ಉಡುಪಿಯಲ್ಲಿ ತಂಪೆರೆದ ಮಳೆರಾಯ
Team Udayavani, May 30, 2023, 8:54 AM IST
ಉಡುಪಿ: ನಗರದ ಸುತ್ತಮುತ್ತ ಮಂಗಳವಾರ (ಮೇ.30) ಬೆಳಗ್ಗೆಯಿಂದಲೇ ಸಾಧಾರಣ ಮಳೆಯಾಗಿದ್ದು, ಮೋಡ ಕವಿದ ವಾತಾವರಣ ಮುಂದುವರಿದಿದೆ.
ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗಿದ್ದು, ಬೆಳಗ್ಗೆ ಉಡುಪಿಯಿಂದ ವಿವಿಧ ಕಡೆಗೆ ಉದ್ಯೋಗ ಹಾಗೂ ಇನ್ನಿತರ ಉದ್ದೇಶಕ್ಕೆ ಹೊರಟವರಿಗೆ ಕೊಂಚ ಸಮಸ್ಯೆಯಾಗಿತ್ತು. ಅಲ್ಲದೆ ಬೇರೆ ಊರುಗಳಿಂದ ಉಡುಪಿಗೆ ಬಂದಿಳಿದವರಿಗೂ ಮಳೆಯು ಸ್ವಾಗತ ಕೋರಿತ್ತು.
ಉಡುಪಿ, ಇಂದ್ರಾಳಿ, ಮಣಿಪಾಲ, ಅಂಬಲಪಾಡಿ, ಕರಾವಳಿ ಬೈಪಾಸ್ ಸಹಿತ ನಗರದ ಹಲವೆಡೆ ಮಳೆಯಾಗಿದೆ.
ಮೊದಲ ಮಳೆಗೆ ಮಣಿಪಾಲದ (ಶಿವಳ್ಳಿ) ಕೈಗಾರಿಕಾ ಪ್ರದೇಶ ಕೆಸರುಮಯವಾಗಿದೆ.
ನಗರೋತ್ಥಾನ ನಿಧಿಯಡಿ ಕೈಗಾರಿಕೆ ಪ್ರದೇಶದ ಅಭಿವೃದ್ಧಿ ಕಾರ್ಯ ಚುನಾವಣೆ ಮೊದಲು ಆರಂಭವಾಗಿತ್ತು. ಗುತ್ತಿಗೆ ಪಡೆದವರು ಚುನಾವಣೆ ಸಮಯದಲ್ಲಿ ಕಾರ್ಯ ನಿರ್ವಹಿಸದ ಹಿನ್ನೆಲೆಯಲ್ಲಿ ಎಲ್ಲೆಡೆ ಅರ್ಧಂಬರ್ಧ ಕಾಮಗಾರಿಯಾಗಿದೆ.
ಇದರಿಂದ ಮೊದಲ ಮಳೆಗೆ ಕೈಗಾರಿಕೆ ಪ್ರದೇಶದ ಮುಖ್ಯ ರಸ್ತೆ ಚರಂಡಿಯಂತಾಗಿ ಬಿಟ್ಟಿದೆ.
ಈ ಹಿನ್ನೆಲೆಯಲ್ಲಿ ಕೈಗಾರಿಕೆ ಪ್ರದೇಶದ ಕೈಗಾರಿಕೋದ್ಯಮಿಗಳು, ಸಣ್ಣ ಕೈಗಾರಿಕೆಗಳ ಸಂಘದ ಪದಾಧಿಕಾರಿಗಳು ಮಂಗಳವಾರ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