ಮುದೇನೂರ ಶಾಲೆ 200 ಮಕ್ಕಳಿಗೆ ಇಬ್ಬರೇ ಶಿಕ್ಷಕರು
ಮುದೇನೂರ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ಕೊರತೆ
Team Udayavani, May 22, 2022, 3:19 PM IST
ದೋಟಿಹಾಳ: ಸಮೀಪದ ಮುದೇನೂರ ಗ್ರಾಮದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಮುಂದಿನ ಭವಿಷ್ಯ ಶಿಕ್ಷಕರು ಇಲ್ಲದೇ, ಉತ್ತಮ ಶಿಕ್ಷಣ ಸಿಗದೇ ಅತಂತ್ರವಾಗುತ್ತಿದೆ. ಸರಕಾರ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರುವ ಬದಲು ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಿ. ಹಾಗಾದರೆ ಮಾತ್ರ ಗ್ರಾಮೀಣ ಭಾಗದ ಮಕ್ಕಳ ಭವಿಷ್ಯ ಉಜ್ವಲವಾಗುತ್ತದೆ.
ಹೌದು, ಮುದೇನೂರು ಗ್ರಾಮದ ಶಾಲೆಯಲ್ಲಿ 1ರಿಂದ 8ನೇ ತರಗತಿವರೆಗೆ ಒಟ್ಟು 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದ್ದಾರೆ. ಸರಕಾರ ಆದೇಶದ ಪ್ರಕಾರ ಶಾಲೆಗೆ ಒಟ್ಟು 8 ಹುದ್ದೆಗಳು ಮುಂಜುರಾಗಿವೆ. ಇದರಲ್ಲಿ 6 ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಸದ್ಯ ಇರುವ ಇಬ್ಬರಲ್ಲಿ ಒಬ್ಬರು ದೈಹಿಕ ಶಿಕ್ಷಕರು, ಇನ್ನೊಬ್ಬರು ಇಂಗ್ಲಿಷ್ ಶಿಕ್ಷಕರು. ದೈಹಿಕ ಶಿಕ್ಷಕರು ಮುಖ್ಯಗುರುಗಳಾಗಿ ಕೆಲಸ ಮಾಡುತ್ತಿದ್ದಾರೆ.
ಇಂಗ್ಲಿಷ್ ಶಿಕ್ಷಕರು ಮತ್ತು ಸರಕಾರ ತಾತ್ಕಾಲಿಕವಾಗಿ ನೀಡುವ ಅತಿಥಿ ಶಿಕ್ಷಕರಿಂದ ಈ ಶಾಲೆ ಕುಂಟುತ್ತ ಸಾಗಿದೆ. ಶಿಕ್ಷಕರ ಕೊರತೆಯಿಂದ ಬೆಳಗಿನಿಂದ ಶಾಲಾ ಅವಧಿ ಮುಗಿಯುವವರೆಗೂ ಒಂದೇ ತರಗತಿಯಲ್ಲಿ ಪಾಠ ಮಾಡಬೇಕಾದ ಪರಿಸ್ಥಿತಿ ಅನಿವಾರ್ಯವಾಗಿದೆ. ಇನ್ನೂ 8ನೇ ತರಗತಿ ಮಕ್ಕಳಿಗೆ ಪ್ರೌಢಶಾಲಾ ಶಿಕ್ಷಕರು ಪಾಠ ಮಾಡುತ್ತಿದ್ದಾರೆ.
ಶಾಲೆಯಲ್ಲಿ ಶಿಕ್ಷಕ ಕೊರತೆ ಇರುವುದು ನಿಜ. ಸದ್ಯ ಶಾಲೆ ಆರಂಭವಾಗುತ್ತಿದೆ. ಈ ವರ್ಷ 200ಕ್ಕೂ ಹೆಚ್ಚು ಮಕ್ಕಳು ಬರಬಹುದು. ಸದ್ಯ ದೈಹಿಕ ಮತ್ತು ಇಂಗ್ಲಿಷ್ ಶಿಕ್ಷಕರು ಮಾತ್ರ ಇದ್ದೇವೆ. ಉಳಿದ ಆರು ಹುದ್ದೆಗಳು ಖಾಲಿ ಇವೆ. ಅತಿಥಿ ಶಿಕ್ಷಕರು ಬರುವವರೆಗೆ ನಾವೇ ಶಾಲೆ ನಡೆಸಿಕೊಂಡು ಹೋಗಬೇಕು. ∙ರೇಣುಕಾ, ಪ್ರಭಾರಿ ಮುಖ್ಯೋಪಾಧ್ಯಾಯರು
ಮುದೇನೂರ ಶಾಲೆಯಲ್ಲಿ ಶಿಕ್ಷಕರ ಕೊರತೆ ಇದೆ. ಸದ್ಯದಲ್ಲಿ ಶಾಲೆಗೆ ಅತಿಥಿಕರನ್ನು ಶಿಕ್ಷಕರನ್ನು ನೇಮಕ ಮಾಡುತ್ತೇವೆ. ಕಾಯಂ ಶಿಕ್ಷಕರು ಬರಲು ಶಿಕ್ಷಕರ ವರ್ಗಾವಣೆ ಅಥವಾ ಹೊಸ ಶಿಕ್ಷಕರ ನೇಮಕಾತಿಯಾಗಬೇಕು. –ಸುರೇಂದ್ರ ಕಾಂಬ್ಳೆ, ಬಿಇಒ
-ಮಲ್ಲಿಕಾರ್ಜುನ ಮೆದಿಕೇರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavati: ಜೈ ಶ್ರೀರಾಮ್ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
MUST WATCH
ಹೊಸ ಸೇರ್ಪಡೆ
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