ಉಡುಪಿ ಜಿಲ್ಲೆ : ವಿವಿಧೆಡೆ ಉತ್ತಮ ಮಳೆ
ಮಣಿಪಾಲ ಹೆದ್ದಾರಿ ಬದಿ ಮಣ್ಣು ಕುಸಿತ; ಸವಾರರಲ್ಲಿ ಆತಂಕ
Team Udayavani, Jun 15, 2020, 6:01 AM IST
ಉಡುಪಿ: ಜಿಲ್ಲೆಯಲ್ಲಿ ಎಲ್ಲೆಡೆ ಉತ್ತಮ ಮಳೆಯಾಗಿದ್ದು ಗಾಳಿ, ಸಿಡಿಲು ಇಲ್ಲದ್ದರಿಂದ ಹೆಚ್ಚಿನ ಹಾನಿ ಸಂಭವಿಸಿಲ್ಲ. ತಾಲೂಕಿನಲ್ಲಿ ಜೂ. 14ರ ಬೆಳಗ್ಗೆ 8.30 ಗಂಟೆವರೆಗೆೆ 24 ತಾಸುಗಳಲ್ಲಿ ಸರಾಸರಿ 67 ಮಿ.ಮೀ. ಮಳೆಯಾಗಿದೆ.ರವಿವಾರ ಬೆಳಗ್ಗಿನಿಂದಲೇ ಭಾರೀ ಮಳೆಯಾಗಿದ್ದು, ಮಧ್ಯಾಹ್ನ 3 ಗಂಟೆ ಬಳಿಕ ತೀವ್ರಗೊಂಡಿತು.
ಬ್ರಹ್ಮಾವರ ತಾಲೂಕಿನ ಕೋಟತಟ್ಟು ಗ್ರಾಮದ ಸುಮತಿ ಅವರ ಮನೆಗೆ ಭಾಗಶಃ ಹಾನಿಯಾಗಿದ್ದು, 30,000 ರೂ. ನಷ್ಟ ಅಂದಾಜಿಸಲಾಗಿದೆ. ಹಲುವಳ್ಳಿ ಗ್ರಾಮದ ಅಪ್ಪಿ ಅವರ ಮನೆಗೆ ಹಾನಿಯಾಗಿ ಸುಮಾರು 15,000 ರೂ. ನಷ್ಟ ಅಂದಾಜಿಸಲಾಗಿದೆ.
ಮಣ್ಣು ಕುಸಿತ: ಆತಂಕ
ರಾಷ್ಟ್ರೀಯ ಹೆದ್ದಾರಿ 169ಎಯ ಮಣಿಪಾಲ ಲಕ್ಷ್ಮೀಂದ್ರನಗರದ ಐನಾಕ್ಸ್ ಚಿತ್ರಮಂದಿರದ ಮುಂಭಾಗದ ಗುಡ್ಡದ ಮಣ್ಣು ಕುಸಿದು ವಾಹನ ಚಾಲಕರಲ್ಲಿ ಆತಂಕ ಉಂಟಾಗಿದೆ. ರವಿವಾರ ಬೆಳಗ್ಗಿನ ಸಮಯ ಮಣ್ಣು ಕುಸಿದು ರಸ್ತೆಗೆ ಬಿದ್ದಿದ್ದು ಕಳೆದ ಬಾರಿಯೂ ಸಹ ಇದೇ ಸಮಯದಲ್ಲಿ ಮಣ್ಣು ಕುಸಿತ ವಾಗಿತ್ತು.
ರಸ್ತೆ ವಿಸ್ತರಣೆಯ ಸಮಯದಲ್ಲಿ ಗುಡ್ಡದ ಬುಡದ ಮಣ್ಣನ್ನು ತೆರವುಗೊಳಿಸ ಲಾಗಿತ್ತು. ಇದರಿಂದ ಮಣ್ಣು ಸಡಿಲಗೊಂಡಿದೆ. ಸ್ವಲ್ಪ ದೂರದಲ್ಲೇ ಕಟ್ಟಡಗಳೂ ಇವೆ. ರಸ್ತೆಗೆ ಹೊಂದಿಕೊಂಡಂತೆ ಇರುವ ಈ ಪ್ರದೇಶ ಅಪಾಯಕಾರಿಯಾಗಿದೆ. ಯಾವುದೇ ಸಂದರ್ಭದಲ್ಲಿ ಮಣ್ಣು ವಾಹನಗಳ ಮೇಲೆ ಬೀಳುವ ಅಪಾಯ ವಿರುವ ಹಿನ್ನೆಲೆಯಲ್ಲಿ ರೈಲ್ವೇ ಇಲಾಖೆ ಬಳಸುವ ಕಬ್ಬಿಣದ ಬಲೆಯನ್ನು ಹಾಕುವಂತೆ ಸಾರ್ವಜನಿಕರು ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ.
ಬ್ರಹ್ಮಾವರ: ಮನೆ, ಹಟ್ಟಿಗೆ ಹಾನಿ
ಗಾಳಿ ಮಳೆಯಿಂದ ಹೇರೂರು ಕಣ್ಣಬೆಟ್ಟಿನ ತಿಮ್ಮ ಪೂಜಾರಿ ಅವರ ಮನೆ ಮೇಲೆ ಮರ ಬಿದ್ದು ಹಾನಿಯಾಗಿದೆ. ಹಂದಾಡಿ ಗ್ರಾಮದ ಮೀನಕ್ಕ ಪೂಜಾರಿ ಅವರ ಹಟ್ಟಿ ಕುಸಿದು ಭಾಗಶಃ ಹಾನಿಯಾಗಿದೆ.
ಕುಂದಾಪುರ : ಸಾಧಾರಣ ಮಳೆ
ಕುಂದಾಪುರ: ಬೈಂದೂರು ಹಾಗೂ ಕುಂದಾಪುರ ತಾಲೂಕಿನೆಲ್ಲೆಡೆ ರವಿವಾರ ಬೆಳಗ್ಗಿನಿಂದ ಸಂಜೆಯವರೆಗೂ ಸಾಧಾರಣ ಮಳೆಯಾಗಿದೆ.
ಕುಂದಾಪುರ, ಹೆಮ್ಮಾಡಿ, ಗಂಗೊಳ್ಳಿ, ಮರವಂತೆ, ಉಪ್ಪುಂದ, ಬೈಂದೂರು, ಕೊಲ್ಲೂರು, ಹೊಸಂಗಡಿ, ಸಿದ್ದಾಪುರ, ಹಾಲಾಡಿ, ತೆಕ್ಕಟ್ಟೆ, ಗೋಳಿಯಂಗಡಿ, ಅಂಪಾರು, ಕಂಡ್ಲೂರು, ಬಸೂÅರು, ಶಂಕರನಾರಾಯಣ, ಕೊಲ್ಲೂರು, ಜಡ್ಕಲ್, ಮುಡೂರು, ವಂಡ್ಸೆ, ಕೆರಾಡಿ, ಕಾರ್ಕಳ, ಬೆಳ್ಮಣ್ ಮುಂತಾದೆಡೆ ಮಳೆಯಾದ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