ರಾತ್ರಿಯೂ ಮುಂದುವರಿಯಲಿದೆ ಡಿಸಿ ಗ್ರಾಮವಾಸ್ತವ್ಯ


Team Udayavani, Feb 16, 2021, 11:06 PM IST

ರಾತ್ರಿಯೂ ಮುಂದುವರಿಯಲಿದೆ ಡಿಸಿ ಗ್ರಾಮವಾಸ್ತವ್ಯ

ಕುಂದಾಪುರ: ಉಡುಪಿ ಜಿಲ್ಲೆಯಲ್ಲಿ ಪೈಲಟ್‌ ಯೋಜನೆಯಾಗಿ ಆರಂಭಗೊಂಡ ಜಿಲ್ಲಾಧಿಕಾರಿಗಳ ಗ್ರಾಮವಾಸ್ತವ್ಯ ಕಾರ್ಯಕ್ರಮ ಈ ತಿಂಗಳ ಮೂರನೇ ಶನಿವಾರದಿಂದ ರಾಜ್ಯಾದ್ಯಂತ ಜಾರಿಗೆ ಬರಲಿದೆ. ಜಿಲ್ಲಾಧಿಕಾರಿಗಳ ನೇತೃತ್ವದ ಅಧಿಕಾರಿಗಳ ತಂಡ ಹಗಲಷ್ಟೇ ಅಲ್ಲ ರಾತ್ರಿಯೂ ವಾಸ್ತವ್ಯ ಹೂಡಲಿದೆ.

ಪೈಲಟ್‌ ಯೋಜನೆ
ಬ್ರಹ್ಮಾವರ ತಾಲೂಕಿನ ನಂಚಾರು, ನಾಲ್ಕೂರು ಗ್ರಾಮದಲ್ಲಿ ಜನವರಿ ತಿಂಗಳಲ್ಲಿ ಉಡುಪಿ ಡಿಸಿ ಜಿ.ಜಗದೀಶ್‌ ಅವರು ವಿವಿಧ ಅಧಿಕಾರಿಗಳ ತಂಡದೊಂದಿಗೆ ಪೈಲಟ್‌ ಯೋಜನೆ ಅಂಗವಾಗಿ ಗ್ರಾಮವಾಸ್ತವ್ಯ ಮಾಡಿದ್ದರು. ಇದರ ಸಾಧಕ ಬಾಧಕಗಳನ್ನು ಅವರು ಇದೀಗ ಸರಕಾರಕ್ಕೆ ಮಂಡಿಸಿದ್ದಾರೆ. ಇಲ್ಲಿ ಗ್ರಾಮಸ್ಥರಿಂದ ವಿವಿಧ ಬೇಡಿಕೆಗಳ 160 ಅರ್ಜಿಗಳು ಬಂದಿದ್ದವು. ಡೀಮ್ಡ್ ಫಾರೆಸ್ಟ್‌ ವ್ಯಾಪ್ತಿಯಲ್ಲಿ ಹಕ್ಕುಪತ್ರಕ್ಕೆ ಸಂಬಂಧಿಸಿದ ಅರ್ಜಿಗಳು ಮಾತ್ರ ಬಾಕಿ ಆಗಿವೆ. ಡೀಮ್ಡ್ ಫಾರೆಸ್ಟ್‌ನಲ್ಲಿ ಪ್ರಸ್ತುತ ಹಕ್ಕುಪತ್ರ ನೀಡಲು ಅವಕಾಶ ಇಲ್ಲದ ಕಾರಣ ಅರ್ಜಿಗಳು ಬಾಕಿಯಾಗಿವೆ. ಉಳಿದಂತೆ ಎಲ್ಲ ಅರ್ಜಿಗಳೂ ವಿಲೇವಾರಿಯಾಗಿವೆ.

