ ವೃಂದಾವನವನ್ನು ಮಠದ ವತಿಯಿಂದಲೇ ಅಭಿವೃದ್ಧಿ ಮಾಡಲಾಗುತ್ತದೆ. ಇದಕ್ಕಾಗಿ ಸರ್ಕಾರ ಮತ್ತು ಸಾರ್ವಜನಿಕರ ಸಹಾಯವನ್ನು ನಾವಾಗಿ ಕೇಳುವುದಿಲ್ಲ. ಸ್ವಪ್ರೇರಣೆಯಿಂದ ಸಹಾಯ ನೀಡಿದರೆ ಉಪಯೋಗಿಸಿಕೊಳ್ಳಲಿದ್ದೇವೆ ಎಂದು ವಿದ್ಯಾಪೀಠದ ವಿದ್ವಾಂಸರಾದ ಹರಿದಾಸ ಭಟ್‌ ಮಾಹಿತಿ ನೀಡಿದರು.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.