ನಿರಾಳವಾಗುತ್ತಿದೆ ಉಡುಪಿ; ಲಾಕ್‌ಡೌನ್‌ನ ಒಂದು ತಿಂಗಳಲ್ಲಿ ಕೋವಿಡ್-19 ಮುಕ್ತ


Team Udayavani, Apr 25, 2020, 5:54 AM IST

ನಿರಾಳವಾಗುತ್ತಿದೆ ಉಡುಪಿ; ಲಾಕ್‌ಡೌನ್‌ನ ಒಂದು ತಿಂಗಳಲ್ಲಿ ಕೋವಿಡ್-19 ಮುಕ್ತ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಸದ್ಯಕ್ಕೆ ಯಾವುದೇ ಕೋವಿಡ್-19 ಪಾಸಿಟಿವ್‌ ಪ್ರಕರಣಗಳಿಲ್ಲ. ಈ ಹಿಂದೆ ಇದ್ದ ಜಿಲ್ಲೆಯ ಮೂರು ಪ್ರಕರಣಗಳು ಗುಣಮುಖವಾಗಿದ್ದು ರೋಗಿಗಳು ಆಸ್ಪತ್ರೆಯಿಂದ ಮನೆಗೆ ಸೇರಿದ್ದಾರೆ. ಎ.24ರಂದು ಭಟ್ಕಳ ಮೂಲದ ಗರ್ಭಿಣಿ ಮಹಿಳೆ ಗುಣಮುಖರಾಗಿ ಊರು ಸೇರಿದ್ದಾರೆ. ಆ ಮೂಲಕ ಸದ್ಯದ ಮಟ್ಟಿಗೆ ಉಡುಪಿ ಜಿಲ್ಲೆ ನಿರಾಳವಾಗಿದೆ. ವಿಶೇಷ ಎಂದರೆ ಉಡುಪಿ ಜಿಲ್ಲೆಯಲ್ಲಿ ಮೊದಲ ಕೋವಿಡ್-19 ಪಾಸಿಟಿವ್‌ ಪ್ರಕರಣ ಪತ್ತೆಯಾ ಗಿದ್ದು, ಒಂದು ತಿಂಗಳ ಹಿಂದೆ, ಅಂದರೆ ಮಾ. 25ರಂದು. ಈಗ ಒಂದು ತಿಂಗಳ ಬಳಿಕ ಕೋವಿಡ್-19 ಮುಕ್ತದತ್ತ ಹೆಜ್ಜೆ ಇಟ್ಟಿದೆ.

ಮುಂದಿನ ಒಂದು ವಾರದಲ್ಲಿ ಯಾವುದೇ ಪ್ರಕರಣಗಳು ಕಂಡುಬಾರದಿದ್ದರೆ ಉಡುಪಿ ಜಿಲ್ಲೆಯನ್ನು ಹಸಿರುವಲಯವನ್ನಾಗಿ ಘೋಷಣೆ ಮಾಡಬಹುದು ಎಂದು ಎ.20ರಂದು ಜಿಲ್ಲಾಧಿಕಾರಿ ಜಿ.ಜಗದೀಶ್‌ ಅವರು ತಿಳಿಸಿದ್ದರು. ಅಂದುಕೊಂಡಂತೆ ನಡೆದರೆ ಎ.26 ಅಥವಾ 27ಕ್ಕೆ ಜಿಲ್ಲೆಯನ್ನು ಹಸಿರು ವಲಯ ಎಂದು ಘೋಷಿಸುವ ಸಾಧ್ಯತೆ ಇವೆ.

