ಎರಡು ಡಾಲ್ಫಿನ್‌ ಕಳೆಬರ ಪತ್ತೆ

 ಕಾರವಾರ ಕಡಲ ತೀರದಲ್ಲಿ ಪತ್ತೆಯಾದದ್ದು ಫಿನ್‌ಲೆಸ್‌ ಫೋರ್‌ಪೊಯ್ಸ್ ಪ್ರಭೇದ

Team Udayavani, May 26, 2022, 11:29 AM IST

4

ಕಾರವಾರ: ತಾಲೂಕಿನ ಕಡಲ ತೀರದಲ್ಲಿ ಒಂದೇ ದಿನ ಎರಡು ಡಾಲ್ಫಿನ್‌ ಕಳೆಬರಗಳು ಪತ್ತೆಯಾಗಿವೆ. ತಾಲೂಕಿನ ಮಾಜಾಳಿ ಕಡಲತೀರದಲ್ಲಿ ಮೊದಲ ಬಾರಿಗೆ ಅಪರೂಪದ ಇಂಡೋ ಫೆಸಿಫಿಕ್‌ ಫಿನ್‌ಲೆಸ್‌ ಫೋರ್‌ಪೊಯ್ಸ ಪ್ರಭೇದದ ಡಾಲ್ಫಿನ್‌ ಪತ್ತೆಯಾಗಿದ್ದು, ಹೆಣ್ಣು ಡಾಲ್ಫಿನ್‌ ಮರಿಯಾಗಿದೆ. ಹೆಚ್ಚಾಗಿ ಏಷ್ಯಾ, ಇಂಡೋನೇಷ್ಯಾ, ಮಲೇಶಿಯಾ, ಭಾರತ ಹಾಗೂ ಬಾಂಗ್ಲಾದೇಶದಲ್ಲಿ ಕಾಣ ಸಿಗುವ ಡಾಲ್ಫಿನ್‌ ಪ್ರಭೇದ ಇದಾಗಿದ್ದು, ಅರಬ್ಬಿ ಸಮುದ್ರದಲ್ಲಿ ಮೊದಲ ಬಾರಿಗೆ ಪತ್ತೆಯಾಗಿದೆ.

ಸಮುದ್ರದಲ್ಲಿ ಬೋಟ್‌ ತಾಗಿದ ಪೆಟ್ಟಿನಿಂದ ಮೃತಪಟ್ಟಿದೆ ಎಂದು ಕಾರವಾರ ಕಡಲಜೀವಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಶಿವಕುಮಾರ್‌ ಹರಗಿ ಅಭಿಪ್ರಾಯಪಟ್ಟಿದ್ದಾರೆ. ಇದರ ಸಂತತಿ ಇನ್ನೂ ಇರಬಹುದು ಎಂದರು. ಫೋರ್‌ಪೊಯ್ಸ ಡಾಲ್ಫಿನ್‌ ಆಂತರಿಕ ರಕ್ತಸ್ರಾವವಾಗಿ ಉಸಿರುಗಟ್ಟಿ ಮೃತಪಟ್ಟಿರಬಹುದೆಂದು ಅಂದಾಜಿಸಿದ್ದೇವೆ ಎಂದರು.

ಅಲಿಗದ್ದಾ ತೀರದಲ್ಲಿ ಮತ್ತೂಂದು ಕಳೆಬರಹ: ಕಾರವಾರ ನಗರದ ಬಂದರಿಗೆ ಹೊತ್ತಿಕೊಂಡಿರುವ ಅಲಿಗದ್ದಾ ಕಡಲತೀರದಲ್ಲಿ ಡಾಲ್ಫಿನ್‌ ಇನ್ನೊಂದು ಕಳೆಬರ ಪತ್ತೆಯಾಗಿದೆ. ಈ ಡಾಲ್ಫಿನ್‌ ಸಹ ಹೆಣ್ಣು ಡಾಲ್ಫಿ ನ್‌ದ್ದಾಗಿದ್ದು, ಫೆಸಿಫಿಕ್‌ ಹಂಪ್‌ ಬ್ಯಾಕ್‌ ಪ್ರಭೇದಕ್ಕೆ ಸೇರಿದೆ. ಇವುಗಳ ಸಂತತಿ ಕಾರವಾರದಿಂದ ಗೋವಾತನಕ ಅರಬ್ಬಿ ಸಮುದ್ರದಲ್ಲಿ ಹೆಚ್ಚಿದೆ. ಕೂರ್ಮಗಡ ನಡುಗಡ್ಡೆ ಸಮೀಪ ಹಾಗೂ ಸುತ್ತಮುತ್ತ ಹಂಪ್‌ ಬ್ಯಾಕ್‌ ಡಾಲ್ಫಿ ನ್‌ಗಳು ಸಾಕಷ್ಟಿವೆ. ಮೀನುಗಾರರು ಈ ಡಾಲ್ಫಿನ್‌ಗಳನ್ನು ತಮ್ಮ ಸ್ನೇಹಿತರಂತೆ ನೋಡುತ್ತಿದ್ದು, ಇವುಗಳನ್ನು ಬೇಟೆಯಾಡಲ್ಲ. ಅಲಿಗದ್ದಾ ಕಡಲತೀರದಲ್ಲಿ ಸಿಕ್ಕ ಡಾಲ್ಫಿ ನ್‌ ಸುಮಾರು 2.5 ಮೀಟರ್‌ಗಳಷ್ಟು ಉದ್ದವಿದೆ. ಈ ಡಾಲ್ಫಿನ್‌ ಮೃತಪಟ್ಟು ಸಾಕಷ್ಟು ದಿನಗಳಾಗಿದೆ. ಕಳೆಬರ ಕೊಳೆತ ಸ್ಥಿತಿಯಲ್ಲಿದ್ದಿದ್ದರಿಂದ ಇದರ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ ಎಂದು ಕೋಸ್ಟಲ್‌ ಮರೈನ್‌ ವಿಭಾಗದ ವಲಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಮೋದ್‌ ಮಾಹಿತಿ ನೀಡಿದರು.

ಸಮುದ್ರ ಜೀವಿಗಳ ಕಣ್ಮರೆ ಆತಂಕ ತಂದಿದೆ. ಒಂದೇ ದಿನ ಎರಡು ಡಾಲ್ಫಿನ್‌ ಶವಗಳು ಪತ್ತೆಯಾದುದು ಆತಂಕಕಾರಿ. ಸಮುದ್ರ ಜೀವಿಗಳ ಬಗ್ಗೆ ಸಮುದ್ರ ಬೇಟೆ ವೇಳೆ ಸಾಕಷ್ಟು ಜಾಗೃತಿ ವಹಿಸುವ ಅಗತ್ಯವಿದೆ ಎಂದರು. ಹಿರಿಯ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದರು.

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.