ಉಡುಪಿ:ಆರೋಗ್ಯ ಇಲಾಖೆಯಲ್ಲಿ ಶೇ.50ಕ್ಕೂ ಅಧಿಕ ಹುದ್ದೆ ಖಾಲಿ!


Team Udayavani, Feb 13, 2024, 1:25 PM IST

ಉಡುಪಿ: ಆರೋಗ್ಯ ಇಲಾಖೆಯಲ್ಲಿ ಶೇ.50ಕ್ಕೂ ಅಧಿಕ ಹುದ್ದೆ ಖಾಲಿ!

ಉಡುಪಿ: ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ಶೇ.50ಕ್ಕೂ ಅಧಿಕ ಹುದ್ದೆಗಳು ಹಲವಾರು ವರ್ಷಗಳಿಂದ ಖಾಲಿಬಿದ್ದಿವೆ. ಇದರಿಂದಾಗಿ ಪ್ರಮುಖ ಸೇವೆ ನೀಡಲು ವೈದ್ಯರ ಕೊರತೆ ಉಂಟಾಗುತ್ತಿದೆ. ಜಿಲ್ಲೆಗೆ ಮಂಜೂರಾದ 2,390 ಹುದ್ದೆಗಳ ಪೈಕಿ ಕರ್ತವ್ಯ ನಿರ್ವಹಿಸುವವರು 1,570 ಮಂದಿ ಮಾತ್ರ. ಉಳಿದ 825 ಹುದ್ದೆಗಳು ಖಾಲಿಯಿವೆ.

ಮಂಜೂರಾದ 240 ಎಚ್‌ಐಒ ಹುದ್ದೆಗಳ ಪೈಕಿ 28 ಮಂದಿ ಕರ್ತವ್ಯ ನಿರ್ವಹಿಸಿಕೊಂಡಿದ್ದು, 212 ಹುದ್ದೆಗಳು ಖಾಲಿಯಿವೆ. 275 ಗ್ರೂಪ್‌ “ಡಿ’ ಹುದ್ದೆಗಳ ಪೈಕಿ 60 ಮಂದಿ ಮಾತ್ರ ಕರ್ತವ್ಯ ನಿರ್ವಹಿಸುತ್ತಿದ್ದಾರೆ. 215 ಹುದ್ದೆಗಳು ಖಾಲಿಯಿವೆ.

ಪಿಎಚ್‌ಸಿಒ 363 ಹುದ್ದೆಗಳ ಪೈಕಿ 181 ಮಂದಿ ಕರ್ತವ್ಯ ನಿರ್ವಹಿಸಿ ಕೊಂಡಿದ್ದು, 182 ಹುದ್ದೆಗಳು ಖಾಲಿಯಿವೆ. 109 ಕ್ಲರಿಕಲ್‌ ಹುದ್ದೆಗಳ ಪೈಕಿ 26 ಮಂದಿ ಕರ್ತವ್ಯ ನಿರ್ವಹಿಸಿಕೊಂಡಿದ್ದು, 88 ಹುದ್ದೆಗಳು ಖಾಲಿಯಿವೆ. 1,028 ಆಶಾ ಕಾರ್ಯಕರ್ತೆಯರ ಹುದ್ದೆಗಳಲ್ಲಿ 980 ಮಂದಿ ಕರ್ತವ್ಯ ನಿರ್ವಹಿಸಿಕೊಂಡಿದ್ದು, 48 ಹುದ್ದೆಗಳು ಖಾಲಿಯಿವೆ. 74 ಫಾರ್ಮಸಿ ಅಧಿಕಾರಿಗಳ ಹುದ್ದೆಯಲ್ಲಿ 28 ಮಂದಿಯಷ್ಟೇ ಕರ್ತವ್ಯ ನಿರ್ವಹಿಸುತ್ತಿದ್ದು, 46 ಹುದ್ದೆಗಳು ಖಾಲಿಯಿವೆ.

