ಸಂಕಷ್ಟದಲ್ಲಿ ಜನರ ಕೈ ಹಿಡಿದ ಉದ್ಯೋಗ ಖಾತ್ರಿ ಯೋಜನೆ
Team Udayavani, May 18, 2021, 3:22 AM IST
ಕುಂದಾಪುರ: ಕೊರೊನಾ, ಲಾಕ್ಡೌನ್ ಸಂಕಷ್ಟ ಕಾಲದಲ್ಲೂ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಗ್ರಾಮೀಣ ಭಾಗದ ಜನರ ಕೈ ಹಿಡಿಯುತ್ತಿದೆ. ಕುಂದಾಪುರ ತಾಲೂಕಿನ ಗ್ರಾಮಾಂತರ ಭಾಗದ ಹಲವು ಗ್ರಾ.ಪಂ.ಗಳಲ್ಲಿ ಬಾವಿ ನಿರ್ಮಾಣ, ಕೆರೆ ಅಭಿವೃದ್ಧಿ ಸಹಿತ ಅನೇಕ ಕೆಲಸಗಳಿಗೆ ಉದ್ಯೋಗ ಖಾತರಿ ಯೋಜನೆ ವರದಾನವಾಗುತ್ತಿದೆ.
ಹೊಸಾಡು ಪಂಚಾಯತ್ ವ್ಯಾಪ್ತಿಯಲ್ಲಿ ಅಂತರ್ಜಲ ವೃದ್ಧಿಗಾಗಿ 3 ಕೆರೆಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದ್ದು, ಇಲ್ಲಿನ ಗ್ರಾಮಸ್ಥರಿಗೆ ಲಾಕ್ಡೌನ್ ಸಮಯದಲ್ಲಿ ಉದ್ಯೋಗ ನೀಡಿದಂತಾಗಿದೆ.
03 ಕೆರೆ ಅಭಿವೃದ್ಧಿ
ಹೊಸಾಡು ಗ್ರಾ.ಪಂ. ವ್ಯಾಪ್ತಿಯಲ್ಲಿ ಈಗಾಗಲೇ 7 ಎಕರೆ ವಿಸ್ತೀರ್ಣದ ಕಡುಬಿನ ಕೆರೆಯನ್ನು ಈಗಾಗಲೇ 2 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಇದಕ್ಕಾಗಿ 979 ಮಾನವ ಸಂಪನ್ಮೂಲ ದಿನಗಳನ್ನು ವಿನಿಯೋಗಿಸಲಾಗಿದೆ. ಎಪ್ರಿಲ್ನಲ್ಲೇ ಈ ಕಾರ್ಯ ನಡೆದಿದ್ದು, ಇದಕ್ಕಾಗಿ 36 ಮಂದಿ ತೊಡಗಿಸಿದ್ದರು. ಪ್ರಸ್ತುತ ಇನ್ನು ಮಡಿವಾಳ ಕೆರೆ ಹಾಗೂ ಗುಮ್ಮನ ಕೆರೆಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಇದಕ್ಕಾಗಿ ಈಗಾಗಲೇ 3 ಲಕ್ಷ ರೂ. ವೆಚ್ಚದಲ್ಲಿ ಯೋಜನೆ ಸಿದ್ಧಪಡಿಸಲಾಗಿದೆ. ಈವರೆಗೆ ತಲಾ 40 ಮಾನವ ಸಂಪನ್ಮೂಲ ದಿನಗಳ ಕೆಲಸವಾಗಿದೆ. ಇದಕ್ಕಾಗಿ 15 ಮಂದಿ ಹಾಗೂ 10 ಮಂದಿ ಕೆಲಸ ಮಾಡುತ್ತಿದ್ದಾರೆ.
60 ಹೊಸ ಬಾವಿ
ಹೆಮ್ಮಾಡಿಯಲ್ಲಿ ನೀರಿನ ಸಮಸ್ಯೆ ಗಂಭೀರ ವಾಗಿದ್ದು, ಇದರಿಂದಾಗಿ ಜನರೇ ಮನೆ- ಮನೆಗಳಲ್ಲಿ ಸ್ವಂತ ಬಾವಿ ತೋಡಲು ಮುಂದಾಗಿದ್ದಾರೆ. ಈ ವರ್ಷದಲ್ಲಿ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಹೆಮ್ಮಾಡಿ ಪಂಚಾಯತ್ ವ್ಯಾಪ್ತಿಯಲ್ಲಿ ಬರೋಬ್ಬರಿ 60 ಬಾವಿಗಳನ್ನು ತೋಡಿರುವುದು ವಿಶೇಷ.
ಉತ್ತಮ ಸ್ಪಂದನೆ
ನಮ್ಮಲ್ಲಿ ಉದ್ಯೋಗ ಖಾತರಿ ಯೋಜನೆಯಡಿ 3 ಕೆರೆಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಈಗಾಗಲೇ 7 ಎಕರೆ ವಿಸ್ತೀರ್ಣದ ಕಡುಬಿನ ಕೆರೆಯನ್ನು ಅಭಿವೃದ್ಧಿಪಡಿಸಲಾಗಿದೆ. ಈಗ ಗುಮ್ಮನಕೆರೆ ಹಾಗೂ ಮಡಿವಾಳ ಕೆರೆಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ.
– ಪಾರ್ವತಿ, ಪಿಡಿಒ ಹೊಸಾಡು ಗ್ರಾ.ಪಂ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