Udupi District: ಅಪಘಾತಕ್ಕೆ ಕಾರಣವಾಗದಿರಲಿ ವಾಹನ ಚಾಲನೆ

ಎರಡೂವರೆ ವರ್ಷಗಳಲ್ಲಿ 2,808 ಅಪಘಾತ; 423 ಸಾವು

Team Udayavani, Jun 25, 2023, 7:27 AM IST

Udupi District: ಅಪಘಾತಕ್ಕೆ ಕಾರಣವಾಗದಿರಲಿ ವಾಹನ ಚಾಲನೆ

ಉಡುಪಿ: ಮಳೆಗಾಲದಲ್ಲಿ ವಾಹನ ಚಲಾಯಿಸುವಾಗ ಆದಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸ್ವಲ್ಪ ಎಚ್ಚರ ತಪ್ಪಿದರೂ ಅಪಾಯ ಎದುರಾಗುವ ಸಾಧ್ಯತೆಗಳಿವೆ. ಜಿಲ್ಲೆಯಲ್ಲಿ 2021ರಿಂದ 2023ರ ಜೂ. 15ರ ವರೆಗೆ ಒಟ್ಟು 2,808 ಅಪಘಾತಗಳು ಸಂಭವಿಸಿವೆ. 423 ಮಂದಿ ಸಾವನ್ನಪ್ಪಿದ್ದಾರೆ.

2021ರಲ್ಲಿ ಒಟ್ಟು 1,010 ರಸ್ತೆ ಅಪಘಾತಗಳು ಉಂಟಾಗಿದ್ದು, 1,356 ಗಾಯಾಳುಗಳ ಪೈಕಿ 189 ಮಂದಿ ಸಾವನ್ನಪ್ಪಿದ್ದಾರೆ. 2022ರಲ್ಲಿ 1,232 ಅಪಘಾತ ಸಂಭವಿಸಿದ್ದು, 1,720 ಗಾಯಾಳುಗಳ ಪೈಕಿ 234 ಮಂದಿ ಸಾವನ್ನಪ್ಪಿದ್ದಾರೆ. 2023ರ ಜೂನ್‌ 15ರ ವರೆಗೆ ಸಂಭವಿಸಿದ ಅಪಘಾತಗಳ ಸಂಖ್ಯೆ 566.19 ಬ್ಲ್ಯಾಕ್‌ ಸ್ಪಾಟ್‌ಜಿಲ್ಲೆಯಲ್ಲಿ ಒಟ್ಟು 19 ಬ್ಲ್ಯಾಕ್‌ ಸ್ಪಾಟ್‌ಗಳನ್ನು ಗುರುತಿಸಲಾಗಿದೆ. ಇಲ್ಲಿ ರಾ.ಹೆ. ಹಾಗೂ ಪಿಡಬ್ಲ್ಯೂ ಡಿ ವತಿಯಿಂದ ಬೇಕಿರುವ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ರಸ್ತೆ ಸುರಕ್ಷ ವಿಭಾಗ, ಆರ್‌ಟಿಒ ಹಾಗೂ ಪೊಲೀಸ್‌ ಇಲಾಖೆಯವರು ಈ ಬ್ಲ್ಯಾಕ್‌ ಸ್ಪಾಟ್‌ಗಳಿಗೆ ತೆರಳಿ ಬೇಕಿರುವ ಅಗತ್ಯ ಕ್ರಮಗಳಾದ ಬ್ಯಾರಿಕೇಡ್‌ ಅಳವಡಿಕೆ, ಎಚ್ಚರಿಕೆ ಫ‌ಲಕ ಸಹಿತ ಹಲವಾರು ಉಪಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಬ್ಲ್ಯಾಕ್‌ ಸ್ಪಾಟ್‌ಗಳಲ್ಲಿ ಚಾಲಕರ ವೈಫ‌ಲ್ಯ, ವಾಹನಗಳ ಅಚಾತುರ್ಯ ಸಹಿತ ಅನಿರೀಕ್ಷಿತ ಅಪಘಾತಗಳು ಒಳಗೊಂಡಿವೆ. ಈ ಬಗ್ಗೆ ಈ ಮೂರು ಸಮಿತಿಗಳು ಅಗತ್ಯ ವರದಿ ಸಿದ್ಧಪಡಿಸಿ ರಸ್ತೆ ಸುರಕ್ಷಾ ಪ್ರಾಧಿಕಾರಕ್ಕೆ ಸಲ್ಲಿಸಲಿದ್ದಾರೆ.

