ಉಡುಪಿ ಜಿಲ್ಲೆ: ಉತ್ತಮ ಮಳೆ; ಬೈಂದೂರು ಭಾಗದಲ್ಲಿ ಮನೆಗಳಿಗೆ ಹಾನಿ


Team Udayavani, Jun 12, 2020, 5:04 AM IST

ಉಡುಪಿ ಜಿಲ್ಲೆ: ಉತ್ತಮ ಮಳೆ; ಬೈಂದೂರು ಭಾಗದಲ್ಲಿ ಮನೆಗಳಿಗೆ ಹಾನಿ

ಉಡುಪಿ: ಜಿಲ್ಲೆಯ ವಿವಿಧ ಭಾಗಗಳಲ್ಲಿ ಗುರುವಾರ ಉತ್ತಮ ಮಳೆ ಸುರಿದ ಪರಿಣಾಮ ಬೈಂದೂರು ತಾಲೂಕಿನ ಅದಮಕ್ಕಿ ನಿವಾಸಿ ಅಪ್ಪಯ್ಯ ಶೆಟ್ಟಿ ಅವರ ಮನೆಗೆ ಸಿಡಿಲು ಬಡಿದು ಅಂದಾಜು 30 ಸಾವಿರ ರೂ. ನಷ್ಟ ಉಂಟಾಗಿದೆ.

ಇದೇ ತಾಲೂಕಿನ ನೀಲಾ ಫೆರ್ನಾಂಡಿಸ್‌ ಅವರ ಮನೆಗೂ ಗಾಳಿ ಮಳೆಯಿಂದ ಹಾನಿಯಾಗಿ ಅಂದಾಜು 30 ಸಾವಿರ ರೂ.ಗಳಷ್ಟು ನಷ್ಟ ಸಂಭವಿಸಿದೆ. ನಾವುಂದದಲ್ಲಿ ಸೂರ ಪೂಜಾರಿಯವರ ಮನೆಯ ಬಾವಿ ಕುಸಿದು ಹಾನಿಯಾಗಿದೆ. ನಗರದಲ್ಲಿ ಬೆಳಗ್ಗೆಯಿಂದ ಸಂಜೆಯವರೆಗೆ ಮಳೆಯಾಗಿದೆ.

ಜೂ.12ರಿಂದ 15ರ ವರೆ‌ಗೆ ಕರಾವಳಿ ಭಾಗದಲ್ಲಿ ಭಾರೀ ಗಾಳಿ-ಮಳೆ ಆಗುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಸಿತ್ತು.

ಉಡುಪಿ ನಗರ, ಮಣಿಪಾಲ, ಉದ್ಯಾವರ. ಮಲ್ಪೆ, ಪರ್ಕಳ, ದೊಡ್ಡಣಗುಡ್ಡೆ ಸೇರಿದಂತೆ ಹಲವು ಭಾಗಗಳಲ್ಲಿ ಮಳೆಯಾಗಿದೆ.

ಹೆದ್ದಾರಿ ಹಾಗೂ ಇನ್ನಿತರ ಕಡೆಗಳಲ್ಲಿ ಚರಂಡಿಯಲ್ಲಿ ಮಳೆ ನೀರು ಹರಿಯದೆ ರಸ್ತೆಯಲ್ಲೇ ಕೆಸರು ಮಿಶ್ರಿತ ನೀರು ಹರಿಯಿತು. ಬುಧವಾರ ತಡರಾತ್ರಿ ಕೂಡ ಜಿಲ್ಲೆಯ ಹಲವು ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಉತ್ತಮ ಮಳೆಯಾಗಿತ್ತು. ಕಾರ್ಕಳ, ಹೆಬ್ರಿ, ಕಾಪು ತಾಲೂಕುಗಳ ವಿವಿಧ ಭಾಗಗಳಲ್ಲಿ ಕೂಡ ಉತ್ತಮ ಮಳೆಯಾದ
ಬಗ್ಗೆ ವರದಿಯಾಗಿದೆ.

ಉಡುಪಿ 86.6 ಮಿ.ಮೀ., ಕುಂದಾಪುರ 107.4 ಮಿ.ಮೀ., ಕಾರ್ಕಳ 79.5 ಮಿ.ಮೀ.ಗಳಷ್ಟು ಮಳೆಯಾಗಿದ್ದು. ಗುರುವಾರ ಬೆಳಗ್ಗೆ 8ರ ವರೆಗಿನ ಅದರ ಹಿಂದಿನ 24 ತಾಸುಗಳಲ್ಲಿ ಜಿಲ್ಲೆಯ ಸರಾಸರಿ ಮಳೆ ಪ್ರಮಾಣ 93.60 ಮಿ. ಮೀ. ದಾಖಲಾಗಿದೆ.

