ಲಾಕ್‌ ಡೌನ್‌ ಹಿನ್ನೆಲೆ : ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಆಟೋ ಚಾಲಕರು


Team Udayavani, Apr 15, 2020, 10:22 AM IST

ಲಾಕ್‌ ಡೌನ್‌ ಹಿನ್ನೆಲೆ : ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಆಟೋ ಚಾಲಕರು

ಉಡುಪಿ: ಲಾಕ್‌ ಡೌನ್‌ ಹಿನ್ನೆಲೆಯಲ್ಲಿ ಪ್ರತಿನಿತ್ಯ ಆಟೋ ಚಲಾಯಿಸಿ ದುಡಿಯುವ ವರ್ಗದ ಆರ್ಥಿಕ ಸ್ಥಿತಿ ಚಿಂತಾಜನಕವಾಗಿದ್ದು, ಆಟೋ ಚಾಲಕರ ಪರಿಸ್ಥಿತಿ ಪಾತಾಳಕ್ಕೆ ಕುಸಿದಿದೆ.

ಉಡುಪಿ ನಗರ ವ್ಯಾಪ್ತಿಯಲ್ಲಿ 42 ಅಟೋ ರಿಕ್ಷಾ ನಿಲ್ದಾಣಗಳಿವೆ. 3,000ಕ್ಕೂ ಮಿಕ್ಕಿದ ಚಾಲಕ- ಮಾಲಕರಿದ್ದಾರೆ. ಇವುಗಳು ಸೇರಿ ಉಡುಪಿ ತಾಲೂಕಿನಾದ್ಯಂತ 150ಕ್ಕೂ ಅಧಿಕ ಸ್ಟಾಂಡ್‌ಗಳಲ್ಲಿ 6,000ಕ್ಕೂ ಮಿಕ್ಕಿದ ಚಾಲಕರು, ಜಿಲ್ಲೆಯಲ್ಲಿ 13,000ಕ್ಕೂ ಹೆಚ್ಚು ಆಟೋ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಈಗ ನಿರ್ಬಂಧದಿಂದ ಬಾಡಿಗೆ ಇಲ್ಲದೆ ಎಲ್ಲರೂ ಸಮಸ್ಯೆಗೆ ಒಳಗಾಗಿದ್ದಾರೆ. ಕುಟುಂಬ ನಿರ್ವಹಣೆಗೆ ಹಣವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಟೋ ಚಾಲಕರು ಅಳಲು ವ್ಯಕ್ತಪಡಿಸುತ್ತಿದ್ದಾರೆ.

ಚಾಲಕರಿಗೆ ನೆರವು
ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ರಿಕ್ಷಾ ಚಾಲಕರ ಸಂಘಗಳ ಒಕ್ಕೂಟ ಕಾರ್ಯಾ ಚರಿಸುತ್ತಿದೆ. ನಿಲ್ದಾಣಕ್ಕೆ ಒಂದರಂತೆ ಸಂಘಗಳು, ವಲಯವಾರು ಸಂಘಗಳು ಹೀಗೆ ವಿವಿಧೆಡೆಗಳಲ್ಲಿ ಹಲವು ಸಂಘ ಗಳಿವೆ. ವಿವಿಧೆಡೆ ಇರುವ ಚಾಲಕ- ಮಾಲಕರ ಸಂಘಗಳು ತಮ್ಮ ವ್ಯಾಪ್ತಿ ಯಲ್ಲಿರುವ ವೃತ್ತಿ ನಿರತ ಸಂಕಷ್ಟದಲ್ಲಿರುವ ಸಹೋದ್ಯೋಗಿಗಳ ನೆರವಿಗೆ ಮುಂದಾಗಿವೆ. ಆರ್ಥಿಕವಾಗಿ ಹಿಂದುಳಿದ ಚಾಲಕರ ಮನೆಗಳಿಗೆ ಅಕ್ಕಿ, ಹಾಗೂ ದಿನಸಿ ಕಿಟ್‌ಗಳನ್ನು ವಿತರಿಸುತ್ತಿವೆ.

ಸಾಲದ ಕಂತು ಸದ್ಯ ದೂರ
ಸದ್ಯಕ್ಕೆ ಸರಕಾರ ಆಟೋ ಸಾಲದ ಕಂತು ಪಾವತಿಸಲು ಮೂರು ತಿಂಗಳು ಕಾಲಾವಕಾಶ ನೀಡಿದೆ. ಕಂತು ಅನಂತರ ಕಟ್ಟಬಹುದು ಎಂದು ಸರಕಾರ ಘೋಷಣೆ ಮಾಡಿದೆ.

