ಉಡುಪಿ: 77 ವರದಿಗಳು ನೆಗೆಟಿವ್‌


Team Udayavani, May 7, 2020, 5:56 AM IST

ಉಡುಪಿ: 77 ವರದಿಗಳು ನೆಗೆಟಿವ್‌

ಸಾಂದರ್ಭಿಕ ಚಿತ್ರ.

ಉಡುಪಿ: ಕೋವಿಡ್‌- 19 ಸೋಂಕು ಲಕ್ಷಣದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಬುಧವಾರ 63 ಮಂದಿಯ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಉಸಿರಾಟದ ಸಮಸ್ಯೆ ಇರುವ 5, ಜ್ವರದ 11, ಹಾಟ್‌ಸ್ಪಾಟ್‌ ಸಂಪರ್ಕದ 47 ಮಂದಿಯಿದ್ದಾರೆ. ಈ ಹಿಂದೆ ಕಳುಹಿಸಿದ್ದ 77 ವರದಿಗಳು ನೆಗೆಟಿವ್‌ ಬಂದಿವೆ. 111 ಮಂದಿಯ ವರದಿ ಬರಲು ಬಾಕಿಯಿದೆ.

ಬುಧವಾರ ಒಟ್ಟು 112 ಮಂದಿ ನೋಂದಣಿ ಮಾಡಿಸಿಕೊಂಡಿದ್ದಾರೆ. 28 ಮಂದಿ 28 ದಿನಗಳ ನಿಗಾವಣೆ, 31 ಮಂದಿ 14 ದಿನಗಳ ನಿಗಾವಣೆ ಪೂರೈಸಿದ್ದಾರೆ. ಉಸಿರಾಟದ ಸಮಸ್ಯೆಯುಳ್ಳ ಐದು ಮಂದಿ ಪುರುಷರು, ಇಬ್ಬರು ಮಹಿಳೆಯರು, ಕೋವಿಡ್‌ ಸೋಂಕು ಸಂಪರ್ಕದ ಓರ್ವ ಪುರುಷ, ಜ್ವರ ಲಕ್ಷಣದ ಓರ್ವ ಪುರುಷ, ಇಬ್ಬರು ಮಹಿಳೆಯರು ಸಹಿತ ಒಟ್ಟು 11 ಮಂದಿ ಐಸೊಲೇಶನ್‌ ವಾರ್ಡ್‌ಗೆ ದಾಖಲಾಗಿದ್ದಾರೆ. 8 ಮಂದಿ ಐಸೊಲೇಶನ್‌ ವಾರ್ಡ್‌ನಿಂದ ಬಿಡುಗಡೆಯಾಗಿದ್ದಾರೆ.

ಬೆಳಗಾವಿಯಿಂದ ಬಂದವರ ವರದಿ ನೆಗೆಟಿವ್‌
ಬೆಳಗಾವಿಯಿಂದ ಉಡುಪಿ ಜಿಲ್ಲೆಗೆ ಆಗಮಿಸಿದ್ದ 10 ಮಂದಿಯ ವರದಿಯೂ ನೆಗೆಟಿವ್‌ ಬಂದಿದೆ. ಮಂಗಳವಾರ ಐವರು, ಬುಧವಾರ ಐವರ ವರದಿ ನೆಗೆಟಿವ್‌ ಬಂದಿದೆ. ಈ ಪೈಕಿ ಒಬ್ಬರು ಕುಂದಾಪುರದ ಖಾಸಗಿ ಆಸ್ಪತ್ರೆಯ ಐಸೊಲೇಶನ್‌ ವಾರ್ಡ್‌ನಲ್ಲಿ, ಉಳಿದ 9 ಮಂದಿ ಕುಂದಾಪುರ, ಉಡುಪಿಯ ಬಿಸಿಎಂ ಹಾಸ್ಟೆಲ್‌ಗ‌ಳಲ್ಲಿ ಕ್ವಾರಂಟೈನ್‌ನಲ್ಲಿದ್ದಾರೆ. ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡುವ ಬಗ್ಗೆ ಗುರುವಾರ ತೀರ್ಮಾನವಾಗಲಿದೆ.

2ನೇ ಬಾರಿ ನೆಗೆಟಿವ್‌
ಮಂಡ್ಯದಿಂದ ಬಂದ ಕೋವಿಡ್‌-19 ಸೋಂಕು ಲಕ್ಷಣದ ವ್ಯಕ್ತಿಯ ಸಂಪರ್ಕಕ್ಕೊಳಪಟ್ಟಿದ್ದ ತೆಕ್ಕಟ್ಟೆ ಪೆಟ್ರೋಲ್‌ ಬಂಕ್‌, ಸಾಸ್ತಾನ ಟೋಲ್‌ ಗೇಟ್‌ನ ಎಲ್ಲ 18 ಮಂದಿ ಸಿಬಂದಿಯ ವರದಿಯೂ ಎರಡನೇ ಬಾರಿಗೆ ನೆಗೆಟಿವ್‌ ಬಂದಿದೆ. ಮಂಗಳವಾರ 10 ವರದಿಗಳು ನೆಗೆಟಿವ್‌ ಬಂದಿದ್ದರೆ ಬುಧವಾರ 8 ವರದಿಗಳು ನೆಗೆಟಿವ್‌ ಬಂದಿವೆ.