ತಲೆಮಾರಿನಿಂದ ಬಾಕಿ
ಕುಡುಬಿ ಜನಾಂಗದವರು ಇರುವ ಎರಡು ಕಾಲನಿಗಳಿಗೆ ಡಿಸಿ ಭೇಟಿ ನೀಡಿದ್ದರು. ಅಲ್ಲಿ ಮೂರು ತಲೆಮಾರುಗಳಿಂದ ಆಸ್ತಿ ದಾಖಲೆ ಸರಿಯಿಲ್ಲದ ಪ್ರಕರಣಗಳು ಬೆಳಕಿಗೆ ಬಂದಿದ್ದವು. ಇಂತಹ ಪಹಣಿ, ಪೌತಿ ತಿದ್ದುಪಡಿ ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ.

ಬೇಡಿಕೆ
ಮಂಗಳವಾರ ಕಂದಾಯ ಸಚಿವ ಆರ್‌. ಅಶೋಕ್‌, ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಜತೆ ವೀಡಿಯೋ ಕಾನ್ಫರೆನ್ಸ್‌ ಮಾಡಿದ್ದರು. ಇದರಲ್ಲಿ ಉಡುಪಿ ಡಿಸಿ ಪೈಲಟ್‌ ಯೋಜನೆಯ ವರದಿ ಸಲ್ಲಿಸಿದ್ದಷ್ಟೇ ಅಲ್ಲದೆ ವಾಚಿಕವಾಗಿಯೂ ಸಾಧಕ ಬಾಧಕಗಳ ಕುರಿತು ವಿವರಿಸಿದ್ದರು. ಇದರಲ್ಲಿ ಜಿಲ್ಲಾಧಿಕಾರಿಗಳ ಫ‌ಂಡ್‌ ನೀಡಲು ಬೇಡಿಕೆ ಇಟ್ಟಿದ್ದಾರೆ. ವಾಸ್ತವ್ಯ ಸಂದರ್ಭ ಶಾಲೆ, ಹಾಸ್ಟೆಲ್‌ ತುರ್ತು ದುರಸ್ತಿ ಇತ್ಯಾದಿಗಳ ಬೇಡಿಕೆ ಬಂದಾಗ ಮಂಜೂರಾತಿಗೆ ಅನುವಾಗುವಂತೆ ಫ‌ಂಡ್‌ ಸ್ಥಾಪನೆಗೆ ಬೇಡಿಕೆ ಇಟ್ಟಿದ್ದಾರೆ. ಕಂದಾಯ ಇಲಾಖೆಯ ಕಡತಗಳಿಗೆ ಸಂಬಂಧಿಸಿದ ಅರ್ಜಿಗಳು, ಹಕ್ಕುಪತ್ರ, ಪಹಣಿ ತಿದ್ದುಪಡಿ ಸೇರಿದಂತೆ ಸ್ಥಳದಲ್ಲಿ ಇತ್ಯರ್ಥಪಡಿಸಬಹುದಾದ ಅನೇಕ ಸಮಸ್ಯೆಗಳನ್ನು ಪರಿಹರಿಸಲಾಗುತ್ತದೆ. ಅಂತಹ ಫ‌ಲಾನುಭವಿಗಳಿಗೆ ಪತ್ರ ವಿತರಿಸಲು ಸಂಜೆ ಆ ಪ್ರದೇಶದ ಶಾಸಕರು ಭೇಟಿ ನೀಡಿ ಸಭೆಯೊಂದನ್ನು ಆಯೋಜಿಸುವಂತೆ ಬೇಡಿಕೆ ಇಡಲಾಗಿದೆ. ಇವೆರಡೂ ಬೇಡಿಕೆಗೆ ಕಂದಾಯ ಸಚಿವರು ಸ್ಪಂದಿಸಿದ್ದಾರೆ.

