ಹಸುರು ವಲಯದ ಉಡುಪಿ ಜಿಲ್ಲೆ: ನಾಳೆ ಮತ್ತಷ್ಟು ವಿನಾಯಿತಿ ನಿರೀಕ್ಷೆ


Team Udayavani, May 2, 2020, 5:55 AM IST

ಹಸುರು ವಲಯದ ಉಡುಪಿ ಜಿಲ್ಲೆ: ನಾಳೆ ಮತ್ತಷ್ಟು ವಿನಾಯಿತಿ ನಿರೀಕ್ಷೆ

ಸಾಂದರ್ಭಿಕ ಚಿತ್ರ.

ಉಡುಪಿ: ಹಲವು ದಿನಗಳ ಲಾಕ್‌ಡೌನ್‌ ಬಳಿಕ ಉಡುಪಿ ಜಿಲ್ಲೆ ಹಸುರು ವಲಯದ ಹಲವು ವಿನಾಯಿತಿಗಳನ್ವಯ ಆರ್ಥಿಕ ಚಟುವಟಿಕೆ ನಿಧಾನವಾಗಿ ತೆರೆದುಕೊಳ್ಳುತ್ತಿದೆ.

ಸಂಪೂರ್ಣ ಲಾಕ್‌ಡೌನ್‌ ಅವಧಿಯಲ್ಲಿ ದಿನವಹಿ ಅಗತ್ಯದ ದಿನಸಿ ಅಂಗಡಿಗಳು, ತರಕಾರಿ ಅಂಗಡಿಗಳು ಮಾತ್ರ ತೆರೆದಿದ್ದರೆ, ಎರಡು ದಿನ ಗಳಿಂದ ಬಹುತೇಕ ಸಣ್ಣ ಪುಟ್ಟ ಅಂಗಡಿಗಳು ತೆರೆದು ವ್ಯವಹಾರ ನಡೆಸುತ್ತಿವೆ. ಇಲೆಕ್ಟ್ರೀಶಿ ಯನ್‌, ಪ್ಲಂಬರ್‌ಗಳು ಮನೆಮನೆಗಳಿಗೆ ತೆರಳಿ ಕೆಲಸ ನಿರ್ವಹಿಸುತ್ತಿದ್ದಾರೆ. ಈಗ ಬೆಳಗ್ಗೆ 7ರಿಂದ 11 ಗಂಟೆವರೆಗೆ ಮಾತ್ರ ಶಾಪ್‌ಗ್ಳು ತೆರೆದಿ ರುತ್ತಿದ್ದು, ಮೇ 3ರ ಬಳಿಕ ಸಮಯದ ವಿಸ್ತರಣೆ ಆಗಬಹುದೇ ಎಂಬ ನಿರೀಕ್ಷೆ ಇದೆ.

ಕಟ್ಟಡ, ರಸ್ತೆ, ಸೇತುವೆ ಮೊದಲಾದ ಕಾಮ ಗಾರಿಗಳು ನಿಧಾನವಾಗಿ ಆರಂಭಗೊಂಡಿವೆ. ಕೈಗಾರಿಕೆಗಳನ್ನು ಆರಂಭಿಸಲು ಅನುಮತಿ ಕೊಟ್ಟಿದ್ದಾರಾದರೂ ಕಚ್ಚಾ ಸಾಮಗ್ರಿಗಳ ಪೂರೈಕೆ ಕೊರತೆಯಿಂದ ಕೆಲವು ಘಟಕಗಳು ಇನ್ನೂ ಆರಂಭವಾಗಿಲ್ಲ. ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕೆಂಬ ಷರತ್ತನ್ನು ಪರಿಪಾಲಿ ಸುವುದೇ ಕೆಲವು ಕ್ಷೇತ್ರಗಳಲ್ಲಿ ಕಷ್ಟಕರವಾಗಿದೆ.