ಜಿಲ್ಲೆಯ ಈವರೆಗಿನ ಸ್ಥಿತಿ
ಜಿಲ್ಲೆಯಲ್ಲಿ ಈವರೆಗೆ 3238 ಮಂದಿ ರೋಗ ತಪಾಸಣೆಗೆ ನೋಂದಣಿ ಮಾಡಿಸಿಕೊಂಡಿದ್ದಾರೆ. 1929 ಮಂದಿ 28 ದಿನಗಳ ಕ್ವಾರಂಟೈನ್‌, 2,512 ಮಂದಿ 14 ದಿನಗಳ ಕ್ವಾರಂಟೈನ್‌ ಅವಧಿ ಪೂರ್ಣ ಗೊಳಿಸಿದ್ದಾರೆ. ಪ್ರಸ್ತುತ 50 ಮಂದಿ ಐಸೋಲೇಶನ್‌ ವಾರ್ಡ್‌ನಲ್ಲಿ ನಿಗಾದಲ್ಲಿ ದ್ದಾರೆ. 273 ಮಂದಿ ಈಗಾಗಲೇ ಐಸೋಲೇಶನ್‌ ವಾರ್ಡ್‌ನಿಂದ ಬಿಡುಗಡೆ ಹೊಂದಿದ್ದಾರೆ. 1024 ಮಂದಿ ರೋಗಿಗಳ ವಿವಿಧ ಮಾದರಿಗಳನ್ನು ಸಂಗ್ರಹಿಸಲಾಗಿತ್ತು. 947 ವರದಿಗಳು ನೆಗೆಟಿವ್‌ ಬಂದಿದೆ. 74 ಮಾದರಿಗಳ ವರದಿ ಬರಲು ಬಾಕಿಯಿದೆ.

ನಿಯಂತ್ರಣ ರೂವಾರಿಗಳು
ಜಿಲ್ಲೆಯಲ್ಲಿ ಒಟ್ಟು ಮೂರು ಪ್ರಕರಣಗಳು ಪತ್ತೆಯಾಗಿದ್ದವು. ಸಂತಸದ ಸಂಗತಿಯೆಂದರೆ ಎಲ್ಲರೂ ಗುಣಮುಖ ರಾಗಿರುವುದು. ಪರಿಸ್ಥಿತಿಯನ್ನು ಹತೋಟಿಗೆ ತರುವಲ್ಲಿ ಜಿಲ್ಲಾಡಳಿತ, ವೈದ್ಯಕೀಯ ಸಿಬಂದಿ, ಆಶಾ ಕಾರ್ಯಕರ್ತರು, ಪೊಲೀಸ್‌ ಇಲಾಖೆ ತೆಗೆದುಕೊಂಡ ಕಟ್ಟುನಿಟ್ಟಿನ ಕ್ರಮ ಕಾರಣವಾಗಿವೆ. ಮಾ.25ಕ್ಕೆ ಕೇಂದ್ರ ಸರಕಾರ ಲಾಕ್‌ಡೌನ್‌ ಘೋಷಣೆ ಮಾಡಿದಾಗ ಜಿಲ್ಲೆಯಲ್ಲಿ ಒಂದು ಪ್ರಕರಣವಷ್ಟೇ ಇತ್ತು. ಅನಂತರ ಕ್ರಮವಾಗಿ ಮಾ.26, 27ರಂದು ಪ್ರಕರಣ ಪತ್ತೆಯಾದ ಅನಂತರ ಜಿಲ್ಲೆಯಲ್ಲಿ ಭೀತಿಯ ವಾತಾವರಣ ನಿರ್ಮಾಣವಾಗಿತ್ತು. ಲಾಕ್‌ಡೌನ್‌ ಇದ್ದರೂ ಜನರು ಓಡಾಡುತ್ತಲೇ ಇದ್ದರು. ಬಳಿಕ ಅಗತ್ಯವಸ್ತುಗಳ ಖರೀದಿಗೆ ನಿರ್ದಿಷ್ಟ ಸಮಯ ನಿಗದಿ, ಸಾಮಾಜಿಕ ಅಂತರ, ಗಡಿಗಳಲ್ಲಿ ಬಿಗಿ ಭದ್ರತೆ, ಅನ್ಯ ಜಿಲ್ಲೆಗಳಿಂದ ಆಗಮಿಸುವವರಿಗೆ ಕಡಿವಾಣ ದಿಂದಾಗಿ ಇಂದು ಉಡುಪಿ ಜಿಲ್ಲೆ ಕೊರೊನಾ ಪ್ರಕರಣದಿಂದ ಮುಕ್ತವಾಗಿದೆ.

