ಗ್ರಾಮೀಣ ಭಾಗಕ್ಕೆ ಕೆಎಸ್ಸಾರ್ಟಿಸಿ ಸೇವೆ

ಉಡುಪಿಯ ಡಾ| ವಿ.ಎಸ್‌. ಆಚಾರ್ಯ ಬಸ್‌ ನಿಲ್ದಾಣ ಉದ್ಘಾಟನೆ

Team Udayavani, Apr 12, 2022, 6:20 AM IST

ಗ್ರಾಮೀಣ ಭಾಗಕ್ಕೆ ಕೆಎಸ್ಸಾರ್ಟಿಸಿ ಸೇವೆ

ಉಡುಪಿ: ಖಾಸಗಿ ಸಾರಿಗೆ ವ್ಯವಸ್ಥೆಗಿಂತ ಸರಕಾರಿ ಸಾರಿಗೆ ವ್ಯವಸ್ಥೆ ದಕ್ಷತೆಯಿಂದ ಹೆಚ್ಚಿನ ಸೇವೆ ನೀಡಬೇಕು. ಗ್ರಾಮೀಣ ಭಾಗಕ್ಕೆ ಕೆಎಸ್ಸಾರ್ಟಿಸಿ ಸೇವೆ ಸಿಗುವಂತಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ  ಬೊಮ್ಮಾಯಿ ಹೇಳಿದರು.

ಬನ್ನಂಜೆಯಲ್ಲಿ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ನಿರ್ಮಾಣಗೊಂಡ ಡಾ| ವಿ.ಎಸ್‌. ಆಚಾರ್ಯ ಬಸ್‌ ನಿಲ್ದಾಣವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು.

ಡಾ| ಆಚಾರ್ಯ ನೆನಪಿನಲ್ಲಿ ಈ ತಂಗುದಾಣ ನಿರ್ಮಾಣಗೊಂಡಿರುವುದು ಸಂತಸದಾಯಕ. ರಾಜ್ಯದ ಸಾರಿಗೆ ವ್ಯವಸ್ಥೆ ಸುಭದ್ರವಾಗಿರಬೇಕು. ಓಡಾಟಕ್ಕೆ ಸೂಕ್ತ ವ್ಯವಸ್ಥೆ ಇಲ್ಲದವರಿಗೆ ಸರಕಾರಿ ಸಾರಿಗೆ ವ್ಯವಸ್ಥೆ ಸದುಪಯೋಗವಾಗಬೇಕು ಎಂದರು.

ಹೆಸರಿಗೆ ತಕ್ಕ ಸೇವೆ ಸಿಗಲಿ
ಸಾರ್ವಜನಿಕ ಬದುಕಿನಲ್ಲಿ ಪ್ರಾಮಾಣಿಕ ಆಡಳಿತ ನಡೆಸಿದವರು ಡಾ| ಆಚಾರ್ಯರು. ಆಡಳಿತದಲ್ಲಿ ವಿವಿಧ ಸೇವೆ ನೀಡುವ ಮೂಲಕ ಉಡುಪಿ ನಗರಸಭೆ ಅವರ ಕಾಲದಲ್ಲಿ ಉತ್ತಮ ಪ್ರಶಸ್ತಿಗೆ ಭಾಜನವಾಗಿದೆ. ಸಚಿವರು, ಶಾಸಕರಾಗಿ ಅವರು ಯಶಸ್ಸು ಸಾಧಿಸಿದ್ದಾರೆ. ಅವರಂತೆಯೇ ಈ ಬಸ್‌ ತಂಗುದಾಣ ಸ್ವತ್ಛ, ದಕ್ಷತೆಯಿಂದ ಕಾರ್ಯ ನಿರ್ವಹಿಸಬೇಕು. ಅವರ ಹೆಸರಿಗೆ ತಕ್ಕಂಥ ಸೇವೆ ಇಲ್ಲಿ ಸಿಗಬೇಕು. ಈ ಬಸ್‌ ತಂಗುದಾಣ ದಲ್ಲಿ ಮಲ್ಟಿಪ್ಲೆಕ್ಸ್‌ ಮಾಡುವ ಬಗ್ಗೆ ಸದ್ಯವೇ ನಿರ್ಣಯಿಸಲಾಗುವುದು ಎಂದರು.

ಮೆಡಿಕಲ್‌ ಕಾಲೇಜು ಆರಂಭ
ಉಡುಪಿ ಬೆಳೆಯುತ್ತಿರುವ ನಗರ. ನೈಸರ್ಗಿಕ ಪ್ರದೇಶ, ಉತ್ತಮ ಜನರಿಂದ ಕೂಡಿದೆ. ಇಲ್ಲಿ ಎಲ್ಲರಿಗೂ ಸ್ಫೂರ್ತಿ ಸಿಗುತ್ತದೆ. ಈಗಾಗಲೇ 250 ಬೆಡ್‌ಗಳ ಆಸ್ಪತ್ರೆ ನಿರ್ಮಾಣ ಕಾರ್ಯ ಆರಂಭವಾಗಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಪಿಪಿಪಿ ಮಾದರಿಯಲ್ಲಿ ಮೆಡಿಕಲ್‌ ಕಾಲೇಜು- ಆಸ್ಪತ್ರೆ ನಿರ್ಮಾಣ ಮಾಡಲಾಗುವುದು. 200 ಹಾಸಿಗೆ ಸಾಮರ್ಥ್ಯದ ಸುಸಜ್ಜಿತ ತಾಯಿ- ಮಕ್ಕಳ ಆಸ್ಪತ್ರೆಯನ್ನು ನಿರ್ಮಿಸಲಾಗುತ್ತದೆ ಎಂದರು.