ಯಾವುದೇ ಚಟುವಟಿಕೆ ಆರಂಭವಾಗಲು ಸಾರ್ವಜನಿಕ ಸಾರಿಗೆ ಆರಂಭವಾಗಬೇಕು. ಈಗಾಗಲೇ ಗ್ರಾಮಾಂತರದಲ್ಲಿ ಅನಿವಾರ್ಯ ವಾಗಿ ಆಟೋರಿಕ್ಷಾಗಳಲ್ಲಿ ಸಂಚರಿಸುತ್ತಿದ್ದಾರೆ. ಬಸ್ಸುಗಳು ಆರಂಭಗೊಂಡರೂ ಹಣ ಕೊಡುವುದು, ಪಡೆಯುವುದನ್ನು ತಪ್ಪಿಸಲು ಡಿಜಿಟಲ್‌ ಪೇಮೆಂಟ್‌ ಮೂಲಕ ಸಾಧ್ಯವೇ ಎಂಬ ಬಗ್ಗೆ ಬಸ್‌ ಮಾಲಕರು ಚಿಂತನೆ ನಡೆಸುತ್ತಿದ್ದಾರೆ.

ಪ್ರಯಾಣದರ ಹೆಚ್ಚಳವಾಗಲಿದೆಯೆ?
ಶೇ. 40ರಷ್ಟು ಪ್ರಯಾಣಿಕರನ್ನು ಕರೆ ದೊಯ್ಯಲು ಅವಕಾಶ ಕೊಡುವಾಗ ಪ್ರಯಾಣ ದರವನ್ನೂ ಹೆಚ್ಚಿಸಲು ಜಿಲ್ಲಾಡಳಿತ ಅನುಮತಿ ಕೊಡಬೇಕು. ಈ ನಿಟ್ಟಿನಲ್ಲಿ ಬಸ್‌ ಮಾಲಕರ ಸಂಘದ ಸಭೆ ಕರೆಯಲು ಜಿಲ್ಲಾಧಿಕಾರಿಯವರಿಗೆ ಮನವಿ ಮಾಡಿದ್ದೇನೆ ಎಂದು ಉಡುಪಿ ಸಿಟಿ ಬಸ್‌ ಮಾಲಕರ ಸಂಘದ ಅಧ್ಯಕ್ಷ ಮತ್ತು ಕೆನರಾ ಬಸ್‌ ಮಾಲಕರ ಸಂಘದ ಪ್ರಧಾನ ಕಾರ್ಯದರ್ಶಿ ಕುಯಿಲಾಡಿ ಸುರೇಶ ನಾಯಕ್‌ ತಿಳಿಸಿದ್ದಾರೆ. ಖಾಸಗಿಯವರು ಪ್ರಯಾಣದರ ಹೆಚ್ಚಿಸಿದರೆ ಕೆಎಸ್ಸಾರ್ಟಿಸಿಯವರೂ ಪ್ರಯಾಣದರ ಹೆಚ್ಚಿಸುವ ಸಾಧ್ಯತೆ ಇದೆ.

ಪ್ರಸ್ತುತ ಕೆಎಸ್ಸಾರ್ಟಿಸಿ ಬಸ್ಸುಗಳನ್ನು ಡಿಪೋ ಗಳಲ್ಲಿ ನಿಲ್ಲಿಸಲಾಗಿದೆ. ತೆರಿಗೆ ಪಾವತಿಸಬೇಕಾದ ಕಾರಣ ಖಾಸಗಿ ಬಸ್ಸುಗಳ ಪರ್ಮಿಟ್‌ಗಳನ್ನು ಪ್ರಾದೇಶಿಕ ಸಾರಿಗೆ ಕಚೇರಿಗೆ ಸರೆಂಡರ್‌ ಮಾಡಲಾಗಿದೆ.

