Udupi-Chikmagalur Constituency; ಈವರೆಗಿನ ಅಭ್ಯರ್ಥಿ, ಸಂಸದರು ಕರಾವಳಿಗರೇ ಆಗಿದ್ದರು!

ಉಡುಪಿ-ಚಿಕ್ಕಮಗಳೂರು ಕ್ಷೇತ್ರ: ಮರು ವಿಂಗಡನೆ ಬಳಿಕ ಕಡಲ ತೀರದ್ದೇ ಪಾರಮ್ಯ

Team Udayavani, Apr 14, 2024, 6:50 AM IST

Udupi-Chikmagalur Constituency; ಈವರೆಗಿನ ಅಭ್ಯರ್ಥಿ, ಸಂಸದರು ಕರಾವಳಿಗರೇ ಆಗಿದ್ದರು!

ಉಡುಪಿ: ಕ್ಷೇತ್ರ ಮರುವಿಂಗಡನೆಯ ಬಳಿಕ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಒಂದು ಉಪಚುನಾವಣೆ ಸಹಿತ ಈಗ 4ನೇ ಸಾರ್ವತ್ರಿಕ ಚುನಾವಣೆಗೆ ಸಜ್ಜಾಗಿದೆ. ಎಲ್ಲ ಬಾರಿಯೂ ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷದವರು ಅಭ್ಯರ್ಥಿಗಳನ್ನಾಗಿ ಆಯ್ಕೆ ಮಾಡಿದ್ದು ಕರಾವಳಿಯವರನ್ನೇ !

ಉಡುಪಿ ಲೋಕಸಭಾ ಕ್ಷೇತ್ರವು 2008ರಲ್ಲಿ ಮರುವಿಂಗಡನೆ ಹೊಂದಿ ಉಡುಪಿ-ಚಿಕ್ಕಮಗಳೂರು ಎಂದು ಹೊಸ ಕ್ಷೇತ್ರವಾಯಿತು. ಉಡುಪಿ ಜಿಲ್ಲೆಯ ಐದರಲ್ಲಿ ನಾಲ್ಕು ವಿಧಾನಸಭಾ ಕ್ಷೇತ್ರ ಹಾಗೂ ಚಿಕ್ಕಮಗಳೂರಿನ ನಾಲ್ಕು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿತು ಉಡುಪಿ ಚಿಕ್ಕಮಗಳೂರು ಕ್ಷೇತ್ರ. ಉಳಿದ ಒಂದು ವಿಧಾನಸಭಾ ಕ್ಷೇತ್ರ ಬೈಂದೂರು ಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ಸೇರ್ಪಡೆ ಆಯಿತು. ಆ ಬಳಿಕ ಈ ಕ್ಷೇತ್ರಕ್ಕೆ ಕರಾವಳಿ ಮತ್ತು ಮಲೆನಾಡು ಪ್ರದೇಶದ ಮೆರುಗು ಬಂದಿತು.

2009ರಲ್ಲಿ ಹೊಸ ಕ್ಷೇತ್ರದ ಮೊದಲ ಚುನಾವಣೆ. ಬಿಜೆಪಿಯು ಸುಳ್ಯ ಮೂಲದ ಡಿ.ವಿ.ಸದಾನಂದ ಗೌಡ, 2012ರಲ್ಲಿ ಕಾರ್ಕಳದ ವಿ.ಸುನಿಲ್‌ ಕುಮಾರ್‌, 2014, 2019ರಲ್ಲಿ ಕಡಬ ತಾಲೂಕಿನ ಚಾರ್ವಾಕ ಗ್ರಾಮದ ಶೋಭಾ ಕರಂದ್ಲಾಜೆ ಹಾಗೂ ಈಗ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಟಿಕೆಟ್‌ ನೀಡಿದೆ. ಇದರಲ್ಲೂ ವಿಶೇಷವೆಂದರೆ ಹೆಚ್ಚು ಅವಧಿಯಲ್ಲಿ ಕ್ಷೇತ್ರವನ್ನು ಪ್ರತಿನಿಧಿಸಿದ್ದು ಜಿಲ್ಲೆಯ ಹೊರಗಿನವರೇ.