ನುರಿತ ವೈದ್ಯರ ಕೊರತೆ

ಜಿಲ್ಲೆಗೆ 38 ನುರಿತ ವೈದ್ಯಾಧಿಕಾರಿಗಳ ಹುದ್ದೆ ಇದ್ದು, ಈ ಪೈಕಿ 26 ಮಂದಿ ಕರ್ತವ್ಯ ನಿರ್ವಹಿಸಿಕೊಂಡಿದ್ದರೆ 12 ಹುದ್ದೆಗಳು ಖಾಲಿಯಿವೆ. ಕ್ಯಾಶುವಲ್ಟಿ ಮೆಡಿಕಲ್‌ ಆಫೀಸರ್‌ ಗಳ 8 ಹುದ್ದೆಯಲ್ಲಿ 6 ಹುದ್ದೆಗಳು ಭರ್ತಿಯಾಗಿದ್ದು, 2 ಖಾಲಿಯಿವೆ. 60 ಮಂದಿ ಎಂಬಿಬಿಎಸ್‌ ವೈದ್ಯರು ಕರ್ತವ್ಯ ನಿರ್ವಹಿಸಿಕೊಂಡಿದ್ದು, 1 ಹುದ್ದೆಯಷ್ಟೇ ಖಾಲಿಯಿದೆ.

ಗ್ರಾಮೀಣ ಭಾಗಕ್ಕೆ ಬೇಕಿದೆ ಹೆರಿಗೆ ತಜ್ಞರು

ಜಿಲ್ಲೆಯಲ್ಲಿ 7 ಮಂದಿ ಹೆರಿಗೆ ತಜ್ಞರಿಗೆ ಬೇಡಿಕೆಯಿದ್ದು, 3 ಮಂದಿ ಮಾತ್ರ ಕರ್ತವ್ಯ ನಿರ್ವಹಿಸಿಕೊಂಡಿದ್ದಾರೆ. ಅದರಲ್ಲಿಯೂ ಗ್ರಾಮೀಣ ಭಾಗದಲ್ಲಿ ಖಾಸಗಿ ಆಸ್ಪತ್ರೆಗಳ ಕೊರತೆ ಇರುವ ಕಾರಣ ಎಲ್ಲರೂ ಸರಕಾರಿ ಆಸ್ಪತ್ರೆಗಳಿಗೆ ಬರುತ್ತಿದ್ದಾರೆ. ಕಾರ್ಕಳದಲ್ಲಿ ಶೀಘ್ರ ಹೆರಿಗೆ ತಜ್ಞರ ನೇಮಕ ಆಗಬೇಕೆಂಬ ಬಗ್ಗೆ ಇತ್ತೀಚೆಗೆ ಆರೋಗ್ಯ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಪ್ರಗತಿಪರಿಶೀಲನೆ ಸಭೆಯಲ್ಲೂ ಆಗ್ರಹಿಸಲಾಗಿತ್ತು.

ಎನ್‌ಎಚ್‌ಎಂ ಹುದ್ದೆಗಳಲ್ಲಿ ಕೆಲವು ಖಾಲಿ
ರಾಷ್ಟ್ರೀಯ ಆರೋಗ್ಯ ಮಿಷನ್‌ (ಎನ್‌ಎಚ್‌ಎಂ) ಅಡಿಯಲ್ಲಿ 737 ಹುದ್ದೆಗಳು ಮಂಜೂರಾಗಿದ್ದು, 703 ಹುದ್ದೆಗಳು ಕಾರ್ಯನಿರ್ವಹಿಸಿಕೊಂಡಿವೆ. 34 ಹುದ್ದೆ ಬಾಕಿ ಉಳಿದಿದೆ. 3 ಮಂದಿ ಎಂಬಿಬಿಎಸ್‌ ವೈದ್ಯರು, 7 ನುರಿತ ವೈದ್ಯರು, ಒಬ್ಬರು ಸ್ಟಾಫ್ ನರ್ಸ್‌, 15 ಸಿಎಚ್‌ಒ, ಹೊರಗುತ್ತಿಗೆ ಆಧಾರದಲ್ಲಿ ಇಬ್ಬರು ಸಹಿತ ಇತರ 4 ಹುದ್ದೆಗಳು ಖಾಲಿಯಿವೆ.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.