ಕುಂದಾಪುರ ನಗರ, ತೆಕ್ಕಟ್ಟೆ , ಕೋಟೇಶ್ವರ ಬೀಜಾಡಿ, ಗೋಪಾಡಿ, ವಕ್ವಾಡಿ ಪರಿಸರ, ಬಸೂÅರು, ಸಿದ್ದಾಪುರ, ಹೊಸಂಗಡಿ, ಯಡಮೊಗೆ, ಹಳ್ಳಿಹೊಳೆ, ಆಜ್ರಿ, ಅಂಪಾರು, ಶಂಕರನಾರಾಯಣ, ಹಾಲಾಡಿ, ಗೋಳಿಯಂಗಡಿ, ಬೆಳ್ವೆ , ಮಡಾಮಕ್ಕಿ , ಹೆಂಗವಳ್ಳಿ , ಅಮಾಸೆಬೈಲು, ಉಳ್ಳೂರು-74 ಸುತ್ತಮುತ್ತ ಉತ್ತಮ ಮಳೆಯಾಗಿದೆ.

ಮುದ್ರಾಡಿ: ಕುಸಿದ ಪುರಾತನ ಕೆರೆ , ಲಕ್ಷಾಂತರ ರೂ. ನಷ್ಟ
ಹೆಬ್ರಿ: ತಾಲೂಕಿನ ಮುದ್ರಾಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಬರಬೆಟ್ಟು ಕೃಷಿ ನೀರಾವರಿಗೆ ನಿರ್ಮಿಸಿದ ಸುಮಾರು 25 ವರ್ಷಗಳ ಹಿಂದಿನ ಬೃಹತ್‌ ಕೆರೆಯೊಂದು ಮಳೆಗೆ ಕುಸಿದಿದ್ದು ಲಕ್ಷಾಂತರ ರೂ. ನಷ್ಟ ಸಂಭವಿಸಿದೆ.

120 ಅಡಿ ವಿಸ್ತಾರವಾದ ಬೃಹತ್‌ ಕೆರೆ 40 ಅಡಿ ಆಳವಿದ್ದು ಅಡಿಕೆ, ತೆಂಗು ಮೊದಲಾದ ಕೃಷಿ ಚಟು ವಟಿಕೆಗಳಿಗೆ ಈ ನೀರು ಆಶ್ರಯವಾಗಿತ್ತು. ಕೆರೆಯ ಅರ್ಧ ಭಾಗ ಸಂಪೂರ್ಣ ಕುಸಿದಿದ್ದು ದುರಸ್ತಿಗೆ ಸುಮಾರು 40 ಲಕ್ಷ ರೂ. ಖರ್ಚು ತಗಲಬಹುದು ಎಂದು ಅಂದಾಜಿಸಲಾಗಿದೆ. ಈ ಭಾಗದಲ್ಲಿ ಇಂತಹ ಬೃಹತ್‌ ಕೆರೆ ವಿರಳವಾಗಿದ್ದು ನೂತನವಾಗಿ ಇಂತಹ ಕೆರೆ ನಿರ್ಮಾಣ ಮಾಡಲು ಸುಮಾರು 1 ಕೋ.ರೂ. ತಗಲಬಹುದು.

ಕೃಷಿಗೆ ತೊಂದರೆ
ಈ ಭಾಗದಲ್ಲಿ ಇಂತಹ ಕೆರೆಗಳು ಕಾಣ ಸಿಗುವುದು ವಿರಳ. 25 ವರ್ಷಗಳ ಹಿಂದೆ ನಿರ್ಮಾಣ ಮಾಡುವಾಗ ಸುಮಾರು 500 ಲೋಡ್‌ ಕಲ್ಲುಗಳನ್ನು ಬಳಸಲಾಗಿತ್ತು. ಸಂಪೂರ್ಣ ಕೃಷಿ ಚಟುವಟಿಕೆಗಳಿಗೆ ಈ ನೀರನ್ನೇ ನಂಬಿದ್ದು ಇದರ ದುರಸ್ತಿಯಾಗದಿದ್ದಲ್ಲಿ ಕೃಷಿಗೆ ತೊಂದರೆಯಾಗಲಿದೆ..
-ಸುಧಾಕರ ಶೆಟ್ಟಿ , ಕೃಷಿಕರು,
ಬರ್ಬೆಟ್ಟು ಮುದ್ರಾಡಿ

ಟಾಪ್ ನ್ಯೂಸ್

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-

Gangolli: ರಿಕ್ಷಾ-ಕಾರು ಢಿಕ್ಕಿ

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

16

Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.