ಕಾಂಗ್ರೆಸ್‌ 2009ರಿಂದ 2014ರ ವರೆಗಿನ ಮೂರು ಚುನಾವಣೆಯಲ್ಲೂ ಕುಂದಾಪುರ ಕೊರ್ಗಿಯ ಜಯಪ್ರಕಾಶ್‌ ಹೆಗ್ಡೆಯವರಿಗೆ ಟಿಕೆಟ್‌ ನೀಡಿತ್ತು. 2019ರಲ್ಲಿ ಉಡುಪಿಯ ಪ್ರಮೋದ್‌ ಮಧ್ವರಾಜ್‌ ಅವರಿಗೆ ಮತ್ತು ಈಗ ಜಯಪ್ರಕಾಶ್‌ ಹೆಗ್ಡೆಯವರಿಗೆ ಮತ್ತೆ ಅವಕಾಶ ನೀಡಿದೆ. ಒಟ್ಟಾರೆಯಾಗಿ ಈ ಕ್ಷೇತ್ರದಲ್ಲಿ ರಾಷ್ಟ್ರೀಯ ಪಕ್ಷಗಳೆರಡೂ ನೆಚ್ಚಿಕೊಂಡಿ ರುವುದು ಕರಾವಳಿಗರನ್ನೇ.

ಹಲವು ಲೆಕ್ಕಾಚಾರ
ಕರಾವಳಿ ನಾಯಕರ ಪರಿಚಯ ಮಲೆನಾಡು ಭಾಗ ದವರಿಗೆ ಹಾಗೂ ಹಾಗೆಯೇ ಮಲೆನಾಡು ಭಾಗದ ನಾಯಕರ ಪರಿಚಯ ಕರಾವಳಿಗರಿಗೆ ಇರದು. ಜಿಲ್ಲಾ ನಾಯಕರಿಗೆ ಟಿಕೆಟ್‌ ನೀಡಿದರೆ ಎರಡೂ ಪಕ್ಷಕ್ಕೂ ಹೊಡೆತ ಬೀಳುವ ಸಾಧ್ಯತೆ ಇರಲಿದೆ ಎಂಬುದು ಒಂದು ಲೆಕ್ಕಾಚಾರ. ಜತೆಗೆ ರಾಜ್ಯ ವ್ಯಾಪ್ತಿ ಪರಿಚಿತ ಮುಖ ಹಾಗೂ ಜಾತಿ ಲೆಕ್ಕಾಚಾರದ ಆಧಾರದಲ್ಲೇ ಇದುವರೆಗೂ ಟಿಕೆಟ್‌ ಹಂಚಲಾಗುತ್ತಿದೆ.

2009ರಿಂದ 2019ರ ಚುನಾವಣೆವರೆಗೂ(ಉಪ ಚುನಾವಣೆ ಹೊರತುಪಡಿಸಿ) ಬಿಜೆಪಿ ಹೊರ ಜಿಲ್ಲೆಯವರಿಗೆ ಟಿಕೆಟ್‌ ನೀಡಿದ್ದರೂ ಕರಾವಳಿಗರಿಗೆ ಕೊಟ್ಟಿದೆ. ಕಾಂಗ್ರೆಸ್‌ ಎಲ್ಲ ಚುನಾವಣೆಯಲ್ಲೂ ಉಡುಪಿ ಜಿಲ್ಲೆಯವರಿಗೇ ಟಿಕೆಟ್‌ ನೀಡಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಈ ಬಾರಿ ಬಿಜೆಪಿಯಿಂದ ಸಿಟಿ ರವಿ, ಕಾಂಗ್ರೆಸ್‌ನಿಂದ ಡಾ| ಅಂಶುಮತ್‌, ಸುಧೀರ್‌ ಕುಮಾರ್‌ ಮರೋಳಿ ಆಕಾಂಕ್ಷಿಗಳಾಗಿ ದ್ದರೂ ಅವಕಾಶ ದೊರೆತಿರುವುದು ಕರಾವಳಿಗರಿಗೆ.