ಮುಂದೇನು?
ಸದ್ಯಕ್ಕೆ ಜಿಲ್ಲೆಯಲ್ಲಿ ಲಾಕ್‌ಡೌನ್‌ ನಿಯಮಾವಳಿ ತುಸು ಸಡಿಲಗೊಳಿಸಲಾಗಿದೆ. ಅಗತ್ಯ ವಸ್ತುಗಳ ಖರೀದಿ ಎಂದಿ ನಂತೆ ನಿರ್ದಿಷ್ಟ ಅವಧಿಯಲ್ಲಿ ನಡೆಯುತ್ತಿದೆ. ಉಳಿದಂತೆ ಆಸ್ಪತ್ರೆ,ನರ್ಸಿಂಗ್‌ ಹೋಮ್‌,ಕ್ಲಿನಿಕ್‌,ಪಶು ಆಸ್ಪತ್ರೆ, ಆ್ಯಂಬುಲೆನ್ಸ್‌,ಕೃಷಿ ಚಟುವಟಿಕೆಗಳು,ಎಪಿಎಂಸಿಗಳು, ಕೃಷಿ ಉಪಕರಣಗಳ ಮಾರಾಟ,ಹೈನುಗಾರಿಕೆ, ಮೀನುಗಾರಿಕೆ, ಬ್ಯಾಂಕ್‌, ಎಟಿಎಂ, ಸೆಕ್ಯುರಿಟಿ ಏಜೆನ್ಸಿ ,ಸೆಬಿ,ವಿಮಾ ಕಂಪೆನಿ, ಅಂಗನವಾಡಿ ಕೇಂದ್ರಗಳು,ಆನ್‌ಲೈನ್‌ ಶಿಕ್ಷಣ, ನರೇಗಾ, ಡಿಟಿಎಚ್‌, ಕೇಬಲ್‌ ಸೇವೆ, ಗ್ರಾ.ಪಂ. ಮಟ್ಟದಲ್ಲಿ ಸರಕಾರ ಅನುಮತಿ ನೀಡಿರುವ ಸೇವಾ ವಲಯ, ಶೈತ್ಯ ದಾಸ್ತಾನು,ಕಿರಾಣಿ,ಮಾಂಸದ ಅಂಗಡಿ,ಕೊರಿ ಯರ್‌,ಅಂಚೆ, ಇ ಕಾಮರ್ಸ್‌,ರಸ್ತೆ,ಕಟ್ಟಡ ನಿರ್ಮಾಣ ಸಹಿತ ಕೆಲವೊಂದಕ್ಕಷ್ಟೆ ನಿರ್ದಿಷ್ಟ ಸಮಯದಲ್ಲಿ ವಿನಾಯಿತಿ ಕಲ್ಪಿಸಲಾಗಿದೆ.

ಗಂಭೀರತೆ ಅಗತ್ಯ
ಜಿಲ್ಲೆಯಲ್ಲಿ ಮೂರು ಪ್ರಕರಣಗಳು ಗುಣಮುಖವಾಗಿದೆ ಎಂದು ಜನರು ಅನಾವಶ್ಯಕವಾಗಿ ಓಡಾಡುವಂತಿಲ್ಲ. ಒಂದು ವೇಳೆ ಪುನಃ ಕೋವಿಡ್-19 ಕಾಣಿಸಿಕೊಳ್ಳುವ ಸಂದರ್ಭ ಬಂದಲ್ಲಿ ಕೇಂದ್ರ ಸರಕಾರ ಸಡಿಲಿಕೆ ಹಿಂಪಡೆಯಲಿದೆ. ಆದ್ದರಿಂದ ಜನರು ಗಂಭೀರತೆಯನ್ನು ಅರಿತುಕೊಂಡು ಸಾಮಾಜಿಕ ಅಂತರ ಕಾಯ್ದುಕೊಂಡು ತಮ್ಮ ಕೆಲಸ ನಿರ್ವಹಿಸಬೇಕಿದೆ.

