ಯುಗಾದಿ: ಆಯೋಗದ ಹದ್ದಿನ ಕಣ್ಣು


Team Udayavani, Apr 6, 2019, 6:00 AM IST

Election-Commision

ಬೆಂಗಳೂರು: ಚುನಾವಣಾ ನೀತಿ ಸಂಹಿತೆಯ ಬಿಸಿ ಈ ಬಾರಿ ಯುಗಾದಿ ಹಬ್ಬಕ್ಕೂ ತಟ್ಟಲಿದೆ. ಪ್ರಚಾರದ ಭರಾಟೆ ಇದ್ದು,ಹಬ್ಬದ ನೆಪದಲ್ಲಿ ಮತದಾರರಿಗೆ “ಆಮಿಷ’ಗಳನ್ನು ನೀಡುವ ರಾಜಕೀಯ ಪಕ್ಷಗಳ ಪ್ರಯತ್ನಗಳಿಗೆ “ಲಗಾಮು’ ಹಾಕಲು ಚುನಾವಣಾ ಆಯೋಗ ತಂತ್ರ ಹೆಣೆದಿದೆ.

ಯುಗಾದಿ ಹಬ್ಬದ ಪ್ರಯುಕ್ತ ಎಲ್ಲರಿಗೂ ರಜೆ ಇದ್ದರೂ,ಚುನಾವಣಾ ನೀತಿ ಸಂಹಿತೆ ಜಾರಿ ಕಾರ್ಯಾಚರಣೆಯಲ್ಲಿರುವ ಯಾವೊಬ್ಬ ಅಧಿಕಾರಿ ಅಥವಾ ಸಿಬ್ಬಂದಿ ಸೇರಿದಂತೆ
ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಂಡ ಯಾರಿಗೂ ರಜೆ ಇಲ್ಲ ಎಂದು ಫ‌ರ್ಮಾನು ಹೊರಡಿಸಿರುವ ಆಯೋಗ, ಹಬ್ಬದ ದಿನ ನೀತಿ ಸಂಹಿತೆ ಜಾರಿ ಕಾರ್ಯಾಚರಣೆಯನ್ನು ಮತ್ತಷ್ಟು ಚುರುಕುಗೊಳಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ವಿಐಪಿಗಳು ಸೇರಿದಂತೆ ಎಲ್ಲ ವಾಹನಗಳನ್ನು ತಪಾಸಣೆ ನಡೆಸಲು ಚುನಾವಣಾ ನೀತಿ ಸಂಹಿತೆ ಜಾರಿ ತಂಡಗಳಿಗೆ ಸೂಚನೆ ನೀಡಲಾಗಿದೆ. ಮುಖ್ಯವಾಗಿ ಹಬ್ಬದ ಮರುದಿನ
ಅನೇಕ ಕಡೆ ಬಾಡೂಟದ (ವರ್ಷದ ತೊಡಕು) ವ್ಯವಸ್ಥೆ ಮಾಡುವ ಸಾಧ್ಯತೆಗಳಿರುವುದರಿಂದ ಸಾಮೂಹಿಕವಾಗಿ ದೊಡ್ಡ ಮಟ್ಟದಲ್ಲಿ ಅಡುಗೆ ತಯಾರಿಸುವ ಜಾಗಗಳ ಮೇಲೆ ನಿಗಾ ಇಟ್ಟು ತಪಾಸಣೆ ನಡೆಸಲಾಗುವುದು. ಇದಲ್ಲದೇ ಖಾಸಗಿ
ಕಾರ್ಯಕ್ರಮಗಳನ್ನು, ಖಾಸಗಿ ಹಬ್ಬದ ಆಚರಣೆಯನ್ನು ಚುನಾವಣಾ ಉದ್ದೇಶಗಳಿಗೆ ಬಳಸಿಕೊಳ್ಳುವ ಅನುಮಾನಗಳು ಕಂಡು ಬಂದರೆ ಅಲ್ಲಿಯೂ ತಪಾಸಣೆ ನಡೆಸಲಾಗುವುದು.

ಈಗಾಗಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ರಾಜ್ಯಾದ್ಯಂತ 1,512 ಫ್ಲೈಯಿಂಗ್‌ ಸ್ಕ್ವಾಡ್‌, 1,837 ಸ್ಟಾಟಿಕ್‌ ಸರ್ವೆಲೆನ್ಸ್‌ ತಂಡಗಳು, 320 ಅಬಕಾರಿ ತಂಡಗಳು, 180 ಆದಾಯ ತೆರಿಗೆ ಅಧಿಕಾರಿಗಳ ತಂಡಗಳು ಕಾರ್ಯಾಚರಣೆ ನಡೆಸುತ್ತಿವೆ. 700ಕ್ಕೂ ಹೆಚ್ಚು ಪೊಲೀಸ್‌ ನಾಕಾಗಳನ್ನು ಸ್ಥಾಪಿಸಲಾಗಿದೆ. ಹಬ್ಬದ ಹಿನ್ನೆಲೆಯಲ್ಲಿ ಈ ಎಲ್ಲ ತಂಡಗಳು ಹೆಚ್ಚಿನ ಕಟ್ಟೆಚ್ಚರ ವಹಿಸಲಿವೆ.ಇದರ ಜೊತೆಗೆ ಅನುಮಾನವಿರುವ ಹಾಗೂ ಸೂಕ್ಷ್ಮ ಎನಿಸಿರುವ ಪ್ರದೇಶಗಳ ಬಗ್ಗೆ ವಿಶೇಷ ಅಧಿಕಾರಿ ಮತ್ತು ತಂಡಗಳನ್ನು ಸಹ ನಿಯೋಜಿಸಲಾಗುತ್ತದೆ. ಹಬ್ಬದ ದಿನ ನಡೆಯುವ ಸಾರ್ವಜನಿಕ ಕಾರ್ಯಕ್ರಮಗಳು, ಸಂಭ್ರಮಾಚರಣೆಗಳ ಮೇಲೆ ವಿಶೇಷ ಗುಪ್ತಚಾರಿಕೆ ನಡೆಸಲಾಗುತ್ತದೆ.

ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟ ಅಧಿಕಾರಿಗಳಿಗೆ ಹಬ್ಬದ ರಜೆ ಇಲ್ಲ. ಹಬ್ಬದ ಹಿನ್ನೆಲೆಯಲ್ಲಿ ವಿಚಕ್ಷಣೆಯನ್ನು ಹೆಚ್ಚಿಸಲಾಗುವುದು.ವಿಐಪಿಗಳ ವಾಹನಗಳು ಸೇರಿದಂತೆ ಪ್ರತಿಯೊಂದು ವಾಹನದ ತಪಾಸಣೆ ನಡೆಸಲಾಗುವುದು. ಎಲ್ಲ”ಕಮ್ಯೂನಿಟಿ ಕಿಚನ್ಸ್‌’ಗಳ ಮೇಲೆ ನಿಗಾ ಇಟ್ಟು,ತಪಾಸಣೆ ನಡೆಸಲಾಗುತ್ತದೆ.
– ಡಾ. ಕೆ.ಜಿ. ಜಗದೀಶ್‌, ಅಪರ ಮುಖ್ಯ
ಚುನಾವಣಾಧಿಕಾರಿ (ಚುನಾವಣಾ ವೆಚ್ಚ).

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.