ಆಡಳಿತಾತ್ಮಕ
ಲೆಕ್ಕಾಚಾರವೂ ಇದೆ
ಲೋಕಸಭಾ ಕ್ಷೇತ್ರದ ಕೇಂದ್ರ ಉಡುಪಿ ಜಿಲ್ಲೆ. ಜಿಲ್ಲಾಧಿಕಾರಿ ಕಚೇರಿಯೇ ಚುನಾವಣಾಧಿಕಾರಿ ಕಚೇರಿ. ಹೀಗಾಗಿ ಬಹುಪಾಲು ಚುನಾವಣ ಪ್ರಕ್ರಿಯೆಗಳು ಇಲ್ಲಿಂದಲೇ ನಡೆಯಲಿದೆ. ಹೀಗಾಗಿ ಈ ಕ್ಷೇತ್ರವು ಉಡುಪಿಗೆ ಹೆಚ್ಚು ನೆಚ್ಚಿಕೊಂಡಿದೆ. ಮತದಾರರ ಸಂಖ್ಯೆಯಲ್ಲೂ ಉಡುಪಿಯೇ ಮೇಲಿದೆ. ಚಿಕ್ಕಮಗಳೂರು, ಶೃಂಗೇರಿ, ಮೂಡಿಗೆರೆ ಹಾಗೂ ತರೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ 7.30 ಲಕ್ಷ ಮತದಾರರಿದ್ದರೆ, ಉಡುಪಿ, ಕಾರ್ಕಳ, ಕುಂದಾಪುರ ಹಾಗೂ ಕಾಪು ಮತಕ್ಷೇತ್ರದಲ್ಲಿ 8.42 ಲಕ್ಷ ಮತದಾರರಿದ್ದಾರೆ. ಭೌಗೊಳಿಕ ವ್ಯಾಪ್ತಿ ದೊಡ್ಡದಿರುವುದರಿಂದ ಚಿಕ್ಕಮಗಳೂರಿನಲ್ಲಿ ಮತಗಟ್ಟೆಗಳು ಹೆಚ್ಚಿವೆ.

ಜಾತಿ ಲೆಕ್ಕಾಚಾರ
ಉಡುಪಿ ಜಿಲ್ಲೆಯಲ್ಲಿ ಬಿಲ್ಲವ, ಬಂಟ ಹಾಗೂ ಮೊಗವೀರ ಸಮುದಾಯಗಳು ಪ್ರಧಾನ ಪಾತ್ರ ವಹಿಸುತ್ತವೆ.. ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಕ್ಕಲಿಗ, ಲಿಂಗಾಯತ ಸಮುದಾಯದವರು ಪ್ರಮುಖ. ಎರಡೂ ಜಿಲ್ಲೆಗಳಲ್ಲೂ ಅಲ್ಪಸಂಖ್ಯಾಕರ ಮತವೂ ಸಾಕಷ್ಟಿದೆ. ಇತರೆ ಹಿಂದುಳಿದ ವರ್ಗ ಹಾಗೂ ಎಸ್ಸಿ, ಎಸ್ಟಿ ಮತಗಳು ಗಣನೀಯ ಪ್ರಮಾಣದಲ್ಲಿದೆ. 2009ರಿಂದ ಈಚೆಗೆ ಕಾಂಗ್ರೆಸ್‌ ಒಮ್ಮೆ ಮೊಗವೀರ(ಜೆಡಿಎಸ್‌ ಕಾಂಗ್ರೆಸ್‌ ಒಟ್ಟಾಗಿದ್ದಾಗ), ಉಳಿದಂತೆ ಬಂಟರಿಗೆ ಹಾಗೂ ಬಿಜೆಪಿ ಎರಡು 3 ಬಾರಿ ಒಕ್ಕಲಿಗ ಹಾಗೂ 2 ಬಾರಿ ಬಿಲ್ಲವರಿಗೆ ಮಣೆ ಹಾಕಿದೆ.

ಟಾಪ್ ನ್ಯೂಸ್

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.