ಮಹಾರಾಷ್ಟ್ರಕ್ಕೆ ಕಳಂಕ ತರಲು ಕೆಲವರು ಸಂಚು ರೂಪಿಸಿದ್ದಾರೆ: ಉದ್ಧವ್ ಠಾಕ್ರೆ
Team Udayavani, Sep 14, 2020, 2:35 PM IST
ಮುಂಬಯಿ : ರಾಜಕೀಯ ಹಾಗೂ ಕೋವಿಡ್ ವಿಚಾರದಲ್ಲಿ ತಮ್ಮನ್ನು ಟೀಕಿಸುತ್ತಿರುವವರಿಗೆ ಉತ್ತರಿಸಿರುವ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ, “ಮಹಾ ರಾಷ್ಟ್ರಕ್ಕೆ ಕಳಂಕ ತರಲು ಕೆಲವರು ಸಂಚು ರೂಪಿಸಿದ್ದಾರೆ. ಆದರೆ, ಯಾವುದೇ ರೀತಿಯ ರಾಜಕೀಯ ಬಿರುಗಾಳಿಯನ್ನೂ, ಕೋವಿಡ್ ಸೋಂಕನ್ನೂ ಎದುರಿಸಲು ನಾನು ಸಿದ್ಧನಿದ್ದೇನೆ’ ಎಂದು ಹೇಳಿದ್ದಾರೆ.
ಕಂಗನಾ ಗಲಾಟೆ ಹಾಗೂ ಕೋವಿಡ್ ವ್ಯಾಪಿಸುವಿಕೆ ಹಿನ್ನೆಲೆಯಲ್ಲಿ ಅವರ ಮಾತುಗಳು ಮಹತ್ವ ಪಡೆದಿವೆ. ರವಿವಾರ ಟಿವಿ ಮೂಲಕ ರಾಜ್ಯದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಅವರು, “ನಮ್ಮ ಸರಕಾರವು ಕೋವಿಡ್ ಸೋಂಕು, ಚಂಡಮಾರುತ, ಪ್ರವಾಹವನ್ನು ಸಮರ್ಥವಾಗಿ ಎದುರಿಸಿದೆ. ಅದೇ ರೀತಿ ರಾಜಕೀಯ ಬಿರುಗಾಳಿಯನ್ನೂ ಎದುರಿಸಲಿದೆ.
ಕೀಳುಮಟ್ಟದ ರಾಜಕೀಯಕ್ಕೆ ಪ್ರತಿಕ್ರಿಯಿಸಬೇಕೆಂದರೆ ನಾನು “ಮುಖ್ಯಮಂತ್ರಿ’ ಎಂಬ ಮಾಸ್ಕ್ ಅನ್ನು ತೆಗೆಯಬೇಕಾಗುತ್ತದೆ. ನಾನು ಮಾತನಾಡುತ್ತಿಲ್ಲ ಎಂದ ಮಾತ್ರಕ್ಕೆ, ನನ್ನಲ್ಲಿ ಉತ್ತರವಿಲ್ಲ ಎಂದರ್ಥವಲ್ಲ’ ಎಂದು ನುಡಿದಿದ್ದಾರೆ.
ಇದನ್ನೂ ಓದಿ : ವಿಮಾನ ಪ್ರಯಾಣಿಕರ ಗಮನಕ್ಕೆ! ಪ್ರಯಾಣದ ವೇಳೆ ನಿಯಮ ಉಲ್ಲಂಘಿಸಿದರೆ ಜೋಕೆ!
ಸೋಂಕಿನ ಕುರಿತೂ ಮಾತನಾಡಿದ ಅವರು, ಕೊರೊನಾ ಈಗ ರಾಜ್ಯದ ಗ್ರಾಮೀಣ ಭಾಗಗಳಲ್ಲೂ ವ್ಯಾಪಕವಾಗಿ ಹಬ್ಬುತ್ತಿದೆ. ದಯವಿಟ್ಟು ಯಾರೂ ಇದನ್ನು ಹಗುರವಾಗಿ ಪರಿಗಣಿಸಬೇಡಿ.
ಜನ ಬೆಂಬಲ ದೊಂದಿಗೆ ನಾವು ಈ ಯುದ್ಧವನ್ನು ಗೆಲ್ಲಬೇಕಿದೆ. ಸೆ.15ರಿಂದ “ನನ್ನ ಕುಟುಂಬ, ನನ್ನ ಹೊಣೆಗಾರಿಕೆ’ ಎಂಬ ಅಭಿಯಾನ ಆರಂಭಿಸುತ್ತಿದ್ದು, ಅದನ್ನು ಎಲ್ಲರೂ ಸೇರಿ ಯಶಸ್ವಿಯಾಗಿಸಬೇಕು ಎಂದೂ ಕರೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
MUST WATCH
ಹೊಸ ಸೇರ್ಪಡೆ
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’