ಅಂಗಡಿಗಳನ್ನು ತೆರೆಯುವಾಗ ಜನಸಂದಣಿ ತಪ್ಪಿಸಲು ವಿವಿಧ ವ್ಯವಹಾರ ಗಳಿಗೆ ನಿರ್ದಿಷ್ಟ ಸಮಯವನ್ನು ನಿಗದಿಪಡಿಸುವ ಚಿಂತನೆಯನ್ನೂ ಜಿಲ್ಲಾಡಳಿತ ಮಾಡುತ್ತಿದೆ.

ಹೊರ ಜಿಲ್ಲೆಗಳಿಂದ ಯಾರೂ ಬರುವಂತಿಲ್ಲ
ಮೇ ತಿಂಗಳ ಅನಂತರವೂ ಹೊರ ಜಿಲ್ಲೆಗಳಿಂದ ಯಾರೂ ಈ ಜಿಲ್ಲೆಯೊಳಗೆ ಬರುವಂತಿಲ್ಲ. ಯಾರು ಎಷ್ಟೇ ಒತ್ತಡ ಹೇರಿದರೂ ಬಿಡುವಂತಿಲ್ಲ. ವೈದ್ಯಕೀಯ ತುರ್ತು ಅಗತ್ಯಗಳಿದ್ದರೆ ಮಾತ್ರ ಪರೀಕ್ಷಿಸಿ ಬಿಡಬೇಕು ಎಂದು ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿಯವರೂ ತಿಳಿಸಿದ್ದಾರೆ. ರಾಜ್ಯದ 11 ಗ್ರೀನ್‌ ಝೋನ್‌ ಜಿಲ್ಲೆಗಳಿಗೆ ಈಗಾಗಲೇ ಕೆಲವು ರಿಯಾಯಿತಿಗಳನ್ನು ನೀಡಲಾಗಿದೆ. ಉಡುಪಿ ಜಿಲ್ಲೆ ಗ್ರೀನ್‌ ಝೋನ್‌ ಆದ ಮೇಲೆ ಕೇಂದ್ರದ ಮಾರ್ಗಸೂಚಿಯಂತೆ ಮುಂದೆ ಕೆಲವು ಸಡಿಲಿಕೆ ಮಾಡಲಾಗುತ್ತದೆ.

ಸದ್ಯದಲ್ಲೇ ಹಸಿರು ವಲಯ
ಸದ್ಯದಲ್ಲೆ ಉಡುಪಿ ಜಿಲ್ಲೆಯನ್ನು ಹಸಿರು ವಲಯ ಎಂದು ಘೋಷಿಸಲಾಗುವುದು. ಗ್ರಾಮೀಣ ಕಾರ್ಖಾನೆಗಳು ಸಹಿತ ಕೆಲವೊಂದಕ್ಕೆ ಇದರಿಂದ ವಿನಾಯಿತಿ ಸಿಗಲಿದೆ. ಜಿಲ್ಲೆಯ ಹೊರ ಪ್ರವೇಶ ಹಾಗೂ ಜಿಲ್ಲೆಯೊಳಗೆ ವಿನಾ ಕಾರಣ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ತುರ್ತು ಕೆಲಸಕ್ಕೆ ತೆರಳುವವರು ಜಿಲ್ಲಾಡಳಿತದ ಅನುಮತಿ ಪಡೆದರೆ ಅಗತ್ಯವಿದ್ದರೆ ಮಾತ್ರ ಪಾಸ್‌ಗಳನ್ನು ಒದಗಿಸಲಾಗುವುದು. ಹೊರಜಿಲ್ಲೆಯಿಂದ ಬರುವವರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗುತ್ತದೆ.
-ಜಿ.ಜಗದೀಶ್‌,ಜಿಲ್ಲಾಧಿಕಾರಿ

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.