ಮೀಸಲಿಟ್ಟ ಹಣ ನೆರವಾಗಲಿ
ಬಜೆಟ್‌ನಲ್ಲಿ ಸರಕಾರ ಚಾಲಕರ ಮಕ್ಕಳ ವಿದ್ಯಾಭ್ಯಾಸಕ್ಕೆ 40 ಕೋಟಿ ರೂ. ಹಣ ಮೀಸಲಿಟ್ಟಿತ್ತು. ಮೀಸಲಿಟ್ಟ ಹಣವನ್ನು ಈ ತುರ್ತು ಪರಿಸ್ಥಿತಿಯಲ್ಲಿ ಚಾಲಕರಿಗೆ ನೀಡಿದರೆ ಅವರ ಜೀವನ ನಿರ್ವಹಣೆಗೆ ಸಹಾಯವಾಗುತ್ತದೆ. ಇಲ್ಲವಾದಲ್ಲಿ ಸರಕಾರದ ಕಡೆಯಿಂದ ಚಾಲಕರಿಗೆ ಶೇ.4ರ ವಾರ್ಷಿಕ ಬಡ್ಡಿ ದರದಂತೆ 50,000 ರೂ. ಸಾಲವಾಗಿ ನೀಡಬೇಕು. ಈ ಹಣದಿಂದ ಚಾಲಕರು ಮನೆಗಳ ಬಾಡಿಗೆ ಮಕ್ಕಳ ವಿದ್ಯಾ ಭ್ಯಾಸ ನಿರ್ವಹಿಸಬಹುದು ಅನ್ನುವ ಅಭಿಪ್ರಾಯಗಳು ಚಾಲಕರಿಂದ ವ್ಯಕ್ತಗೊಂಡಿವೆ.

ಹೆಚ್ಚು ದಿನಗಳು ಆಟೋಗಳು ಸ್ಟಾರ್ಟ್‌ ಆಗದೆ ಇದ್ದರೆ ಆಟೋ ಕೆಟ್ಟು ಹೋಗುತ್ತವೆ. ಇದಕ್ಕೆ ಪ್ರತಿನಿತ್ಯ ಐದರಿಂದ ಹತ್ತು ನಿಮಿಷ ಕಾಲ ಆಟೋಗಳನ್ನು ಸ್ಟಾರ್ಟ್‌ ಮಾಡಿ ಇಡುವ ಅನಿವಾರ್ಯ ಇದೆ. ಇದಕ್ಕೂ ಹಣದ ಕೊರತೆ ಇದೆ ಅನ್ನುತ್ತಾರೆ ಚಾಲಕರು.

ನೆರವು ಅಗತ್ಯ
ನಿತ್ಯದ ಸಂಪಾದನೆಯಿಂದ ಜೀವನ ನಡೆಸುತ್ತಿದ್ದ ಆಟೋ ರಿಕ್ಷಾ ಚಾಲಕರಿಗೆ ನೆರವಿನ ಅಗತ್ಯವಿದೆ. ಆರ್ಥಿಕವಾಗಿ ಸಬಲರಲ್ಲದಿದ್ದರೂ ಎಪಿಎಲ್‌ ಕಾರ್ಡ್‌ ಇದೆ. ಇದರಿಂದ ರೇಶನ್‌ಗೂ ಹಣ ಬೇಕು. ಈಗ ಆಟೋ ಯೂನಿಯನ್‌ಗಳ ಸದಸ್ಯರೇ ಸಹೋದ್ಯೋಗಿಗಳ ನೆರವಿಗೆ ನಿಂತು ಕೈಲಾದಷ್ಟು ಸಹಾಯ ನೀಡಿ ನಿಭಾಯಿಸುತ್ತಿದ್ದೇವೆ.
-ಸುರೇಶ್‌ ಅಮೀನ್‌, ಕಾರ್ಯಾಧ್ಯಕ್ಷರು,
ಜಿಲ್ಲಾ ಆಟೋ ಚಾಲಕ ಮಾಲಕರ ಸಂಘಗಳ ಒಕ್ಕೂಟ, ಉಡುಪಿ.

ಟಾಪ್ ನ್ಯೂಸ್

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.