ಬಾದಾಮಿ ಯುವತಿಗೆ ಸೋಂಕು
ಉಡುಪಿ ಸಂಪರ್ಕದಿಂದ ಅಲ್ಲ
ಉಡುಪಿಯಿಂದ ಬಾದಾಮಿಗೆ ತೆರಳಿದ 18ರ ಯುವತಿಯಲ್ಲಿ ಕೋವಿಡ್‌- 19 ಪಾಸಿಟಿನ್‌ ಕಂಡುಬಂದಿದೆ. ನಿಟ್ಟೆಯಲ್ಲಿ ಓದುತ್ತಿದ್ದ ಆಕೆ ರಜೆಯ ಕಾರಣ ಮಾರ್ಚ್‌ 14ರಂದು ಊರಿಗೆ ತೆರಳಿರುವುದಾಗಿ ಬಾಗಲ ಕೋಟೆ ಜಿಲ್ಲಾಧಿಕಾರಿ, ಎಸ್ಪಿ ಅವರು ಮಾಹಿತಿ ನೀಡಿದ್ದಾರೆ. ಹಾಗಾಗಿ ಆಕೆಗೆ ಉಡುಪಿಯ ಯಾವುದೇ ಸಂಪರ್ಕದಿಂದ ಕೋವಿಡ್‌- 19 ಪಾಸಿಟಿವ್‌ ಬರುವ ಸಾಧ್ಯತೆ ಇಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್‌ ತಿಳಿಸಿದ್ದಾರೆ.

ಅಲ್ಲಿ ಮೇ 2ರಂದು ಪಾಸಿಟಿವ್‌ ಬಂದ 23ರ ಹರೆಯದ ಗರ್ಭಿಣಿಯ ಸಂಪರ್ಕಕ್ಕೆ ಮೊದಲೇ ಬಂದಿದ್ದ ಈ ಯುವತಿಯಲ್ಲಿ ಬುಧವಾರ ಪಾಸಿಟಿವ್‌ ಕಂಡುಬಂದಿದೆ. ಬಾದಾಮಿಯಲ್ಲಿ ಬುಧವಾರ ಕಂಡುಬಂದ ಒಟ್ಟು 13 ಪ್ರಕರಣಗಳಲ್ಲಿ 12 ಮಂದಿ ಈ ಗರ್ಭಿಣಿಯ ಸಂಪರ್ಕಕ್ಕೆ ಬಂದವರಾಗಿದ್ದಾರೆ ಎಂದು ಉಡುಪಿ ಡಿಎಚ್‌ಒ ಡಾ| ಸುಧೀರ್‌ಚಂದ್ರ ಸೂಡ ತಿಳಿಸಿದರು.

ಏರ್‌ಲಿಫ್ಟ್: 112 ಮಂದಿ ನೋಂದಣಿ
ಉಡುಪಿ: ಕೋವಿಡ್‌- 19 ಸೋಂಕು ಲಕ್ಷಣದಿಂದ ವಿವಿಧ ದೇಶಗಳಲ್ಲಿ ಸಿಲುಕಿರುವ ಜಿಲ್ಲೆಯ 112 ಮಂದಿ ಭಾರತಕ್ಕೆ ಮರಳಿ ಬರಲು ಹೆಸರು ನೋಂದಾಯಿಸಿಕೊಂಡಿದ್ದಾರೆ.ಉಡುಪಿ ಜಿಲ್ಲೆಗೆ ಕಾರವಾರ ಬಂದರು, ಮಂಗಳೂರು ಬಂದರು, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಆಗಮಿಸಲಿದ್ದಾರೆ.

ವಿದೇಶದಿಂದ ಬರುವ ಭಾರತೀಯರನ್ನು ತಪಾಸಣೆ ಮಾಡಿ ಎ, ಬಿ, ಸಿ, ಡಿ ಹೀಗೆ ವಿವಿಧ ಗ್ರೇಡ್‌ಗಳಲ್ಲಿ ವಿಭಾಗಿಸಿ ಅದರ ಪ್ರಕಾರ ಕ್ವಾರಂಟೈನ್‌ ನಡೆಸಲಾಗುತ್ತದೆ. ಎ ಕ್ಯೆಟಗರಿಯಲ್ಲಿ ಕೋವಿಡ್‌-19 ಸೋಂಕು, ಬಿ ಕೆಟಗರಿಯಲ್ಲಿ ಸರಕಾರಿ ಕ್ವಾರಂಟೈನ್‌ ಮತ್ತು ಲೋ ರಿಸ್ಕ್ , ಹೈ ರಿಸ್ಕ್ ಹೀಗೆ ಕೆಟಗರಿ ಮೂಲಕ ವಿಂಗಡಿಸಲಾಗುತ್ತದೆ. ಎ ಗ್ರೇಡ್‌ನ‌ಲ್ಲಿ ಕಂಡು ಬರುವ ಸೋಂಕಿತರನ್ನು ನೇರವಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತದೆ. ಸರಕಾರದ ಸೂಚನೆಯಂತೆ ಕ್ವಾರಂಟೈನ್‌ ಸಹಿತ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ.ವಿದೇಶದಿಂದ ಜಿಲ್ಲೆಗೆ ಆಗಮಿಸುವವರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

12-

Gangolli: ರಿಕ್ಷಾ-ಕಾರು ಢಿಕ್ಕಿ

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.