ರಿಯಾಯಿತಿ ನಿರೀಕ್ಷೆ
ಮೇ 3ರ ಬಳಿಕದ ಸ್ಥಿತಿಗತಿ ಕುರಿತು ಕೇಂದ್ರ ಸರಕಾರ ಮೇ 2ರಂದು ಮಾರ್ಗದರ್ಶಿ ಸೂತ್ರ ಗಳನ್ನು ಹೊರಡಿಸಲಿದ್ದು, ಅದರನ್ವಯ ರಾಜ್ಯ ಸರಕಾರ ನಿರ್ಧಾರ ಪ್ರಕಟಿಸಲಿದೆ. ಹಸುರು ವಲಯದಲ್ಲಿರುವ ಉಡುಪಿಗೆ ರಿಯಾಯಿತಿ ನಿರೀಕ್ಷೆಯೂ ಇದೆ.

ಜಿಲ್ಲೆಯಿಂದ ಜಿಲ್ಲೆಗೆ ಜನರನ್ನು ಕಳುಹಿಸಲು ಜಿಲ್ಲಾಡಳಿತ ಕ್ರಮ ಕೈಕೊಂಡಿದ್ದು, ರಾಜ್ಯದಿಂದ ರಾಜ್ಯಕ್ಕೆ ಜನ ಸಂಚಾರದ ರೂಪುರೇಖೆಗಳು ಸಿದ್ಧಗೊಳ್ಳುತ್ತಿವೆ. ಮೇ 3ರ ಅನಂತರದ ಚಿತ್ರಣ ಮೇ 2ರಂದು ಸಿಗಲಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್‌ ತಿಳಿಸಿದ್ದಾರೆ.

ಬಸ್‌ ಶುರುವಾಗುತ್ತಾ?
ಮೇ 3ರ ಬಳಿಕ ಜಿಲ್ಲೆಯೊಳಗೆ ಸಂಚರಿಸಲು ಬಸ್ಸುಗಳಿಗೆ ಅವಕಾಶ ದೊರೆಯುವ ಸಾಧ್ಯತೆ ಇದ್ದರೂ ಇದು ಎಷ್ಟರ ಮಟ್ಟಿಗೆ ಸಾಧ್ಯ ಎಂಬ ಪ್ರಶ್ನೆ ಮೂಡುತ್ತಿದೆ. ಬಸ್ಸುಗಳಲ್ಲಿ ಸಾಮರ್ಥ್ಯದ ಶೇ.40ರಷ್ಟು ಪ್ರಯಾಣಿಕರನ್ನು ಮಾತ್ರ ಕರೆದೊಯ್ಯಬೇಕೆಂಬ ನಿಯಮ ಕಾರ್ಯಸಾಧ್ಯವಲ್ಲ ಎನ್ನುತ್ತಾರೆ ಖಾಸಗಿ ಬಸ್‌ ಮಾಲಕರು. ಕೆಎಸ್ಸಾರ್ಟಿಸಿ ಬಸ್ಸುಗಳಾದರೂ ಶೇ. 40ರಷ್ಟು ಪ್ರಯಾಣಿಕರನ್ನು ಕರೆದೊಯ್ಯಬಹುದು. ಏಕೆಂದರೆ ಕೆಎಸ್ಸಾರ್ಟಿಸಿ ಸರಕಾರದ್ದು. ಕೆಎಸ್ಸಾರ್ಟಿಸಿಯವರಿಗೆ ಸಂಗ್ರಹವಾದ ಮೊತ್ತದ ಮೇಲೆ ತೆರಿಗೆ ವಿಧಿಸುತ್ತಾರೆ. ಖಾಸಗಿಯವರಿಗೆ ಸೀಟು ಸಂಖ್ಯೆಯ ಆಧಾರದಲ್ಲಿ ತೆರಿಗೆ ವಿಧಿಸುತ್ತಾರೆ ಎಂಬ ವಾದ ಇವರದು.

ಟಾಪ್ ನ್ಯೂಸ್

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ ಅಡಿಗೆ ಸಿಲುಕಿದ ಬೈಕ್; ಯಕ್ಷಗಾನ ಕಲಾವಿದ ಸ್ಥಳದಲ್ಲೇ ಮೃತ್ಯು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.