ಫೆ. 12: ಮಣಿಪಾಲ ಮ್ಯಾರಥಾನ್‌; ಮಕ್ಕಳ ಕ್ಯಾನ್ಸರ್‌ ಬಗ್ಗೆ ಅರಿವು ಮೂಡಿಸುವ ಯತ್ನ

15 ಸಾವಿರ ಓಟಗಾರರು ಭಾಗವಹಿಸುವ ನಿರೀಕ್ಷೆ

Team Udayavani, Feb 8, 2023, 6:20 AM IST

ಫೆ. 12: ಮಣಿಪಾಲ ಮ್ಯಾರಥಾನ್‌; ಮಕ್ಕಳ ಕ್ಯಾನ್ಸರ್‌ ಬಗ್ಗೆ ಅರಿವು ಮೂಡಿಸುವ ಯತ್ನ

ಉಡುಪಿ: ಮಣಿಪಾಲದ ಮಾಹೆ ವಿ.ವಿ., ಜಿಲ್ಲಾ ಅಮೆಚೂರ್‌ ಆ್ಯತ್ಲೆಟಿಕ್‌ ಅಸೋಸಿಯೇಶನ್‌, ಬೆಂಗಳೂರಿನ ಎನ್‌ಇಬಿ ಸ್ಪೋರ್ಟ್ಸ್, ರೋಟರಿ ಕ್ಲಬ್‌ ಹಾಗೂ ಐಸಿಐಸಿಐ ಬ್ಯಾಂಕ್‌ನ ಸಹಭಾಗಿತ್ವದಲ್ಲಿ ಮಕ್ಕಳಲ್ಲಿ ಕಾಣಿಸಿಕೊಳ್ಳುವ ಕ್ಯಾನ್ಸರ್‌ನ ಬಗ್ಗೆ ಅರಿವು ಮೂಡಿಸಲು ಫೆ. 12ರಂದು 5ನೇ ಆವೃತ್ತಿಯ ಮಣಿಪಾಲ ಮ್ಯಾರಥಾನ್‌ ನಡೆಯಲಿದೆ ಎಂದು ಮಾಹೆ ಸಹ ಕುಲಾಧಿಪತಿ ಡಾ| ಎಚ್‌.ಎಸ್‌. ಬಲ್ಲಾಳ್‌ ಹೇಳಿದರು.

ಭಾರತ ಮಾತ್ರವಲ್ಲದೆ ವಿದೇಶದಿಂದಲೂ ಮ್ಯಾರ ಥಾನ್‌ಗೆ ನೋಂದಣಿ ಮಾಡಿಸಿಕೊಂಡಿದ್ದಾರೆ. 42 ಕಿ.ಮೀ. ಪೂರ್ಣ ಮ್ಯಾರಥಾನ್‌, 21 ಕಿ.ಮೀ. ಅರ್ಧ ಮ್ಯಾರಥಾನ್‌, 10 ಕಿ.ಮೀ. ಓಟ, 5 ಕಿ.ಮೀ. ಓಟ, 3 ಕಿ.ಮೀ. ರೋಟರಿ ಮನೋರಂಜನ ಓಟದ ಜತೆಗೆ ಈ ವರ್ಷ ವಿಕಲಚೇತನರಿಗೆ ವೀಲ್‌ಚೇರ್‌ ಓಟ ಕೂಡ ಇರಲಿದೆ ಎಂದು ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮಣಿಪಾಲ ಮ್ಯಾರಥಾನ್‌ ಪ್ರಯುಕ್ತ ಅಂದು ಮಧ್ಯಾಹ್ನದ ವರೆಗೂ ಗ್ರೀನ್ಸ್‌ನಲ್ಲಿ ವಿವಿಧ ಕಾರ್ಯಕ್ರಮ ಗಳು ನಡೆಯಲಿದೆ. ಮಾಹಿತಿಗಾಗಿ http://manipal [email protected] ಸಂಪ ರ್ಕಿಸಬಹುದು.

ಮಣಿಪಾಲ ಮ್ಯಾರಥಾನ್‌ ಸುಮಾರು 16.5 ಲಕ್ಷದಷ್ಟು ಬಹುಮಾನವನ್ನು ವಿವಿಧ ವಿಭಾಗದಲ್ಲಿ ನೀಡಲಿದೆ. ಮ್ಯಾರಥಾನ್‌ನಿಂದ ಸಂಗ್ರಹವಾದ ನಿಧಿಯನ್ನು ಮಕ್ಕಳ ಕ್ಯಾನ್ಸರ್‌ ಬಗ್ಗೆ ಅರಿವು ಮತ್ತು ಅದರ ಚಿಕಿತ್ಸೆಗೆ ಸದ್ಭಳಕೆ ಮಾಡಿಕೊಳ್ಳಲಾಗುವುದು ಎಂದರು.

