ಉದಯವಾಣಿ-ಎಂಐಟಿ ಮಳೆ ನೀರು ಕೊಯ್ಲು ಕಾರ್ಯಾಗಾರ: ಸಮಸ್ಯೆಗೆ ಮೊದಲೇ ಪರಿಹಾರ: ಡಾ| ರಾಣ ಕರೆ
Team Udayavani, May 27, 2022, 11:38 PM IST
ಮಣಿಪಾಲ: ಮಳೆನೀರು ಕೊಯ್ಲು ಕುರಿತಾಗಿ ಉದಯವಾಣಿ ಮತ್ತು ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಂಐಟಿ) ಸಹಯೋಗದಲ್ಲಿ ಎಂಐಟಿ ಕ್ಯಾಂಪಸ್ನ ಕೆಇಎಫ್ ಆರ್ ಆ್ಯಂಡ್ ಡಿ ಸೆಂಟರ್ನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ಎಂಐಟಿ ನಿರ್ದೇಶಕ ಕ| ಡಾ| ಅನಿಲ್ ರಾಣ ಉದ್ಘಾಟಿಸಿದರು.
ನೀರಿನ ಸಮರ್ಪಕ ನಿರ್ವಹಣೆ ಹಾಗೂ ಉಳಿಸಿಕೊಳ್ಳಲು ಅಗತ್ಯ ಯೋಜನೆಗಳನ್ನು ಈಗಿಂದಲೇ ರೂಪಿಸಬೇಕು ಎಂದು ಡಾ| ರಾಣ ಹೇಳಿದರು.
ಎಂಐಟಿ ಜಂಟಿ ನಿರ್ದೇಶಕ ಡಾ| ಸೋಮಶೇಖರ್ ಭಟ್ ಅವರು ನೀರಿನ ಬ್ಯಾಂಕ್ ರಚಿಸುವ ಕುರಿತು ಸಾಮಾ ಜಿಕ ಜಾಲತಾಣದಲ್ಲಿ ಮಾಹಿತಿ ಬರುತ್ತಿದೆ ಎಂದರು. ಎಂಐಟಿ ಪ್ರಾಧ್ಯಾಪಕ ಪ್ರೊ| ನಾರಾಯಣ ಶೆಣೈ ಅವರು ಮಳೆ ನೀರಿನ ಲಭ್ಯತೆ ಮತ್ತು ಶುದ್ಧ ನೀರಿನ ಕೊರತೆಗೆ ಕಾರಣ, ನೀರಿನ ಸದ್ಬಳಕೆ ಮಾಡುವ ವಿಧಾನಗಳು ಹಾಗೂ ನೀರು ಮತ್ತು ಮನುಷ್ಯನಿಗೆ ಇರುವ ಅವಿನಾಭಾವ ಸಂಬಂಧಗಳನ್ನು ವಿವರಿಸಿದರು.
ಜಲ ಮರುಪೂರಣ ತಜ್ಞ ಜೋಸೆಫ್ ಜಿ.ಎಂ. ರೆಬೆಲ್ಲೊ ಅವರು ಜಲ ಮರುಪೂರಣದ ವಿವಿಧ ವಿಧಾನಗಳು, ಮಳೆ ನೀರ ಕೊಯ್ಲುವಿಗೆ ಅನುಸರಿಸಬೇಕಾದ ಕ್ರಮಗಳು, ಭೂಮಿಯಿಂದ ಶುದ್ಧ ನೀರು ಪಡೆದು, ಭೂಮಿಗೆ ಶುದ್ಧ ನೀರನ್ನೇ ಹೇಗೆ ಸುಲಭವಾಗಿ ತುಂಬಿಸಬೇಕು ಇತ್ಯಾದಿ ಸಂಗತಿಗಳನ್ನು ವಿವರಿಸಿದರು. ಉದಯವಾಣಿ ಸಂಪಾದಕ ಅರವಿಂದ ನಾವಡ ಪ್ರಸ್ತಾವನೆಗೈದರು. ಜಿಲ್ಲೆಯ ವಿವಿಧ ಭಾಗದ ಸಾರ್ವಜನಿಕರು ಭಾಗವಹಿಸಿ ಮಾಹಿತಿ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