ರಾತ್ರಿ ವಾಸ್ತವ್ಯ
ಪೈಲಟ್‌ ಯೋಜನೆಯಂತೆ ಹಗಲು ವಾಸ್ತವ್ಯ ಮಾತ್ರ ಮಾಡಲಾಗಿದ್ದು ಮುಂದಿನ ದಿನಗಳಲ್ಲಿ ರಾತ್ರಿಯೂ ವಾಸ್ತವ್ಯ ಮಾಡಲು ನಿರ್ಧರಿಸಲಾಗಿದೆ. ಅದರಂತೆ ಕಂದಾಯ ಸಚಿವ ಆರ್‌. ಅಶೋಕ್‌ ಅವರೇ ಬೆಂಗಳೂರು ಗ್ರಾಮಾಂತರದಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಪಲಿಮಾರಿನಲ್ಲಿ
ಈ ಶನಿವಾರ ಕಾಪು ತಾಲೂಕಿನ ಪಲಿಮಾರು ಗ್ರಾಮದಲ್ಲಿ ಡಿಸಿ ವಾಸ್ತವ್ಯ ಹೂಡಲಿದ್ದಾರೆ. ಕಾಪು ತಹಶೀಲ್ದಾರ್‌ ಹೊರತಾಗಿ ಉಳಿದಂತೆ ಎಸಿ, ಎಲ್ಲ ತಹಶೀಲ್ದಾರ್‌ಗಳು ಅವರ ತಾಲೂಕಿನಲ್ಲಿ ಗ್ರಾಮವಾಸ್ತವ್ಯ ಹೂಡಲಿದ್ದಾರೆ. ಪ್ರದೇಶ ಇನ್ನೂ ನಿಶ್ಚಯವಾಗಿಲ್ಲ.

ಮನೆಮನೆಗೆ ಪಿಂಚಣಿ
ಮನೆ ಮನೆಗೆ ಪಿಂಚಣಿ ಯೋಜನೆಯನ್ನು ಉಡುಪಿ ಜಿಲ್ಲೆಯಲ್ಲಿ ಜಿ. ಜಗದೀಶ್‌ ನೇತೃತ್ವ ದಲ್ಲಿ ಆರಂಭಿಸಿದ್ದು ಇದರ ಯಶಸ್ಸಿನಿಂದ ರಾಜ್ಯಾದ್ಯಂತ ಇದೇ ಮಾದರಿಯಲ್ಲಿ ಯೋಜನೆ ಹಾಕಿಕೊಳ್ಳಲಾಗಿದೆ. ಅದೇ ಕಾರಣಕ್ಕಾಗಿ ಡಿಸಿ ಗ್ರಾಮವಾಸ್ತವ್ಯಕ್ಕೂ ಪೈಲಟ್‌ ಯೋಜನೆಗೆ ಉಡುಪಿಯನ್ನೇ ಆಯ್ಕೆ ಮಾಡಲಾಗಿತ್ತು.

ವಾಸ್ತವ್ಯ
ಈ ಶನಿವಾರ ಪಲಿಮಾರಿನಲ್ಲಿ ಗ್ರಾಮವಾಸ್ತವ್ಯ ನಡೆಯಲಿದೆ. ಇದಕ್ಕಾಗಿ ಸಿದ್ಧತೆಗಳು ನಡೆದಿವೆ. ಬ್ರಹ್ಮಾವರ ತಾಲೂಕಿನಲ್ಲಿ ನಡೆದ ಪೈಲಟ್‌ ಯೋಜನೆಯ ವರದಿಯನ್ನು ಸರಕಾರಕ್ಕೆ ಸಲ್ಲಿಸಲಾಗಿದೆ. ಯಾವುದೇ ನ್ಯೂನತೆಗಳು ಕಂಡುಬಂದಿಲ್ಲ, ಹೆಚ್ಚುವರಿ ಸೇರ್ಪಡೆಗೆ ಬೇಡಿಕೆ ಇಡಲಾಗಿದೆ.

-ಜಿ.ಜಗದೀಶ್‌, ಜಿಲ್ಲಾಧಿಕಾರಿ, ಉಡುಪಿ

ಟಾಪ್ ನ್ಯೂಸ್

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.