ಒಳಚರಂಡಿ ವ್ಯವಸ್ಥೆಗೂ ಮಂಜೂರಾತಿ
ಉಡುಪಿ ನಗರದ ಯುಜಿಡಿ ಸಮಸ್ಯೆ ನಿವಾರಣೆಗೆ ಈಗಾಗಲೇ ಡಿಪಿಆರ್‌ ಮಾಡಲಾಗಿದೆ. ಸರಕಾರ ಇದನ್ನೂ ಮಂಜೂರು ಮಾಡಲಾಗುತ್ತದೆ. ಸಾರಿಗೆ ಸಂಸ್ಥೆಗಳು ಹಾಗೂ ಎಸ್ಕಾಂಗಳು ಸ್ವಂತ ಕಾಲಿನಲ್ಲಿ ನಿಲ್ಲಬೇಕು. ಈ ಎರಡನ್ನು ಸರಿಪಡಿಸಿದರಷ್ಟೇ ರಾಜ್ಯದ ಆರ್ಥಿಕ ಸ್ಥಿತಿ ಸುಧಾರಣೆಗೊಳ್ಳಲಿದೆ ಎಂದರು.

ಸಾರಿಗೆ ಇಲಾಖೆ: ಖಾಲಿ ಹುದ್ದೆ ಭರ್ತಿ
ಸಾರಿಗೆ ಸಚಿವ ಬಿ. ಶ್ರೀರಾಮುಲು ಮಾತನಾಡಿ, ರಾಜ್ಯದ ಸಾರಿಗೆ ವ್ಯವಸ್ಥೆಯಲ್ಲಿ ಅನೇಕ ಬದಲಾವಣೆಗಳನ್ನು ತರಲಾಗಿದೆ. ಸಮಾನ ವೇತನ ನೀಡುವ ಪ್ರಯತ್ನಕ್ಕೂ ಮುಖ್ಯಮಂತ್ರಿಗಳು ಶ್ರಮಿಸಿದ್ದಾರೆ. ಅನಿವಾರ್ಯ ಕಾರಣಗಳಿಂದ ಮುಷ್ಕರ ನಡೆಸಿದ ಸಾರಿಗೆ ಇಲಾಖೆಯ ಕೆಲವು ಮಂದಿ ಸಿಬಂದಿಯನ್ನು ಮರುನೇಮಕ ಮಾಡಲಾಗಿದೆ. ತಿಂಗಳೊಳಗೆ ಎಲ್ಲರನ್ನೂ ನೇಮಕ ಮಾಡಲಾಗುವುದು. ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಅಪಘಾತರಹಿತ ಚಾಲಕರಿಗೆ ಬೆಳ್ಳಿಪದಕ ವಿತರಿಸಲಾಯಿತು. ಗುತ್ತಿಗೆದಾರರಾದ ಪ್ರಭಾಕರ್‌ ಯೆಯ್ನಾಡಿ ಅವರನ್ನು ಮುಖ್ಯಮಂತ್ರಿಯವರು ಸಮ್ಮಾನಿಸಿದರು.

ಶಾಸಕ ಕೆ. ರಘುಪತಿ ಭಟ್‌ ಅಧ್ಯಕ್ಷತೆ ವಹಿಸಿ ಪ್ರಸ್ತಾವನೆಗೈದರು. ಸಚಿವರಾದ ಎಸ್‌. ಅಂಗಾರ, ಸುನಿಲ್‌ ಕುಮಾರ್‌, ಕೋಟ ಶ್ರೀನಿವಾಸ ಪೂಜಾರಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶಾಸಕ ಲಾಲಾಜಿ ಆರ್‌. ಮೆಂಡನ್‌, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್‌, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್‌ ಎಸ್‌.ಕಲ್ಮಾಡಿ, ಕೆಎಸ್ಸಾರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ. ಕಳಸದ, ಜಿಲ್ಲಾಧಿಕಾರಿ ಕೂರ್ಮಾ ರಾವ್‌, ಜಿ.ಪಂ. ಸಿಇಒ ಡಾ| ನವೀನ್‌ ಭಟ್‌ ಸಹಿತ ಕೆಎಸ್ಸಾರ್ಟಿಸಿ ಅಧಿಕಾರ ವೃಂದ ಹಾಗೂ ಸಿಬಂದಿ ಉಪಸ್ಥಿತರಿದ್ದರು.

ಸಿಆರ್‌ಝಡ್‌ ನಿಯಮ ಬದಲಾವಣೆ ಮುನ್ಸೂಚನೆ
ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮಕ್ಕೆ ಪುಷ್ಟಿ ಸಿಗಬೇಕೆಂದರೆ ಸಿಆರ್‌ಝಡ್‌ ನಿಯಮಾವಳಿ ಬದಲಾಗಬೇಕು. ಈ ಬಗ್ಗೆ ಮಾತುಕತೆ ನಡೆಯುತ್ತಿದ್ದು, ಸದ್ಯದಲ್ಲಿಯೇ ತಿಳಿಸಲಾಗುವುದು. ಇದು ಕಾರ್ಯಗತಗೊಂಡರೆ ಬೀಚ್‌ ಹಾಗೂ ದೇಗುಲ ಪ್ರವಾಸೋದ್ಯಮದ ಮೂಲಕ ಜಿಲ್ಲೆಯ ಆರ್ಥಿಕತೆ ವೃದ್ಧಿಯಾಗಲಿದೆ. ಪ್ರವಾಸೋದ್ಯಮಕ್ಕೆ ಸರಕಾರ ಪೂರ್ಣ ಬೆಂಬಲ ನೀಡಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

 

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.