ಸಾರ್ವಜನಿಕರಿಗೂ ಅವಕಾಶ
ಶಾಸಕ ಕೆ. ರಘುಪತಿ ಭಟ್‌ ಮಾತನಾಡಿ, ಮ್ಯಾರಥಾನ್‌ ಓಟವು ಮಾಹೆ ಕ್ಯಾಂಪಸ್‌ನ ಫುಡ್‌ಕೋರ್ಟ್‌ನಿಂದ ಆರಂಭಗೊಂಡು, ಸಿಂಡಿಕೇಟ್‌ ವೃತ್ತ, ಕಾಯಿನ್‌ ವೃತ್ತ, ಪೆರಂಪಳ್ಳಿ ಚರ್ಚ್‌, ಅಂಬಾಗಿಲು, ಕಲ್ಸಂಕ ವೃತ್ತ, ಎಂಜಿಎಂ ಕಾಲೇಜಿನ ವರೆಗೂ ಬಂದು ವಾಪಸ್‌ ಅದೇ ಮಾರ್ಗದಲ್ಲಿ ಫುಡ್‌ಕೋರ್ಟ್‌ ತಲುಪಿದರೆ 21 ಕಿ.ಮೀ. ಆಗಲಿದೆ. ಫುಲ್‌ ಮ್ಯಾರಥಾನ್‌ಗೆ ಇದೇ ಮಾರ್ಗದಲ್ಲಿ ಎರಡು ಸುತ್ತು ಓಡಬೇಕಾಗುತ್ತದೆ. ಬಹುಮಾನ ವಿತರಣೆ ಬೆಳಗ್ಗೆ 9 ಗಂಟೆಯ ಅನಂತರ ನಡೆಯಲಿದೆ. ಫುಲ್‌ ಮ್ಯಾರಥಾನ್‌ಗೆ 200ಕ್ಕೂ ಅಧಿಕ ಜನರು ನೋಂದಣಿ ಮಾಡಿಸಿಕೊಂಡಿದ್ದಾರೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸಲು ಪೊಲೀಸರು ಓಟದಲ್ಲಿ ಪಾಲ್ಗೊಳ್ಳಲಿದ್ದಾರೆ. 3 ಕಿ.ಮೀ. ಓಟದಲ್ಲಿ ಸಾರ್ವಜನಿಕರೆಲ್ಲರೂ ಪಾಲ್ಗೊಳ್ಳಲು ಅವಕಾಶವಿದೆ. ಜಿಲ್ಲೆಯ ಜನತೆ ಇದರ ಸದುಪಯೋಗ ಪಡೆದುಕೊಳ್ಳಬಹುದು ಎಂದರು.

ವಿದ್ಯಾರ್ಥಿಗಳಿಗೆ ಪ್ರೋತ್ಸಾಹ
ಜಿಲ್ಲೆಯ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ದೃಷ್ಟಿ ಯಿಂದ ಶಾಲಾಕಾಲೇಜು ವಿದ್ಯಾರ್ಥಿಗಳಿಗೆ 3 ಕಿ.ಮೀ. ಓಟ ನಡೆಸಲಾಗುವುದು. ಎಲ್ಲ ವಿಭಾಗದಲ್ಲೂ ಪ್ರಥಮ ದ್ವಿತೀಯ ಹಾಗೂ ತೃತೀಯ ನಗದು ಬಹುಮಾನ ಇರಲಿದೆ. ವಿದೇಶದಿಂದಲೂ ಸಾಕಷ್ಟು ಸಂಖ್ಯೆಯ ಆ್ಯತ್ಲೀಟ್‌ಗಳು ಇದರಲ್ಲಿ ಭಾಗವಹಿಸಲಿದ್ದಾರೆ.

ಮಣಿಪಾಲ ಮ್ಯಾರಥಾನ್‌ ಅಂತಾರಾಷ್ಟ್ರೀಯ ಆ್ಯತ್ಲೆಟಿಕ್‌ ಅಸೋಸಿಯೇಶನ್‌ ಹಾಗೂ ಅಂತಾರಾಷ್ಟ್ರೀಯ ಮ್ಯಾರಥಾನ್‌ ಅಸೋಸಿಯೇಶನ್‌(ಎಎಂಐಎಸ್‌) ಮಾನ್ಯತೆಯನ್ನು ಪಡೆದುಕೊಂಡಿದೆ.

ಜಿಲ್ಲಾ ಅಮೆಚೂರ್‌ ಆ್ಯತ್ಲೆಟಿಕ್‌ ಸೋಸಿಯೇಶನ್‌ ಅಧ್ಯಕ್ಷ ಡಾ| ಕೆಂಪರಾಜ್‌ ಎಚ್‌.ಬಿ., ಬೆಂಗಳೂರಿನ ಎನ್‌ಇಬಿ ಸ್ಪೋರ್ಟ್ಸ್ ನಿರ್ದೇಶಕ ನಾಗರಾಜ ಅಡಿಗ, ಮಾಹೆ ಸ್ಪೋರ್ಟ್ಸ್ ಕೌನ್ಸಿಲ್‌ನ ಕಾರ್ಯದರ್ಶಿ ಡಾ| ವಿನೋದ್‌ ನಾಯಕ್‌, ಐಸಿಐಸಿಐ ಬ್ಯಾಂಕ್‌ನ ಮಧು ದೀಕ್ಷಿತ್‌ ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.