ಕೆಲವೆಡೆ ಅಪಘಾತ ನಿಯಂತ್ರಣ
ಹೆಚ್ಚಿನ ಅಪಘಾತ ಉಂಟಾಗುತ್ತಿದ್ದ ಪ್ರದೇಶದಲ್ಲಿ ಅಗತ್ಯ ಕ್ರಮ ತೆಗೆದುಕೊಂಡ ಬಳಿಕ ಅಪಘಾತ ಕಡಿಮೆಯಾಗಿದೆ. ಉಚ್ಚಿಲದಲ್ಲಿ ಸರ್ವಿಸ್‌ ರಸ್ತೆಯಾದ ಬಳಿಕ ಯಾವುದೇ ಅಪಘಾತ ಸಂಭವಿಸಿಲ್ಲ. ಸಂತೆಕಟ್ಟೆಯಲ್ಲಿಯೂ ಅಂಡರ್‌ಪಾಸ್‌ ಆದ ಬಳಿಕ ಅಪಘಾತ ನಿಯಂತ್ರಣ ಆಗಲಿದೆ. ಮಳೆಗಾಲದಲ್ಲಿ ಅಂಡರ್‌ಪಾಸ್‌, ಓವರ್‌ಪಾಸ್‌ಗಳಲ್ಲಿ ನೀರು ನಿಲ್ಲದಂತೆ ಹೆದ್ದಾರಿ ಇಲಾಖೆಯವರೇ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಲಾಗಿದೆ.ವಿರುದ್ಧ ದಿಕ್ಕಿನ ಚಾಲನೆಯಿಂದ ಹಲವು ಅಪಘಾತವಿರುದ್ಧ ದಿಕ್ಕಿನಲ್ಲಿ ವಾಹನ ಚಲಾಯಿಸಿದ ಪರಿಣಾಮ 2021ರಲ್ಲಿ 183 ಮಂದಿ ಸಾವನ್ನಪ್ಪಿದ್ದಾರೆ. 14 ಅಪಘಾತಗಳು ಉಂಟಾಗಿವೆ. 2022ರಲ್ಲಿ 237 ಮಂದಿ ಸಾವನ್ನಪ್ಪಿದ್ದು, 35 ಅಪಘಾತಗಳು ಉಂಟಾಗಿವೆ. 2021ರಲ್ಲಿ 47 ಮಂದಿ ಪಾದಚಾರಿಗಳು ಹಾಗೂ 2022ರಲ್ಲಿ 69 ಮಂದಿ ಪಾದಚಾರಿಗಳು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ಹೆಲ್ಮೆಟ್‌ ಕಡ್ಡಾಯವಾಗಿ ಧರಿಸಿ
ದ್ವಿಚಕ್ರವಾಹನ ಚಾಲನೆ ವೇಳೆ ಹೆಲ್ಮೆಟ್‌ ಧರಿಸುವುದು ಕಡ್ಡಾಯವಾಗಿದೆ. 2021ರಲ್ಲಿ ಹೆಲ್ಮೆಟ್‌ ಇಲ್ಲದೆ ವಾಹನ ಚಲಾಯಿಸಿದ ಪರಿಣಾಮ 20 ಮಂದಿ ಹಾಗೂ 2022ರಲ್ಲಿ 26 ಮಂದಿ ಸಾವನ್ನಪ್ಪಿದ್ದಾರೆ.

ಶೂನ್ಯ ಅಪಘಾತ
ಅಪಘಾತ ವಲಯವಾದ ಕಟಪಾಡಿ ಜಂಕ್ಷನ್‌, ಕೋಟದಲ್ಲಿ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡ ಪರಿಣಾಮ ಕಳೆದ 5 ತಿಂಗಳಿನಲ್ಲಿ ಯಾವುದೇ ಅಪಘಾತ ಸಂಭವಿಸಿಲ್ಲ.

ಎಚ್ಚರ ಅಗತ್ಯ
ವಾಹನ ಚಲಾಯಿಸುವ ವೇಳೆ ರಸ್ತೆ ಸುರಕ್ಷಾ ನಿಯಮಾವಳಿಯನ್ನು ಪಾಲಿಸುವ ಜತೆಗೆ ಆದಷ್ಟು ಎಚ್ಚರದಿಂದ ಇರಬೇಕು. ಮಳೆಗಾಲದಲ್ಲಿಯೂ ವಾಹನವನ್ನು ನಿಧಾನವಾಗಿ ಚಲಾಯಿಸಿದರೆ ಉತ್ತಮ.
– ಹಾಕೆ ಅಕ್ಷಯ್‌ ಮಚ್ಚೀಂದ್ರ,
ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ, ಉಡುಪಿ

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.