ಉಡುಪಿ: ಆನ್ಲೈನ್ ಮೂಲಕ ಸಾವಿರಾರು ರೂ. ವಂಚನೆ
Team Udayavani, Feb 13, 2023, 12:49 AM IST
ಉಡುಪಿ: ವ್ಯಕ್ತಿಯೋರ್ವರಿಗೆ ಆನ್ಲೈನ್ ಮೂಲಕ ಸಾವಿರಾರು ರೂ. ವಂಚಿಸಿದ ಘಟನೆ ನಡೆದಿದೆ.
ಆರೋಗ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಿಕೊಂಡಿರುವ ಹರೀಶ್ ಎಸ್. ಅವರು ಉಡುಪಿಯ ಎಸ್.ಬಿ.ಐ. ಬ್ಯಾಂಕ್ನಲ್ಲಿ ಖಾತೆ ಹೊಂದಿದ್ದರು. ಅವರ ಇಲಾಖೆಯ ಕೆ.ಜಿ.ಐ.ಡಿ. ಹಣ ಬ್ಯಾಂಕ್ಗೆ ಜಮೆಗೊಂಡಿರುವುದನ್ನು ಗಮನಿಸಿದ ಅಪರಿಚಿತ ವ್ಯಕ್ತಿಗಳು ಫೆ. 11ರಂದು ಅವರ ಮೊಬೈಲ್ಗೆ ಲಿಂಕ್ ಕಳುಹಿಸಿ ಬ್ಯಾಂಕ್ ವಿವರ ಪಡೆದು ಖಾತೆಯಿಂದ 1,499 ರೂ., 98,500 ರೂ.ಸಹಿತ ಒಟ್ಟು 99,999 ರೂ.ಗಳನ್ನು ಆನ್ಲೈನ್ ಮೂಲಕ ವರ್ಗಾಯಿಸಿಕೊಂಡು ನಷ್ಟ ಉಂಟು ಮಾಡಿದ್ದಾರೆ. ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮದ್ಯಪಾನ: ವಶಕ್ಕೆ
ಕುಂದಾಪುರ: ಬೀಜಾಡಿ ಗ್ರಾಮದ ಹಳೆ ಅಳಿವೆ ಜಂಕ್ಷನ್ ಬಳಿ ಸಾರ್ವಜನಿಕ ಪ್ರದೇಶದಲ್ಲಿ ಮದ್ಯಪಾನ ಮಾಡಿ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದ ಸುಮಂತ್ ಮೋಗವೀರನನ್ನು ವಶಕ್ಕೆ ಪಡೆಯಲಾಗಿದೆ. ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪುರ: ಅಸ್ವಸ್ಥ ವ್ಯಕ್ತಿ ಆತ್ಮಹತ್ಯೆ
ಕುಂದಾಪುರ: ಇಲ್ಲಿನ ಚಿಕ್ಕನ್ಸಾಲ್ ರಸ್ತೆ ನಿವಾಸಿ ರಘುನಾಥ ಶೇರೆಗಾರ್ (60) ಅವರು ಅನಾ ರೋಗ್ಯದಿಂದ ಬಳಲುತ್ತಿದ್ದು, ಅದೇ ಕಾರಣದಿಂದ ಫೆ.10ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಪರಿಚಿತ ವಾಹನ ಢಿಕ್ಕಿ: ಆಸ್ಪತ್ರೆಗೆ ದಾಖಲು
ಪಡುಬಿದ್ರಿ: ಎರ್ಮಾಳು ಬಡಾ ಕಲ್ಯಾಣಿ ಬಾರ್ ಬಳಿ ರಾ.ಹೆ. 66ರಲ್ಲಿ ಫೆ. 11ರ ರಾತ್ರಿಯ ವೇಳೆ ರಸ್ತೆ ಬದಿ ನಿಂತಿದ್ದ ಅದಮಾರು ನಿವಾಸಿ ದಯಾನಂದ (45) ಅವರಿಗೆ ಯಾವುದೋ ಅಪರಿಚಿತ ವಾಹನ ಢಿಕ್ಕಿಯಾಗಿದೆ. ಅವರನ್ನು ಉಡುಪಿಯ ಸರಕಾರಿ ಅಜ್ಜರಕಾಡು ಆಸ್ಪತ್ರೆಗೆ ದಾಖಲಿಸಲಾಗಿದೆ. ಪಡು ಬಿದ್ರಿ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್